Homeಮುಖಪುಟಅಮಿತ್ ಶಾ ತಮಿಳುನಾಡು ಭೇಟಿ: ಟ್ವಿಟ್ಟರ್‌‌ನಲ್ಲಿ #GoBackAmitShah ಟ್ರೆಂಡ್!

ಅಮಿತ್ ಶಾ ತಮಿಳುನಾಡು ಭೇಟಿ: ಟ್ವಿಟ್ಟರ್‌‌ನಲ್ಲಿ #GoBackAmitShah ಟ್ರೆಂಡ್!

ಇದುವರೆಗೂ 3.25 ಲಕ್ಷ #GoBackAmitShah ಟ್ವೀಟ್‌ಗಳನ್ನು ಮಾಡಲಾಗಿದ್ದು, ಇದರ ಜೊತೆಗೆ #Goback_Mr_420 ಮತ್ತು #Goback_Tadipar ಕೂಡಾ ಟ್ರೆಂಡಿಗ್‌ನಲ್ಲಿದೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮಿಳುನಾಡಿಗೆ ಭೇಟಿ ನಿಡುತ್ತಿದ್ದು ಟ್ವಿಟ್ಟರ್‌ನಲ್ಲಿ ಕಳೆದ 16 ಗಂಟೆಗಳಿಂದ #GoBackAmitShah ಹ್ಯಾಶ್‌ಟ್ಯಾಗ್ ಟ್ರೆಂಡಿಗ್ ಆಗಿದೆ. ಇದುವರೆಗೂ 3.25 ಲಕ್ಷ #GoBackAmitShah ಟ್ವೀಟ್‌ಗಳನ್ನು ಮಾಡಲಾಗಿದ್ದು, ಇದರ ಜೊತೆಗೆ #Goback_Mr_420 ಮತ್ತು #Goback_Tadipar ಕೂಡಾ ಟ್ರೆಂಡಿಗ್‌ನಲ್ಲಿದೆ. ಈ ಟ್ವೀಟ್‌ಗಳನ್ನು ಹಿಮ್ಮೆಟ್ಟಿಸಲು ಅಮಿತ್‌ ಶಾ ಅಭಿಮಾನಿಗಳು, ಟಿಎನ್ ‌ವೆಲ್ಕಮ್ಸ್ ಅಮಿತ್‌ಶಾ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವಿಟ್ಟರ್‌‌ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ತಮಿಳುನಾಡಿಗೆ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಕೂಡಾ ಗೋಬ್ಯಾಕ್ ಮೋದಿ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿತ್ತು. ಇಂದು ಮಧ್ಯಾಹ್ನ 1.40 ಕ್ಕೆ ಚೆನ್ನೈ ಹಳೆಯ ವಿಮಾನ ನಿಲ್ದಾಣಕ್ಕೆ ಅಮಿತ್‌ ಶಾ ಆಗಮಿಸಲಿದ್ದಾರೆ.ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಅಮಿತ್‌ ಶಾ ಭೇಟಿ ಮಹತ್ವದ್ದಾಗಿದೆ.

ಇದನ್ನೂ ಓದಿ: ಅಮಿತ್ ಶಾ ಸುಳ್ಳು ಹೇಳಿದ್ದಾರೆ: ಪ್ರೊ.ಸೈಫುದ್ದೀನ್ ಸೋಜ್

ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅವರೊಂದಿಗೆ ರಾಜ್ಯ ಕಾರ್ಯಗಳ ಕುರಿತು ಮತ್ತು ಬಿಜೆಪಿಯೊಂದಿಗೆ ಮುಂಬರುವ ಚುನಾವಣೆಯ ಕುರಿತು ಸಮಾಲೋಚನಾ ಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಅಮಿತ್ ಷಾ ಭೇಟಿಗೆ ಮುನ್ನ ಎಐಎಡಿಎಂಕೆ ಜಿಲ್ಲಾ ಕಾರ್ಯದರ್ಶಿಗಳು, ವಲಯ ನಾಯಕರು ಮತ್ತು ಮಂತ್ರಿಗಳ ಸಭೆ ನಿನ್ನೆ ಚೆನ್ನೈನಲ್ಲಿ ನಡೆದಿದ್ದು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಬೇಕೆ ಮತ್ತು ಅಮಿತ್ ಶಾ ಅವರೊಂದಿಗೆ ಏನು ಮಾತನಾಡಬೇಕು ಎಂಬ ಬಗ್ಗೆ ಸಭೆಯಲ್ಲಿ ಮುಖ್ಯಮಂತ್ರಿ ಪಳನಿಸಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅವರನ್ನು ಸಮಾಲೋಚಿಸಲಾಗಿದೆ ಎಂದು ತಿಳಿದುಬಂದಿದೆ.

ಅಮಿತ್‌ ಶಾ ಆಗಮನವನ್ನು ವಿರೋಧಿಸಿ #GoBackAmitShah ಟ್ರೆಂಡ್‌‌ನಲ್ಲಿದ್ದು, ಇದರ ಜೊತೆಗೆ #Goback_Mr_420 ಮತ್ತು #Goback_Tadipar ಕೂಡಾ ಟ್ರೆಂಡಿಗ್‌ನಲ್ಲಿದೆ.

ಇದನ್ನೂ ಓದಿ: ಅಮಿತ್ ಶಾ ಪ್ರೊಫೈಲ್‌ ಚಿತ್ರ ಡಿಲೀಟ್ ಮಾಡಿ, ಅಜಾಗರೂಕ ದೋಷ ಎಂದ ಟ್ವಿಟರ್‌!

ಇದನ್ನೂ ಓದಿ:ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...