Homeಚಳವಳಿ2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಎಂಬ ಪತ್ರಿಕೆಯು 2020ರ ವರ್ಷದ ವ್ಯಕ್ತಿಯಾಗಿ ಡಾ.ಆನಂದ್ ತೇಲ್ತುಂಬ್ಡೆಯವರನ್ನು ಹೆಸರಿಸಿದೆ.

- Advertisement -
- Advertisement -

ಜೈಲಿನಲ್ಲಿರುವ ಭಾರತದ ಹೆಸರಾಂತ ಚಿಂತಕ, IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO, ಅಂಬೇಡ್ಕರ್‌ರವರ ಸಬಂಧಿ ಮತ್ತು ಬೌದ್ಧಿಕ ವಾರಸುದಾರ ಡಾ. ಆನಂದ್‌ ತೇಲ್ತುಂಬ್ಡೆಯವರನ್ನು 2020ರ ವರ್ಷದ ವ್ಯಕ್ತಿಯಾಗಿ ಆಯ್ಕೆ ಮಾಡಲಾಗಿದೆ.

ಪರ್ಯಾಯ ರಾಜಕೀಯವನ್ನು ಪ್ರಸಾರ ಮಾಡುವ ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಎಂಬ ಪತ್ರಿಕೆಯು 2020ರ ವರ್ಷದ ವ್ಯಕ್ತಿಯಾಗಿ ಡಾ.ಆನಂದ್ ತೇಲ್ತುಂಬ್ಡೆಯವರನ್ನು ಹೆಸರಿಸಿದೆ.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ  ಬಡ ಭೂಹೀನ ಕೂಲಿಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಪ್ರೊ. ಆನಂದ್‌ ತೇಲ್ತುಂಬ್ಡೆ ಅವರು ದೇಶದ ಅತ್ಯುತ್ತಮ ವಿದ್ಯಾವಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅದ್ಭುತ ಶೈಕ್ಷಣಿಕ ಮತ್ತು ವೃತ್ತಿಜೀವನವನ್ನು ಹೊಂದಿದ್ದಾರೆ. ದೇಶದ ಅತ್ಯುನ್ನತ ಗಣ್ಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ಕಂಪನಿಗಳಿಗೆ ನಾಯಕತ್ವ ಕೊಟ್ಟಿದ್ದಾರೆ ಮತ್ತು ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡುಬಂದಿವೆ.

ಇದನ್ನೂ ಓದಿ: IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?

ಭಾರತದಲ್ಲಿನ ಜಾತಿ ಪದ್ದತಿ, ಅಸಮಾನತೆ ಬಗ್ಗೆ, ಅಂಬೇಡ್ಕರ್‌ರವರ ಕುರಿತು 29 ಪುಸ್ತಕಗಳನ್ನು ರಚಿಸಿರುವ ತೇಲ್ತುಂಬ್ಡೆ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ. ಇಂತಹ ಮಹಾನ್ ಚಿಂತಕನನ್ನು ಸರ್ಕಾರ ಕರಾಳ ಯುಎಪಿಎ ಕಾಯ್ದೆಯಡಿ ಭೀಮಾ ಕೋರೇಂಗಾವ್ ಗಲಭೆಯಲ್ಲಿ ಪಾತ್ರವಹಿಸಿದರು ಎಂದು ಆರೋಪಿಸಿ ಬಂಧಿಸಿ ಜೈಲಿನಲ್ಲಿಟ್ಟಿದೆ. ಬಾಬಾಸಾಹೇಬ್ ಅಂಬೇಡ್ಕರರ ಜನ್ಮದಿನ ಏಪ್ರಿಲ್ 14, 2020ರಂದೇ ಅವರನ್ನು ಬಂಧಿಸಿರುವುದು ದುರಂತ.

ಆನಂದ್
Photo Credit: Counter Currents

ಬ್ರಾಹ್ಮಣ್ಯದ ಸಿದ್ಧಾಂತ, ಜಾತಿ ವ್ಯವಸ್ಥೆ, ನಿಯೋ ಲಿಬರಲಿಜಂ, ಭೂಮಾಲೀಕತ್ವ, ಎಲ್ಲದಕ್ಕೂ ಮಿಗಿಲು ದೇಶದಲ್ಲಿ ಬಲಗೊಳ್ಳುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ಮೇಲೆ ಅವರು ಆಳವಾದ ಬರವಣಿಗೆಗಳನ್ನು ಬರೆದದ್ದೆ ಅಲ್ಲದೇ, ದೇಶದಲ್ಲಿರುವ ಬಡ ಸಮುದಾಯಗಳಿಗೆ ಡಾ.ಅಂಬೇಡ್ಕರ್ ಸೂಚಿಸಿದ ಹಾಗೆ ಸುಶಿಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ತಲೆಯ ಮೇಲೆ ಹಾಕಿಕೊಂಡರು. ಬಡ ಸಮುದಾಯಗಳ ಮೇಲೆ ಪ್ರತ್ಯೇಕವಾಗಿ ದಲಿತರ ಮೇಲೆ ದಾಳಿಗಳು ನಡೆದರೆ ಆನಂದ್ ಖುದ್ದಾಗಿ ಅಲ್ಲಿಗೆ ಹೋಗಿ ಅವರ ಪರ ನಿಂತರು.

ಸದಾ ಬಡಜನರ ಪರವಾಗಿ ಮತ್ತು ಪ್ರಭುತ್ವದ ಹಿಂಸಾಚಾರದ ವಿರುದ್ಧ ದನಿಯೆತ್ತುತ್ತಿದ್ದ ಆನಂದ್‌ ತೇಲ್ತುಂಬ್ಡೆಯವರನ್ನು ಬಲಪಂಥೀಯ ಸರ್ಕಾರ ಬೇಕಂತಲೇ ಬಂಧಿಸಿ ಜೈಲಿನಲ್ಲಿಟ್ಟಿದೆ. ಇದೇ ರೀತಿಯ ಹತ್ತಾರು ಚಿಂತಕರನ್ನು ಸರ್ಕಾರ ಬಂಧಿಸಿದೆ. ಆದರೆ ದೇಶಾದ್ಯಂತ ಅವರ ಪರವಾಗಿ ಕೂಗು ಕೇಳಿಬರುತ್ತಿದೆ. ಈ ರೀತಿಯ ಪತ್ರಿಕೆಗಳು ಅವರನ್ನು ವರ್ಷದ ವ್ಯಕ್ತಿಯಾಗಿ ಆಯ್ಕೆಮಾಡಿ ಗೌರವ ಸಲ್ಲಿಸುತ್ತಿವೆ.


ಇದನ್ನೂ ಓದಿ: ಆನಂದ್‌ ತೇಲ್‌ತುಂಬ್ಡೆ: ಬಂಧನದಲ್ಲಿ ಅಂಬೇಡ್ಕರ್ ಆತ್ಮಬಂಧು

ಇದನ್ನೂ ಓದಿ: ತಮ್ಮ ಬಂಧನಕ್ಕೂ ಮುಂಚೆ ಭಾರತೀಯರನ್ನು ಉದ್ದೇಶಿಸಿ ಪ್ರೊ. ಆನಂದ್‌ ತೇಲ್ತುಂಬ್ಡೆ ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...