Homeಮುಖಪುಟ4 ಗಂಟೆ ಮಳೆಯಲ್ಲೇ ನಿಂತು ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಪೊಲೀಸ್‌ಗೆ ಸ್ಥಳದಲ್ಲೇ ಗೌರವ!

4 ಗಂಟೆ ಮಳೆಯಲ್ಲೇ ನಿಂತು ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಪೊಲೀಸ್‌ಗೆ ಸ್ಥಳದಲ್ಲೇ ಗೌರವ!

’ನಾನು ವಿಶೇಷವಾಗಿ ದ್ವಿಚಕ್ರ ವಾಹನ ಸವಾರರ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಅವರು ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಕಾಯುವಾಗ ಮಳೆಯಿಂದ ಸಂಪೂರ್ಣವಾಗಿ ನೆನೆಯುತ್ತಾರೆ’

- Advertisement -
- Advertisement -

ಅತ್ಯಂತ ಜನನಿಬಿಡ ರಸ್ತೆಯೊಂದರಲ್ಲಿ ವಾಹನ ಸಂಚಾರವನ್ನು ನಿರ್ವಹಿಸಲು ಸತತ ನಾಲ್ಕು ಗಂಟೆಗಳ ಕಾಲ ಭಾರಿ ಮಳೆಯ ಮಧ್ಯೆ ನಿಂತಿದ್ದ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ ಎಸ್‌ಪಿಯವರು ಸ್ಥಳಕ್ಕೆ ಆಗಮಿಸಿ ಅವರಿಗೆ ಬಹುಮಾನ ನೀಡಿ ಗೌರವಿಸಿದ್ದಾರೆ.

ತಮಿಳುನಾಡು ರಾಜಧಾನಿ ಚೆನ್ನೈನಿಂದ 600 ಕಿ.ಮೀ ದೂರದಲ್ಲಿರುವ ತೂತುಕುಡಿ ದಕ್ಷಿಣ ನಗರದ ಬಿಡುವಿಲ್ಲದ VVD ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ಪೇದೆ ಮುತ್ತುರಾಜ್ ಅವರು ಸುಮಾರು ನಾಲ್ಕು ಗಂಟೆಗಳ ಕಾಲ ಭಾರಿ ಮಳೆಯಲ್ಲಿ ನಿಂತು ಕರ್ತವ್ಯ ನಿರ್ವಹಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ನೋಡಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಯಕುಮಾರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದು ಜಂಕ್ಷನ್‌ನಲ್ಲಿ ರೇನ್‌ಕೋಟ್ ಧರಿಸಿ ವಾಹನಗಳನ್ನು ಸರಿಯಾಗಿ ಕಳಿಸುತ್ತಿದ್ದ ಮುತ್ತುರಾಜ್ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದ್ದಾರೆ.

ಇದನ್ನೂ ಓದಿ: 2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

“ಆ ಕಷ್ಟದ ಪರಿಸ್ಥಿತಿಯಲ್ಲೂ ಅವರ ಕರ್ತವ್ಯ ಪ್ರಜ್ಞೆಯನ್ನು ಗುರುತಿಸಲು ನಾನು ಬಯಸುತ್ತೇನೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಅವರು ನನ್ನನ್ನು ಸ್ಥಳದಲ್ಲೇ ಗೌರವಿಸಲು ಸಮಯ ಮೀಸಲಿರಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಮತ್ತು ಹೆಮ್ಮೆ ಇದೆ. ಸಾಮಾನ್ಯವಾಗಿ ಪೊಲೀಸ್ ಸಿಬ್ಬಂದಿಯನ್ನು ಎಸ್‌ಪಿ ಕಚೇರಿಯಲ್ಲಿ ಮಾತ್ರ ಗೌರವಿಸಲಾಗುತ್ತದೆ. ನನಗೆ ಪ್ರೇರಣೆಯಾದ ನನ್ನ ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್‌ಗೂ ನಾನು ಧನ್ಯವಾದ ಹೇಳಬೇಕು” ಎಂದು ಮುತ್ತುರಾಜ್ ಹೇಳಿದರು.

“ಇದು ನನ್ನ ಕೆಲಸ, ನಾನು ವಿಶೇಷವಾಗಿ ದ್ವಿಚಕ್ರ ವಾಹನ ಸವಾರರ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಅವರು ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಕಾಯುವಾಗ ಮಳೆಯಿಂದ ಸಂಪೂರ್ಣವಾಗಿ ನೆನೆಯುತ್ತಾರೆ. ಹಾಗಾಗಿ ನಾನು ಸಿಗ್ನಲ್ ಆಫ್ ಮಾಡಿ ಕೈಯಾರೆ ಟ್ರಾಫಿಕ್ ನಿಯಂತ್ರಿಸಿದೆ. ಆಗ ಅದು ಅವರಿಗೆ ಸ್ವಲ್ಪ ಸುಲಭವಾಗುತ್ತದೆ” ಎಂದು ತಮ್ಮ ಕರ್ತವ್ಯ ನಿಷ್ಠೆ ಬಗ್ಗೆ ಮಾತನಾಡುತ್ತಾರೆ ಮುತ್ತುರಾಜ್.

ಪತಿ ಮುತ್ತುರಾಜ್ ಕೆಲಸದ ಬಗ್ಗೆ ಅವರ ಪತ್ನಿ ಶಿವರಾಜನಿ ಪ್ರತಿಕ್ರಿಯೆ ನೀಡಿದ್ದು, “ನಾನು ಅವರ ಬಗ್ಗೆ ತುಂಬಾ ಹೆಮ್ಮೆಪಡುತ್ತೇನೆ, ಕೆಲಸದ ವಿಷಯಕ್ಕೆ ಬಂದಾಗ ಆವರು ಯಾವಾಗಲೂ ಕರ್ತವ್ಯನಿಷ್ಠರಾಗಿರುತ್ತಾರೆ” ಎನ್ನುತ್ತಾರೆ. ಈ ದಂಪತಿಗೆ ಒಬ್ಬ ಮಗಳು ಮತ್ತು ಒಬ್ಬ ಮಗನಿದ್ದಾರೆ.


ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...