Homeಕರೋನಾ ತಲ್ಲಣ2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

ಜನಸಾಮಾನ್ಯರಿಗೆ ಏಪ್ರಿಲ್ 2021ರ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ.

- Advertisement -
- Advertisement -

ಕೊರೊನಾ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದಾರೆ.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದಿದ್ದಾರೆ.

ಬಹುಶಃ 2024 ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ನೀಡಲಾಗುವುದು ಎಂದು ಆದರ್‌ ಪೂನವಾಲ್ಲಾ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ (HTLS) ಹೇಳಿದ್ದಾರೆ.

ವಿಶ್ವದಲ್ಲಿ ಅತಿದೊಡ್ಡ ಪ್ರಮಾಣದಲ್ಲಿ ಲಸಿಕೆಗಳನ್ನು ತಯಾರಿಸುವ ಪುಣೆಯ ಸೀರಮ್ ಸಂಸ್ಥೆ ಭಾರತದಲ್ಲಿ  ಲಸಿಕೆ ವಿತರಿಸಲು ಇಂಗ್ಲೆಂಡ್​​ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

“ಪ್ರತಿ ಭಾರತೀಯನಿಗೆ ಚುಚ್ಚುಮದ್ದು ಪಡೆಯಲು ಬಹುಶಃ ಎರಡು ಅಥವಾ ಮೂರು ವರ್ಷಗಳು ಬೇಕಾಗಬಹುದು, ಇದು ಕೇವಲ ಸರಬರಾಜು ನಿರ್ಬಂಧಗಳಿಂದಾಗಿ ಮಾತ್ರವಲ್ಲ, ಆದರೆ ನಿಮಗೆ ಬಜೆಟ್, ಲಸಿಕೆ, ಲಾಜಿಸ್ಟಿಕ್ಸ್, ಮೂಲಸೌಕರ್ಯಗಳು ಬೇಕು ಮತ್ತು ಜನರು ಲಸಿಕೆ ತೆಗೆದುಕೊಳ್ಳಲು ಸಿದ್ಧರಿರಬೇಕು” ಎಂದಿದ್ದಾರೆ.

ಜನಸಾಮಾನ್ಯರಿಗೆ ಲಸಿಕೆ ಯಾವ ಬೆಲೆ ಸಿಗುತ್ತದೆ ಎಂಬ ಪ್ರಶ್ನೆಗೆ, ಎರಡು ಡೋಸ್‌ಗಳಿಗೆ 5-6 ಡಾಲರ್‌ಗಳಷ್ಟು  ಅಂದರೆ ಸುಮಾರು 1,000 ರೂಪಾಯಿ ಇರುತ್ತದೆ ಎಂದಿದ್ದಾರೆ. ಜೊತೆಗೆ ’ಭಾರತ ಸರ್ಕಾರ ಲಸಿಕೆಯನ್ನು 3-4 ಯುಎಸ್ ಡಾಲರ್‌ಗೆ ಪಡೆಯಲಿದೆ. ಏಕೆಂದರೆ ಭಾರತ ದೊಡ್ಡ ಪ್ರಮಾಣದಲ್ಲಿ ವಾಕ್ಸಿನ್ ಖರೀದಿಸಲಿದೆ’ ಎಂದು ಪೂನವಾಲ್ಲಾ ತಿಳಿಸಿದ್ದಾರೆ.

ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯು ವಯಸ್ಸಾದವರಲ್ಲಿಯೂ ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಾಬೀತಾಗಿದೆ ಎಂದು ಲಸಿಕೆಯ ಪರಿಣಾಮದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಲಸಿಕೆಯನ್ನು ಮೊದಲು ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ನೀಡಲಾಗುತ್ತದೆ ಎಂದಿದ್ದಾರೆ.


ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...