Homeಮುಖಪುಟಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತವೆ.

- Advertisement -
- Advertisement -

ಮೊದಲಿಗೆ ಕೋವಿಡ್ ಅವಾಂತರಗಳಿಂದ ಬೇಸತ್ತು ಒಂದಷ್ಟು ಕಾಲದ ನಂತರ ಸಿನೆಮಾ ಥಿಯೇಟರ್ ಗಳಿಗೆ ಹೋಗುವಂತಾದ ಖುಷಿಯನ್ನ ಎಲ್ಲರೂ ಹಂಚಿಕೊಳ್ಳೋಣ. ಆಕ್ಟ್-1978 ಸಿನೆಮಾ, ಬಹಳ ಹಿಂದೆ ಕನ್ನಡದಲ್ಲೇ ಬಂದ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ‘ನಿಷ್ಕರ್ಷ’, ಆ ಸಿನೆಮಾಗೆ ಸ್ಫೂರ್ತಿಯಾಗಿದ್ದ ಅಮೆರಿಕನ್ ಚಲನಚಿತ್ರ ‘ಡೈ ಹಾರ್ಡ್’ ಇಂತಹ ಹೋಸ್ಟೇಜ್ ಡ್ರಾಮ ಸಿನೆಮಾಗಳ ಪ್ರಕಾರಕ್ಕೆ ಸೇರಿದರೂ, ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುವ ‘ಕಾರಣ’ದಿಂದಾಗಿ ವಿಭಿನ್ನ ಕಥಾವಸ್ತು ಹೊಂದಿದೆ. ಸಿನೆಮಾದ ಮೂಲ ಉದ್ದೇಶವೇ ಚಿಂತನೆಗಳನ್ನ ಹೆಚ್ಚಿಸುವುದಾದ್ದರಿಂದ, ಆ ನಿಟ್ಟಿನಲ್ಲಿ ಆಕ್ಟ್-1978 ಗೆದ್ದಿದೆಯಾ? ಮುಂದೆ ನೋಡೋಣ…

ಮೊದಲಿಗೆ ಹಿಂಸೆಯನ್ನ ಹೋರಾಟದ ಪ್ರಕ್ರಿಯೆಗಳಿಗೆ ಬಳಸೋದು, ಹಾಗೆ ಬಳಸುವಂತೆ ಪ್ರಚೋದಿಸುವುದು ಸರಿಯೇ ಎಂಬ ಪ್ರಶ್ನೆ ಎದುರಾಗುವುದು ಸಹಜ. ತುಂಬು ಗರ್ಭಿಣಿಯ ಪಾತ್ರ ಸೃಷ್ಟಿಸಿ, ಆಕೆಯ ಮೂಲಕ ಕಥೆ ಹೇಳಿ, ಪ್ರೇಕ್ಷಕನನ್ನ ಭಾವನಾತ್ಮಕವಾಗಿ ಹಿಡಿದಿಡುವ ಪ್ರಯತ್ನ ಸಮಂಜಸವಾದುದಲ್ಲ.

ಸರ್ಕಾರಿ ಕಚೇರಿಯೊಂದರಲ್ಲಿ ನಡೆಯುವ ಕಥೆ, ಆ ಕಚೇರಿಯ ನೌಕರರ ಭ್ರಷ್ಟತೆಯನ್ನು ಅನಾವರಣಗೊಳಿಸುತ್ತಾ, ಅವರ ಮೇಲ್ದರ್ಜೆಯ ಅಧಿಕಾರಿಗಳನ್ನೂ ಒಳಗೊಂಡಂತೆ ಹೇಗೆ ಇವರೆಲ್ಲಾ ಭ್ರಷ್ಟ ಸಮಾಜದ ನಿರ್ಮಾಣಕ್ಕೆ ಕಾರಣರಾಗಿದ್ದಾರೆ ಎಂಬುದನ್ನ ತೋರಿಸುತ್ತಾ ಸಾಗುತ್ತದೆ.

ಕಥಾನಾಯಕಿ ಅಮಾಯಕಳೇನಲ್ಲ. ಎನ್ ಸಿ ಸಿ ಯಲ್ಲಿ ತರಬೇತಿ ಪಡೆದಿರುವಾಕೆ. ಆದರೆ ಆಕೆ ಸನ್ನಿವೇಶಗಳನ್ನ ಎದುರಿಸುವ ರೀತಿಯಲ್ಲಿ ಕಟ್ಟಿಕೊಟ್ಟಿರುವ ಚಿತ್ರಣ ತಡವರಿಸಿದಂತಿದೆ. ಉದಾಹರಣೆಗೆ ಆಕೆ ಒಂದೇ ಟ್ರಿಗರ್ ಗೆ ಶೂಟ್ ಮಾಡುವಾಗ ಇರುವ ಪಕ್ವತೆಗೂ, ತನ್ನ ಬೇಡಿಕೆ ಇಡುವಾಗ ತೋರಿಸುವ ಅಮಾಯಕತೆಗೂ, ಬಹಳವೇ ಅಂತರವಿದೆ.

ಮಹಾತ್ಮ ಗಾಂಧಿಯ ಹೋಲಿಕೆಯನ್ನು ಬಳಕೆ ಮಾಡಿರುವುದು, ಸಣ್ಣ ಸಣ್ಣ ಅರ್ಥಗಳನ್ನ ಹೊಸೆಯುವಿಕೆಗೆ ಸಹಾಯವಾಗಿದೆ, ಪ್ರತೀ ಸರ್ಕಾರಿ ಕಚೇರಿಯ ಎದುರು ಹೀಗೊಂದು ಪ್ರಜ್ಞೆ ಸದಾ ಜಾಗೃತವಾಗಿದ್ದರೆ ಎಷ್ಟು ಚೆಂದವಿತ್ತು ಅನ್ನುವ ಹಾಗೆ.

ಇನ್ನು, ಕ್ರಿಶ್ಚಿಯನ್ ಮುಸ್ಲಿಂ ಧರ್ಮದಾರಿ ಪಾತ್ರಗಳನ್ನ ಕಾಮಿಡಿ ಪೀಸುಗಳನ್ನಾಗಿಸುವ ಟ್ರೆಂಡ್ ಇತ್ತೀಚಿಗೆ ಬೆಳೆಯುತ್ತಿರುವುದು ಅಪಾಯಕಾರಿ ಸಂಗತಿ. ಈ ಸಿನಿಮಾದಲ್ಲಿ ಬೆಂಜಮಿನ್ ಪಾತ್ರಧಾರಿಯನ್ನು ಹಾಸ್ಯ ಮಾಡುವುದು ಕನಿಷ್ಠ ಎಂಬಂತೆ ಬಳಕೆಯಾದರೂ ಬಹುಸಂಖ್ಯಾತ ಧಾರ್ಮಿಕವಾದ ಯಜಮಾನ್ಯ ಸಾಧಿಸುತ್ತಿರುವ ಸಮಯದಲ್ಲಿ ಅದು ಕಾಣುವ ರೀತಿ ಸಮಸ್ಯಾತ್ಮಕವಾದದ್ದು.

ಯಜ್ಞಾಶೆಟ್ಟಿಯವರು ಒಬ್ಬ ಗರ್ಭಿಣಿ ಸ್ತ್ರೀ ಹೇಗೆ ನೆಡೆಯುತ್ತಾಳೆ, ಹೇಗೆ ನೋವನ್ನು ಅನುಭವಿಸುತ್ತಾಳೆ ಎನ್ನುವ ರೀತಿಗಳನ್ನು ಬಹಳ ಚೆನ್ನಾಗಿ ಅಭ್ಯಾಸ ಮಾಡಿದ್ದಾರೆ, ಡೈಲಾಗ್ ಹೇಳುವಾಗ ಒಂದಷ್ಟು ಹೆಚ್ಚಿನ ಶ್ರಮ ಹಾಕಿದ್ದರೆ ನಟನೆ ಇನ್ನೂ ಆಪ್ತವಾಗಿರುತ್ತಿತ್ತು. ಸಂಚಾರಿ ವಿಜಯ್, ಅವಿನಾಶ್, ಅಚ್ಚುತ್ , ಶ್ರುತಿ, ಇವರೆಲ್ಲರೂ ಕಡಿಮೆ ಸಮಯದಲ್ಲಿಯೇ ಬಂದರೂ , ಯಜ್ಞಾಶೆಟ್ಟಿಯವರನ್ನೂ ಮರೆಸುವಂತೆ ಕಾಣುತ್ತಾರೆ.
ಇದೆಲ್ಲದರ ಹೊರತಾಗಿ ಸಿನೆಮಾ ಕಡೆಗಾಣಿಸುವಂಥಹ ಪ್ರಯತ್ನವಾ?  ಖಂಡಿತಾ ಇಲ್ಲ….

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತದೆ. ಆದರೆ ವಿಷಯವನ್ನು ಕಟ್ಟುವಾಗ ಇನ್ನಷ್ಟು ಗಂಭೀರತೆ ಅವಶ್ಯಕವಾಗಿತ್ತು ಅನ್ನುವುದೂ ನಿಜ.

ಈ ವಿಷಯಾಧಾರಿತ ಸಿನೆಮಾಗಳು, ಸಾಮಾನ್ಯ ಕಮರ್ಷಿಯಲ್ ಸಿನೆಮಾಗಳಿಗಿಂತ ತುಸು ಹೆಚ್ಚಾಗಿಯೇ ಸಿನೆಮಾ ಗ್ರಾಮರ್ ಅನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗೆ ಪ್ರಯೋಗಿಸಿದ ಮತ್ತಷ್ಟು ಫೈನ್ ಟ್ಯೂನ್ ಚಿತ್ರಗಳು ಹೆಚ್ಚಾಗಿ ಬಂದರೆ, ನಾವುಗಳು (ಕನ್ನಡ ಸಿನೆಮಾದವರು) ಇನ್ನೂ ಹೆಚ್ಚಿಗೆ ಬೆಳೆಯಬಹುದು, ಸಿನೆಮಾ ಕ್ಷೇತ್ರವನ್ನ ಒಂದು ಚರ್ಚಾ ಮಾಧ್ಯಮವನ್ನಾಗಿ ಬಳಸಿಕೊಳ್ಳಬಹುದು.


ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...