HomeಚಳವಳಿCAA ವಿರೋಧಿ ಪ್ರತಿಭಟನೆಯಲ್ಲಿ ಭಾಗಿ: ಅಪ್ರಾಪ್ತನಿಗೆ 11 ತಿಂಗಳ ನಂತರ ಜಾಮೀನು!

CAA ವಿರೋಧಿ ಪ್ರತಿಭಟನೆಯಲ್ಲಿ ಭಾಗಿ: ಅಪ್ರಾಪ್ತನಿಗೆ 11 ತಿಂಗಳ ನಂತರ ಜಾಮೀನು!

ಯುಪಿ ಪೊಲೀಸರು ಗಲಭೆಯ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಗುರಿಯಾಗಿಸಿ ಬಂಧಿಸಿದ್ದರು. ಬಂಧನಕ್ಕೆ ಪೊಲೀಸರ ಮೇಲೆ ಭಾರಿ ಒತ್ತಡವಿತ್ತು ಹಾಗೂ ರಾಜ್ಯ ಸರ್ಕಾರವನ್ನು ತೃಪ್ತಿಪಡಿಸುವುದಕ್ಕಾಗಿ ಪೊಲೀಸರು ಯಾದೃಚ್ಛಿಕ ಬಂಧನಗಳನ್ನು ಮಾಡಿದ್ದಾರೆ ಎಂದು ಬಾಲಕನ ಪರವಾಗಿ ವಾದಿಸಿದ ವಕೀಲೆ ಹೇಳಿದ್ದಾರೆ

- Advertisement -
- Advertisement -

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಉತ್ತರ ಪ್ರದೇಶದ ಠಾಕುರ್‌ಗಂಜ್ ನಿವಾಸಿಯಾಗಿರುವ 16 ವರ್ಷದ ಅಪ್ರಾಪ್ತ ಬಾಲಕನನ್ನು 11 ತಿಂಗಳ ನಂತರ ಇತ್ತೀಚೆಗೆ ಬಿಡುಗಡೆಗೊಳಿಸಲಾಗಿದೆ ಎಂದ ದಿವೈರ್‌ ವರದಿ ಮಾಡಿದೆ.

ಕಳೆದ ಡಿಸೆಂಬರ್ 25 ರಂದು ಸ್ನೇಹಿತನೊಬ್ಬರ ಮನೆಯಿಂದ ಬಾಲಕನನ್ನು ಬಂಧಿಸಲಾಗಿದ್ದು, 10 ತಿಂಗಳ ಕಾಲ ಬಾಲಾಪರಾಧಿಗಳ ಕೇಂದ್ರಕ್ಕೆ ಕಳುಹಿಸಲಾಗಿತ್ತು ಎಂದು ದಿ ವೈರ್ ಹೇಳಿದೆ. ಡಿಸೆಂಬರ್ 19 ರಂದು ಪೊಲೀಸರು ದಾಖಲಿಸಿದ್ದ ಎಫ್‍ಐಆರ್‌ನಲ್ಲಿ 25 ಮಂದಿಯ ಹೆಸರುಗಳಲ್ಲಿ ಬಾಲಕನ ಹೆಸರನ್ನು ಕೂಡಾ ಸೇರಿಸಲಾಗಿತ್ತು. ಆದರೆ ತಾನು ಯಾವುದೇ ಪ್ರತಿಭಟನೆಯಲ್ಲೂ ಭಾಗಿಯಾಗಿಲ್ಲ ಎಂದಿರುವ ಬಾಲಕ, ಬಂಧನದ ಸಮಯದಲ್ಲಿ ಹೆತ್ತವರಿಗೆ ಕರೆ ಮಾಡಲು ಕೂಡ ಅನುಮತಿಯನ್ನು ನೀಡಿಲ್ಲ ಹಾಗೂ ಬಂಧನದ ಮಾಹಿತಿಯನ್ನೂ ಕುಟುಂಬಕ್ಕೆ ನೀಡಿರಲಿಲ್ಲ ಎಂದು ಆರೋಪಿಸಿದ್ದಾನೆ.

ಇದನ್ನೂ ಓದಿ: ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಠಾಕೂರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಕೈಲಾಶ್ ನಾರಾಯಣ್ ತ್ರಿವೇದಿ ಸಲ್ಲಿಸಿದ ಎಫ್‌ಐಆರ್‌ನಲ್ಲಿ, ಭಾರತೀಯ ದಂಡ ಸಂಹಿತೆಯ 14 ಸೆಕ್ಷನ್‌ಗಳ ಅಡಿಯಲ್ಲಿ ಬಾಲಕನ ಮೇಲೆ ಆರೋಪ ಹೊರಿಸಲಾಗಿದೆ. ಬಾಲಕನಿಗೆ ನವೆಂಬರ್ 13 ರಂದು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

ಈ ಪ್ರಕರಣದ ಮೊದಲ ಜಾಮೀನು ಅರ್ಜಿಯನ್ನು ಬಾಲಕನನ್ನು ಬಂಧಿಸಿ ಎಂಟು ತಿಂಗಳ ನಂತರ ಸೆಪ್ಟೆಂಬರ್ 15 ರಂದು ಬಾಲಾಪರಾಧಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿತ್ತು. ಆದರೆ ಬಾಲಕನನ್ನು ಬಿಡುಗಡೆ ಗೊಳಿಸಿದರೆ ಸಮಾಜಕ್ಕೆ “ಬೆದರಿಕೆ” ಒಡ್ಡಬಹುದು ಎಂಬ ಕಾರಣಕ್ಕೆ ವಜಾಗೊಳಿಸಲಾಗಿತ್ತು. ಇದರ ನಂತರ ಸೆಪ್ಟೆಂಬರ್ 29 ರಂದು ಸಲ್ಲಿಸಿದ ಅರ್ಜಿಯನ್ನು ಮನ್ನಿಸಿದ ಸೆಶನ್ಸ್ ನ್ಯಾಯಾಲಯ ಬಾಲಕನಿಗೆ ಜಾಮೀನು ನೀಡಿದೆ.

ಬಾಲಕನ ಪರವಾಗಿ ವಾದಿಸಿದ ನ್ಯಾಯವಾದಿ ಆಶ್ಮಾ ಇಝ್ಝತ್‌, “ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಯುಪಿ ಪೊಲೀಸರು ಗಲಭೆಯ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಗುರಿಯಾಗಿಸಿ ಬಂಧಿಸಿದ್ದರು. ಬಂಧನಕ್ಕೆ ಪೊಲೀಸರ ಮೇಲೆ ಭಾರಿ ಒತ್ತಡವಿತ್ತು. ರಾಜ್ಯ ಸರ್ಕಾರವನ್ನು ತೃಪ್ತಿಪಡಿಸುವುದಕ್ಕಾಗಿ ಪೊಲೀಸರು ಯಾದೃಚ್ಛಿಕ ಬಂಧನಗಳನ್ನು ಮಾಡಿದರು. ಐದು ದಿನಗಳ ಕಾಲ ಲಕ್ನೋದಲ್ಲಿ ಮುಸ್ಲಿಮರನ್ನು ನಿರಂತರವಾಗಿ ಬಂಧಿಸಲಾಯಿತು” ಎಂದಿದ್ದಾರೆಂದು ವೈರ್‌ ಬರೆದಿದೆ.

ಇದನ್ನೂ ಓದಿ: ಮಂಗಳೂರು: ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...