Homeಕರ್ನಾಟಕತುಮಕೂರು ನಗರಪಾಲಿಕೆ-ಸ್ಮಾರ್ಟಸಿಟಿ ಕಾಮಗಾರಿಯಲ್ಲಿ ಕೋಟ್ಯಂತರ ರೂ ಅವ್ಯವಹಾರ: ಸದಸ್ಯ ಕುಮಾರ್ ಆರೋಪ

ತುಮಕೂರು ನಗರಪಾಲಿಕೆ-ಸ್ಮಾರ್ಟಸಿಟಿ ಕಾಮಗಾರಿಯಲ್ಲಿ ಕೋಟ್ಯಂತರ ರೂ ಅವ್ಯವಹಾರ: ಸದಸ್ಯ ಕುಮಾರ್ ಆರೋಪ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆ-ಸ್ಮಾರ್ಟ್ ಸಿಟಿ ಲಿಮಿಟೆಡ್ ಜಂಟಿಯಾಗಿ ನಡೆಸಿರುವ ಕಾಮಗಾರಿಗಳಲ್ಲಿ ಭಾರೀ ಪ್ರಮಾಣದಲ್ಲಿ ಅವ್ಯವಹಾರ ನಡೆದಿದ್ದು ಕೋಟ್ಯಂತರ ರೂಪಾಯಿಗಳನ್ನು ಕೊಳ್ಳೆಹೊಡೆಯಲಾಗಿದೆ ಎಂದು ಪಾಲಿಕೆ ಸದಸ್ಯ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಏಳು ವರ್ಷಗಳಲ್ಲಿ ಸುಮಾರು 49 ಕೋಟಿ ರೂಗಳಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆದಿದೆ ಎಂದಿದ್ದಾರೆ. ಕಾಮಗಾರಿ ಗುತ್ತಿಗೆ ಪಡೆದಿರುವ ವೈಬ್ರೈಟ್ ವೈಪ್ಲೆಟ್ ಟೆಕ್ನಾಲಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂತಹ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಿದೆ ಇದು ಒಪ್ಪಂದದ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ಪಾಲಿಕೆಯವರು ಹಣಕಾಸು ಅನುಮೋದನೆಗೆ ಯಾವುದೇ ಸಭೆ ಮಾಡಿಲ್ಲ ಎಂದು ಉತ್ತರ ನೀಡಿದ್ದಾರೆ. ಆದರೆ ಸಭೆ ನಡೆದಿದೆ. ಸಭೆಯಲ್ಲಿ 45 ಕೋಟಿ ರೂಪಾಯಿ ಹೆಚ್ಚುವರಿ ಅನುಮೋದನೆ ಪಡೆದಿರುವ ಬಗ್ಗೆ ಪ್ರಸ್ತಾಪವಾಗಿದೆ. ಇದೊಂದು ಹಗರಣ. ಇಷ್ಟೊಂದು ಪ್ರಮಾಣದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಪ್ರಗತಿ ವರದಿ ಪಡೆದುಕೊಂಡಿಲ್ಲ. ಇದು ಒಪ್ಪಂದದ ಸ್ಪಷ್ಟ ಉಲ್ಲಂಘನೆ ಮಾಡಿದಂತಾಗಿದೆ ಎಂದು ಆಪಾದಿಸಿದ್ದಾರೆ.

ಸರ್ಕಾರದ ಆದೇಶದ ಪ್ರಕಾರ 50 ಲಕ್ಷ ರೂಪಾಯಿಗೂ ಹೆಚ್ಚಿನ ಕಾಮಗಾರಿಗೆ ಅನುಮೋದನೆ ಪಡೆಯಬೇಕಾದರೆ ಟೆಂಡರ್ ಕರೆಯಬೇಕು. ಆದರೆ ಅಧಿಕಾರಿಗಳು ಈ ನಿಯಮಗಳನ್ನು ಅನುಸರಿಸಿಲ್ಲ. ಲೈಟ್ ಬಿಲ್ 85 ಲಕ್ಷ ರೂ ಬರುತ್ತದೆ. ಬೀದಿದೀಪ ನಿರ್ವಹಣೆಗೆ 24 ಲಕ್ಷ ರೂ ನಿಗದಿಪಡಿಸಿದೆ. ಒಟ್ಟಾರೆ 1.06 ಕೋಟಿ ರೂಪಾಯಿ ವೆಚ್ಚ ಬರುತ್ತದೆ. ಪಾಲಿಕೆ-ಸ್ಮಾರ್ಟ್ ಸಿಟಿ ಎಂಡಿ ಕೇಳಿದರೆ 1.44 ಕೋಟಿ ರೂಪಾಯಿ ವೆಚ್ಚವಾಗುತ್ತದೆ ಎಂದು ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.

ಮಾಹಿತಿ ಹಕ್ಕಿನಡಿ ಪಡೆದಿರುವ ದಾಖಲೆಗಳಲ್ಲಿ ತಿಂಗಳಿಗೆ 1.66 ಕೋಟಿ ವೆಚ್ಚವಾಗುತ್ತದೆ ಎಂದು ಮಾಹಿತಿ  ನೀಡಲಾಗಿದೆ. ಅಂದರೆ 60 ಲಕ್ಷ ರೂಪಾಯಿ ಹೆಚ್ಚುವರಿ ಲೆಕ್ಕ ತೋರಿಸಲಾಗಿದೆ. ಈ ಹಣದಲ್ಲಿ ಶೇಕಡ 50 ರಷ್ಟು ಉಳಿತಾಯವನ್ನು ತೋರಿಸಬೇಕು. ಅದನ್ನು ತೋರಿಸಿಲ್ಲ. ತಿಂಗಳಿಗೆ 60 ಲಕ್ಷ ಹೆಚ್ಚುವರಿಯಾದರೆ ವಾರ್ಷಿಕ 7 ಕೋಟಿ ರೂಪಾಯಿ ಆಗುತ್ತದೆ. 7 ವರ್ಷಕ್ಕೆ 49 ಕೋಟಿ ರೂ ಹೆಚ್ಚುವರಿ ಹಣ ಖರ್ಚು ಮಾಡಿದ್ದು ಇದೊಂದು ದೊಡ್ಡ ಹಗರಣವಾಗಿದೆ ಎಂದು ದೂರಿದ್ದಾರೆ.

ಸ್ಟ್ರೀಟ್ ಲೈಟ್ ಕಂಟ್ರೋಲ್ ಸಿಸ್ಟಂ ಮಾಡಿದೆ. ಇದು ತುಮಕೂರು ನಗರದಲ್ಲಿ ಅಳವಡಿಸಿದೆ. ಇದಕ್ಕೆ ಇಷ್ಟೊಂದು ವೆಚ್ಚ ಮಾಡಿ ಹಣ ಲೂಟಿ ಮಾಡಲಾಗಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿ: ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...