Homeಕರ್ನಾಟಕದಲಿತರಿಗೆ ಕ್ಷೌರ ಮಾಡಿದ್ದಕ್ಕೆ ಬಹಿಷ್ಕಾರದ ಶಿಕ್ಷೆ: ನಂಜನಗೂಡಿನಲ್ಲೊಂದು ಅಮಾನವೀಯ ಘಟನೆ

ದಲಿತರಿಗೆ ಕ್ಷೌರ ಮಾಡಿದ್ದಕ್ಕೆ ಬಹಿಷ್ಕಾರದ ಶಿಕ್ಷೆ: ನಂಜನಗೂಡಿನಲ್ಲೊಂದು ಅಮಾನವೀಯ ಘಟನೆ

ಈ ಕುರಿತು ಮಲ್ಲಿಕಾರ್ಜುನ ಶೆಟ್ಟಿಯವರು ಪೊಲೀಸ್ ಠಾಣೆ, ತಹಶೀಲ್ದಾರ್‌ರವರ ಬಳಿ ತಮಗೆ ರಕ್ಷಣೆ ಕೊಡುವಂತೆ ಮನವಿ ಮಾಡಿದರೂ ಸಹ ಅವರ್ಯಾರು ಸ್ಪಂದಿಸಿಲ್ಲ ಎಂಬುದು ಅವರ ಅಳಲಾಗಿದೆ.

- Advertisement -
- Advertisement -

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲೆರೆ ಎಂಬ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಿದ ಏಕೈಕ ಕಾರಣಕ್ಕೆ ಸವಿತಾ ಸಮಾಜದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜರುಗಿದೆ.

ಹಲ್ಲೆರೆ ಗ್ರಾಮದಲ್ಲಿ ಮಲ್ಲಿಕಾರ್ಜುನ ಶೆಟ್ಟಿ ಎಂಬುವವರು ಬಹಳ ವರ್ಷಗಳಿಂದ ಕ್ಷೌರಿಕ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ. ಗ್ರಾಮದ ಎಲ್ಲರಿಗೂ ಕಟಿಂಗ್ ಮತ್ತು ಸೇವಿಂಗ್ ಮಾಡುವುದು ಅವರ ಕಾಯಕ. ಆದರೆ ಕೆಲದಿನಗಳ ಹಿಂದೆ ನಾಯಕ ಸಮುದಾಯಕ್ಕೆ ಸೇರಿದ ಕೆಲವರು ಗ್ರಾಮದ ಪರಿಶಿಷ್ಟ ಜಾತಿಯವರಿಗೆ ಕಟಿಂಗ್ ಮತ್ತು ಸೇವಿಂಗ್ ಮಾಡಬಾರದು ಎಂದು ಆದೇಶಿಸಿದ್ದರು. ಅಲ್ಲದೆ ಅದುವರೆಗೂ ಮಾಡಿದ್ದಕ್ಕೆ ಎರಡು ಬಾರಿ 5000 ರೂ ದಂಡ ಕಟ್ಟಿಸಿಕೊಂಡಿದ್ದಾರೆ.

ಆದರೆ ಆ ಸಮಯದಲ್ಲಿ ತಾಲ್ಲೂಕು ಕಚೇರಿಯ ಕೆಲ ಅಧಿಕಾರಿಗಳು ಎಲ್ಲರಿಗೂ ಕಟಿಂಗ್ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಒತ್ತಡ ಹಾಕಿದ್ದರು. ಅದರಂತೆ ನಾನು ಎಲ್ಲರಿಗೂ ಕಟಿಂಗ್ ಮಾಡುತ್ತಿದ್ದೆ. ಒಂದು ವೇಳೆ ಪರಿಶಿಷ್ಟ ಜಾತಿಯವರಿಗೆ ಕಟಿಂಗ್ ಮಾಡುವುದೇ ಆದರೆ 200-300ರೂ ಚಾರ್ಜ್ ಮಾಡಬೇಕೆಂದು ನಾಯಕ ಸಮುದಾಯದವರು ಧಮಕಿ ಹಾಕಿದ್ದಾರೆ. ಆದರೆ ಅದಕ್ಕೆ ಮಲ್ಲಿಕಾರ್ಜುನ ಶೆಟ್ಟಿಯವರು ಅದಕ್ಕೆ ಒಪ್ಪದೆ ಇಲ್ಲ ನಾನು 60-80 ರೂ ಮಾತ್ರ ತೆಗೆದುಕೊಳ್ಳುವುದು ಎಂದಿದ್ದಾರೆ. ಇದರಿಂದ ಕುಪಿತರಾದ ನಾಯಕ ಸಮುದಾಯದ ಚನ್ನನಾಯಕ ಎಂಬುವವರು 50000 ದಂಡ ಕಟ್ಟುವಂತೆ ಆದೇಶಿಸಿದ್ದಾರೆ.

ಈ ಕುರಿತು ಮಲ್ಲಿಕಾರ್ಜುನ ಶೆಟ್ಟಿಯವರು ಪೊಲೀಸ್ ಠಾಣೆ, ತಹಶೀಲ್ದಾರ್‌ರವರ ಬಳಿ ತಮಗೆ ರಕ್ಷಣೆ ಕೊಡುವಂತೆ ಮನವಿ ಮಾಡಿದರೂ ಸಹ ಅವರ್ಯಾರು ಸ್ಪಂದಿಸಿಲ್ಲ ಎಂಬುದು ಅವರ ಅಳಲಾಗಿದೆ. ಈ ನಡುವೆ ನಾಯಕ ಸಮುದಾಯದ ಕೆಲವರು ಮಲ್ಲಿಕಾರ್ಜುನ ಶೆಟ್ಟಿಯ ಮಗನನ್ನು ಪುಸಲಾಯಿಸಿ ಆತನಿಗೆ ಮದ್ಯ ಕುಡಿಸಿದ್ದು, ಮದ್ಯದ ಅಮಲಿನಲ್ಲಿ ಅವನನ್ನು ನಗ್ನಗೊಳಿಸಿ ಅದನ್ನು ವಿಡಿಯೋ ಮಾಡಿಕೊಂಡು ತಮ್ಮ ವಿರುದ್ಧ ದೂರು ನೀಡಿದರೆ ಈ ವಿಡಿಯೋವನ್ನು ಎಲ್ಲಡೆ ಹಂಚಲಾಗುವುದು ಎಂದು ಬ್ಲಾಕ್‌ಮೇಲ್ ಮಾಡಿರುವುದಾಗಿಯೂ ಮಲ್ಲಿಕಾರ್ಜುನ ಶೆಟ್ಟಿ ಆರೋಪಿಸಿದ್ದಾರೆ.

ಸದ್ಯ ಕೆಲ ದಲಿತ ಮುಖಂಡರು ಇದನ್ನು ಗಂಭೀರವಾಗಿ ಪರಿಗಣಿಸಿ ನಂಜನಗೂಡು ತಹಶೀಲ್ದಾರ್ ಮಹೇಶ್ ಕುಮಾರ್‌ರವ‌ರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ತಹಶೀಲ್ದಾರ್ ಖುದ್ದಾಗಿ ಗ್ರಾಮಕ್ಕೆ ತೆರಳುವುದಾಗಿ, ಒಂದು ವೇಳೆ ಆರೋಪ ಸಾಬೀತಾದರೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಎಫ್‌ಐಆರ್‌ ದಾಖಲಿಸಲು ಪೊಲೀಸರಿಗೆ ನಿರ್ದೇಶಿಸುವುದಾಗಿ ತಿಳಿಸಿದ್ದಾರೆ. ಪ್ರಕರಣ ಎಲ್ಲಿಗೆ ಸಾಗುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...