Homeಕರ್ನಾಟಕತುಮಕೂರು ನಗರಪಾಲಿಕೆ-ಸ್ಮಾರ್ಟಸಿಟಿ ಕಾಮಗಾರಿಯಲ್ಲಿ ಕೋಟ್ಯಂತರ ರೂ ಅವ್ಯವಹಾರ: ಸದಸ್ಯ ಕುಮಾರ್ ಆರೋಪ

ತುಮಕೂರು ನಗರಪಾಲಿಕೆ-ಸ್ಮಾರ್ಟಸಿಟಿ ಕಾಮಗಾರಿಯಲ್ಲಿ ಕೋಟ್ಯಂತರ ರೂ ಅವ್ಯವಹಾರ: ಸದಸ್ಯ ಕುಮಾರ್ ಆರೋಪ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆ-ಸ್ಮಾರ್ಟ್ ಸಿಟಿ ಲಿಮಿಟೆಡ್ ಜಂಟಿಯಾಗಿ ನಡೆಸಿರುವ ಕಾಮಗಾರಿಗಳಲ್ಲಿ ಭಾರೀ ಪ್ರಮಾಣದಲ್ಲಿ ಅವ್ಯವಹಾರ ನಡೆದಿದ್ದು ಕೋಟ್ಯಂತರ ರೂಪಾಯಿಗಳನ್ನು ಕೊಳ್ಳೆಹೊಡೆಯಲಾಗಿದೆ ಎಂದು ಪಾಲಿಕೆ ಸದಸ್ಯ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಏಳು ವರ್ಷಗಳಲ್ಲಿ ಸುಮಾರು 49 ಕೋಟಿ ರೂಗಳಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆದಿದೆ ಎಂದಿದ್ದಾರೆ. ಕಾಮಗಾರಿ ಗುತ್ತಿಗೆ ಪಡೆದಿರುವ ವೈಬ್ರೈಟ್ ವೈಪ್ಲೆಟ್ ಟೆಕ್ನಾಲಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂತಹ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಿದೆ ಇದು ಒಪ್ಪಂದದ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ಪಾಲಿಕೆಯವರು ಹಣಕಾಸು ಅನುಮೋದನೆಗೆ ಯಾವುದೇ ಸಭೆ ಮಾಡಿಲ್ಲ ಎಂದು ಉತ್ತರ ನೀಡಿದ್ದಾರೆ. ಆದರೆ ಸಭೆ ನಡೆದಿದೆ. ಸಭೆಯಲ್ಲಿ 45 ಕೋಟಿ ರೂಪಾಯಿ ಹೆಚ್ಚುವರಿ ಅನುಮೋದನೆ ಪಡೆದಿರುವ ಬಗ್ಗೆ ಪ್ರಸ್ತಾಪವಾಗಿದೆ. ಇದೊಂದು ಹಗರಣ. ಇಷ್ಟೊಂದು ಪ್ರಮಾಣದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಪ್ರಗತಿ ವರದಿ ಪಡೆದುಕೊಂಡಿಲ್ಲ. ಇದು ಒಪ್ಪಂದದ ಸ್ಪಷ್ಟ ಉಲ್ಲಂಘನೆ ಮಾಡಿದಂತಾಗಿದೆ ಎಂದು ಆಪಾದಿಸಿದ್ದಾರೆ.

ಸರ್ಕಾರದ ಆದೇಶದ ಪ್ರಕಾರ 50 ಲಕ್ಷ ರೂಪಾಯಿಗೂ ಹೆಚ್ಚಿನ ಕಾಮಗಾರಿಗೆ ಅನುಮೋದನೆ ಪಡೆಯಬೇಕಾದರೆ ಟೆಂಡರ್ ಕರೆಯಬೇಕು. ಆದರೆ ಅಧಿಕಾರಿಗಳು ಈ ನಿಯಮಗಳನ್ನು ಅನುಸರಿಸಿಲ್ಲ. ಲೈಟ್ ಬಿಲ್ 85 ಲಕ್ಷ ರೂ ಬರುತ್ತದೆ. ಬೀದಿದೀಪ ನಿರ್ವಹಣೆಗೆ 24 ಲಕ್ಷ ರೂ ನಿಗದಿಪಡಿಸಿದೆ. ಒಟ್ಟಾರೆ 1.06 ಕೋಟಿ ರೂಪಾಯಿ ವೆಚ್ಚ ಬರುತ್ತದೆ. ಪಾಲಿಕೆ-ಸ್ಮಾರ್ಟ್ ಸಿಟಿ ಎಂಡಿ ಕೇಳಿದರೆ 1.44 ಕೋಟಿ ರೂಪಾಯಿ ವೆಚ್ಚವಾಗುತ್ತದೆ ಎಂದು ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.

ಮಾಹಿತಿ ಹಕ್ಕಿನಡಿ ಪಡೆದಿರುವ ದಾಖಲೆಗಳಲ್ಲಿ ತಿಂಗಳಿಗೆ 1.66 ಕೋಟಿ ವೆಚ್ಚವಾಗುತ್ತದೆ ಎಂದು ಮಾಹಿತಿ  ನೀಡಲಾಗಿದೆ. ಅಂದರೆ 60 ಲಕ್ಷ ರೂಪಾಯಿ ಹೆಚ್ಚುವರಿ ಲೆಕ್ಕ ತೋರಿಸಲಾಗಿದೆ. ಈ ಹಣದಲ್ಲಿ ಶೇಕಡ 50 ರಷ್ಟು ಉಳಿತಾಯವನ್ನು ತೋರಿಸಬೇಕು. ಅದನ್ನು ತೋರಿಸಿಲ್ಲ. ತಿಂಗಳಿಗೆ 60 ಲಕ್ಷ ಹೆಚ್ಚುವರಿಯಾದರೆ ವಾರ್ಷಿಕ 7 ಕೋಟಿ ರೂಪಾಯಿ ಆಗುತ್ತದೆ. 7 ವರ್ಷಕ್ಕೆ 49 ಕೋಟಿ ರೂ ಹೆಚ್ಚುವರಿ ಹಣ ಖರ್ಚು ಮಾಡಿದ್ದು ಇದೊಂದು ದೊಡ್ಡ ಹಗರಣವಾಗಿದೆ ಎಂದು ದೂರಿದ್ದಾರೆ.

ಸ್ಟ್ರೀಟ್ ಲೈಟ್ ಕಂಟ್ರೋಲ್ ಸಿಸ್ಟಂ ಮಾಡಿದೆ. ಇದು ತುಮಕೂರು ನಗರದಲ್ಲಿ ಅಳವಡಿಸಿದೆ. ಇದಕ್ಕೆ ಇಷ್ಟೊಂದು ವೆಚ್ಚ ಮಾಡಿ ಹಣ ಲೂಟಿ ಮಾಡಲಾಗಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿ: ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...