Homeಕರ್ನಾಟಕ547 ಕೋಟಿ ರೂ. ಕ್ರಿಯಾ ಯೋಜನೆಗೆ ತುಮಕೂರು ಜಿಪಂ ಅನುಮೋದನೆ

547 ಕೋಟಿ ರೂ. ಕ್ರಿಯಾ ಯೋಜನೆಗೆ ತುಮಕೂರು ಜಿಪಂ ಅನುಮೋದನೆ

ಕಳೆದ ಹಲವು ದಿನಗಳಿಂದ ವಾಕ್ಸಮರಕ್ಕೆ ಗುರಿಯಾಗಿದ್ದ ಅಧ್ಯಕ್ಷರು ಮತ್ತು ಆರೋಪಗಳ ಸುರಿಮಳೆಗರೆದಿದ್ದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಏನೂ ಆಗಿಲ್ಲವೆಂಬಂತೆ ನಡೆದುಕೊಂಡು ಅಚ್ಚರಿ ಮೂಡಿಸಿದರು

- Advertisement -
- Advertisement -

ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಅಧ್ಯಕ್ಷರ ವಿರುದ್ಧ ಸಿಡಿದೆದ್ದಿದ್ದ ಸದಸ್ಯರು ಕೋರಂ ಕೊರತೆ ಸೃಷ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಸೂಪರ್ ಸೀಡ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಇಂದು ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಅಡ್ಡಿಆತಂಕಗಳಿಲ್ಲದೆ ಸುಸೂತ್ರವಾಗಿ ನಡೆಯಿತು. ಎಲ್ಲ ಸದಸ್ಯರೂ ಸಭೆಯಲ್ಲಿ ಹಾಜರಿದ್ದರೂ ಅಧ್ಯಕ್ಷರ ವಿರುದ್ದ ಸಣ್ಣ ದನಿಯೂ ವ್ಯಕ್ತಪಡಿಸದೆ 547 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ.

ಹೌದು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅವರನ್ನು ಅಧ್ಯಕ್ಷಗಾದಿಯಿಂದ ಇಳಿಸಲು ಪ್ರಯತ್ನ ನಡೆದಿತ್ತು. ಮೂರು ಪಕ್ಷಗಳ ಸದಸ್ಯರೂ ಕೂಡ ಅಧ್ಯಕ್ಷರ ಕಾರ್ಯ ವೈಖರಿ ವಿರುದ್ಧ ಸಿಡಿದೆದ್ದಿದ್ದರು. ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪವನ್ನೂ ಮಾಡಿದ್ದರು.

ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಸಣ್ಣ ಮುದ್ದಯ್ಯ ಕಾಡುಗೊಲ್ಲರಿಗೆ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದೂ ಆಗ್ರಹಿಸಿದ್ದರು. ಇಷ್ಟೆಲ್ಲಾ ಗೊಂದಲಗಳ ನಡುವೆಯೇ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿದ ಮೇಲೆ ನಡೆದ ಸಾಮಾನ್ಯ ಸಭೆಯಲ್ಲಿ ಯಾವೊಬ್ಬ ಸದಸ್ಯರು ಮಾತಾಡದೇ ಮೌನಕ್ಕೆ ಶರಣಾಗಿದ್ದುದು ಅಚ್ಚರಿ ಉಂಟು ಮಾಡಿತು.

ಕಳೆದ ನಾಲ್ಲು ದಿನಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸಾಮಾನ್ಯ ಸಭೆ ನಡೆಯದೆ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ತುಮಕೂರು ಜಿಲ್ಲಾ ಪಂಛಾಯತ್ ಅನ್ನು ಸೂಪರ್ ಸೀಡ್ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದರು.

ಇದನ್ನೂ ಓದಿ: ಎರಡು-ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಆದರೆ ಹಿರಿಯ ಸದಸ್ಯ ವೈ.ಎಚ್.ಹುಚ್ಚಯ್ಯ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ “ಜಿಪಂ ಸೂಪರ್ ಸೀಡ್ ಮಾಡುವುದಿಲ್ಲ. ಸಚಿವರು ಹಾಗೆ ಹೇಳಿರುವುದು ಸದಸ್ಯರಿಗೆ ಎಚ್ಚರಿಕೆ ನೀಡುವುದಕ್ಕಾಗಿ. ನಾಲ್ಕೈದು ತಿಂಗಳು ಮಾತ್ರ ಅಧಿಕಾರ ಅವಧಿ ಇದೆ. ಸಚಿವರ ಉದ್ದೇಶ ಅದಲ್ಲ. ಸುಮಾರು 547 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಅನುಮೋದನೆ ಸಿಗಬೇಕಾಗಿದೆ. ಅಭಿವೃದ್ಧಿ ಕಾರ್ಯಕಗಳು ಸ್ಥಗಿತವಾಗಿವೆ. ಹಾಗಾಗಿ ಸಚಿವರು ಇಂತಹ ಹೇಳಿಕೆಯನ್ನು ಕೊಟ್ಟಿದ್ದಾರೆ” ಎಂದು ಹೇಳಿದ್ದರು. ಅದರಂತೆಯೇ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮೌನವಾಗಿ ಕುಳಿತು ಕ್ರಿಯಾ ಯೋಜನೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಸದಸ್ಯರು ಮೂರು ಸಾಮಾನ್ಯ ಸಭೆಗೆ ಗೈರು ಹಾಜರಾದರೆ ಸದಸ್ಯತ್ವ ರದ್ದಾಗುತ್ತದೆ ಎಂಬ ನಿಯಮವಿದೆ. ಅದಕ್ಕಾಗಿಯೇ ಎಲ್ಲಾ ಸದಸ್ಯರು ಇಂದಿನ ಸಭೆಗೆ ಆಗಮಿಸಿದ್ದರು. ಹನ್ನೊಂದು ಗಂಟೆಗೆ ಸೇರಿದ ಸಭೆ 12 ಗಂಟೆಗೆ ಮುಕ್ತಾಯವಾಯಿತು.

ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಸದಸ್ಯರು ಮೌನಕ್ಕೆ ಶರಣಾಗಿದ್ದರು. ಸೂಪರ್ ಸೀಡ್ ಮಾಡುವ ಹೇಳಿಕೆ ನೀಡಿದ್ದ ಸಚಿವ ಜೆ.ಸಿಮಾಧುಸ್ವಾಮಿ ಅವರೇ ಸಭೆಯಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದುಕೊಂಡರು. ಸಂಸದ ಬಸವರಾಜು ಕೂಡ ವೇದಿಕೆಯಲ್ಲಿದ್ದರು.

ಒಂದಿಬ್ಬರು ಸದಸ್ಯರು 2018-2019ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದುಕೊಂಡಿಲ್ಲ ಎಂದು ವಿಷಯ ಪ್ರಸ್ತಾಪಿಸಿ ಅಧ್ಯಕ್ಷರನ್ನು ತಿವಿಯುವ ಕೆಲಸ ಮಾಡಿದರು. ಆದರೆ ಆ ಮಾತುಗಳಿಗೆ ಯಾರೂ ಕಿಮ್ಮತ್ತು ನೀಡಲಿಲ್ಲ. ಅಧ್ಯಕ್ಷೆ ಲತಾ ರವಿಕುಮಾರ್ ಕೂಡ ವೇದಿಕೆಯಲ್ಲಿ ಗಂಭೀರವಾಗಿ ಕುಳಿತುಕೊಂಡು ಸದಸ್ಯರ ನಡೆಯನ್ನು ಗಮನಿಸುತ್ತಿದ್ದರು. ಕಳೆದ ಹಲವು ದಿನಗಳಿಂದ ವಾಕ್ಸಮರಕ್ಕೆ ಗುರಿಯಾಗಿದ್ದ ಅಧ್ಯಕ್ಷರು ಮತ್ತು ಆರೋಪಗಳ ಸುರಿಮಳೆಗರೆದಿದ್ದ ಸದಸ್ಯರು ಏನೂ ಆಗಿಲ್ಲವೆಂಬಂತೆ ನಡೆದುಕೊಂಡು ಪತ್ರಕರ್ತರನ್ನು ಅಚ್ಚರಿಗೆ ದೂಡಿದರು.


ಇದನ್ನೂ ಓದಿ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ದೂರು; ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...