Homeಮುಖಪುಟಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತವೆ.

- Advertisement -
- Advertisement -

ಮೊದಲಿಗೆ ಕೋವಿಡ್ ಅವಾಂತರಗಳಿಂದ ಬೇಸತ್ತು ಒಂದಷ್ಟು ಕಾಲದ ನಂತರ ಸಿನೆಮಾ ಥಿಯೇಟರ್ ಗಳಿಗೆ ಹೋಗುವಂತಾದ ಖುಷಿಯನ್ನ ಎಲ್ಲರೂ ಹಂಚಿಕೊಳ್ಳೋಣ. ಆಕ್ಟ್-1978 ಸಿನೆಮಾ, ಬಹಳ ಹಿಂದೆ ಕನ್ನಡದಲ್ಲೇ ಬಂದ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ‘ನಿಷ್ಕರ್ಷ’, ಆ ಸಿನೆಮಾಗೆ ಸ್ಫೂರ್ತಿಯಾಗಿದ್ದ ಅಮೆರಿಕನ್ ಚಲನಚಿತ್ರ ‘ಡೈ ಹಾರ್ಡ್’ ಇಂತಹ ಹೋಸ್ಟೇಜ್ ಡ್ರಾಮ ಸಿನೆಮಾಗಳ ಪ್ರಕಾರಕ್ಕೆ ಸೇರಿದರೂ, ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುವ ‘ಕಾರಣ’ದಿಂದಾಗಿ ವಿಭಿನ್ನ ಕಥಾವಸ್ತು ಹೊಂದಿದೆ. ಸಿನೆಮಾದ ಮೂಲ ಉದ್ದೇಶವೇ ಚಿಂತನೆಗಳನ್ನ ಹೆಚ್ಚಿಸುವುದಾದ್ದರಿಂದ, ಆ ನಿಟ್ಟಿನಲ್ಲಿ ಆಕ್ಟ್-1978 ಗೆದ್ದಿದೆಯಾ? ಮುಂದೆ ನೋಡೋಣ…

ಮೊದಲಿಗೆ ಹಿಂಸೆಯನ್ನ ಹೋರಾಟದ ಪ್ರಕ್ರಿಯೆಗಳಿಗೆ ಬಳಸೋದು, ಹಾಗೆ ಬಳಸುವಂತೆ ಪ್ರಚೋದಿಸುವುದು ಸರಿಯೇ ಎಂಬ ಪ್ರಶ್ನೆ ಎದುರಾಗುವುದು ಸಹಜ. ತುಂಬು ಗರ್ಭಿಣಿಯ ಪಾತ್ರ ಸೃಷ್ಟಿಸಿ, ಆಕೆಯ ಮೂಲಕ ಕಥೆ ಹೇಳಿ, ಪ್ರೇಕ್ಷಕನನ್ನ ಭಾವನಾತ್ಮಕವಾಗಿ ಹಿಡಿದಿಡುವ ಪ್ರಯತ್ನ ಸಮಂಜಸವಾದುದಲ್ಲ.

ಸರ್ಕಾರಿ ಕಚೇರಿಯೊಂದರಲ್ಲಿ ನಡೆಯುವ ಕಥೆ, ಆ ಕಚೇರಿಯ ನೌಕರರ ಭ್ರಷ್ಟತೆಯನ್ನು ಅನಾವರಣಗೊಳಿಸುತ್ತಾ, ಅವರ ಮೇಲ್ದರ್ಜೆಯ ಅಧಿಕಾರಿಗಳನ್ನೂ ಒಳಗೊಂಡಂತೆ ಹೇಗೆ ಇವರೆಲ್ಲಾ ಭ್ರಷ್ಟ ಸಮಾಜದ ನಿರ್ಮಾಣಕ್ಕೆ ಕಾರಣರಾಗಿದ್ದಾರೆ ಎಂಬುದನ್ನ ತೋರಿಸುತ್ತಾ ಸಾಗುತ್ತದೆ.

ಕಥಾನಾಯಕಿ ಅಮಾಯಕಳೇನಲ್ಲ. ಎನ್ ಸಿ ಸಿ ಯಲ್ಲಿ ತರಬೇತಿ ಪಡೆದಿರುವಾಕೆ. ಆದರೆ ಆಕೆ ಸನ್ನಿವೇಶಗಳನ್ನ ಎದುರಿಸುವ ರೀತಿಯಲ್ಲಿ ಕಟ್ಟಿಕೊಟ್ಟಿರುವ ಚಿತ್ರಣ ತಡವರಿಸಿದಂತಿದೆ. ಉದಾಹರಣೆಗೆ ಆಕೆ ಒಂದೇ ಟ್ರಿಗರ್ ಗೆ ಶೂಟ್ ಮಾಡುವಾಗ ಇರುವ ಪಕ್ವತೆಗೂ, ತನ್ನ ಬೇಡಿಕೆ ಇಡುವಾಗ ತೋರಿಸುವ ಅಮಾಯಕತೆಗೂ, ಬಹಳವೇ ಅಂತರವಿದೆ.

ಮಹಾತ್ಮ ಗಾಂಧಿಯ ಹೋಲಿಕೆಯನ್ನು ಬಳಕೆ ಮಾಡಿರುವುದು, ಸಣ್ಣ ಸಣ್ಣ ಅರ್ಥಗಳನ್ನ ಹೊಸೆಯುವಿಕೆಗೆ ಸಹಾಯವಾಗಿದೆ, ಪ್ರತೀ ಸರ್ಕಾರಿ ಕಚೇರಿಯ ಎದುರು ಹೀಗೊಂದು ಪ್ರಜ್ಞೆ ಸದಾ ಜಾಗೃತವಾಗಿದ್ದರೆ ಎಷ್ಟು ಚೆಂದವಿತ್ತು ಅನ್ನುವ ಹಾಗೆ.

ಇನ್ನು, ಕ್ರಿಶ್ಚಿಯನ್ ಮುಸ್ಲಿಂ ಧರ್ಮದಾರಿ ಪಾತ್ರಗಳನ್ನ ಕಾಮಿಡಿ ಪೀಸುಗಳನ್ನಾಗಿಸುವ ಟ್ರೆಂಡ್ ಇತ್ತೀಚಿಗೆ ಬೆಳೆಯುತ್ತಿರುವುದು ಅಪಾಯಕಾರಿ ಸಂಗತಿ. ಈ ಸಿನಿಮಾದಲ್ಲಿ ಬೆಂಜಮಿನ್ ಪಾತ್ರಧಾರಿಯನ್ನು ಹಾಸ್ಯ ಮಾಡುವುದು ಕನಿಷ್ಠ ಎಂಬಂತೆ ಬಳಕೆಯಾದರೂ ಬಹುಸಂಖ್ಯಾತ ಧಾರ್ಮಿಕವಾದ ಯಜಮಾನ್ಯ ಸಾಧಿಸುತ್ತಿರುವ ಸಮಯದಲ್ಲಿ ಅದು ಕಾಣುವ ರೀತಿ ಸಮಸ್ಯಾತ್ಮಕವಾದದ್ದು.

ಯಜ್ಞಾಶೆಟ್ಟಿಯವರು ಒಬ್ಬ ಗರ್ಭಿಣಿ ಸ್ತ್ರೀ ಹೇಗೆ ನೆಡೆಯುತ್ತಾಳೆ, ಹೇಗೆ ನೋವನ್ನು ಅನುಭವಿಸುತ್ತಾಳೆ ಎನ್ನುವ ರೀತಿಗಳನ್ನು ಬಹಳ ಚೆನ್ನಾಗಿ ಅಭ್ಯಾಸ ಮಾಡಿದ್ದಾರೆ, ಡೈಲಾಗ್ ಹೇಳುವಾಗ ಒಂದಷ್ಟು ಹೆಚ್ಚಿನ ಶ್ರಮ ಹಾಕಿದ್ದರೆ ನಟನೆ ಇನ್ನೂ ಆಪ್ತವಾಗಿರುತ್ತಿತ್ತು. ಸಂಚಾರಿ ವಿಜಯ್, ಅವಿನಾಶ್, ಅಚ್ಚುತ್ , ಶ್ರುತಿ, ಇವರೆಲ್ಲರೂ ಕಡಿಮೆ ಸಮಯದಲ್ಲಿಯೇ ಬಂದರೂ , ಯಜ್ಞಾಶೆಟ್ಟಿಯವರನ್ನೂ ಮರೆಸುವಂತೆ ಕಾಣುತ್ತಾರೆ.
ಇದೆಲ್ಲದರ ಹೊರತಾಗಿ ಸಿನೆಮಾ ಕಡೆಗಾಣಿಸುವಂಥಹ ಪ್ರಯತ್ನವಾ?  ಖಂಡಿತಾ ಇಲ್ಲ….

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತದೆ. ಆದರೆ ವಿಷಯವನ್ನು ಕಟ್ಟುವಾಗ ಇನ್ನಷ್ಟು ಗಂಭೀರತೆ ಅವಶ್ಯಕವಾಗಿತ್ತು ಅನ್ನುವುದೂ ನಿಜ.

ಈ ವಿಷಯಾಧಾರಿತ ಸಿನೆಮಾಗಳು, ಸಾಮಾನ್ಯ ಕಮರ್ಷಿಯಲ್ ಸಿನೆಮಾಗಳಿಗಿಂತ ತುಸು ಹೆಚ್ಚಾಗಿಯೇ ಸಿನೆಮಾ ಗ್ರಾಮರ್ ಅನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗೆ ಪ್ರಯೋಗಿಸಿದ ಮತ್ತಷ್ಟು ಫೈನ್ ಟ್ಯೂನ್ ಚಿತ್ರಗಳು ಹೆಚ್ಚಾಗಿ ಬಂದರೆ, ನಾವುಗಳು (ಕನ್ನಡ ಸಿನೆಮಾದವರು) ಇನ್ನೂ ಹೆಚ್ಚಿಗೆ ಬೆಳೆಯಬಹುದು, ಸಿನೆಮಾ ಕ್ಷೇತ್ರವನ್ನ ಒಂದು ಚರ್ಚಾ ಮಾಧ್ಯಮವನ್ನಾಗಿ ಬಳಸಿಕೊಳ್ಳಬಹುದು.


ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...