Homeಮುಖಪುಟಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ಮೇವಾಲಾಲ್ ಚೌಧರಿ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮ ನಡೆದಿವೆ ಎಂದು 2017ರಲ್ಲಿ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು.

- Advertisement -
- Advertisement -

ಧ್ವಜಾರೋಹಣ ಸಮಾರಂಭದಲ್ಲಿ ರಾಷ್ಟ್ರಗೀತೆಯ ಸಾಲುಗಳನ್ನು ಹೇಳಲು ಹೆಣಗಾಡುತ್ತಿರುವ ಬಿಹಾರದ ನೂತನ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ಅವರ ವಿಡಿಯೋವನ್ನು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಈಗಾಗಲೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮೇವಲಾಲ್ ಚೌಧರಿಯನ್ನು ತಮ್ಮ ಸಂಪುಟದಲ್ಲಿ ಸಚಿವರನ್ನಾಗಿ ನೇಮಿಸಿದ್ದಕ್ಕಾಗಿ ಜೆಡಿಯು ಹಲವಾರು ಟೀಕೆಗಳನ್ನು ಎದುರಿಸುತ್ತಿದೆ. ಇದರ ಜೊತೆಗೆ ಈ ವಿಡಿಯೋ ಕೂಡ ಅವರ ಅರ್ಹತೆಯನ್ನು ಪ್ರಶ್ನಿಸುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಈ ಘಟನೆಯನ್ನು ಇಟ್ಟುಕೊಂಡು ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ಆರ್‌ಜೆಡಿ ಹಂಚಿಕೊಂಡಿರುವ ವೀಡಿಯೋದಲ್ಲಿ, ಧ್ವಜಾರೋಹಣ ಸಮಾರಂಭದಲ್ಲಿ ನೂತನ ಶಿಕ್ಷಣ ಸಚಿವರು ರಾಷ್ಟ್ರಗೀತೆಯ ಸಾಲುಗಳನ್ನು ಮರೆಯುತ್ತಿರುವುದು ಮತ್ತು ತಪ್ಪಾದ ಸಾಲುಗಳನ್ನು ಹಾಡುತ್ತಿರುವುದನ್ನು ನೋಡಬಹುದು.

“ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಿಹಾರ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ಅವರಿಗೆ ರಾಷ್ಟ್ರಗೀತೆ ಕೂಡ ತಿಳಿದಿಲ್ಲ. ನಿತೀಶ್ ಕುಮಾರ್ ಜೀ, ಸ್ವಲ್ಪವಾದರೂ ಮಾರ್ಯಾದೆ ಉಳಿದಿದೆಯೇ? ಆತ್ಮಸಾಕ್ಷಿಯು ಎಲ್ಲಿ ಹೋಯಿತು?” ಎಂದು ಆರ್‌ಜೆಡಿ ಹಿಂದಿಯಲ್ಲಿ ಟ್ವೀಟ್ ಮಾಡಿದೆ.

38 ಸೆಕೆಂಡುಗಳ ಈ ವಿಡಿಯೋದ ಕೊನೆಯಲ್ಲಿ, ಅವರು “ಭಾರತ್ ಮಾತಾ ಕಿ ಜೈ” ಮತ್ತು “ವಂದೆ” ಎಂದರೇ ಮಕ್ಕಳು “ಮಾತರಂ” ಎಂದು ಹೇಳುತ್ತಿದ್ದಾರೆ. ಆದರೆ, ಭಾರತದ ಜನಗಣಮನ ರಾಷ್ಟ್ರಗೀತೆಯನ್ನು 52 ಸೆಕೆಂಡುಗಳಲ್ಲಿ ಹಾಡಬೇಕಾಗಿದೆ.

ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು.

ಆದರೂ, ಮೇವಾಲಾಲ್ ಚೌಧರಿ ಅವರು ಪ್ರಾಧ್ಯಾಪಕ ಮತ್ತು ಕಿರಿಯ ವಿಜ್ಞಾನಿಗಳ ಹುದ್ದೆಗಳ ನೇಮಕಾತಿಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ಆಧಾರರಹಿತವೆಂದು ತಳ್ಳಿಹಾಕಿದ್ದಾರೆ.

ಬಿಹಾರ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ನಿತೀಶ್ ಕುಮಾರ್ “ಅಪರಾಧಿಗಳನ್ನು” ನೇಮಕ ಮಾಡಿದ್ದಾರೆ ಎಂದು ಸರಣಿ ಟ್ವೀಟ್‌ಗಳಲ್ಲಿ ರಾಷ್ಟ್ರೀಯ ಜನತಾದಳದ ತೇಜಶ್ವಿ ಯಾದವ್ ಆರೋಪಿಸಿದ್ದಾರೆ.


ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...