HomeಚಳವಳಿCAA ವಿರೋಧಿ ಪ್ರತಿಭಟನೆಯಲ್ಲಿ ಭಾಗಿ: ಅಪ್ರಾಪ್ತನಿಗೆ 11 ತಿಂಗಳ ನಂತರ ಜಾಮೀನು!

CAA ವಿರೋಧಿ ಪ್ರತಿಭಟನೆಯಲ್ಲಿ ಭಾಗಿ: ಅಪ್ರಾಪ್ತನಿಗೆ 11 ತಿಂಗಳ ನಂತರ ಜಾಮೀನು!

ಯುಪಿ ಪೊಲೀಸರು ಗಲಭೆಯ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಗುರಿಯಾಗಿಸಿ ಬಂಧಿಸಿದ್ದರು. ಬಂಧನಕ್ಕೆ ಪೊಲೀಸರ ಮೇಲೆ ಭಾರಿ ಒತ್ತಡವಿತ್ತು ಹಾಗೂ ರಾಜ್ಯ ಸರ್ಕಾರವನ್ನು ತೃಪ್ತಿಪಡಿಸುವುದಕ್ಕಾಗಿ ಪೊಲೀಸರು ಯಾದೃಚ್ಛಿಕ ಬಂಧನಗಳನ್ನು ಮಾಡಿದ್ದಾರೆ ಎಂದು ಬಾಲಕನ ಪರವಾಗಿ ವಾದಿಸಿದ ವಕೀಲೆ ಹೇಳಿದ್ದಾರೆ

- Advertisement -
- Advertisement -

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಉತ್ತರ ಪ್ರದೇಶದ ಠಾಕುರ್‌ಗಂಜ್ ನಿವಾಸಿಯಾಗಿರುವ 16 ವರ್ಷದ ಅಪ್ರಾಪ್ತ ಬಾಲಕನನ್ನು 11 ತಿಂಗಳ ನಂತರ ಇತ್ತೀಚೆಗೆ ಬಿಡುಗಡೆಗೊಳಿಸಲಾಗಿದೆ ಎಂದ ದಿವೈರ್‌ ವರದಿ ಮಾಡಿದೆ.

ಕಳೆದ ಡಿಸೆಂಬರ್ 25 ರಂದು ಸ್ನೇಹಿತನೊಬ್ಬರ ಮನೆಯಿಂದ ಬಾಲಕನನ್ನು ಬಂಧಿಸಲಾಗಿದ್ದು, 10 ತಿಂಗಳ ಕಾಲ ಬಾಲಾಪರಾಧಿಗಳ ಕೇಂದ್ರಕ್ಕೆ ಕಳುಹಿಸಲಾಗಿತ್ತು ಎಂದು ದಿ ವೈರ್ ಹೇಳಿದೆ. ಡಿಸೆಂಬರ್ 19 ರಂದು ಪೊಲೀಸರು ದಾಖಲಿಸಿದ್ದ ಎಫ್‍ಐಆರ್‌ನಲ್ಲಿ 25 ಮಂದಿಯ ಹೆಸರುಗಳಲ್ಲಿ ಬಾಲಕನ ಹೆಸರನ್ನು ಕೂಡಾ ಸೇರಿಸಲಾಗಿತ್ತು. ಆದರೆ ತಾನು ಯಾವುದೇ ಪ್ರತಿಭಟನೆಯಲ್ಲೂ ಭಾಗಿಯಾಗಿಲ್ಲ ಎಂದಿರುವ ಬಾಲಕ, ಬಂಧನದ ಸಮಯದಲ್ಲಿ ಹೆತ್ತವರಿಗೆ ಕರೆ ಮಾಡಲು ಕೂಡ ಅನುಮತಿಯನ್ನು ನೀಡಿಲ್ಲ ಹಾಗೂ ಬಂಧನದ ಮಾಹಿತಿಯನ್ನೂ ಕುಟುಂಬಕ್ಕೆ ನೀಡಿರಲಿಲ್ಲ ಎಂದು ಆರೋಪಿಸಿದ್ದಾನೆ.

ಇದನ್ನೂ ಓದಿ: ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಠಾಕೂರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಕೈಲಾಶ್ ನಾರಾಯಣ್ ತ್ರಿವೇದಿ ಸಲ್ಲಿಸಿದ ಎಫ್‌ಐಆರ್‌ನಲ್ಲಿ, ಭಾರತೀಯ ದಂಡ ಸಂಹಿತೆಯ 14 ಸೆಕ್ಷನ್‌ಗಳ ಅಡಿಯಲ್ಲಿ ಬಾಲಕನ ಮೇಲೆ ಆರೋಪ ಹೊರಿಸಲಾಗಿದೆ. ಬಾಲಕನಿಗೆ ನವೆಂಬರ್ 13 ರಂದು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

ಈ ಪ್ರಕರಣದ ಮೊದಲ ಜಾಮೀನು ಅರ್ಜಿಯನ್ನು ಬಾಲಕನನ್ನು ಬಂಧಿಸಿ ಎಂಟು ತಿಂಗಳ ನಂತರ ಸೆಪ್ಟೆಂಬರ್ 15 ರಂದು ಬಾಲಾಪರಾಧಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿತ್ತು. ಆದರೆ ಬಾಲಕನನ್ನು ಬಿಡುಗಡೆ ಗೊಳಿಸಿದರೆ ಸಮಾಜಕ್ಕೆ “ಬೆದರಿಕೆ” ಒಡ್ಡಬಹುದು ಎಂಬ ಕಾರಣಕ್ಕೆ ವಜಾಗೊಳಿಸಲಾಗಿತ್ತು. ಇದರ ನಂತರ ಸೆಪ್ಟೆಂಬರ್ 29 ರಂದು ಸಲ್ಲಿಸಿದ ಅರ್ಜಿಯನ್ನು ಮನ್ನಿಸಿದ ಸೆಶನ್ಸ್ ನ್ಯಾಯಾಲಯ ಬಾಲಕನಿಗೆ ಜಾಮೀನು ನೀಡಿದೆ.

ಬಾಲಕನ ಪರವಾಗಿ ವಾದಿಸಿದ ನ್ಯಾಯವಾದಿ ಆಶ್ಮಾ ಇಝ್ಝತ್‌, “ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಯುಪಿ ಪೊಲೀಸರು ಗಲಭೆಯ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಗುರಿಯಾಗಿಸಿ ಬಂಧಿಸಿದ್ದರು. ಬಂಧನಕ್ಕೆ ಪೊಲೀಸರ ಮೇಲೆ ಭಾರಿ ಒತ್ತಡವಿತ್ತು. ರಾಜ್ಯ ಸರ್ಕಾರವನ್ನು ತೃಪ್ತಿಪಡಿಸುವುದಕ್ಕಾಗಿ ಪೊಲೀಸರು ಯಾದೃಚ್ಛಿಕ ಬಂಧನಗಳನ್ನು ಮಾಡಿದರು. ಐದು ದಿನಗಳ ಕಾಲ ಲಕ್ನೋದಲ್ಲಿ ಮುಸ್ಲಿಮರನ್ನು ನಿರಂತರವಾಗಿ ಬಂಧಿಸಲಾಯಿತು” ಎಂದಿದ್ದಾರೆಂದು ವೈರ್‌ ಬರೆದಿದೆ.

ಇದನ್ನೂ ಓದಿ: ಮಂಗಳೂರು: ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...