Homeಮುಖಪುಟಲವ್ ಜಿಹಾದ್ ಕುರಿತ ಸುದ್ದಿಗಳಿಗೆ ನಿರ್ಬಂಧ ಹೇರಿ: ಹೋರಾಟಗಾರರ ಪತ್ರ

ಲವ್ ಜಿಹಾದ್ ಕುರಿತ ಸುದ್ದಿಗಳಿಗೆ ನಿರ್ಬಂಧ ಹೇರಿ: ಹೋರಾಟಗಾರರ ಪತ್ರ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ, ಕಾನೂನಿನಡಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

- Advertisement -
- Advertisement -

ಇತ್ತಿಚೆಗೆ ದೇಶದಲ್ಲಿ ಲವ್ ಜಿಹಾದ್ ಎಂಬ ಪದ ಪದೇ ಪದೇ ಪ್ರಸ್ತಾಪವಾಗುತ್ತಲೇ ಇದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ತಡೆಗೆ ಕಾನೂನು ತರುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಹೇಳಿಕೆಗಳನ್ನು ಅಲ್ಲಿನ ಮುಖ್ಯಮಂತ್ರಿಗಳೇ ನೀಡಿದ್ದಾರೆ. ಸುದ್ದಿ ಚಾನೆಲ್‌ಗಳಲ್ಲಿ ಇದು ಹಾಟ್ ಟಾಪಿಕ್ ಆಗಿದೆ.

ಸುದ್ದಿ ಮಾಧ್ಯಮಗಳು ತಮ್ಮ ಸುದ್ದಿ, ಚರ್ಚೆಗಳಲ್ಲಿ ಲವ್ ಜಿಹಾದ್ ಅನ್ನು ಪ್ರಮುಖ ವಿಷಯವಾಗಿಸಿವೆ. ಆದರೆ ಅವರು ಪ್ರಸ್ತಾಪಿಸುತ್ತಿರುವ, ವ್ಯಾಖ್ಯಾನಿಸುತ್ತಿರುವ ವಿವರಗಳಿಗೆ ಇದಕ್ಕೆ ಅಡೆ ತಡೆಗಳೇ ಇಲ್ಲವಾಗಿವೆ. ಇಂತಹ ಚರ್ಚೆಗಳು ದೇಶದ ಸಾರ್ವಭೌಮತೆಗೆ ದಕ್ಕೆ ತರುವಂತಹ, ಕೋಮು ಸಂಘರ್ಷಕ್ಕೆ ಕಾರಣವಾಗುವ ಅಂಶಗಳನ್ನು ಒಳಗೊಂಡಿವೆ ಎಂದು ಸಾಮಾಜಿಕ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುದ್ದಿ ಚಾನೆಲ್‌ಗಳಲ್ಲಿ ಲವ್ ಜಿಹಾದ್ ಸುತ್ತಲಿನ ಚರ್ಚೆಗಳು, ಇದರಲ್ಲಿ ಭಾಗವಹಿಸುವವರು ಸಮಾಜವನ್ನು ಹಾಳುಗೆಡವುವಂತಹ ಸುಳ್ಳು ಮತ್ತು ಅರ್ಧ-ಸತ್ಯಗಳನ್ನು ಮಾತನಾಡುತ್ತಿದ್ದಾರೆ. ಹಾಗಾಗಿ ಈ ವಿಷಯದ ಕುರಿತ ಮಾಧ್ಯಮ ಚರ್ಚೆಗಳಿಗೆ ನಿರ್ಬಂಧ ವಿಧಿಸಿ ಎಂದು ಸಾಮಾಜಿಕ ಹೋರಾಟಗಾರ ತೆಹ್ಸೀನ್ ಪೂನವಾಲ್ಲಾ ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್(NBA) ಅಧ್ಯಕ್ಷ ರಾಜತ್‌ ಶರ್ಮ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

ಬಿಜೆಪಿಯ ಹಲವಾರು ಮುಖಂಡರ ಕುಟುಂಬ ಸದಸ್ಯರು ಅಂತರ್‌ಧರ್ಮೀಯ ಮದುವೆಯಾಗಿದ್ದಾರೆ. ಅವೆಲ್ಲರೂ ಲವ್ ಜಿಹಾದ್ ಅಡಿಯಲ್ಲಿ ಬರುತ್ತವೆಯೇ? ಎಂದು ಛತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಪ್ರಶ್ನಿಸಿದ್ದಾರೆ.

ಹಿಂದೂ ಯುವತಿಯರನ್ನು ಪ್ರೀತಿ ಹೆಸರಲ್ಲಿ ಇನ್ನೊಂದು ಧರ್ಮಕ್ಕೆ ಮತಾಂತರಿಸಲಾಗುತ್ತಿದೆ. ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಯುವತಿಯರು ಬಲಿಯಾಗುತ್ತಿದ್ದಾರೆ ಎಂದು ಆರೋಪಿಸಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಬಿಜೆಪಿ ಆಳ್ವಿಕೆಯ ಹಲವಾರು ರಾಜ್ಯಗಳಲ್ಲಿ “ಲವ್ ಜಿಹಾದ್” ವಿರುದ್ಧ ಕಠಿಣ ಕಾನೂನು ಶೀಘ್ರದಲ್ಲೇ  ತರಲಾಗುವುದು ಎಂದು ಘೋಷಣೆ ಮಾಡಿವೆ.

ಇದನ್ನು ಗಮನದಲ್ಲಿಟ್ಟುಕೊಂಡೆ ಸುದ್ದಿ ಮಾಧ್ಯಮಗಳು ತಮ್ಮ ಚಾನೆಲ್‌ಗಳಲ್ಲಿ ಗಂಟೆಗಟ್ಟಲೆ ಪ್ಯಾನೆಲ್ ಡಿಸ್ಕಷನ್ ಹೆಸರಲ್ಲಿ ಹಲವು ಜನರನ್ನು ಕರೆಸಿ ಚರ್ಚೆ ನಡೆಸುತ್ತಿವೆ. ಆದರೆ ಚರ್ಚೆಯಲ್ಲಿ ಭಾಗವಹಿಸುವವರ ಮಾತುಗಳು, ಅವರು ಪ್ರಸ್ತುತ ಪಡಿಸುವ ಲವ್ ಜಿಹಾದ್ ಅಂಶಗಳು ನಿಜಕ್ಕೂ ಗಾಬರಿ ಮೂಡಿಸುವಂತಿದ್ದು, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುವಂತಿವೆ ಎನ್ನಲಾಗಿದೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

ನಿನ್ನೆ ಕೂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲವ್ ಜಿಹಾದ್ ಎಂಬುದು ಬಿಜೆಪಿ ರಾಷ್ಟ್ರವನ್ನು ವಿಭಜಿಸಲು ಮತ್ತು ಕೋಮು ಸೌಹಾರ್ದತೆಗೆ ಭಂಗ ತರಲು ಸೃಷ್ಟಿಸಿದ ಪದ. ಮದುವೆ ಎಂಬುದು ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದ್ದು, ಅದಕ್ಕೆ ಕಾನೂನು ತರುವುದು ಅಸಂವಿಧಾನಿಕ ಎಂದು  ಟೀಕಿಸಿದ್ದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಈ ಸಂಬಂಧ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಆದರೆ ತನ್ನದೆ ಪಕ್ಷ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ಎಂಬ ಅಂಶವನ್ನಿಟ್ಟುಕೊಂಡು ಕಾನೂನು ಜಾರಿ ಮಾಡಲು ಹೊರಟಿರುವುದನ್ನು ಕೇಂದ್ರ ಸರ್ಕಾರ ಪ್ರಶ್ನಿಸಿಲ್ಲ. ಯಾವುದೇ ಆದೇಶಗಳನ್ನು ಈ ಬಗ್ಗೆ ಹೊರಡಿಸಿಲ್ಲ. ಇದು ಭಾರತೀಯ ಜನತಾ ಪಾರ್ಟಿ ತನ್ನ ಸಂಸದೀಯ ಹೇಳಿಕೆ ಮತ್ತು ಹೊರ ಜಗತ್ತಿನಲ್ಲಿ ದ್ವಿನೀತಿಯನ್ನು ಅನುಸರಿಸುತ್ತಿದೇಯೇ ಎಂಬ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಸದ್ಯ ಲವ್ ಜಿಹಾದ್ ಪದ ಬಳಕೆ ಬಗ್ಗೆ ಹಲವು ಹೊರಾಟಗಾರರು, ಚಿಂತಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರೀತಿಯಲ್ಲಿ ಜಿಹಾದ್ ಬರುವುದಿಲ್ಲ ಎಂಬ ಮಾತುಗಳನ್ನು ಆಡುತ್ತಿದ್ದಾರೆ. ಆದರೆ ಪ್ರತಿ ದಿನ ಹೆಚ್ಚಾಗುತ್ತಿರುವ ಮಾಧ್ಯಮಗಳ ಕೆಟ್ಟ ಚರ್ಚೆಗಳನ್ನು ನಿಲ್ಲಿಸದಿದ್ದರೇ, ಅವುಗಳ ಮೇಲೆ ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ನಿರ್ಬಂಧ ವಿಧಿಸದಿದ್ದರೇ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಖಂಡಿತ.


ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...