Homeಅಂಕಣಗಳುಲೋಕಪಾಲ್‌ರನ್ನು ನೇಮಕ ಮಾಡದಿರುವುದು ಹೇಗೆ ?

ಲೋಕಪಾಲ್‌ರನ್ನು ನೇಮಕ ಮಾಡದಿರುವುದು ಹೇಗೆ ?

- Advertisement -
- Advertisement -

| ಕೆ.ಎನ್ ದಿನೇಶ್ |

ತನ್ನನ್ನು ತಾನು ಚೌಕಿದಾರ್ ಎಂದು ಕರೆದುಕೊಳ್ಳುವ ಮೋದಿಯ ಆಡಳಿತಾವಧಿಯಲ್ಲಿ ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಸ್ವತಂತ್ರ ಮತ್ತು ವಿಶ್ವಾಸಾರ್ಹ ಲೋಕಪಾಲರನ್ನು ಬಲಿಕೊಡಲಾಗಿದೆ.

2014 ರ ಜನವರಿ 1 ರಲ್ಲಿಯೇ ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆಯು ಸಂಸತ್ತಿನಲ್ಲಿ ಪಾಸ್ ಆಗಿ ರಾಷ್ಟ್ರಪತಿಗಳ ಅಂಕಿತ ಪಡೆದುಕೊಂಡಿತು. ಸ್ವತಂತ್ರ ಅಧಿಕಾರವನ್ನು ಹೊಂದಿರುವ ಮತ್ತು ಶಕ್ತಿಯುತವಾದ ಭ್ರಷ್ಟಾಚಾರ ವಿರೋಧಿ ಆಂಬುಡ್ಸ್ಮನ್ ಸ್ಥಾಪನೆಗೆ ಒತ್ತಾಯಿಸಿ ಸಾರ್ವಜನಿಕರ ಬಲವಾದ ಒತ್ತಡದ ಪರಿಣಾಮವಾಗಿ ಈ ಕಾನೂನು ಜಾರಿಗೆ ತರಲಾಯಿತು. ಯಾವುದೇ ಭಯ ಮತ್ತು ಪಕ್ಷಪಾತವಿಲ್ಲದೇ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸುವ ಅಧಿಕಾರ ಇದಕ್ಕಿತ್ತು.

ಕೇಂದ್ರೀಯ ತನಿಖಾ ಸಂಸ್ಥೆಯು (ಸಿಬಿಐ) ನಂತಹ ಆಗಿನ ತನಿಖಾ ಸಂಸ್ಥೆಗಳು ಪಂಜರದ ಗಿಳಿಯಂತಾಗಿ, ಆಳುವ ಸರ್ಕಾರದ ಕೈ ಗೊಂಬೆಯಾಗಿ ಬಳಕೆಯಾಗುತ್ತಿದೆ ಎಂದು ಸಾರ್ವಜನಿಕರು ಅವುಗಳ ಮೇಲೆ ಸಂಪೂರ್ಣವಾಗಿ ನಂಬಿಕೆ ಕಳೆದುಕೊಂಡಿದ್ದು ಲೋಕಪಾಲ್ನ ಜಾರಿಗೆಯ ಬೇಡಿಕೆಗೆ ಕಾರಣವಾಗಿತ್ತು.  2014ರ ಸಾರ್ವತ್ರಿಕ ಚುನಾವಣೆಯಲ್ಲಿ ಭ್ರಷ್ಟಾಚಾರ-ವಿರೋಧಿ ಅಜೆಂಡಾದ ಮೂಲಕ ಅಧಿಕಾರಕ್ಕೆ ಏರಿದ ನಂತರ ಮೋದಿಯವರು, ಲೋಕಪಾಲ್‌ರನ್ನು ನೇಮಕ ಮಾಡುವ ಮೂಲಕ ಲೋಕ್‌ಪಾಲ್ ಸಂಸ್ಥೆಯ ವಿಶ್ವಾಸವನ್ನು ಉಳಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು

ಅದರೆ ಆಗಿದ್ದೇ ಬೇರೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಒಂದು ಶಕ್ತಿಶಾಲಿ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯನ್ನು ರಚಿಸುವಲ್ಲಿ ಬರೀ ನಿರಾಸಕ್ತಿಯೇ ಕಂಡುಬಂದಿದೆ. ಅಧಿಕಾರಕ್ಕೆ ಬಂದು ಸುಮಾರು ಐದು ವರ್ಷಗಳ ತನಕ ಲೋಕಪಾಲ ನೇಮಕ ಮಾಡಲೇ ಇಲ್ಲ.   ಕೊನೆಗೆ 2019ರ ಸಾರ್ವತ್ರಿಕ ಚುನಾವಣೆಗಳಿಗೆ ಮೂರು ವಾರಗಳ ಮುಂಚೆ,  ಲೋಕಪಾಲ್‌ನ ಛೇರ್‌ಪರ್ಸನ್ ಮತ್ತು ಇತರೆ ಸದಸ್ಯರು ನೇಮಕವಾದರೂ ಸಹ ನೇಮಕಾತಿ ಪ್ರಕ್ರಿಯೆಯ ಎಲ್ಲಾ ವಿಧಾನಗಳು ಸಂಪೂರ್ಣ ರಾಜಿಕೋರತನದಿಂದ ಕೂಡಿದ್ದು ಸ್ಪಷ್ಟವಾಗಿ ಕಂಡುಬರುತ್ತಿದೆ.

ಮೊದಲನೇಯದಾಗಿ, ಲೋಕ್ ಪಾಲ್ ನ ಅಧ್ಯಕ್ಷ ಮತ್ತು ಸದಸ್ಯರ ಪದಕ್ಕಾಗಿ ಹೆಸರನ್ನು ಸೂಚಿಸುವ ಒಂದು ಆಯ್ಕೆ ಸಮಿತಿಯಲ್ಲಿ ಸರಕಾರದ ಪ್ರತಿನಿಧಿಗಳು ಮತ್ತು ಸರಕಾರ ನೇಮಿಸಿರುವವರೇ ಹೆಚ್ಚಿನ ಸಂಖ್ಯೆ ಮತ್ತು ಪ್ರಾಬಲ್ಯ ಹೊಂದಿದ್ದು.

ಈ ಆಯ್ಕೆ ಸಮಿತಿಯಲ್ಲಿ ಆಡಳಿತ ಪಕ್ಷದ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದಂತೆ ನೋಡಿಕೊಳ್ಳುವುದು ಆ ಸಂಸ್ಥೆಯ ಸ್ವಾತಂತ್ರö್ಯ ಮತ್ತು ಸ್ವಾಯುತ್ತತೆಯನ್ನು ಖಾತರಿಪಡಿಸುವ ಪ್ರಮುಖ ತತ್ವವಾಗಿರುತ್ತದೆ.

ಹಾಗಾಗಿ ಲೋಕಪಾಲ್ ಆಕ್ಟ್, ಪ್ರಕಾರ ಪ್ರಧಾನಮಂತ್ರಿ,ಲೋಕಸಭೆಯ ಸ್ಪೀಕರ್, ಲೋಕಸಭೆಯ ವಿರೋಧ ಪಕ್ಷದನಾಯಕ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅಥವಾ ಸಿಜೆಐನಿಂದ ನಾಮನಿರ್ದೇಶನಗೊಂಡ ಸವೋಚ್ಚ ನ್ಯಾಯಾಲಯದ ನ್ಯಾಯವಾದಿ ಮತ್ತು ಈ ನಾಲ್ಕು ಜನರೂಒಪ್ಪುವ ಒಬ್ಬ ನ್ಯಾಯಾಧೀಶರನ್ನು ಒಳಗೊಂಡ ಸಮತೋಲಿತ ಆಯ್ಕೆ ಸಮಿತಿ ಇರಬೇಕು.

2014ರ ಸಾರ್ವತ್ರಿಕ ಚುನಾವಣೆಯ ನಂತರ, ವಿರೋಧ ಪಕ್ಷದ ನಾಯಕರು ಎಂದು ಯಾರೂ ಇಲ್ಲ ಎನ್ನುವ ಕಾರಣಕ್ಕಾಗಿ ಆಯ್ಕೆ ಸಮಿತಿಯನ್ನು ಪೂರ್ಣಗೊಳಿಸಲಾಗಲಿಲ್ಲ. ಆದರೆ ಸಿಬಿಐ ನಿರ್ದೇಶಕರ ನೇಮಕಾತಿ ವಿಚಾರದಲ್ಲಿ ಇಂತಹ ಸಮಸ್ಯೆ ಎದುರಾದಾಗ ಮಾತ್ರ ನೇಮಕಾತಿ ವಿಧಾನಕ್ಕೆ ಸಂಸತ್ತಿನಲ್ಲಿ ತಿದ್ದುಪಡಿ ಮಾಡಿ ಆಯ್ಕೆ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದಿದ್ದ ಸಂದರ್ಭದಲ್ಲಿ ಆಡಳಿತ ಪಕ್ಷದ ನಂತರ ಹೆಚ್ಚಿನ ಸ್ಥಾನಗಳನ್ನು ಪಡೆದ ಪ್ರತಿಪಕ್ಷದ ನಾಯಕನ್ನು ಸೇರಿಸಿಕೂಳ್ಳಲಾಯಿತು. ಇದೇ ವಿಧಾನವನ್ನು ಲೋಕಪಾಲ್‌ಗೆ ಅನ್ವಯಿಸದೇ ಹೆಚ್ಚು ಕಾಲ ಏಕೆ ಬಿಟ್ಟರು ಎನ್ನುವುದು ಮೋದಿಗೆ ಆಸಕ್ತಿ ಇರಲಿಲ್ಲ ಎಂಬುದನಷ್ಟೇ ತೋರಿಸುತ್ತದೆ.

ಲೋಕಪಾಲ್ ನೇಮಕಾತಿಯ ಆಯ್ಕೆ ಸಮಿತಿಯ ಸಂಯೋಜನೆಯನ್ನು ತಿದ್ದುಪಡಿ ಮಾಡುವ ಬದಲು ಮೋದಿ ಸರಕಾರವು 10 ಪುಟಗಳ ತಿದ್ದುಪಡಿ ಮಸೂದೆಯನ್ನು ಮುಂದಿಟ್ಟು, ಲೋಕಪಾಲ ಕಾಯಿದೆ ಮೂಲಭುತವಾಗಿ ದುರ್ಬಲವಾಗುವಂತೆ ಮಾಡಿತು; ಇದರಿಂದ ಲೋಕಪಾಲ ಅನುಷ್ಠಾನಗೊಳಿಸುವಲ್ಲಿ ಸರಕರಕ್ಕಿಂದ್ದ ನಿರಾಸಕ್ತಿ ಇನ್ನೊಂದು ಸಲ ಸಾಬೀತಾಯಿತು. ಆದರೆ ಸರಕಾರ ಮುಂದಿಟ್ಟ ತಿದ್ದುಪಡಿಗಳ ಸ್ವರೂಪವೇ ವಿವಾದಾತ್ಮಕವಾಗಿದ್ದರಿಂದ  ಈ ಮಸೂದೆಯನ್ನು ಸಂಸದೀಯ ಸ್ಥಾಯೀ ಸಮಿತಿಗೆ ಕಳುಹಿಸಲಾಯಿತು. ಹಾಗೂ ಅಂದಿನಿಂದ ಅಲ್ಲಿಯೇ ಬಿದ್ದುಕೊಂಡಿತು.

ಲೋಕಪಾಲ್ ನೇಮಕಾತಿಗಾಗಿ ಸುಪ್ರೀಂ ಕೋಟನಲ್ಲಿ ಭ್ರಷ್ಟಾಚಾರ ವಿರೋಧಿ ಕಾರ್ಯಕರ್ತರಿಂದ ದಾವೆ ಹೊಡಲಾಯಿತು. ವಿರೋಧ ಪಕ್ಷದ ನಾಯಕ ಇಲ್ಲದಿರುವ ಒಂದು ಸಮಿತಿಯೇ ಲೋಕಪಾಲರನ್ನು ನೇಮಕ ಮಾಡಬಹುದು ಎಂದು ಎಪ್ರಿಲ್ 2017 ರಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿತು ಅದರೂ ಲೋಕಪಾಲರನ್ನು ನೇಮಕ ಮಾಡಲಿಲ್ಲ. ಹಾಗೂ ನ್ಯಾಯಾಂಗ ನಿಂದನೆಯ ಪ್ರಕರಣವನ್ನು ದಾಖಲಿಸಿದ ನಂತರವೇ, ಅಧಿಕಾರಕ್ಕೆ ಬಂದು 45 ತಿಂಗಳ ನಂತರ ಆಯ್ಕೆ ಸಮಿತಿ ಪ್ರಧಾನಮಂತ್ರಿಯ ನೇತೃತ್ವದಲ್ಲಿ ಮೊದಲ ಬಾರಿ ಸಭೆ ಸೇರಿತು.

ಪ್ರಧಾನಮಂತ್ರಿ ಮತ್ತು ಲೋಕಸಭೆಯ ಸ್ಪೀಕರ್ರೊಂದಿಗೆ ಸಿಜೆಐಯಿಂದ ನೇಮಿಸಲಾದ  ಮೊಕುಲ್ ರೊಹಟ್ಗಿಯರವನ್ನು ಆಯ್ಕೆ ಸಮಿತಿಗೆ ಸೇರಿಸಿಕೊಳ್ಳಲಾಯಿತು. ಈ ಮುಕುಲ್ ರೋಹಟ್ಗಿ ಅವರು ಮೋದಿ ಆಡಳಿತದ ಮೊದಲ ಮೂರು ವರ್ಷಗಳಲ್ಲಿ ಅಟಾರ್ನಿ ಜನರಲ್ ಆಗಿ ಸೇವೆಸಲ್ಲಿಸಿದ್ದರು.

ನಂತರ ಲೋಕಸಭೆಯ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರನ್ನು ಕೇವಲ ನಾಮಕಾವಸ್ಥೆಗೆ ಆಯ್ಕೆ ಸಮಿತಿಯ ಸಭೆಗಳಿಗೆ ಆಹ್ವಾನಿಸಲಾಯಿತಾದರೂ, ಅವರಿಗೆ ಯಾವುದೇ ನಿರ್ಣಯ ಮಾಡುವ ಅಧಿಕಾರ   ನೀಡಿದ್ದಿಲ್ಲ. ಎಲ್ಲರೂನಿರೀಕ್ಷಿಸಿದಂತೆ ಅವರು ಹಾಜರಾಗಲು ನಿರಾಕರಿಸಿದರು.

ಇದರ ಪರಿಣಾಮವಾಗಿ, ಆಡಳಿತ ಪಕ್ಷಕ್ಕೆ ನಿಷ್ಠೆಯನ್ನು ತೋರಿಸುವವರು ಮಾತ್ರ ಲೋಕಪಾಲದ ಆಯ್ಕೆ ಸಮಿತಿಯ ಸದಸ್ಯರಾಗಿರುವುದು ಹಾಗಾಗಿ, ಸರಕಾರ ಬಯಸುವ ಅಭ್ಯರ್ಥಿಗಳನ್ನೇ ಲೋಕಪಾಲ್ ಅಧ್ಯಕ್ಷ ಮತ್ತು ಸದಸ್ಯರ ಹುದ್ದೆಗೆ ನೇಮಕ ಮಾಡುವಂತಹ ಪಕ್ಷಪಾತ ಮೂಲದಲ್ಲೇ ಕಾಣಿಸಿಕೊಂಡಿದೆ. ಇದು ಈ ಕಾನೂನಿನ ಮೂಲ ಉದ್ದೇಶವನ್ನೇ ಸೋಲಿಸುತ್ತದೆ.

ಎರಡನೆಯಾದಾಗಿ ಲೋಕಪಾಲ್ ಆಯ್ಕೆ ಸಮಿತಿಯ ಕಾರ್ಯಗಳನ್ನು ಗೌಪ್ಯವಾಗಿ ಮಾಡಲಾಗುತ್ತಿದೆ. ಅದರೆ ಈ ಎಲ್ಲ ಪ್ರಕ್ರಿಯೆಗಳ ಸರಿಯಾಗಿ ಆಗುವಂತೆ ಸಾರ್ವಜನಿಕರ ಪರಿಶೀಲನೆಗೆ ಅವಕಾಶ ಮಾಡಿಕೊಡಬೇಕು ಹಾಗೂ ಎಲ್ಲಾ ಪ್ರಕ್ರಿಯೆಗಳು ಪಾರದರ್ಶಿಕವಾಗಿರಬೇಕು ಎಂದು ಲೋಕಪಾಲ್ ಕಾಯ್ದೆ 4(4)  ಹೇಳುತ್ತದೆ. “ಆಯ್ಕೆ ಸಮಿತಿಯು ಲೋಕಪಾಲದ ಅಧ್ಯಕ್ಷ ಮತ್ತು ಸದಸ್ಯರನ್ನು ಆಯ್ಕೆ ಮಾಡುವಾಗ ತನ್ನ ಪ್ರಕ್ರಿಯೆಯನ್ನು ಪಾರದರ್ಶಕವಾಗಿರುವಂತೆ ನಿಯಂತ್ರಿಸಬೇಕು”

ಆದರೆ ಈ ನಿಯಮದ ಸಂಪೂರ್ಣ ಉಲ್ಲಂಘನೆ ಮಾಡುತ್ತ, ಲೋಕಪಾಲ ಆಯ್ಕೆಯ ಪ್ರಕ್ರಿಯೆಯಲ್ಲಿ ಪಾರದರ್ಶಿಕತೆಯನ್ನು ತರಲೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಾರ್ವಜನಿಕಗೊಳಿಸಿಲ್ಲ. ಇನ್ನೊಂದು ಹೆಜ್ಜೆ ಮುಂದೆ ಹೋಗಿ, ಮಾಹಿತಿ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ, ಆಯ್ಕೆ ಸಮಿತಿ ಸಭೆಯ ನಡಾವಳಿಗಳನ್ನು  ರಹಸ್ಯ ಮಾಹಿತಿಯೆಂದು ಹೇಳಿಸಾರ್ವಜನಿಕರಿಗೆ ಬಹಿರಂಗಪಡಿಸಲು ನಿರಾಕರಿಸಲಾಯಿತು!ಪ್ರತಿಪಕ್ಷದ ನಾಯಕರನ್ನು ಒಳಗೊಳ್ಳದೇ ಇರುವಂತಹ ಸಂದರ್ಭದಲ್ಲಿ ಆಯ್ಕೆ ಸಮಿತಿಯು ಪಾರದರ್ಶಕತೆಯನ್ನು ತೋರದೇ ಇರುವುದು ಇನ್ನಷ್ಟು ಸಮಸ್ಯಾತ್ಮಕವಾಗಿದೆ.

ಹೊಸ ಲೋಕಪಾಲ್: ಪಿ.ಸಿ ಘೋಷ್

ದುರದೃಷ್ಟವಶಾತ್, ಆಯ್ಕೆ ಪ್ರಕ್ರಿಯೆಯನ್ನು ರಾಜಿ ಮಾಡಿಕೊಳ್ಳುವುದರ ಮೂಲಕ, ಲೋಕಪಾಲ್ ಸಂಸ್ಥೆಯು ಕಾರ್ಯಾಚರಣೆಯನ್ನು ಪ್ರಾರಂಭಿಸುವ ಮುಂಚೆಯೇ ಮೋದಿ ಸರಕಾರ ಅದನ್ನು ದುರ್ಬಲಗೊಳಿಸಿದೆ. ಈ ರೀತಿಯಲ್ಲಿ, ಭ್ರಷ್ಟಾಚಾರವನ್ನು ನಿಗ್ರಹಿಸುವ ಇತರೆ ಸಂಸ್ಥೆಗಳಿಗೆ ಅಂಟಿಕೊಂಡಿರುವ ರೋಗ ಈ ಸಂಸ್ಥೆಗೂ ಹುಟ್ಟಿನಿಂದಲೇ ಅಂಟಿಕೊಂಡಿದೆ. ಸ್ವಘೋಷಿತ ಚೌಕಿದಾರ್ ಅವರ ನೇತೃತ್ವದಲ್ಲಿ ಸ್ವತಂತ್ರ ಮತ್ತು ವಿಶ್ವಾಸಾರ್ಹ ಲೋಕಪಾಲನ್ನು ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ದೊಡ್ಡ ದುರಂತವಾಗಿದೆ.

 ಕೃಪೆ: ದಿವೈರ್.ಇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...