Homeಕರ್ನಾಟಕದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ - ಕೆಎನ್ಆರ್

ದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ – ಕೆಎನ್ಆರ್

ಮಾತನಾಡಲು ಬಯಸಿದರೂ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಸ್ಥಾನದಿಂದ ಅವರನ್ನು ಬದಲಾವಣೆ ಮಾಡುವ ಸೂಚನೆಯಾಗಿದೆ ಎಂದು ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ಸಂಬಂಧ ತೆಗೆದುಕೊಂಡು ಹೋಗಿದ್ದ ಲೀಸ್ಟ್ ಗೆ ಅನುಮೋದನೆ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇದನ್ನು ನೋಡಿದರೆ ಯಡಿಯೂರಪ್ಪ ಬದಲಾವಣೆ ಖಚಿತ ಎಂಬುದು ತಿಳಿಯುತ್ತದೆ ಎಂದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಮಾತನಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರೂ ಅಮಿತ್ ಶಾ ಅದಕ್ಕೆ ಕಿಮ್ಮತ್ತು ಕೊಟ್ಟಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ನಮ್ಮ ನಾಯಕರು. ಅವರು ಕೇವಲ ಬಿಜೆಪಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ನಮಗೂ ಮುಖ್ಯಮಂತ್ರಿಗಳು. ಒಂದು ರಾಜ್ಯವನ್ನು ಪ್ರತಿನಿಧಿಸುವವರು. ಅಂಥವರಿಗೆ ಭೇಟಿಗೆ ಅವಕಾಶ ಕಲ್ಪಿಸದೆ ಗೃಹ ಸಚಿವರು ಅವಮಾನ ಮಾಡಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ನಾನು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೆ. ಅವರ ಮನೆಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. ಮರುದಿನ ಬೆಳಗ್ಗೆ ಪತ್ರಿಕೆಯೊಂದರಲ್ಲಿ ಪರಮೇಶ್ವರ್ ವಿರುದ್ಧ ರಾಜಣ್ಣ ದೂರು ಹೇಳಿದ್ದಾರೆ ಎಂದು ವರದಿ ಬಂದಿತ್ತು. ನಾನು ಪರಮೇಶ್ವರ್ ವಿರುದ್ಧ ದೂರನ್ನೂ ಹೇಳಿಲ್ಲ. ಆ ಬಗ್ಗೆ ಮಾತನಾಡಿಯೇ ಇಲ್ಲ. ಆ ಪತ್ರಿಕೆಯಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಎಲ್ಲಾ ನಾಯಕರು ಶಿರಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಪರಮೇಶ್ವರ್ ಕೂಡ ಸಾಕಷ್ಟು ಶ್ರಮ ಹಾಕಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಜನರಿಗೆ ತಪ್ಪು ಸಂದೇಶ, ಸುಳ್ಳು ಮಾಹಿತಿ ಹೋಗಬಾರದು. ವಿಶ್ವಾಸಕ್ಕೆ ಧಕ್ಕೆ ಬರುವಂತಹ ವರದಿ ಮಾಡಬಾರದು. ತಪ್ಪು ಮಾಹಿತಿ ನೀಡುವುದು ಸರಿಯಲ್ಲ ಎಂದು ತಿಳಿಸಿದರು.

ಶಿರಾ ಉಪಚುನಾವಣೆಯಲ್ಲಿ ಸುಳ್ಳು ಭರವಸೆಯಿಂದಲೇ ಬಿಜೆಪಿ ಗೆಲುವು ಸಾಧಿಸಿತು. ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸುತ್ತೇವೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪಿಸಿ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟರು. ಮದ್ದಕ್ಕನಹಳ್ಳಿಯಲ್ಲಿ ಭೋವಿ ಸಮುದಾಯ ಎದುರಿಸುತ್ತಿರುವ ಸಮಸ್ಯೆ ಯನ್ನು ಬೆಳಗಾಗುವುದರೊಳಗೆ ಬಗೆಹರಿಸುತ್ತೇವೆ ಎಂದು ಕೀಳುಮಟ್ಟದ ಭರವಸೆ ನೀಡಿದರು ಎಂದು ಕಿಡಿಕಾರಿದರು.

ಎಡಗೈ ಸಮುದಾಯದವರಿಗೆ ಒಳಮೀಸಲಾತಿ ಕಲ್ಪಿಸುತ್ತೇವೆ. ನ್ಯಾ.ಸದಾಶಿವ ಆಯೋಗದ ವರದಿಯನ್ನು ಯಾಥಾವತ್ತಾಗಿ ಜಾರಿಮಾಡುತ್ತೇವೆ ಎಂದು ಭರವಸೆ ಕೊಟ್ಟರು. ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ಭರವಸೆ ನೀಡಿದರು. ಹಾಗಾಗಿ ಬಿಜೆಪಿ ಸರ್ಕಾರ ಮತ್ತು ಮುಖಂಡರು ಏನೆಲ್ಲ ಭರವಸೆ ನೀಡಿದ್ದಾರೆ ಅವೆಲ್ಲವನ್ನೂ ಕಾಲಮಿತಿಯೊಳಗೆ ಈಡೇಸಿಸಬೇಕು. ಜನರಿಗೆ ನೀಡಿರುವ ಭರವಸೆ ಈಡೇರಿಸದಿದ್ದರೆ ಸುಳ್ಳು ಹೇಳಿದಂತೆ ಆಗುತ್ತದೆ ಎಂದರು.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...