Homeಮುಖಪುಟಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ಕಂಡಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಹಾಕುತ್ತೇವೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ.

- Advertisement -
- Advertisement -

ನಕಲಿ ಕನ್ನಡಪರ ಹೋರಾಟಗಾರರು ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ. ಸದಾ ಸವಾಲು ಹಾಕುವ ಅವರು ನಾವು ಹಾಕುವ ಸವಾಲು ಸ್ವೀಕರಿಸದಿದ್ದರೆ ‘ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?’ ಎಂದು ಕರವೇ ಪ್ರಶ್ನಿಸಿದೆ.

ಮರಾಠ ಪ್ರಾಧಿಕಾರಿ ರಚಿಸಲು ಮುಂದಾಗಿರುವ ಸಿಎಂ ಯಡಿಯೂರಪ್ಪನವರ ನಡೆ ವಿರುದ್ಧ ಡಿಸೆಂಬರ್ 05 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಇದನ್ನು ವಿರೋಧಿಸಿದ್ದ ಯತ್ನಾಳ್, “ಕನ್ನಡಪರ ನಕಲಿ ಹೋರಾಟಗಾರರು ಮತ್ತು ರೋಲ್‌ಕಾಲ್‌ ಹೋರಾಟಗಾರರಿಗೆ ಸಿಎಂ ಯಡಿಯೂರಪ್ಪನವರು ಹೆದರಬಾರದು. ಡಿಸೆಂಬರ್ 05 ರಂದು ಅವರು ಹೇಗೆ ಬಂದ್ ಮಾಡುತ್ತಾರೆ ನೋಡುತ್ತೇನೆ’ ಎಂದು ಸವಾಲು ಹಾಕಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ “ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಚಳವಳಿಗಾರರ ಕುರಿತು ಕುಚೇಷ್ಟೆಯ ಮಾತುಗಳನ್ನು ಆಡಿದ್ದಾರೆ. ಅವರು ಕನ್ನಡ ಚಳವಳಿಗಾರರ ಕುರಿತು ಏನೆಲ್ಲ ಮಾತುಗಳನ್ನು ಆಡಿದ್ದಾರೋ ಅದೆಲ್ಲವೂ ಅವರಿಗೇ ಅನ್ವಯಿಸುತ್ತದೆ. ಸಚಿವ ಸ್ಥಾನ ಪಡೆಯಲು ಆಗಾಗ ತಮ್ಮ ಪಕ್ಷದ ಸರ್ಕಾರವನ್ನೇ ಬ್ಲಾಕ್ ಮೇಲ್ ಮಾಡಿಕೊಂಡುಬಂದವರು ಯತ್ನಾಳ್” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಡಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಹಾಕುತ್ತೇವೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ. ಇಲ್ಲವಾದಲ್ಲಿ ಬೂಟಾಟಿಕೆಯ ರಾಜಕೀಯ ಮಾಡುವುದನ್ನು ಬಿಟ್ಟುಬಿಡಲಿ ಎಂದು ನಾರಾಯಣಗೌಡ ತಿಳಿಸಿದ್ದಾರೆ.

ಯತ್ನಾಳ್ ಶಾಸಕರಾಗಿರುವ ಜಿಲ್ಲೆ ಬಿಜಾಪುರವೂ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆ, ಭಾರೀ ಮಳೆಯಿಂದಾಗಿ ಸುಮಾರು 25,000 ಕೋಟಿ ರುಪಾಯಿ ನಷ್ಟವಾಗಿದ್ದು, ಕನಿಷ್ಠ 10,000 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟಿರುವುದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇವಲ 550 ಕೋಟಿ ರುಪಾಯಿ. ಬಿಜಾಪುರ ಜಿಲ್ಲೆಯಲ್ಲಿ ಎರಡು ಲಕ್ಷ ಎಕರೆಗೂ ಹೆಚ್ಚು ಕೃಷಿ ಭೂಮಿ, ಹತ್ತು ಸಾವಿರ ಎಕರೆಗೂ ಹೆಚ್ಚು ತೋಟಗಾರಿಕಾ ಭೂಮಿ ಹಾಳಾಗಿದೆ. ರೈತರಿಗೆ ಪರಿಹಾರವಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರವಿಲ್ಲ. ಅಲ್ಪಸ್ವಲ್ಪ ಬಿಡುಗಡೆಯಾದ ಹಣವನ್ನೂ ಪುಡಾರಿಗಳು ನುಂಗಿ ನೀರು ಕುಡಿದಿದ್ದಾರೆ. ಗಂಜೀಕೇಂದ್ರಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಂತ್ರಸ್ಥರು ಒದ್ದಾಡುತ್ತಿದ್ದಾರೆ. ಯತ್ನಾಳ್ ಗೆ ನಿಜವಾಗಿಯೂ ಜನಪರ ಕಾಳಜಿ ಇದ್ದರೆ, ತನ್ನ ಕ್ಷೇತ್ರದ ಮತದಾರರ ಹಿತ ಕಾಯುವ ಮನಸ್ಸಿದ್ದರೆ, ಕೇಂದ್ರ ಸರ್ಕಾರ ಯಾಕೆ ಹಣ ನೀಡುತ್ತಿಲ್ಲ ಎಂದು ಪ್ರಶ್ನಿಸಲಿ ಎಂದು ಮೊದಲ ಸವಾಲು ಹಾಕಿದ್ದಾರೆ.

ತಮ್ಮ ಎರಡನೇ ಸವಾಲಿನಲ್ಲಿ “ಜಿಎಸ್‌ಟಿ ವ್ಯವಸ್ಥೆ ಜಾರಿಯಾದಾಗಿನಿಂದಲೂ ಕರ್ನಾಟಕ ಸರ್ಕಾರ ಲಕ್ಷಾಂತರ ಕೋಟಿ ರುಪಾಯಿ ಹಣವನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನೀಡುತ್ತಿದೆ. ಜಿಎಸ್ ಟಿ ವ್ಯವಸ್ಥೆ ಜಾರಿಯಾದ ಸಂದರ್ಭದಲ್ಲಿ ರಾಜ್ಯಗಳಿಗೆ ಆಗುವ ನಷ್ಟವಾಗುವ ಹಣವನ್ನು ಕೊಡುವ ವಾಗ್ದಾನವನ್ನು ಕೇಂದ್ರ ಸರ್ಕಾರ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಮಾತು ಮುರಿದಿದೆ. ಪರಿಹಾರದ ಹಣ ನೀಡುತ್ತಿಲ್ಲ. ಬದಲಾಗಿ ರಿಸರ್ವ್ ಬ್ಯಾಂಕ್ ನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಹಣವಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಸರ್ಕಾರ ದಿವಾಳಿಯಾಗುವ ಸ್ಥಿತಿ ಇದೆ. ಯತ್ನಾಳ್ ಅವರಿಗೆ ನಿಜವಾಗಿಯೂ ಧೈರ್ಯ ಅನ್ನೋದೇನಾದರೂ ಇದ್ದರೆ ನಮ್ಮ ಹಣ ನಮಗೆ ಕೊಡಿ ಎಂದು ಮೋದಿ ಸರ್ಕಾರವನ್ನು ಕೇಳಲಿ, ಅದಕ್ಕಾಗಿ ಧರಣಿ‌ ಮಾಡಲಿ” ಎಂದಿದ್ದಾರೆ.

ಇದೆರಡು ಕೆಲಸ ಮಾಡಲು ಯತ್ನಾಳ್ ಅವರಿಂದ ಸಾಧ್ಯವೇ? ಅಥವಾ ತಾವು ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ? ಎಂದು ಕರವೇ ಪ್ರಶ್ನಿಸಿದೆ.


ಇದನ್ನೂ ಓದಿ: ಸಿಜೆಐ ಬೋಬ್ಡೆ ವಿರುದ್ಧ ಟ್ವೀಟ್: ಕುನಾಲ್ ಕಮ್ರ ವಿರುದ್ಧ ಮೊತ್ತೊಂದು ನ್ಯಾಯಾಂಗ ನಿಂದನೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿ.ಜೆ.ಪಿ.ಶಾಸಕ ಬಸವನಗೌಡ ಯತ್ನಾಳ್ ಕನ್ನಡದ ಜಲ ನೆಲದ ಬಗ್ಗೆ ತನಗೆ ಮಾತಾಡುವ ಹಕ್ಕಿಲ್ಲಂದಾದಲ್ಲಿ
    ಕನಾ೯ಟಕ ಬಿಟ್ಟು ಮಹರಾಷ್ಟ್ರದಲ್ಲಿ ನೆಲೆ ಹೂರಿ ಮರಾಠಿಯರ ಪರವಾಗಿ ಹೋರಾಟ ಮಾಡಲಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...