Homeಮುಖಪುಟಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ಕಂಡಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಹಾಕುತ್ತೇವೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ.

- Advertisement -
- Advertisement -

ನಕಲಿ ಕನ್ನಡಪರ ಹೋರಾಟಗಾರರು ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ. ಸದಾ ಸವಾಲು ಹಾಕುವ ಅವರು ನಾವು ಹಾಕುವ ಸವಾಲು ಸ್ವೀಕರಿಸದಿದ್ದರೆ ‘ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?’ ಎಂದು ಕರವೇ ಪ್ರಶ್ನಿಸಿದೆ.

ಮರಾಠ ಪ್ರಾಧಿಕಾರಿ ರಚಿಸಲು ಮುಂದಾಗಿರುವ ಸಿಎಂ ಯಡಿಯೂರಪ್ಪನವರ ನಡೆ ವಿರುದ್ಧ ಡಿಸೆಂಬರ್ 05 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಇದನ್ನು ವಿರೋಧಿಸಿದ್ದ ಯತ್ನಾಳ್, “ಕನ್ನಡಪರ ನಕಲಿ ಹೋರಾಟಗಾರರು ಮತ್ತು ರೋಲ್‌ಕಾಲ್‌ ಹೋರಾಟಗಾರರಿಗೆ ಸಿಎಂ ಯಡಿಯೂರಪ್ಪನವರು ಹೆದರಬಾರದು. ಡಿಸೆಂಬರ್ 05 ರಂದು ಅವರು ಹೇಗೆ ಬಂದ್ ಮಾಡುತ್ತಾರೆ ನೋಡುತ್ತೇನೆ’ ಎಂದು ಸವಾಲು ಹಾಕಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ “ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಚಳವಳಿಗಾರರ ಕುರಿತು ಕುಚೇಷ್ಟೆಯ ಮಾತುಗಳನ್ನು ಆಡಿದ್ದಾರೆ. ಅವರು ಕನ್ನಡ ಚಳವಳಿಗಾರರ ಕುರಿತು ಏನೆಲ್ಲ ಮಾತುಗಳನ್ನು ಆಡಿದ್ದಾರೋ ಅದೆಲ್ಲವೂ ಅವರಿಗೇ ಅನ್ವಯಿಸುತ್ತದೆ. ಸಚಿವ ಸ್ಥಾನ ಪಡೆಯಲು ಆಗಾಗ ತಮ್ಮ ಪಕ್ಷದ ಸರ್ಕಾರವನ್ನೇ ಬ್ಲಾಕ್ ಮೇಲ್ ಮಾಡಿಕೊಂಡುಬಂದವರು ಯತ್ನಾಳ್” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಡಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಹಾಕುತ್ತೇವೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ. ಇಲ್ಲವಾದಲ್ಲಿ ಬೂಟಾಟಿಕೆಯ ರಾಜಕೀಯ ಮಾಡುವುದನ್ನು ಬಿಟ್ಟುಬಿಡಲಿ ಎಂದು ನಾರಾಯಣಗೌಡ ತಿಳಿಸಿದ್ದಾರೆ.

ಯತ್ನಾಳ್ ಶಾಸಕರಾಗಿರುವ ಜಿಲ್ಲೆ ಬಿಜಾಪುರವೂ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆ, ಭಾರೀ ಮಳೆಯಿಂದಾಗಿ ಸುಮಾರು 25,000 ಕೋಟಿ ರುಪಾಯಿ ನಷ್ಟವಾಗಿದ್ದು, ಕನಿಷ್ಠ 10,000 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟಿರುವುದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇವಲ 550 ಕೋಟಿ ರುಪಾಯಿ. ಬಿಜಾಪುರ ಜಿಲ್ಲೆಯಲ್ಲಿ ಎರಡು ಲಕ್ಷ ಎಕರೆಗೂ ಹೆಚ್ಚು ಕೃಷಿ ಭೂಮಿ, ಹತ್ತು ಸಾವಿರ ಎಕರೆಗೂ ಹೆಚ್ಚು ತೋಟಗಾರಿಕಾ ಭೂಮಿ ಹಾಳಾಗಿದೆ. ರೈತರಿಗೆ ಪರಿಹಾರವಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರವಿಲ್ಲ. ಅಲ್ಪಸ್ವಲ್ಪ ಬಿಡುಗಡೆಯಾದ ಹಣವನ್ನೂ ಪುಡಾರಿಗಳು ನುಂಗಿ ನೀರು ಕುಡಿದಿದ್ದಾರೆ. ಗಂಜೀಕೇಂದ್ರಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಂತ್ರಸ್ಥರು ಒದ್ದಾಡುತ್ತಿದ್ದಾರೆ. ಯತ್ನಾಳ್ ಗೆ ನಿಜವಾಗಿಯೂ ಜನಪರ ಕಾಳಜಿ ಇದ್ದರೆ, ತನ್ನ ಕ್ಷೇತ್ರದ ಮತದಾರರ ಹಿತ ಕಾಯುವ ಮನಸ್ಸಿದ್ದರೆ, ಕೇಂದ್ರ ಸರ್ಕಾರ ಯಾಕೆ ಹಣ ನೀಡುತ್ತಿಲ್ಲ ಎಂದು ಪ್ರಶ್ನಿಸಲಿ ಎಂದು ಮೊದಲ ಸವಾಲು ಹಾಕಿದ್ದಾರೆ.

ತಮ್ಮ ಎರಡನೇ ಸವಾಲಿನಲ್ಲಿ “ಜಿಎಸ್‌ಟಿ ವ್ಯವಸ್ಥೆ ಜಾರಿಯಾದಾಗಿನಿಂದಲೂ ಕರ್ನಾಟಕ ಸರ್ಕಾರ ಲಕ್ಷಾಂತರ ಕೋಟಿ ರುಪಾಯಿ ಹಣವನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನೀಡುತ್ತಿದೆ. ಜಿಎಸ್ ಟಿ ವ್ಯವಸ್ಥೆ ಜಾರಿಯಾದ ಸಂದರ್ಭದಲ್ಲಿ ರಾಜ್ಯಗಳಿಗೆ ಆಗುವ ನಷ್ಟವಾಗುವ ಹಣವನ್ನು ಕೊಡುವ ವಾಗ್ದಾನವನ್ನು ಕೇಂದ್ರ ಸರ್ಕಾರ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಮಾತು ಮುರಿದಿದೆ. ಪರಿಹಾರದ ಹಣ ನೀಡುತ್ತಿಲ್ಲ. ಬದಲಾಗಿ ರಿಸರ್ವ್ ಬ್ಯಾಂಕ್ ನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಹಣವಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಸರ್ಕಾರ ದಿವಾಳಿಯಾಗುವ ಸ್ಥಿತಿ ಇದೆ. ಯತ್ನಾಳ್ ಅವರಿಗೆ ನಿಜವಾಗಿಯೂ ಧೈರ್ಯ ಅನ್ನೋದೇನಾದರೂ ಇದ್ದರೆ ನಮ್ಮ ಹಣ ನಮಗೆ ಕೊಡಿ ಎಂದು ಮೋದಿ ಸರ್ಕಾರವನ್ನು ಕೇಳಲಿ, ಅದಕ್ಕಾಗಿ ಧರಣಿ‌ ಮಾಡಲಿ” ಎಂದಿದ್ದಾರೆ.

ಇದೆರಡು ಕೆಲಸ ಮಾಡಲು ಯತ್ನಾಳ್ ಅವರಿಂದ ಸಾಧ್ಯವೇ? ಅಥವಾ ತಾವು ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ? ಎಂದು ಕರವೇ ಪ್ರಶ್ನಿಸಿದೆ.


ಇದನ್ನೂ ಓದಿ: ಸಿಜೆಐ ಬೋಬ್ಡೆ ವಿರುದ್ಧ ಟ್ವೀಟ್: ಕುನಾಲ್ ಕಮ್ರ ವಿರುದ್ಧ ಮೊತ್ತೊಂದು ನ್ಯಾಯಾಂಗ ನಿಂದನೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿ.ಜೆ.ಪಿ.ಶಾಸಕ ಬಸವನಗೌಡ ಯತ್ನಾಳ್ ಕನ್ನಡದ ಜಲ ನೆಲದ ಬಗ್ಗೆ ತನಗೆ ಮಾತಾಡುವ ಹಕ್ಕಿಲ್ಲಂದಾದಲ್ಲಿ
    ಕನಾ೯ಟಕ ಬಿಟ್ಟು ಮಹರಾಷ್ಟ್ರದಲ್ಲಿ ನೆಲೆ ಹೂರಿ ಮರಾಠಿಯರ ಪರವಾಗಿ ಹೋರಾಟ ಮಾಡಲಿ.

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...