Homeಮುಖಪುಟ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

ಮದುವೆ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ. ಅದನ್ನು ತಡೆಯಲು ಕಾನೂನನ್ನು ತರುವುದು ಅಸಂವಿಧಾನಿಕ - ಅಶೋಕ್ ಗೆಹ್ಲೋಟ್

- Advertisement -
- Advertisement -

‘ಲವ್ ಜಿಹಾದ್’ ಎಂಬುದು ರಾಷ್ಟ್ರವನ್ನು ವಿಭಜಿಸಲು ಮತ್ತು ಕೋಮು ಸೌಹಾರ್ದತೆಗೆ ಭಂಗ ತರಲು ಬಿಜೆಪಿ ಸೃಷ್ಟಿಸಿದ ಪದ. ಮದುವೆ ಎಂಬುದು ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದ್ದು, ಅದಕ್ಕೆ ಕಾನೂನು ತರುವುದು ಅಸಂವಿಧಾನಿಕ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟೀಕಿಸಿದ್ದಾರೆ.

ಶುಕ್ರವಾರ(ನ. 20) ತಮ್ಮ ಸರಣಿ ಟ್ವಿಟ್‌ಗಳಲ್ಲಿ, ಗೆಹ್ಲೋಟ್ ಅವರು “ವಯಸ್ಕರ ನಡುವಿನ ಸಮ್ಮತಿಗೆ ರಾಜ್ಯ ಸರ್ಕಾರದ ಅನುಮತಿ ಅಗತ್ಯ ಎಂಬಂತ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಲವ್ ಜಿಹಾದ್ ರಾಷ್ಟ್ರವನ್ನು ವಿಭಜಿಸಲು ಮತ್ತು ಕೋಮು ಸೌಹಾರ್ದತೆಗೆ ಭಂಗ ತರಲು ಬಿಜೆಪಿ ಸೃಷ್ಟಿಸಿದ ಪದವಾಗಿದೆ. ಮದುವೆ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ. ಅದನ್ನು ತಡೆಯಲು ಕಾನೂನನ್ನು ತರುವುದು ಸಂಪೂರ್ಣವಾಗಿ ಅಸಂವಿಧಾನಿಕ ಮತ್ತು ಅದು ಯಾವುದೇ ನ್ಯಾಯಾಲಯದಲ್ಲಿಯೂ ನಿಲ್ಲುವುದಿಲ್ಲ. ಪ್ರೀತಿಯಲ್ಲಿ ಜಿಹಾದ್‌ಗೆ ಸ್ಥಾನವಿಲ್ಲ” ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಮೊದಲ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಮೋದಿ-ಶಾ ಕಾರಣ: ಅಶೋಕ್ ಗೆಹ್ಲೋಟ್

ಮತ್ತೊಂದು ಟ್ವೀಟ್‌ನಲ್ಲಿ “ವಯಸ್ಕರ ನಡುವಿನ ಸಮ್ಮತಿಗೂ ರಾಜ್ಯ ಸರ್ಕಾರದ ಅನುಮತಿ ಅಗತ್ಯ ಎನ್ನುವಂಥ ವಾತಾವರಣವನ್ನು ದೇಶದಲ್ಲಿ ಅವರು ಸೃಷ್ಟಿಸುತ್ತಿದ್ದಾರೆ. ಮದುವೆ ವೈಯಕ್ತಿಕ ನಿರ್ಧಾರ, ಅದರ ಮೇಲೆಯೂ ಅವರು ನಿರ್ಬಂಧ ವಿಧಿಸುತ್ತಿದ್ದಾರೆ. ಇದು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಂಡಂತೆ” ಎಂದು ಉಲ್ಲೇಖಿಸಿದ್ದಾರೆ.

“ಲವ್ ಜಿಹಾದ್” ವಿರುದ್ಧದ ಹೇಳಿಕೆಗಳನ್ನು “ಕೋಮು ಸೌಹಾರ್ದತೆಯನ್ನು ಭಂಗಗೊಳಿಸುವ, ಸಾಮಾಜಿಕ ಸಂಘರ್ಷವನ್ನು ಉತ್ತೇಜಿಸುವ ಮತ್ತು ಸಾಂವಿಧಾನಿಕ ನಿಬಂಧನೆಗಳನ್ನು ಕಡೆಗಣಿಸುವ ತಂತ್ರ” ಎಂದು ಗೆಹ್ಲೋಟ್ ಬಣ್ಣಿಸಿದ್ದಾರೆ.

ಅಶೋಕ್ ಗೆಹ್ಲೋಟ್ ಟ್ವಿಟ್‌ಗಳು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜಸ್ಥಾನ ಮುಖ್ಯಂತ್ರಿಗೆ ತಿರುಗೇಟು ನೀಡಲು ಹಲವು ಪ್ರಕರಣಗಳಲ್ಲಿ ಬಾಧಿತರಾದ ಯುವತಿಯರನ್ನು ಉಲ್ಲೇಖಿಸಿ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಲವ್ ಜಿಹಾದ್” ಕಾರಣದಿಂದಾಗಿ ಸಾವಿರಾರು ಯುವತಿಯರು ಸಿಕ್ಕಿಬಿದ್ದಿದ್ದಾರೆ. ಪ್ರೇಮವಿವಾಹದ ನೆಪದಲ್ಲಿ ಹೆಸರು ಮತ್ತು ಧರ್ಮವನ್ನು ಬದಲಿಸುತ್ತಿರುವುದು ಲವ್ ಜಿಹಾದ್ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಮದುವೆ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದ್ದರೆ, ಮಹಿಳೆಯರು ಮದುವೆ ನಂತರ “ತಮ್ಮ ತವರು ಮನೆಯ ಹೆಸರು ಮತ್ತು ಧರ್ಮವನ್ನು ಉಳಿಸಿಕೊಳ್ಳಲು ಮುಕ್ತರಾಗಿಲ್ಲ ಏಕೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಸಿ.ಟಿ.ರವಿ, ಅಶೋಕ್ ಗೆಹ್ಲೋಟ್ ಅವರ ಟ್ವೀಟ್‌ಗಳಿಗೆ ಪ್ರತಿಕ್ರಿಯೆ ನೀಟಿದ್ದಾರೆ.

“ರಾಷ್ಟ್ರವನ್ನು ವಿಭಜಿಸುವುದು ಮತ್ತು ಕೋಮು ಸೌಹಾರ್ದತೆಗೆ ಭಂಗ ತರುವುದು ಕಾಂಗ್ರೆಸ್ಸಿನ ಏಕೈಕ ಕಾರ್ಯ. ಮದುವೆ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ, ಇದನ್ನು ಯಾರೂ ವಿವಾದ ಮಾಡುವುದಿಲ್ಲ. ಆದರೆ ಸಲ್ಮಾನ್ ಅವರನ್ನು ಮದುವೆಯಾದ ನಂತರ ಸುನೀತಾ ಶಬ್ನಮ್ ಆಗಲು ಕಾರಣವೇನು? ಅದು ನಿಜವಾದ ಪ್ರೀತಿಯಾಗಿದ್ದರೆ, ಹಿಂದೂಗಳನ್ನು ಇಸ್ಲಾಂಗೆ ಮತಾಂತರಗೊಳಿಸಲು ಏಕೆ ಒತ್ತಾಯಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ವಿಪರ್ಯಾಸವೆಂದರೆ- ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಈ ಸಂಬಂಧ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಆದರೂ, ಬಿಜೆಪಿ ಆಳ್ವಿಕೆಯ ಹಲವಾರು ರಾಜ್ಯಗಳಲ್ಲಿ “ಲವ್ ಜಿಹಾದ್” ವಿರುದ್ಧ ಕಠಿಣ ಕಾನೂನು ಶೀಘ್ರದಲ್ಲೇ  ತರಲಾಗುವುದು ಎಂದು ಘೋಷಿಸಡಲಾಗುತ್ತಿದೆ. ಇಂದು ಉತ್ತರ ಪ್ರದೇಶ ಸರ್ಕಾರ, ಮಂಗಳವಾರ ಹರಿಯಾಣ ಸರ್ಕಾರ, ಮಧ್ಯಪ್ರದೇಶ ಸರ್ಕಾರ ಇದೇ ರೀತಿಯ ಘೋಷಣೆ ಮಾಡಿವೆ.


ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...