Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ರಗಳೆ…

ಕನ್ನಡ ಸಾಹಿತ್ಯ ಪರಿಷತ್ ರಗಳೆ…

- Advertisement -
- Advertisement -

ಒಂದುಕಾಲಕ್ಕೆ ಕನ್ನಡಿಗರೆಲ್ಲರ ಆತ್ಮಾಭಿಮಾನದ ಪ್ರತೀಕದಂತಿದ್ದ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಸಲ್ಲದ ಅವಾಂತರಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಪೂರ್ಣಕುಂಭದ ಕುರಿತಂತೆ ಎದ್ದಿದ್ದ ವಿವಾದ ಮಾಸುವ ಮುನ್ನವೇ ಇದೀಗ ಅಜೀವ ಸದಸ್ಯರೊಬ್ಬರು ಸಾಮುದಾಯಿಕ ಪ್ರತಿರೋಧದ ಪ್ರತೀಕವಾಗಿ ನೀಡಿದ್ದ ರಾಜೀನಾಮೆಯನ್ನು ಕಸಾಪ ಅಧ್ಯಕ್ಷರು ಅಂಗೀಕರಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಮತ್ತೆ ಸುದ್ದಿಗೆ ಬಂದಿದೆ. ನ್ಯಾಯಪಥ ಪತ್ರಿಕೆಯು ಈ ಕುರಿತ ಚರ್ಚೆಯನ್ನು ಇಲ್ಲಿ ಶುರು ಮಾಡುತ್ತಿದೆ. ರೂಪಾ ಹಾಸನ್ ಅವರು ತಮ್ಮ ಅಜೀವ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆ ಪತ್ರ, ಕಸಾಪ ಅಧ್ಯಕ್ಷರ ಈ ಕ್ರಮ ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವ ಸಂಚಾಲಕ ಲಿಂಗೇಶ್ ಅವರು ಬರೆದ ಬಹಿರಂಗ ಪತ್ರ, ಕಥೆಗಾರ ಹನುಮಂತ ಹಾಲಗೇರಿಯವರ ಒಟ್ಟಾರೆ ಒಳನೋಟ ಹಾಗೂ ಈ ವಿವಾದದ ಬಗ್ಗೆ ಸ್ವತಃ ಮನುಬಳಿಗಾರರು ನೀಡಿದ ಪುಟ್ಟ ಪ್ರತಿಕ್ರಿಯೆಯನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ. ಈ ಚರ್ಚೆಗೆ ಪ್ರತಿಕ್ರಿಯಿಸ ಬಯಸುವವರು ತಮ್ಮ ಅಭಿಪ್ರಾಯವನ್ನು ಪತ್ರಿಕೆಯ ಇಮೇಲ್ ಐಡಿ [email protected] ಗೆ ಕಳುಹಿಸಬಹುದು. ಪ್ರತಿಷ್ಠೆಗಳ ಕಾದಾಟಕ್ಕಿಂತ ಒಂದು ಆರೋಗ್ಯಕರ ಚರ್ಚೆ ಮಾತ್ರ ಕನ್ನಡಿಗರ ಈ `ಆತ್ಮಾಭಿಮಾನ’ವನ್ನು ವಿವಾದಗಳ ಹುತ್ತದಿಂದ ಹೊರಗೆಳೆದು ತರಬಲ್ಲದು ಎಂಬುದಷ್ಟೇ ಪತ್ರಿಕೆಯ ಆಶಯ…

ಶ್ರೀ ಮನು ಬಳಿಗಾರ್

ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು,

ಬೆಂಗಳೂರು.

– ಇವರಿಗೆ

ಮಾನ್ಯರೇ,

ವಿಷಯ: ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವಕ್ಕೆ [ಸಂಖ್ಯೆ-44892]

ರಾಜೀನಾಮೆ ನೀಡುವ ಕುರಿತು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತದ್ದು. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿ ಪರಿಷತ್ತಿನ ಉದ್ದೇಶವಾಗಿರತಕ್ಕುದೆಂದು ನಿಬಂಧನೆಯಲ್ಲಿ ಘೋಷಿಸಲಾಗಿದೆಯಷ್ಟೇ.

ಆದರೆ ಪರಿಷತ್ತು ತನ್ನ ಮೂಲ ಉದ್ದೇಶವನ್ನು ಮರೆತು ಲಕ್ಷ, ಕೋಟಿಗಟ್ಟಲೆ ಹಣ ವ್ಯಯಿಸುತ್ತಾ ಅಖಿಲ ಭಾರತ, ಜಿಲ್ಲಾ, ತಾಲ್ಲೂಕು, ಹೋಬಳಿ ಸಮ್ಮೇಳನಗಳನ್ನು, ಅದ್ಧೂರಿ ಕಾರ್ಯಕ್ರಮಗಳನ್ನು ವರ್ಷವಿಡೀ, ರಾಜ್ಯಾದ್ಯಂತಾ ಆಯೋಜನೆ ಮಾಡುವುದರಲ್ಲೇ ಕಳೆದು ಹೋಗುತ್ತಿದೆ. ಕನ್ನಡ ನಾಡು-ನುಡಿಗೆ ಒದಗಿರುವ ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲೂ ಪರಿಷತ್ತಿನ ಅದ್ಧೂರಿತನ, ನಾಡು ನುಡಿಯ ಜ್ವಲಂತ ಸಮಸ್ಯೆಗಳಿಗೆ ಕೇವಲ ತುಟಿ ಮರುಕ ತೋರಿ ಗಟ್ಟಿ ನಿಲುವು ತೆಗೆದುಕೊಳ್ಳದೇ, ಕನ್ನಡಿಗರೆಲ್ಲರ ಪರವಾಗಿ ನಿರ್ಣಾಯಕ ಪಾತ್ರವಹಿಸದೇ, ರಚನಾತ್ಮಕ ಕೆಲಸಗಳಲ್ಲಿ ತೊಡಗಿಕೊಳ್ಳದೇ, ಆಂದೋಲನವನ್ನು ಕಟ್ಟದೇ… ಅದ್ಧೂರಿ, ವೈಭವದ ಸಮ್ಮೇಳನಗಳಲ್ಲಿ ಮುಳುಗಿರುವುದು ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆಯಂತಾಗಿರುವುದು ವಿಪರ್ಯಾಸವೇ ಸರಿ.

ಜೊತೆಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ, ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಪಡೆದು ಅದ್ಧೂರಿ ಸಮ್ಮೇಳನಗಳನ್ನು, ಕಾರ್ಯಕ್ರಮಗಳನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಆಯೋಜಿಸುವ ಸಾಹಿತ್ಯ ಪರಿಷತ್ತು ಮತ್ತದರ ಘಟಕಗಳು ತಾನು ಮಾಡುತ್ತಿರುವ ದುಂದು ವೆಚ್ಚದ ಲೆಕ್ಕವನ್ನು ಪಾರದರ್ಶಕವಾಗಿ ಸಾರ್ವಜನಿಕರಿಗಾಗಲೀ, ಕನಿಷ್ಠ ತನ್ನ ಸದಸ್ಯರಿಗಾಗಲೀ ಬಿಡುಗಡೆ ಮಾಡದೇ, ತನ್ನೊಳಗೇ ಗುಟ್ಟಾಗಿಟ್ಟುಕೊಳ್ಳುವ ಪರಿ ಅವ್ಯವಹಾರದ ಗುಮಾನಿಯನ್ನು ಹೆಚ್ಚಿಸುವ ಜೊತೆಗೆ ಇದು ಎಲ್ಲ ರೀತಿಯಲ್ಲೂ  ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆಯ ಅಪ್ರಜಾಪ್ರಭುತ್ವವಾದಿ ನಿಲುವಾಗಿದೆ.

ಎಲ್ಲಕ್ಕಿಂತಾ ಮುಖ್ಯವಾಗಿ ಕನ್ನಡ ಶಾಲೆಗಳನ್ನು ವ್ಯವಸ್ಥಿತವಾಗಿ ಕತ್ತು ಮಿಸುಕಿ ಸಾಯಿಸಲಾಗುತ್ತಿದೆ. ಕನಿಷ್ಠ ಪ್ರಾಥಮಿಕ ಶಿಕ್ಷಣದಲ್ಲಾದರೂ ಕನ್ನಡ ಮತ್ತು ಇತರೇ ಮಾತೃಭಾಷೆಗಳು ಶಿಕ್ಷಣ ಮಾಧ್ಯಮವಾಗದಿದ್ದರೇ ಕನ್ನಡವೋ ಇತರ ಮಾತೃಭಾಷೆಗಳೋ ಹೇಗೆ ಉಳಿದೀತು? ಇದನ್ನು ಆಗುಮಾಡುವುದು ತನ್ನ ಉಸಿರು  ಎಂದು ಕೊಳ್ಳಬೇಕಾದ ಕನ್ನಡ  ಸಾಹಿತ್ಯ ಪರಿಷತ್ತು, ಕೇವಲ ಕಾಟಾಚಾರಕ್ಕೆ ಸರ್ಕಾರಗಳಿಗೆ ಪತ್ರ ಬರೆದು, ಮತ್ಯಾವ  ರಚನಾತ್ಮಕ  ಪ್ರಯತ್ನವನ್ನೂ  ಮಾಡದೇ, ಕೇವಲ ಸಮ್ಮೇಳನಗಳನ್ನು ಮಾಡಿ ಅಲ್ಲಿ ಕನ್ನಡ ಭಾಷೆ/ಶಾಲೆಯ ಪರವಾಗಿ ಪುಂಖಾನುಪುಂಖವಾಗಿ ಭಾಷಣ ಮಾಡಿಸಿ, ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕಷ್ಟೇ ಸಿಮಿತವಾಗಿರುವುದು ಕನ್ನಡ ನಾಡು, ನುಡಿಯ ಅಣಕದಂತೆ ತೋರುತ್ತಿದೆ.

ಇವೇ ಕಾರಣಗಳಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯಳಾಗಿ ಮುಂದುವರೆಯುವುದು ನನಗೆ ಅಸಹನೀಯವೆನಿಸುತ್ತಿರುವುದರಿಂದ ನನ್ನ ಈ ರಾಜಿನಾಮೆ ಪತ್ರವನ್ನು ತಮಗೆ ಕಳಿಸುತ್ತಿದ್ದೇನೆ. ದಯಮಾಡಿ ಈಗ್ಗೆ 15 ವರ್ಷಗಳ ಹಿಂದೆ ಪಡೆದಿದ್ದ ಪರಿಷತ್ತಿನ ನನ್ನ ಸದಸ್ಯತ್ವವನ್ನು[ಸದಸ್ಯತ್ವ ಸಂಖ್ಯೆ-44892] ರದ್ದುಪಡಿಸುವ ಜೊತೆಗೆ ಕಸಾಪ ಚುನಾವಣೆಯ ಅರ್ಹ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಬೇಕೆಂದು ನಿಮ್ಮಲ್ಲಿ ವಿನಂತಿಸುತ್ತೇನೆ.

ಈ  ಕುರಿತು ತಮ್ಮಿಂದ ಶೀಘ್ರ ಉತ್ತರದ ನಿರೀಕ್ಷೆಯಲ್ಲಿರುವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿ

ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...