Homeಮುಖಪುಟ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯವು 2017 ರಿಂದ ತನ್ನ ಪಠ್ಯಕ್ರಮದ ಭಾಗವಾಗಿದ್ದ ಅರುಂಧತಿ ರಾಯ್ ಬರೆದಿರುವ ಈ ಕೃತಿಯನ್ನು ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಾಪಸು ಪಡೆದಿತ್ತು.

- Advertisement -
- Advertisement -

ಡಿಎಂಕೆ ಒಳಗೊಂಡಂತೆ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಹಾಗೂ ಸಾಮಾಜಿಕ ಸಂಘಟನೆಗಳು, ಶೈಕ್ಷಣಿಕ ಹಕ್ಕುಗಳ ಸಂರಕ್ಷಣಾ ಸಮನ್ವಯ ಸಮಿತಿಯ (CCPER) ಅಡಿಯಲ್ಲಿ ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯದ ಎಂಎ ಇಂಗ್ಲಿಷ್ ಪಠ್ಯಕ್ರಮದಲ್ಲಿ ಲೇಖಕಿ ಅರುಂಧತಿ ರಾಯ್ ಅವರ “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಕೃತಿಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದೆ.

2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿದ್ದ ಈ ಪುಸ್ತಕವನ್ನು ವಾಪಾಸು ಪಠ್ಯಕ್ರಮಕ್ಕೆ ಸೇರಿಸುವ ನಿಟ್ಟಿನಲ್ಲಿ ಅವರು ಮಂಗಳವಾರ ಉಪಕುಲಪತಿ ಡಾ. ಕೆ.ಪಿಚ್ಚುಮಣಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ.

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಲೇಖಕಿ ಅರುಂದತಿ ರಾಯ್ ಮಾವೋವಾದಿ ಶಿಬಿರಗಳಿಗೆ ನೀಡಿದ್ದ ಭೇಟಿ ಆಧರಿಸಿದ ಪುಸ್ತಕವನ್ನು ವಾಪಸು ಪಡೆದಿತ್ತು. ಅದರ ಬದಲು ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ ಎಂದು ವಿವಿ ಹೇಳಿತ್ತು.

ಇದನ್ನೂ ಓದಿ: ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

CCPER ಸದಸ್ಯರಿಂದ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಡಾ. ಕೆ.ಪಿಚ್ಚುಮಣಿ, “ಈ ಹಿಂದೆ ವಿಶ್ವವಿದ್ಯಾನಿಲಯದೊಂದಿಗೆ ಸಂಬಂಧ ಹೊಂದಿದ್ದ ಶಿಕ್ಷಣ ತಜ್ಞರು ಮೂರು ವರ್ಷಗಳ ಹಿಂದೆಯೆ ಎಂಎ ಇಂಗ್ಲಿಷ್‌ಗಾಗಿ ಪಠ್ಯಕ್ರಮದಲ್ಲಿ ಪುಸ್ತಕವನ್ನು ಸೇರಿಸುವುದನ್ನು ಎಚ್ಚರಿಸಿದ್ದಾರೆ. ಇತ್ತೀಚೆಗೆ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲೂ ಇದರ ಬಗ್ಗೆ ಚರ್ಚೆಗಳಾಗಿದೆ” ಎಂದು ಹೇಳಿದ್ದಾರೆ.

ಇದರ ನಂತರ, ಎಬಿವಿಪಿ ತನ್ನ ಮನವಿ ಸಲ್ಲಿಸಿ ಪಠ್ಯಕ್ರಮದಿಂದ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ. ಈ ಸಮಸ್ಯೆಯ ಬಗ್ಗೆ ಪರೀಕ್ಷಿಸಲು ರಚಿಸಲಾದ ಸಮಿತಿಯು ಪುಸ್ತಕದ ವಿಷಯಗಳು “ವಿವಾದಾತ್ಮಕ” ಎಂದು ಭಾವಿಸಿತು. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ಭಾಸ್ಕರನ್, ತಿರುನೆಲ್ವೇಲಿ ಶಾಸಕ ಎ.ಎಲ್.ಎಸ್.ಲಕ್ಷ್ಮಣನ್ ಮತ್ತು ಡಿಎಂಕೆ ತಿರುನೆಲ್ವೇಲಿ ನಗರ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ವಹಾಬ್ ಖಂಡನೆ ವ್ಯಕ್ತಪಡಿಸಿದ್ದಾರೆ. ಪುಸ್ತಕದ ಬಗ್ಗೆ ನಿರ್ಧರಿಸಬೇಕಾದ ಅಧ್ಯಯನ ಮಂಡಳಿಯನ್ನು ಕತ್ತಲೆಯಲ್ಲಿ ಇಡಲಾಗಿದೆ. ಸಂಘಟನೆಯೊಂದರ ಪತ್ರವನ್ನು ಅನುಸರಿಸಿದ ವಿವಿಯು ತರಾತುರಿಯಲ್ಲಿ ಪಠ್ಯವನ್ನು ಬದಲಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಶ್ವವಿದ್ಯಾಲಯಗಳ ಯುಜಿ, ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

“ಪ್ರಸಿದ್ದ ಪ್ರಕಾಶಕರು ಪ್ರಕಟಿಸಿದ ಈ ಪುಸ್ತಕವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ನಿಷೇಧಿಸಿಲ್ಲ. ಪುಸ್ತಕವನ್ನು ಹಿಂಪಡೆಯಲು ಅಧ್ಯಯನ ಮಂಡಳಿಯಿಂದ ಅನುಮೋದನೆ ಪಡೆಯುವ ಬದಲು, ಸಣ್ಣ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ವಿಶ್ವವಿದ್ಯಾನಿಲಯ ಅವಸರದಿಂದ ಮತ್ತು ನಿರಂಕುಶವಾಗಿ ವರ್ತಿಸಿತು” ಎಂದು ಅವರು ಹೇಳಿದ್ದಾರೆ.

ಪುಸ್ತಕವು “ಹೋರಾಟ” ದ ಬಗ್ಗೆ ಇದ್ದು, ಅದನ್ನು ಹಿಂಪಡೆದು ಕೊಳ್ಳುವುದನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಉಪಕುಲಪತಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭಾಸ್ಕರನ್, ವಿಶ್ವವಿದ್ಯಾನಿಲಯವು ಸ್ವಾತಂತ್ರ್ಯ ಹೋರಾಟವನ್ನು ಅದರ ಪಠ್ಯಕ್ರಮದಿಂದ ತೆಗೆದುಹಾಕುತ್ತದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಈ ವಿಷಯವನ್ನು ವಿಶ್ವವಿದ್ಯಾನಿಲಯವೆ ರಾಜಕೀಯಗೊಳಿಸಿದೆ… ಎಬಿವಿಪಿಯಿಂದ ಬಂದ ಪತ್ರದ ಆಧಾರದ ಮೇಲೆ ವಿವಿ ತೆಗೆದುಕೊಂಡ ತಪ್ಪು ನಿರ್ಧಾರಕ್ಕೆ ಮಾತ್ರ ನಮ್ಮ ಪ್ರತಿಕ್ರಿಯೆ. ವಿಶ್ವವಿದ್ಯಾನಿಲಯವು ಒಂದೇ ಸಂಘಟನೆಯ ಪತ್ರದ ಮೇಲೆ ಕಾರ್ಯನಿರ್ವಹಿಸಿದರೆ, ನಾವು 15 ಸಂಘಟನೆಗಳನ್ನು ಒಳಗೊಂಡಿದ್ದೇವೆ, ಈಗ ಪಠ್ಯಕ್ರಮದಲ್ಲಿ ಪುಸ್ತಕವನ್ನು ಪುನಃ ಸೇರಿಸಲು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ, ನಾವು ಈ ಅನ್ಯಾಯದ ವಿರುದ್ಧ ಸರಣಿ ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಭಾಸ್ಕರನ್ ಹೇಳಿದ್ದಾರೆ.

ಅವರ ಮನವಿಯನ್ನು ಪರಿಗಣಿಸುವುದಾಗಿ ಉಪಕುಲಪತಿ ಡಾ. ಕೆ.ಪಿಚ್ಚುಮಣಿ ತಿಳಿಸಿದ್ದಾರೆಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...