Homeಕರ್ನಾಟಕಕರ್ನಾಟಕದ ಒಕ್ಕೂಟ ರಾಜಕೀಯ ವ್ಯವಸ್ಥೆಯ ಚರಿತ್ರೆ: ಟಿ.ಆರ್ ಚಂದ್ರಶೇಖರ

ಕರ್ನಾಟಕದ ಒಕ್ಕೂಟ ರಾಜಕೀಯ ವ್ಯವಸ್ಥೆಯ ಚರಿತ್ರೆ: ಟಿ.ಆರ್ ಚಂದ್ರಶೇಖರ

ಭಾರತದಲ್ಲಿ ಯಾವತ್ತೂ ಪ್ರಾಂತೀಯತೆ ಎನ್ನುವುದು ರಾಷ್ಟ್ರೀಯತೆಗೆ ಎದುರಾಗಿ ನಿಂತಿಲ್ಲ.ಆದರೆ ಒಕ್ಕೂಟ ಮೌಲ್ಯವನ್ನು, ಸಾಂಸ್ಕೃತಿಕ ಬಹುತ್ವವನ್ನು ಕಳೆದುಕೊಂಡರೆ ನಾವು ಅನೇಕ ಗಂಡಾಂತರಗಳನ್ನು ಎದುರಿಸಬೇಕಾಗುತ್ತದೆ.

- Advertisement -
- Advertisement -

ನ್ಯಾಯಪಥ (ವಾರಪತ್ರಿಕೆ. ಸಂ. 3 ಸಂ. 11. ನವೆಂಬರ್ 18, 2020)ದಲ್ಲಿ ಪ್ರೊ. ಶಿವರಾಮಯ್ಯ ಅವರು ‘ಪಂಪನ ವಿಕ್ರಮಾರ್ಜುನ ವಿಜಯವೂ, ಕನ್ನಡ ರಾಷ್ಟ್ರೀಯತೆಯೂ’ ಎಂಬ ಲೇಖನದಲ್ಲಿ ಪಂಪ ಮಹಾಕವಿಯ ಮಹಾಭಾರತವನ್ನು ನಿದರ್ಶನವಾಗಿಟ್ಟುಕೊಂಡು ಕನ್ನಡ ರಾಷ್ಟ್ರೀಯತೆಯ ವಿವಿಧ ಆಯಾಮಗಳನ್ನು (ಜಾತಿವಿರೋಧಿ ಸಂಗತಿಗಳನ್ನು ಸೇರಿಸಿಕೊಂಡು) ಕುರಿತಂತೆ ಚರ್ಚಿಸಿದ್ದಾರೆ. ಕವಿರಾಜಮಾರ್ಗಕಾರನಲ್ಲಿನ ಕನ್ನಡ ರಾಷ್ಟ್ರೀಯತೆಯ ಎಳೆಗಳನ್ನು ಗುರುತಿಸಲು ಅವರು ಪ್ರಯತ್ನಿಸಿದ್ದಾರೆ. ಕನ್ನಡ ರಾಷ್ಟ್ರೀಯತೆಗೆ, ಒಕ್ಕೂಟ ರಾಜಕೀಯ ಪ್ರಣಾಳಿಕೆಗೆ ಮತ್ತು ನಾಡಿನ ಬಹುತ್ವ ಸಂಸ್ಕೃತಿಗೆ ಕರ್ನಾಟಕದಲ್ಲಿ ಸಾವಿರಾರು ವರ್ಷಗಳ ಚರಿತ್ರೆಯಿದೆ. ಕನ್ನಡ ಮನಸ್ಸು ಯಾವತ್ತೂ ವಿಶ್ವಾತ್ಮಕತೆ ಮತ್ತು ಸ್ಥಳೀಯತೆಗಳನ್ನು ಒಟ್ಟಿಗೆ ನಡೆಸಿಕೊಂಡು ಬಂದಿರುವುದಕ್ಕೆ ಇತಿಹಾಸದ ಸಾಕ್ಷಿಯಿದೆ. ಸಾಹಿತ್ಯದ ಮತ್ತು ಕನ್ನಡದ ಎಲ್ಲ ವಿದ್ವಾಂಸರಂತೆ ಪ್ರೊ. ಶಿವರಾಮಯ್ಯ ಅವರೂ ಸಹ ಕವಿರಾಜಮಾರ್ಗಕಾರನ ಪ್ರಸಿದ್ಧ ಕಂದ ಪದ್ಯದಲ್ಲಿನ ಭೌಗೋಳಿಕ ನೆಲೆಗಳನ್ನು ಕುರಿತಂತೆ (ಕಾವೇರಿಯಿಂದ ಆ ಗೋದಾವರಿವರೆಗಿರ್ಪ) ಮಾತನಾಡಿದ್ದಾರೆಯೇ ವಿನಾ ಆ ಪದ್ಯದ ಕೊನೆಯ ಸಾಲು ‘ವಸುಧಾ ವಲಯ ವಿಲೀನ ವಿಷದ ವಿಷಯ ವಿಶೇಷಂ’ ಎಂಬುದರ ಇಂಗಿತಾರ್ಥವನ್ನು ಕುರಿತಂತೆ ಹಚ್ಚು ಚರ್ಚೆಗಳಾಗಿಲ್ಲ. ಈ ಸಾಲಿನಲ್ಲಿ ಕವಿರಾಜಮಾರ್ಗಕಾರನು ಪ್ರಧಾನವಾಗಿ ಒಂದು ನೆಲೆಯಲ್ಲಿ ಬಹುತ್ವವನ್ನು ಮತ್ತೊಂದು ನೆಲೆಯಲ್ಲಿ ಒಕ್ಕೂಟ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಿದ್ದಾನೆ. ವಸುಧೆಯಲ್ಲಿ ವಿಲೀನ ಎಂದರೆ ಅಲ್ಲಿ ಅನೇಕ ಭಾಷೆಗಳು, ಅನೇಕ ಧರ್ಮಗಳು, ಅನೇಕ ಸಂಸ್ಕೃತಿಗಳು, ಅನೇಕ ಪ್ರದೇಶ-ವಿಶಿಷ್ಟತೆಗಳು ಇರುತ್ತವೆ ಎಂದು ಅರ್ಥ (ಬಹುತ್ವ). ವಸುಧೆಯಲ್ಲಿ ವಿಲೀನವಾಗಿದ್ದರೂ ಅದು ವಿಶಿಷ್ಟವಾದುದು ಎಂಬುದು ಒಕ್ಕೂಟ ತತ್ವವನ್ನು ಹೇಳುತ್ತಿದೆ. ಇದನ್ನು ಯಾವ ಸಂಕೋಚವೂ ಇಲ್ಲದೆ ನಾವು ‘ಕನ್ನಡ ರಾಷ್ಟ್ರೀಯತೆ ಪ್ರಣಾಳಿಕೆ’ ಎಂದು ಕರೆಯಬಹುದು. ಈ ಸಾಲಿನಲ್ಲಿ ಮಾರ್ಗಕಾರ ಏನನ್ನು ಹೇಳುತ್ತಿದ್ದಾನೆ?

ಇದನ್ನೂ ಓದಿ: ಪಂಪನ ವಿಕ್ರಮಾರ್ಜುನ ವಿಜಯವೂ, ಕನ್ನಡ ರಾಷ್ಟ್ರೀಯತೆಯೂ: ಪ್ರೊ.ಶಿವರಾಮಯ್ಯ

ಕನ್ನಡ ಜನಪದವು ‘ವಸುಧೆ’ಯಲ್ಲಿ ಲೀನವಾಗಿದೆ. ಅದು ಲೀನವಾಗಿದ್ದರೂ ತನ್ನ ‘ವಿಶಿಷ್ಟತೆ’ಯನ್ನು ಕಾಪಿಟ್ಟುಕೊಂಡು ಬಂದಿರುವುದನ್ನು ಇದು ಹೇಳುತ್ತಿದೆ. ಕನ್ನಡ ಸಂಸ್ಕೃತಿಯು ವಸುಧೆಯಲ್ಲಿನ ಎಲ್ಲ ಅಂಶಗಳನ್ನು ಒಳಗು ಮಾಡಿಕೊಂಡಿದೆ. ಅದೇ ಸಮಯದಲ್ಲಿ ತನ್ನತನವನ್ನು ಅದು ಬಿಟ್ಟುಕೊಟ್ಟಿಲ್ಲ. ಅದು ತನ್ನ ವಿಶಿಷ್ಟತೆಯನ್ನು ಉಳಿಸಿಕೊಂಡು ವಿಶ್ವಾತ್ಮಕವಾಗಿದೆ. ‘ವಸುಧಾ ವಲಯ ವಿಲೀನ’ ಎಂಬುದು ವಿಶ್ವಾತ್ಮಕತೆಯನ್ನು (ಕೇಂದ್ರ-ಏಕಾತ್ಮಕತೆ) ‘ವಿಶದ ವಿಷಯ ವಿಶೇಷಂ’ ಎಂಬುದು ಸ್ಥಳೀಯತೆಯನ್ನು (ಉಪರಾಷ್ಟ್ರೀಯತೆ) ಪ್ರತಿನಿಧಿಸುತ್ತಿದೆ. ಅನೇಕ ಕನ್ನಡ ವಿದ್ವಾಂಸರು ಗುರುತಿಸಿರುವಂತೆ ಕವಿರಾಜಮಾರ್ಗ ಕೃತಿಯು ಒಂದು ರಾಜಕೀಯ ಪಠ್ಯ. ಕನ್ನಡದ ಸ್ವಾಯತ್ತತೆಯನ್ನು ಇಲ್ಲಿ ಮಾರ್ಗಕಾರ ಗುರುತಿಸುತ್ತಿದ್ದಾನೆ.

ನಮ್ಮ ನಾಡು (ಭಾರತ) ಚರಿತ್ರೆಯಲ್ಲಿ ಯಾವತ್ತೂ ಏಕಚಕ್ರಾಧಿಪತ್ಯವಾಗಿರಲಿಲ್ಲ. ಉದಾ: ರಾಷ್ಟ್ರಕೂಟ ಚಕ್ರವರ್ತಿ ಎರಡನೆಯ ಪುಲಿಕೇಶಿ ದಕ್ಷಿಣಾಪಥೇಶ್ವರ ಎಂಬ ಬಿರುದನ್ನು ಪಡೆದಿದ್ದರೆ ಅವನ ಸಮಕಾಲೀನನಾದ ಹರ್ಷವರ್ಧನನು ಉತ್ತರಾಪಥೇಶ್ವರ ಎನಿಸಿಕೊಂಡಿದ್ದನು. ಆದರೆ ಪುಲಿಕೇಶಿಯ ರಾಜ್ಯಾಡಳಿತದಲ್ಲಿ ಹತ್ತಾರು ಸಾಮಂತ ಅರಸರಿದ್ದರು. ಒಂದು ರೀತಿಯಲ್ಲಿ ಅದೊಂದು ಒಕ್ಕೂಟವಾಗಿತ್ತು. ಅದೇ ರೀತಿಯಲ್ಲಿ ಹರ್ಷವರ್ಧನನ ಸಾಮ್ರಾಜ್ಯದಲ್ಲಿಯೂ ಹತ್ತಾರು ಸಾಮಂತ ಅರಸರಿದ್ದರು. ಅದೊಂದು ಒಕ್ಕೂಟವಾಗಿತ್ತು. ಇವೆರಡೂ ಸೇರಿ ಮಹಾ ಒಕ್ಕೂಟವಾಗಿತ್ತು. ಹೀಗೆ ಚರಿತ್ರೆಯುದ್ದಕ್ಕೂ ಭಾರತದ ರಾಜಕೀಯವು ಹೀಗೆ ಒಕ್ಕೂಟ ವ್ಯವಸ್ಥೆಯಾಗಿತ್ತೇ ವಿನಾ ಏಕಚಕ್ರಾಧಿಪತ್ಯವಾಗಿರಲಿಲ್ಲ. ಇಂತಹ ಒಕ್ಕೂಟ ತತ್ವಕ್ಕೆ ನಮ್ಮ ಸಂವಿಧಾನವೂ ಮನ್ನಣೆ ನೀಡಿದೆ. ಭಾಷಾವಾರು ಪ್ರಾಂತ್ಯಗಳ ರಚನೆಯು ಇದಕ್ಕೆ ಒಂದು ನಿದರ್ಶನವಾಗಿದೆ. ಸ್ವಾತಂತ್ರೋತ್ತರ ಭಾರತದಲ್ಲಿ ಅನೇಕ ಇತಿಮಿತಿಗಳ ನಡುವೆ ಒಕ್ಕೂಟ ತತ್ವವನ್ನು ಪಾಲಿಸಿಕೊಂಡು ಬರಲಾಗಿದೆ. ಇದೀಗ ಇದಕ್ಕೆ ‘ಅಖಂಡವಾದಿ’ಗಳಿಂದ ಅಪಾಯ ಬಂದಿದೆ. ಇಂದು ಭಾರತ ರಾಜಕಾರಣವು ಅಖಂಡತೆಯ ವ್ಯಸನದಲ್ಲಿ ಮುಳುಗಿಹೋಗಿದೆ. ಒಂದು ದೇಶ-ಒಂದು ಧರ್ಮ, ಒಂದು ದೇಶ-ಒಂದು ಭಾಷೆ, ಒಂದು ದೇಶ-ಒಂದು ಮಾರುಕಟ್ಟೆ, ಒಂದು ದೇಶ-ಒಂದು ಬ್ಯಾಂಕು, ಒಂದು ದೇಶ-ಒಂದು ತೆರಿಗೆ, ಒಂದು ದೇಶ-ಒಂದು ಶಿಕ್ಷಣ, ಒಂದು ದೇಶ-ಒಂದು ಮಹಾಭಾರತ-ರಾಮಾಯಣ ಇತ್ಯಾದಿ ಘೋಷಣೆಗಳು ಶಾಸನವಾಗುವ ಪ್ರಕ್ರಿಯೆಯಲ್ಲಿವೆ. ಈ ಬೆಳವಣಿಗೆಯು ರಾಜಕೀಯವಾಗಿ ಒಕ್ಕೂಟ ವ್ಯವಸ್ಥೆಗೆ, ಭಾಷೆಯ ನೆಲೆಯಲ್ಲಿ ಭಾಷಾವಾರು ಪ್ರಾಂತ ಪ್ರಣಾಳಿಕೆಗೆ, ಸಾಂಸ್ಕೃತಿಕವಾಗಿ ಬಹುತ್ವಕ್ಕೆ, ಕೃಷಿ ವೈವಿಧ್ಯತೆಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ನಮ್ಮ ದೇಶವು ಚರಿತ್ರೆಯಲ್ಲಿ ಯಾವತ್ತೂ ಒಂದು ಆಗಿರಲಿಲ್ಲ. ಇದರರ್ಥ ಭಾರತ ಎಂಬುದಿರಲಿಲ್ಲ ಎಂಬುದಲ್ಲ. ಕವಿರಾಜಮಾರ್ಗಕಾರ ಹೇಳುವಂತೆ ಕನ್ನಡ ಜನಪದÀವು ಹೇಗೆ ಭಾವಿಸಿದ ಸಂಗತಿಯಾಗಿತ್ತೋ ಅದೇ ರೀತಿಯಲ್ಲಿ ಭಾರತವೂ ಒಂದು ಭಾವಿಸಿದ ರಾಷ್ಟ್ರವಾಗಿತ್ತು. ಸ್ವಾತಂತ್ರೋತ್ತರ ಭಾರತದಲ್ಲಿ ಒಕ್ಕೂಟ ತತ್ವವು, ಭಾಷಾ ಬಹುತ್ವವು, ಸಾಂಸ್ಕೃತಿಕ ಬಹುವಚನವು ಯಾವ ರೀತಿಯಲ್ಲಿಯೂ, ಯಾವತ್ತೂ ಭಾರತದ ಏಕತೆಗೆ ಕುತ್ತು ಉಂಟುಮಾಡಿಲ್ಲ.

‘ಪ್ರಾಂತೀಯತೆ’ಯನ್ನು ರಾಷ್ಟ್ರೀಯತೆಗೆ ಪ್ರತಿಯಾದುದು ಎಂದು ಭಾವಿಸಬೇಕಾಗಿಲ್ಲ, ಭಾರತದಲ್ಲಿ ಯಾವತ್ತೂ ಪ್ರಾಂತೀಯತೆ ಎನ್ನುವುದು ರಾಷ್ಟ್ರೀಯತೆಗೆ ಎದುರಾಗಿ ನಿಂತಿಲ್ಲ. ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಮಾತೆಯನ್ನು ‘ಭಾರತ ಜನನಿಯ ತನುಜಾತೆ’ ಎಂದು ಕರೆದಿದ್ದಾರೆ. ಭಾರತದ ಎಲ್ಲ ಪ್ರಾಂತ್ಯಗಳಲ್ಲಿಯೂ ಇದೇ ಭಾವನೆಯು ನೆಲೆಯೂರಿದೆ. ಆದರೆ ಈ ಒಕ್ಕೂಟ ಮೌಲ್ಯವನ್ನು, ಸಾಂಸ್ಕೃತಿಕ ಬಹುತ್ವವನ್ನು ಕಳೆದುಕೊಂಡರೆ ನಾವು ಅನೇಕ ಗಂಡಾಂತರಗಳನ್ನು ಎದುರಿಸಬೇಕಾಗುತ್ತದೆ. ಎಲ್ಲಿಯವರೆಗೆ ನಮ್ಮ ನಾಡನಲ್ಲಿ ಬಹುಭಾಷೆ, ಬಹುಸಾಹಿತ್ಯ, ಬಹುಧರ್ಮ, ಬಹುಳಾಕಾರಿ ಮಾರುಕಟ್ಟೆ, ಪ್ರದೇಶ-ವಿಶಿಷ್ಟ ಕೃಷಿ, ಸ್ಥಳೀಯ ಬ್ಯಾಂಕಿಂಗ್ ವ್ಯವಸ್ಥೆ ಮುಂತಾದ ಬಹುವಚನ ಸಂಸ್ಕೃತಿಯನ್ನು ಪಾಲಿಸುತ್ತಾ ನಡೆಯುತ್ತೇವೆಯೋ ಅಲ್ಲಿಯವರೆಗೆ ನಮ್ಮ ಏಕತೆಗೆ, ಸಮಗ್ರತೆಗೆ ಅಪಾಯವಿರುವುದಿಲ್ಲ. ಅಭಿವೃದ್ಧಿಯ ನೆಲೆಯಲ್ಲಿಯೂ ಒಕ್ಕೂಟವು ಅಗತ್ಯವಾದ ಒಂದು ಪ್ರಣಾಳಿಕೆಯಾಗಿದೆ. ಒಕ್ಕೂಟ ತತ್ವವು ಕೇವಲ ರಾಜಕೀಯ ಸಂಗತಿಯಷ್ಟೇ ಅಲ್ಲ. ಅದಕ್ಕೆ ಭಾಷೆಯ, ಸಂಸ್ಕೃತಿಯ, ಸಾಮಾಜಿಕ ಆಯಾಮವಿದ್ದಂತೆ ಆರ್ಥಿಕ ಮುಖವೂ ಇದೆ.

ಈ ಹಿನ್ನೆಲೆಯಲ್ಲಿ ಇಂದು ಕನ್ನಡ ರಾಷ್ಟ್ರೀಯತೆಗೆ, ಕನ್ನಡ ಭಾಷೆಗೆ, ಕನ್ನಡ ಮನಸ್ಸಿಗೆ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಕೇಂದ್ರದ ಒಕ್ಕೂಟ ಸರ್ಕಾರವು ಕುತ್ತನ್ನುಂಟುಮಾಡುತ್ತಿದೆ. ‘ಕೇಂದ್ರ ಸರ್ಕಾರ’ (ಯೂನಿಯನ್ ಗೌರ್ವನಮೆಂಟ್) ಎಂಬ ನುಡಿಯೇ ಅಸಂಬದ್ಧವಾದುದು. ನಮ್ಮ ಸಂವಿಧಾನದಲ್ಲಿ ಬಳಕೆಯಾಗಿರುವ ನುಡಿ ಒಕ್ಕೂಟ ಸರ್ಕಾರ (ಇಂಡಿಯಾ ದಟ್ ಈಸ್ ಭಾರತ್, ಶಲ್ ಬಿ ಎ ಯೂನಿಯನ್ ಆಫ್ ಸ್ಟೇಟ್ಸ್). ನಮ್ಮಲ್ಲಿರುವುದು ಸಂವಿಧಾನಾತ್ಮಕ ಒಕ್ಕೂಟ ಸರ್ಕಾರವೇ ವಿನಾ ಕೇಂದ್ರ ಸರ್ಕಾರವಲ್ಲ. ಒಕ್ಕೂಟತನವು ಭಾರತದ ಭದ್ರತೆಯ ತತ್ವ. ಪ್ರೊ. ಶಿವರಾಮಯ್ಯ ಅವರು ಸರಿಯಾಗಿ ಗುರುತಿಸಿರುವಂತೆ ಪಂಪ ಭಾರತವೆನ್ನುವುದು ಕನ್ನಡದ ಭಾರತವೇ ವಿನಾ ಭಾರತದ ‘ಭಾರತವಲ್ಲ. ಅಂದರೆ ನಮ್ಮ ದೇಶದಲ್ಲಿ ಪ್ರತಿಭಾಷೆಗೂ ಒಂದೊಂದು ಅಥವಾ ಅನೇಕ ಮಹಾಭಾರತ-ರಾಮಾಯಣಗಳಿವೆ. ಕನ್ನಡದಲ್ಲಿಯೇ ಇದನ್ನು ಕಾಣಬಹುದು.

ಡಾ. ಟಿ. ಆರ್. ಚಂದ್ರಶೇಖರ

ಕನ್ನಡ ರಾಷ್ಟ್ರೀಯತೆಯ ಚಳವಳಿಯ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚು ಅಗತ್ಯವಾಗಿದೆ. ಇದೇ ಸಂಪುಟದಲ್ಲಿನ ಟಿ. ಎ. ನಾರಾಯಣಗೌಡ ಅವರು ಕನ್ನಡ ರಾಷ್ಟ್ರೀಯತೆಯ ಸಂಘಟನೆಯ-ಹೋರಾಟದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಕನ್ನಡ ರಾಷ್ಟ್ರೀಯತೆಯು ಕನ್ನಡಿಗರ ಬದುಕಿನ, ಉದ್ಯೋಗದ, ಒಕ್ಕಲುತನದ, ವ್ಯಾಪಾರ-ವ್ಯವಹಾರ-ವಹಿವಾಟಿನ, ಉದ್ದಿಮೆರಂಗದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಎ ಪ್ರಾಮಿಸ್ಡ್ ಲ್ಯಾಂಡ್: ಒಬಾಮಾ ಪುಸ್ತಕದಲ್ಲಿ ನಿಜಕ್ಕೂ ಏನಿದೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...