Homeಕರ್ನಾಟಕದೆಹಲಿಯಲ್ಲಿ ವಿದ್ಯುತ್ ಉಚಿತ v/s ಕರ್ನಾಟಕದಲ್ಲಿ ದರ ಹೆಚ್ಚಳ!: ಆಪ್ ಪ್ರತಿಭಟನೆ

ದೆಹಲಿಯಲ್ಲಿ ವಿದ್ಯುತ್ ಉಚಿತ v/s ಕರ್ನಾಟಕದಲ್ಲಿ ದರ ಹೆಚ್ಚಳ!: ಆಪ್ ಪ್ರತಿಭಟನೆ

ಕೇಜ್ರಿವಾಲ್‌ ಮಾದರಿ ನೀತಿ ಕರ್ನಾಟಕದಲ್ಲಿ ಅಳವಡಿಸಿ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ತಾಕತ್ತು ಯಡಿಯೂರಪ್ಪನವರ ಸರ್ಕಾರಕ್ಕೆ ಇದೇಯೇ?

- Advertisement -
- Advertisement -

ದೆಹಲಿಯಲ್ಲಿ ಲಕ್ಷಾಂತರ ಕುಟುಂಬಗಳಿಗೆ 200 ಯೂನಿಟ್‌ವರೆಗೂ ವಿದ್ಯುತ್ ಉಚಿತವಾಗಿ ದೊರೆಯುತ್ತಿದೆ. ಆದರೆ ಕರ್ನಾಟಕದಲ್ಲಿ 200 ಯೂನಿಟ್ ವಿದ್ಯುತ್ ಬಳಕೆಗೆ 1523ರೂ ಪಾವತಿಸಬೇಕಾಗಿದೆ. ಒಂದು ವೇಳೆ ನೀವು 400 ಯೂನಿಟ್ ಬಳಸಿದರೆ ದೆಹಲಿಯಲ್ಲಿ 1000 ರೂ ದರ ಪಾವತಿಸಬೇಕು. ಆದರೆ ಕರ್ನಾಟಕದಲ್ಲಿ ಮಾತ್ರ 3360 ರೂ ಪಾವತಿಸಬೇಕು? ಈ ಅಗಾಧ ತಾರತಮ್ಯ ಖಂಡಿಸಿ, ವಿದ್ಯುತ್ ದರ ಹೆಚ್ಚಿಸಿರುವ ಕರ್ನಾಟಕ ಸರ್ಕಾರದ ಕ್ರಮ ಖಂಡಿಸಿ ಆಮ್‌ ಆದ್ಮಿ ಪಕ್ಷ ಪ್ರತಿಭಟನೆ ಆರಂಭಿಸಿದೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿಯ ಕಾವೇರಿ ಭವನದ ಎದುರು ನಡೆದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ “ಇಡೀ ದೇಶಕ್ಕೆ ಮಾದರಿಯಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಮಾದರಿ ವಿದ್ಯುಚ್ಛಕ್ತಿ ನೀತಿಯನ್ನು ಕರ್ನಾಟಕ ರಾಜ್ಯದಲ್ಲಿ ಅಳವಡಿಸಿ 200 ಯುನಿಟ್‌ ವಿದ್ಯುತ್ಛಕ್ತಿಯನ್ನು ಉಚಿತವಾಗಿ ನೀಡುವ ತಾಕತ್ತು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇದೇಯೇ” ಎಂದು ಪ್ರಶ್ನಿಸಿದ್ದಾರೆ.

ದೆಹಲಿ ರಾಜ್ಯ ಕಿಂಚಿತ್ತೂ ವಿದ್ಯುತ್‌ ಉತ್ಪಾದನೆ ಮಾಡುವುದಿಲ್ಲ. ಎಲ್ಲವನ್ನೂ ಖಾಸಗಿ ಕಂಪೆನಿಗಳಿಂದ ಖರೀದಿಸಿ ವಿತರಿಸುತ್ತದೆ. ಆದರೂ ತನ್ನ ರಾಜ್ಯದ ಜನರಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಆದರೆ ವಿದ್ಯುತ್ ಉತ್ಪಾದನೆಯಲ್ಲಿ ಶೇ 100 ರಷ್ಟು ಸ್ವಾವಲಂಭಿಯಾಗಿರುವ ನಮ್ಮ ಕರ್ನಾಟಕ ರಾಜ್ಯ ಶೇ 6 ರಷ್ಟು ದರ ಹೆಚ್ಚಳ ಮಾಡಿ ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಅಧಿಕಾರದ ಅವಧಿಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿದ್ಯುತ್ ಖರೀದಿಯಲ್ಲಿ ಸಾಕಷ್ಟು ಹಗರಣ ನಡೆಸಿವೆ. ಅದರಿಂದಾದ ನಷ್ಟ ತುಂಬಿಕೊಳ್ಳಲು ದರ ಏರಿಸಿ ಜನ ಸಾಮಾನ್ಯರ ಮೇಲೆ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಈ ಕೂಡಲೇ ಈ ದರ ಹೆಚ್ಚಳದ ಆದೇಶವನ್ನು ಸರ್ಕಾರ ಹಿಂಪಡೆಯದೇ ಇದ್ದರೆ ಇಡೀ ರಾಜ್ಯದಾದ್ಯಂತ ಆಮ್ ಆದ್ಮಿ ಪಕ್ಷ ಸರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಹಾಗೂ ನಾಳೆಯಿಂದ ನಮ್ಮ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಪ್ರತಿ ಮನೆ ಮನೆಗೆ ತೆರಳಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಕೆಟ್ಟ ಆಡಳಿತದ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದರು.

ಕಳೆದ ಶುಕ್ರವಾರ ಎಎಪಿ “ಶಾಕ್ ಬೇಡ” ಎನ್ನುವ ನೂತನ ಅಪ್ಲಿಕೇಶನ್‌ ಅಭಿವೃದ್ಧಿ ಪಡಿಸಿ ಬಿಡುಗಡೆ ಮಾಡಿತ್ತು. ಇದರಲ್ಲಿ ಕಳೆದ ತಿಂಗಳು ಬೆಂಗಳೂರಿನ ಜನರು ಪಾವತಿಸಿದ ವಿದ್ಯುತ್ ಬಿಲ್ ಮೊತ್ತವನ್ನು ನಮೂದಿಸಿ ನವೆಂಬರ್ ತಿಂಗಳು ಎಷ್ಟು ವಿದ್ಯುತ್‌ ಬಿಲ್‌ ಬರುತ್ತದೆ ಎಂದು ನೋಡಬಹುದು ಮತ್ತು ಅಷ್ಟೇ ಪ್ರಮಾಣದ ವಿದ್ಯುತ್‌ ಉಪಯೋಗಿಸುವ ದೆಹಲಿಯ ನಿವಾಸಿಗಳು ಎಷ್ಟು ಬಿಲ್‌ ಪಾವತಿಸುತ್ತಾರೆ ಎನ್ನುವುದನ್ನು ತುಲನೆ ಮಾಡಿ ನೋಡಬಹುದು ಎಂದು ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...