Homeಮುಖಪುಟಅಸ್ಸಾಂ: ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟ 4 ಸಾವಿರ ಮಕ್ಕಳು!

ಅಸ್ಸಾಂ: ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟ 4 ಸಾವಿರ ಮಕ್ಕಳು!

"ಇಲ್ಲಿನ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಗಾಗಿ ತಯಾರಿಸುವ ಪ್ರಣಾಳಿಕೆಗಳಲ್ಲಿ ನಮ್ಮ ಬೇಡಿಕೆಗಳನ್ನು ಸೇರಿಸುವಂತೆ ಒತ್ತಾಯಿಸಿ, ಈ ಪ್ರಣಾಳಿಕೆಯ ಮೂಲಕ ಶಿಫಾರಸ್ಸುಗಳನ್ನು ಮಾಡುತ್ತಿದ್ದೇವೆ..."

- Advertisement -
- Advertisement -

ಅಸ್ಸಾಂನ 17 ಜಿಲ್ಲೆಯ ಸುಮಾರು 4 ಸಾವಿರ ಮಕ್ಕಳು ಸೇರಿ ಅಲ್ಲಿನ ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟಿದ್ದು, ಅದರಲ್ಲಿ “ಉಚಿತ ಮತ್ತು ಖಡ್ಡಾಯ ಶಿಕ್ಷಣ, ಹಿಂಸಾಚಾರ ಮುಕ್ತ ಮತ್ತು ಲಿಂಗ ಸಮಾನತೆಯಂತಹ ಭರವಸೆಗಳ ಬೇಡಿಕೆಯನ್ನು” ಇಟ್ಟಿದ್ದಾರೆ. 2021 ರಲ್ಲಿ ಅಸ್ಸಾಂ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ನಿನ್ನೆ ವಿಶ್ವ ಮಕ್ಕಳ ದಿನದ ಅಂಗವಾಗಿ ಗೌಹಾತಿ ಪತ್ರಿಕಾ ಭವನದಲ್ಲಿ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. 

ಇಲ್ಲಿ, ಮಜುಲಿ ಜಿಲ್ಲೆಯ 16 ವರ್ಷದ ಕುಲದೀಪ್ ನಾರಾಯಣ್ ಬೋರಾ ಮಾತನಾಡಿ, “ಇಲ್ಲಿನ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಗಾಗಿ ತಯಾರಿಸುವ ಪ್ರಣಾಳಿಕೆಗಳಲ್ಲಿ ನಮ್ಮ ಬೇಡಿಕೆಗಳನ್ನು ಸೇರಿಸುವಂತೆ ಒತ್ತಾಯಿಸಿ, ಈ ಪ್ರಣಾಳಿಕೆಯ ಮೂಲಕ ಶಿಫಾರಸ್ಸುಗಳನ್ನು ಮಾಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

ಈ ಪ್ರಣಾಳಿಕೆಯ ಮೇಲುಸ್ತುವಾರಿಯನ್ನು ರಾಷ್ಟ್ರೀಯ ಮಟ್ಟದ ಎನ್‌ಜಿಓ ‘ಪ್ರತ್ಯೇಕ್’ ವಹಿಸಿಕೊಂಡಿದ್ದು, ಇದಕ್ಕೆ ಯುನಿಸೆಫ್ ತಾಂತ್ರಿಕ ಸಹಕಾರವನ್ನು ನೀಡಿ, “ರಿ-ಇಮ್ಯಾಜಿನ್” ಟ್ವಿಟ್ಟರ್‌ ಅಭಿಯಾನವನ್ನು ಪ್ರಾರಂಭಿಸಿ ಕೊರೊನೋತ್ತರದ ಜಗತ್ತನ್ನು ಸೃಜನಾತ್ಮಕವಾಗಿ ನಿರ್ಮಿಸಲು ಕರೆ ನೀಡಿದೆ.

ಸಾಂಕ್ರಾಮಿಕ ರೋಗದ ನಂತರದ ಜಗತ್ತನ್ನು ಕಟ್ಟುವ ಪ್ರಯತ್ನಗಳಿಗೆ ಮತ್ತು ಶಿಕ್ಷಣದ ರೂಪವನ್ನು ಉನ್ನತೀಕರಿಸಲು ಮಕ್ಕಳು ಮತ್ತು ಯುವಜನರು ಸಹಕರಿಸಬೇಕೆಂದು ರಿ-ಇಮ್ಯಾಜಿನ್ ಅಭಿಯಾನವು ವಿಶ್ವ ಮಕ್ಕಳ ದಿನಾಚರಣೆಯಂದು ಕರೆ ನೀಡಿದೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ಮಕ್ಕಳೇ ರಚಿಸಿರುವ ಈ ಪ್ರಣಾಳಿಕೆಯನ್ನು ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಪ್ರತಿಪಕ್ಷದ ನಾಯಕ ಮತ್ತು ಅಸ್ಸಾಂನ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರುಗಳಿಗೆ ನೀಡಲಾಗುವುದು.

ಈ ಪ್ರಣಾಳಿಕೆ ತಯಾರಿಕೆಗಾಗಿ, ಆನ್‌ಲೈನ್ ಮತ್ತು ಆಫ್‌ಲೈನ್ ಸ್ಕೋರ್‌ಕಾರ್ಡ್‌ಗಳನ್ನು ಬಳಸಿಕೊಂಡು ಒಂದು ಸಮೀಕ್ಷೆಯನ್ನು ನಡೆಸಲಾಯಿತು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ವಿವಿಧ ಸಂಸ್ಥೆಗಳ ಕ್ಷೇತ್ರ ಸಂಯೋಜಕರು, ಮಕ್ಕಳು ಮತ್ತು ಯುವಜನರನ್ನು ತಲುಪಿ ಕೆಲವು ಸಂದರ್ಭಗಳಲ್ಲಿ ನೇರ ಮುಖಾಮುಖಿಯಾಗಿ ಮಾಹಿತಿ ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ನಾನು ಅಸ್ಸಾಂನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ: ಮಾಜಿ ಸಿಜೆಐ ರಂಜನ್ ಗೊಗೊಯ್

ಈ ಸಮೀಕ್ಷೆಯ ಫಲಿತಾಂಶಗಳ ಪ್ರಕಾರ, ಶೇಕಡಾ 70 ರಷ್ಟು ಮಕ್ಕಳು ವೃತ್ತಿಪರ ತರಬೇತಿ ಮತ್ತು ವೃತ್ತಿ ಸಮಾಲೋಚನೆಯ ಅಗತ್ಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಶೇಕಡ 70 ರಷ್ಟು ಮಕ್ಕಳು ಮಾನಸಿಕ ಆರೋಗ್ಯವನ್ನು ತಮ್ಮ ಪಠ್ಯಕ್ರಮದಲ್ಲಿ ಸೇರಿಸಿಕೊಳ್ಳಬೇಕೆಂದು ಬಯಸುತ್ತಾರೆ. ಶೇಕಡಾ 92 ರಷ್ಟು ಜನರು ಲಿಂಗ ಸಂವೇದನೆಯ ಕುರಿತು ಪಠ್ಯದಲ್ಲಿ ಸೇರಿಸಲು ಬಯಸಿದ್ದು, ಜೊತೆಗೆ ಲೈಂಗಿಕತೆ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಬಗ್ಗೆಯೂ ವಿಷಯಗಳನ್ನ ಸೇರಿಸುವಂತೆ ಅಭಿಪ್ರಾಯಪಟ್ಟಿದ್ದಾರೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಿಗೆ ಕೈಗೆಟುಕುವ ಆರೋಗ್ಯ ಸೇವೆ ಮತ್ತು ಪೌಷ್ಠಿಕ ಆಹಾರದ ಲಭ್ಯತೆಯಿಲ್ಲ ಎಂದೂ ಮಕ್ಕಳು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯಲ್ಲಿ 85 ಶೇಕಡಾ ಮಕ್ಕಳು ನಾಯಕರು ಮಕ್ಕಳೊಂದಿಗೆ ಮಾತನಾಡಬೇಕು ಮತ್ತು ಪರಿಸರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಾಗ ಅವರ ಅನುಭವಗಳು ಮತ್ತು ಆಲೋಚನೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಮಾದಕ ದ್ರವ್ಯ ಸೇವನೆ, ಮಕ್ಕಳ ಕಳ್ಳಸಾಗಣೆ, ಮಾನವ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪ್ರಚಾರದ ವಿಷಯಗಳಿಗೂ ಸಹ ಈ ಸಮೀಕ್ಷೆಯಲ್ಲಿ ಪ್ರಮುಖ ಆದ್ಯತೆಯಿದೆ.

ಇದನ್ನೂ ಓದಿ: 2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ಮಕ್ಕಳ ಪ್ರಣಾಳಿಕೆಯಲ್ಲಿನ ಶಿಫಾರಸುಗಳು:

  • ಎಲ್ಲಾ ರೀತಿಯ ಹಿಂಸಾಚಾರದಿಂದ ರಕ್ಷಣೆ.
  • ಕೈಗೆಟುಕುವ ಆರೋಗ್ಯ ಸೇವೆ ಮತ್ತು ಪೌಷ್ಠಿಕ ಆಹಾರದ ಲಭ್ಯತೆ.
  • ವರ್ಗ, ಜಾತಿ, ಲಿಂಗ, ಧರ್ಮ ಅಥವಾ ಯಾವುದೇ ಆಧಾರದ ಮೇಲೆ ಯಾವುದೇ ತಾರತಮ್ಯವಿರಬಾರದು.
  • ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ.
  • ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳುವುದು.
  • ಅಸ್ಸಾಂನಾದ್ಯಂತ ಎಲ್ಲಾ ಕುಟುಂಬಗಳಿಗೆ ಸುರಕ್ಷಿತ ಕುಡಿಯುವ ನೀರು ಮತ್ತು ನೈರ್ಮಲ್ಯತೆಯ ವ್ಯವಸ್ಥೆ.
  • ಆಟವಾಡಲು, ಬೆಳೆಯಲು ಮಕ್ಕಳಿಗೆ ಸುರಕ್ಷಿತ ಸ್ಥಳಗಳು.
  • ಗೌರವಯುತ ಜೀವನವನ್ನು ನಡೆಸಲು ಅವರಿಗೆ ಸಾಕಷ್ಟು ಪುನರ್ವಸತಿ ಮತ್ತು ಸಾಮಾಜಿಕ ಬೆಂಬಲವನ್ನು ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ವಿಭಿನ್ನ ಕ್ರಮಗಳನ್ನು ತೆಗೆದುಕೊಳ್ಳುವುದು.

ಹೀಗೆ ಇನ್ನೂ ಹತ್ತಾರು ಅಂಶಗಳನ್ನು ಮಕ್ಕಳು ಬೇಡಿಕೆಯ ರೂಪದ ಈ ಪ್ರನಾಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಭಾರತ ಒಕ್ಕೂಟ ವ್ಯವಸ್ಥೆ ಎಂಬ ಒಂದು ಅಣಕು ಪ್ರಹಸನ: ಬಿ.ಶ್ರೀಪಾದ್ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...