Homeಮುಖಪುಟ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯವು 2017 ರಿಂದ ತನ್ನ ಪಠ್ಯಕ್ರಮದ ಭಾಗವಾಗಿದ್ದ ಅರುಂಧತಿ ರಾಯ್ ಬರೆದಿರುವ ಈ ಕೃತಿಯನ್ನು ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಾಪಸು ಪಡೆದಿತ್ತು.

- Advertisement -
- Advertisement -

ಡಿಎಂಕೆ ಒಳಗೊಂಡಂತೆ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಹಾಗೂ ಸಾಮಾಜಿಕ ಸಂಘಟನೆಗಳು, ಶೈಕ್ಷಣಿಕ ಹಕ್ಕುಗಳ ಸಂರಕ್ಷಣಾ ಸಮನ್ವಯ ಸಮಿತಿಯ (CCPER) ಅಡಿಯಲ್ಲಿ ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯದ ಎಂಎ ಇಂಗ್ಲಿಷ್ ಪಠ್ಯಕ್ರಮದಲ್ಲಿ ಲೇಖಕಿ ಅರುಂಧತಿ ರಾಯ್ ಅವರ “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಕೃತಿಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದೆ.

2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿದ್ದ ಈ ಪುಸ್ತಕವನ್ನು ವಾಪಾಸು ಪಠ್ಯಕ್ರಮಕ್ಕೆ ಸೇರಿಸುವ ನಿಟ್ಟಿನಲ್ಲಿ ಅವರು ಮಂಗಳವಾರ ಉಪಕುಲಪತಿ ಡಾ. ಕೆ.ಪಿಚ್ಚುಮಣಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ.

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಲೇಖಕಿ ಅರುಂದತಿ ರಾಯ್ ಮಾವೋವಾದಿ ಶಿಬಿರಗಳಿಗೆ ನೀಡಿದ್ದ ಭೇಟಿ ಆಧರಿಸಿದ ಪುಸ್ತಕವನ್ನು ವಾಪಸು ಪಡೆದಿತ್ತು. ಅದರ ಬದಲು ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ ಎಂದು ವಿವಿ ಹೇಳಿತ್ತು.

ಇದನ್ನೂ ಓದಿ: ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

CCPER ಸದಸ್ಯರಿಂದ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಡಾ. ಕೆ.ಪಿಚ್ಚುಮಣಿ, “ಈ ಹಿಂದೆ ವಿಶ್ವವಿದ್ಯಾನಿಲಯದೊಂದಿಗೆ ಸಂಬಂಧ ಹೊಂದಿದ್ದ ಶಿಕ್ಷಣ ತಜ್ಞರು ಮೂರು ವರ್ಷಗಳ ಹಿಂದೆಯೆ ಎಂಎ ಇಂಗ್ಲಿಷ್‌ಗಾಗಿ ಪಠ್ಯಕ್ರಮದಲ್ಲಿ ಪುಸ್ತಕವನ್ನು ಸೇರಿಸುವುದನ್ನು ಎಚ್ಚರಿಸಿದ್ದಾರೆ. ಇತ್ತೀಚೆಗೆ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲೂ ಇದರ ಬಗ್ಗೆ ಚರ್ಚೆಗಳಾಗಿದೆ” ಎಂದು ಹೇಳಿದ್ದಾರೆ.

ಇದರ ನಂತರ, ಎಬಿವಿಪಿ ತನ್ನ ಮನವಿ ಸಲ್ಲಿಸಿ ಪಠ್ಯಕ್ರಮದಿಂದ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ. ಈ ಸಮಸ್ಯೆಯ ಬಗ್ಗೆ ಪರೀಕ್ಷಿಸಲು ರಚಿಸಲಾದ ಸಮಿತಿಯು ಪುಸ್ತಕದ ವಿಷಯಗಳು “ವಿವಾದಾತ್ಮಕ” ಎಂದು ಭಾವಿಸಿತು. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ಭಾಸ್ಕರನ್, ತಿರುನೆಲ್ವೇಲಿ ಶಾಸಕ ಎ.ಎಲ್.ಎಸ್.ಲಕ್ಷ್ಮಣನ್ ಮತ್ತು ಡಿಎಂಕೆ ತಿರುನೆಲ್ವೇಲಿ ನಗರ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ವಹಾಬ್ ಖಂಡನೆ ವ್ಯಕ್ತಪಡಿಸಿದ್ದಾರೆ. ಪುಸ್ತಕದ ಬಗ್ಗೆ ನಿರ್ಧರಿಸಬೇಕಾದ ಅಧ್ಯಯನ ಮಂಡಳಿಯನ್ನು ಕತ್ತಲೆಯಲ್ಲಿ ಇಡಲಾಗಿದೆ. ಸಂಘಟನೆಯೊಂದರ ಪತ್ರವನ್ನು ಅನುಸರಿಸಿದ ವಿವಿಯು ತರಾತುರಿಯಲ್ಲಿ ಪಠ್ಯವನ್ನು ಬದಲಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಶ್ವವಿದ್ಯಾಲಯಗಳ ಯುಜಿ, ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

“ಪ್ರಸಿದ್ದ ಪ್ರಕಾಶಕರು ಪ್ರಕಟಿಸಿದ ಈ ಪುಸ್ತಕವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ನಿಷೇಧಿಸಿಲ್ಲ. ಪುಸ್ತಕವನ್ನು ಹಿಂಪಡೆಯಲು ಅಧ್ಯಯನ ಮಂಡಳಿಯಿಂದ ಅನುಮೋದನೆ ಪಡೆಯುವ ಬದಲು, ಸಣ್ಣ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ವಿಶ್ವವಿದ್ಯಾನಿಲಯ ಅವಸರದಿಂದ ಮತ್ತು ನಿರಂಕುಶವಾಗಿ ವರ್ತಿಸಿತು” ಎಂದು ಅವರು ಹೇಳಿದ್ದಾರೆ.

ಪುಸ್ತಕವು “ಹೋರಾಟ” ದ ಬಗ್ಗೆ ಇದ್ದು, ಅದನ್ನು ಹಿಂಪಡೆದು ಕೊಳ್ಳುವುದನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಉಪಕುಲಪತಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭಾಸ್ಕರನ್, ವಿಶ್ವವಿದ್ಯಾನಿಲಯವು ಸ್ವಾತಂತ್ರ್ಯ ಹೋರಾಟವನ್ನು ಅದರ ಪಠ್ಯಕ್ರಮದಿಂದ ತೆಗೆದುಹಾಕುತ್ತದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಈ ವಿಷಯವನ್ನು ವಿಶ್ವವಿದ್ಯಾನಿಲಯವೆ ರಾಜಕೀಯಗೊಳಿಸಿದೆ… ಎಬಿವಿಪಿಯಿಂದ ಬಂದ ಪತ್ರದ ಆಧಾರದ ಮೇಲೆ ವಿವಿ ತೆಗೆದುಕೊಂಡ ತಪ್ಪು ನಿರ್ಧಾರಕ್ಕೆ ಮಾತ್ರ ನಮ್ಮ ಪ್ರತಿಕ್ರಿಯೆ. ವಿಶ್ವವಿದ್ಯಾನಿಲಯವು ಒಂದೇ ಸಂಘಟನೆಯ ಪತ್ರದ ಮೇಲೆ ಕಾರ್ಯನಿರ್ವಹಿಸಿದರೆ, ನಾವು 15 ಸಂಘಟನೆಗಳನ್ನು ಒಳಗೊಂಡಿದ್ದೇವೆ, ಈಗ ಪಠ್ಯಕ್ರಮದಲ್ಲಿ ಪುಸ್ತಕವನ್ನು ಪುನಃ ಸೇರಿಸಲು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ, ನಾವು ಈ ಅನ್ಯಾಯದ ವಿರುದ್ಧ ಸರಣಿ ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಭಾಸ್ಕರನ್ ಹೇಳಿದ್ದಾರೆ.

ಅವರ ಮನವಿಯನ್ನು ಪರಿಗಣಿಸುವುದಾಗಿ ಉಪಕುಲಪತಿ ಡಾ. ಕೆ.ಪಿಚ್ಚುಮಣಿ ತಿಳಿಸಿದ್ದಾರೆಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...