Homeಮುಖಪುಟಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ಮೇವಾಲಾಲ್ ಚೌಧರಿ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮ ನಡೆದಿವೆ ಎಂದು 2017ರಲ್ಲಿ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು.

- Advertisement -
- Advertisement -

ಧ್ವಜಾರೋಹಣ ಸಮಾರಂಭದಲ್ಲಿ ರಾಷ್ಟ್ರಗೀತೆಯ ಸಾಲುಗಳನ್ನು ಹೇಳಲು ಹೆಣಗಾಡುತ್ತಿರುವ ಬಿಹಾರದ ನೂತನ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ಅವರ ವಿಡಿಯೋವನ್ನು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಈಗಾಗಲೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮೇವಲಾಲ್ ಚೌಧರಿಯನ್ನು ತಮ್ಮ ಸಂಪುಟದಲ್ಲಿ ಸಚಿವರನ್ನಾಗಿ ನೇಮಿಸಿದ್ದಕ್ಕಾಗಿ ಜೆಡಿಯು ಹಲವಾರು ಟೀಕೆಗಳನ್ನು ಎದುರಿಸುತ್ತಿದೆ. ಇದರ ಜೊತೆಗೆ ಈ ವಿಡಿಯೋ ಕೂಡ ಅವರ ಅರ್ಹತೆಯನ್ನು ಪ್ರಶ್ನಿಸುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಈ ಘಟನೆಯನ್ನು ಇಟ್ಟುಕೊಂಡು ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ಆರ್‌ಜೆಡಿ ಹಂಚಿಕೊಂಡಿರುವ ವೀಡಿಯೋದಲ್ಲಿ, ಧ್ವಜಾರೋಹಣ ಸಮಾರಂಭದಲ್ಲಿ ನೂತನ ಶಿಕ್ಷಣ ಸಚಿವರು ರಾಷ್ಟ್ರಗೀತೆಯ ಸಾಲುಗಳನ್ನು ಮರೆಯುತ್ತಿರುವುದು ಮತ್ತು ತಪ್ಪಾದ ಸಾಲುಗಳನ್ನು ಹಾಡುತ್ತಿರುವುದನ್ನು ನೋಡಬಹುದು.

“ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಿಹಾರ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ಅವರಿಗೆ ರಾಷ್ಟ್ರಗೀತೆ ಕೂಡ ತಿಳಿದಿಲ್ಲ. ನಿತೀಶ್ ಕುಮಾರ್ ಜೀ, ಸ್ವಲ್ಪವಾದರೂ ಮಾರ್ಯಾದೆ ಉಳಿದಿದೆಯೇ? ಆತ್ಮಸಾಕ್ಷಿಯು ಎಲ್ಲಿ ಹೋಯಿತು?” ಎಂದು ಆರ್‌ಜೆಡಿ ಹಿಂದಿಯಲ್ಲಿ ಟ್ವೀಟ್ ಮಾಡಿದೆ.

38 ಸೆಕೆಂಡುಗಳ ಈ ವಿಡಿಯೋದ ಕೊನೆಯಲ್ಲಿ, ಅವರು “ಭಾರತ್ ಮಾತಾ ಕಿ ಜೈ” ಮತ್ತು “ವಂದೆ” ಎಂದರೇ ಮಕ್ಕಳು “ಮಾತರಂ” ಎಂದು ಹೇಳುತ್ತಿದ್ದಾರೆ. ಆದರೆ, ಭಾರತದ ಜನಗಣಮನ ರಾಷ್ಟ್ರಗೀತೆಯನ್ನು 52 ಸೆಕೆಂಡುಗಳಲ್ಲಿ ಹಾಡಬೇಕಾಗಿದೆ.

ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು.

ಆದರೂ, ಮೇವಾಲಾಲ್ ಚೌಧರಿ ಅವರು ಪ್ರಾಧ್ಯಾಪಕ ಮತ್ತು ಕಿರಿಯ ವಿಜ್ಞಾನಿಗಳ ಹುದ್ದೆಗಳ ನೇಮಕಾತಿಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ಆಧಾರರಹಿತವೆಂದು ತಳ್ಳಿಹಾಕಿದ್ದಾರೆ.

ಬಿಹಾರ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ನಿತೀಶ್ ಕುಮಾರ್ “ಅಪರಾಧಿಗಳನ್ನು” ನೇಮಕ ಮಾಡಿದ್ದಾರೆ ಎಂದು ಸರಣಿ ಟ್ವೀಟ್‌ಗಳಲ್ಲಿ ರಾಷ್ಟ್ರೀಯ ಜನತಾದಳದ ತೇಜಶ್ವಿ ಯಾದವ್ ಆರೋಪಿಸಿದ್ದಾರೆ.


ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...