Homeಮುಖಪುಟಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

- Advertisement -
- Advertisement -

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಬಿಹಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ರಾಜ ಭವನ ಬಿಡುಗಡೆ ಮಾಡಿದ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಹಿಂದೂಸ್ತಾನಿ ಅವಮ್ ಮೋರ್ಚಾದ ಸ್ಥಾಪಕ ಅಧ್ಯಕ್ಷರಾಗಿರುವ ಜಿತಾನ್ ರಾಮ್ ಮಾಂಜಿ ಅವರಿಗೆ ರಾಜ್ಯಪಾಲ ಫಗು ಚೌಹಾನ್ ಅವರು ಪ್ರಮಾಣವಚನ ಭೋಧಿಸಿದರು.

“2020 ರ ನವೆಂಬರ್ 23-24ರ ಅವಧಿಯಲ್ಲಿ ಹೊಸ ಸ್ಪೀಕರ್ ಆಯ್ಕೆಯಾಗುವವರೆಗೂ ಅವರನ್ನು ನೇಮಕ ಮಾಡಲಾಗಿದೆ” ಎಂದು ಪ್ರಕಟನೆ ತಿಳಿಸಿದೆ. ಹೊಸದಾಗಿ ರಚಿಸಲಾದ ವಿಧಾನಸಭೆಯ ಐದು ದಿನಗಳ ಉದ್ಘಾಟನಾ ಅಧಿವೇಶನ ನವೆಂಬರ್ 23 ರಂದು ಪ್ರಾರಂಭವಾಗಲಿದೆ.

ಇದನ್ನೂ ಓದಿ: ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ಬಿಹಾರ ಚುನವಣೆಯಲ್ಲಿ ಎನ್‌ಡಿಎ ಕೂಟದ ಮಿತ್ರಪಕ್ಷವಾಗದ್ದ ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷವು 07 ಸ್ಥಾನಗಳಲ್ಲಿ ಸ್ಪರ್ಧಿಸಿ 04 ಸ್ಥಾನಗಳಲ್ಲಿ ಜಯಗಳಿಸಿದ್ದು ಎನ್‌ಡಿಎಗೆ ಸರಳ ಬಹುಮತ ಪಡೆಯಲು ಸಹಕರಿಸಿದೆ.

ನವೆಂಬರ್‌ 13 ರಂದು ಹೇಳಿಕೆ ನೀಡಿದ್ದ ಅವರು, “ನಾನು ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದವನು. ಹಾಗಾಗಿ ಸಚಿವನಾಗಲು ಬಯಸುವುದಿಲ್ಲ. ಆದ್ದರಿಂದ ನಾನು ನಿತೀಶ್ ಸಂಪುಟ ಸೇರುವುದಿಲ್ಲ. ಆದರೆ ಈ ಸರ್ಕಾರದಿಂದ ಬಿಹಾರದ ಅಭಿವೃದ್ದಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಶಾಸಕರು ಸಹ ಎನ್‌ಡಿಎ ಸೇರಿ ಎಂದು ಮನವಿ ಮಾಡುತ್ತೇನೆ” ಎಂದಿದ್ದರು.

ಜಿತನ್ ರಾಮ್ ಮಾಂಜಿ ಯಾರು?

ಜಿತನ್ ರಾಮ್ ಮಾಂಜಿ ದಲಿತ ನಾಯಕರಾಗಿದ್ದು, 1980 ರಲ್ಲಿ ಕಾಂಗ್ರೆಸ್ ಸೇರುವುದರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಅಲ್ಲಿಂದ ಅವರು ಆರ್‌ಜೆಡಿ ಸೇರಿ, ನಂತರ ಆ‌ರ್‌‌ಜೆಡಿ ಬಿಟ್ಟು ಜೆಡಿಯು ಸೇರಿದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಅವರಿಗೆ ಮುಖ್ಯಮಂತ್ರಿ ಆಗುವ ಅದೃಷ್ಟ ಒಲಿದು ಬಂತು.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

2014 ರವರೆಗೂ ನಿತೀಶ್ ಕುಮಾರ್‌ರವರ ಜೆಡಿಯು ಪಕ್ಷದಲ್ಲಿದ್ದರು, ಆಗ ನಿತೀಶ್‌ ಕುಮಾರ್‌ ಪ್ರಧಾನಿ ನರೇಂದ್ರ ಮೋದಿಯವರು ಕಟ್ಟಾ ವಿರೋಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ 2014 ರ ಲೋಕಸಭಾ ಚುನಾವಣೆಯನ್ನು ನಿತೀಶ್ ಕುಮಾರ್‌ ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿದ್ದರು. ಆದರೆ ಅವರ ಪಕ್ಷದಿಂದ ಕೇವಲ 02 ಅಭ್ಯರ್ಥಿಗಳು ಮಾತ್ರ ಗೆದ್ದು ಜೆಡಿಯು ಸೋಲನ್ನು ಅನುಭವಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್ ಕುಮಾರ್‌‌ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಂಜಿಯವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರು.

ಆದರೆ ಸ್ವಲ್ಪ ಸಮಯದಲ್ಲಿ ನಿತೀಶ್ ಕುಮಾರ್‌ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ವಾಪಸ್ ಬಯಸಿದಾಗ ಆರಂಭದಲ್ಲಿ ಮಾಂಜಿ ನಿರಾಕರಿಸಿದ್ದರಾದರೂ, ನಂತರ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಇದಾಗಿ ಜೆಡಿಯು ತೊರೆದ ಜಿತನ್‌ ರಾಮ್ ಮಾಂಜಿ ಹಿಂದುಸ್ಥಾನಿ ಅವಾಮ್ ಮೋರ್ಚಾ ಎಂಬ ಹೊಸ ಪಕ್ಷವನ್ನು ಕಟ್ಟಿದರು.

ಇದನ್ನೂ ಓದಿ: ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...