Homeಕರ್ನಾಟಕತುಮಕೂರು ನಗರಪಾಲಿಕೆ-ಸ್ಮಾರ್ಟಸಿಟಿ ಕಾಮಗಾರಿಯಲ್ಲಿ ಕೋಟ್ಯಂತರ ರೂ ಅವ್ಯವಹಾರ: ಸದಸ್ಯ ಕುಮಾರ್ ಆರೋಪ

ತುಮಕೂರು ನಗರಪಾಲಿಕೆ-ಸ್ಮಾರ್ಟಸಿಟಿ ಕಾಮಗಾರಿಯಲ್ಲಿ ಕೋಟ್ಯಂತರ ರೂ ಅವ್ಯವಹಾರ: ಸದಸ್ಯ ಕುಮಾರ್ ಆರೋಪ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆ-ಸ್ಮಾರ್ಟ್ ಸಿಟಿ ಲಿಮಿಟೆಡ್ ಜಂಟಿಯಾಗಿ ನಡೆಸಿರುವ ಕಾಮಗಾರಿಗಳಲ್ಲಿ ಭಾರೀ ಪ್ರಮಾಣದಲ್ಲಿ ಅವ್ಯವಹಾರ ನಡೆದಿದ್ದು ಕೋಟ್ಯಂತರ ರೂಪಾಯಿಗಳನ್ನು ಕೊಳ್ಳೆಹೊಡೆಯಲಾಗಿದೆ ಎಂದು ಪಾಲಿಕೆ ಸದಸ್ಯ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಏಳು ವರ್ಷಗಳಲ್ಲಿ ಸುಮಾರು 49 ಕೋಟಿ ರೂಗಳಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆದಿದೆ ಎಂದಿದ್ದಾರೆ. ಕಾಮಗಾರಿ ಗುತ್ತಿಗೆ ಪಡೆದಿರುವ ವೈಬ್ರೈಟ್ ವೈಪ್ಲೆಟ್ ಟೆಕ್ನಾಲಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂತಹ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಿದೆ ಇದು ಒಪ್ಪಂದದ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ಪಾಲಿಕೆಯವರು ಹಣಕಾಸು ಅನುಮೋದನೆಗೆ ಯಾವುದೇ ಸಭೆ ಮಾಡಿಲ್ಲ ಎಂದು ಉತ್ತರ ನೀಡಿದ್ದಾರೆ. ಆದರೆ ಸಭೆ ನಡೆದಿದೆ. ಸಭೆಯಲ್ಲಿ 45 ಕೋಟಿ ರೂಪಾಯಿ ಹೆಚ್ಚುವರಿ ಅನುಮೋದನೆ ಪಡೆದಿರುವ ಬಗ್ಗೆ ಪ್ರಸ್ತಾಪವಾಗಿದೆ. ಇದೊಂದು ಹಗರಣ. ಇಷ್ಟೊಂದು ಪ್ರಮಾಣದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಪ್ರಗತಿ ವರದಿ ಪಡೆದುಕೊಂಡಿಲ್ಲ. ಇದು ಒಪ್ಪಂದದ ಸ್ಪಷ್ಟ ಉಲ್ಲಂಘನೆ ಮಾಡಿದಂತಾಗಿದೆ ಎಂದು ಆಪಾದಿಸಿದ್ದಾರೆ.

ಸರ್ಕಾರದ ಆದೇಶದ ಪ್ರಕಾರ 50 ಲಕ್ಷ ರೂಪಾಯಿಗೂ ಹೆಚ್ಚಿನ ಕಾಮಗಾರಿಗೆ ಅನುಮೋದನೆ ಪಡೆಯಬೇಕಾದರೆ ಟೆಂಡರ್ ಕರೆಯಬೇಕು. ಆದರೆ ಅಧಿಕಾರಿಗಳು ಈ ನಿಯಮಗಳನ್ನು ಅನುಸರಿಸಿಲ್ಲ. ಲೈಟ್ ಬಿಲ್ 85 ಲಕ್ಷ ರೂ ಬರುತ್ತದೆ. ಬೀದಿದೀಪ ನಿರ್ವಹಣೆಗೆ 24 ಲಕ್ಷ ರೂ ನಿಗದಿಪಡಿಸಿದೆ. ಒಟ್ಟಾರೆ 1.06 ಕೋಟಿ ರೂಪಾಯಿ ವೆಚ್ಚ ಬರುತ್ತದೆ. ಪಾಲಿಕೆ-ಸ್ಮಾರ್ಟ್ ಸಿಟಿ ಎಂಡಿ ಕೇಳಿದರೆ 1.44 ಕೋಟಿ ರೂಪಾಯಿ ವೆಚ್ಚವಾಗುತ್ತದೆ ಎಂದು ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.

ಮಾಹಿತಿ ಹಕ್ಕಿನಡಿ ಪಡೆದಿರುವ ದಾಖಲೆಗಳಲ್ಲಿ ತಿಂಗಳಿಗೆ 1.66 ಕೋಟಿ ವೆಚ್ಚವಾಗುತ್ತದೆ ಎಂದು ಮಾಹಿತಿ  ನೀಡಲಾಗಿದೆ. ಅಂದರೆ 60 ಲಕ್ಷ ರೂಪಾಯಿ ಹೆಚ್ಚುವರಿ ಲೆಕ್ಕ ತೋರಿಸಲಾಗಿದೆ. ಈ ಹಣದಲ್ಲಿ ಶೇಕಡ 50 ರಷ್ಟು ಉಳಿತಾಯವನ್ನು ತೋರಿಸಬೇಕು. ಅದನ್ನು ತೋರಿಸಿಲ್ಲ. ತಿಂಗಳಿಗೆ 60 ಲಕ್ಷ ಹೆಚ್ಚುವರಿಯಾದರೆ ವಾರ್ಷಿಕ 7 ಕೋಟಿ ರೂಪಾಯಿ ಆಗುತ್ತದೆ. 7 ವರ್ಷಕ್ಕೆ 49 ಕೋಟಿ ರೂ ಹೆಚ್ಚುವರಿ ಹಣ ಖರ್ಚು ಮಾಡಿದ್ದು ಇದೊಂದು ದೊಡ್ಡ ಹಗರಣವಾಗಿದೆ ಎಂದು ದೂರಿದ್ದಾರೆ.

ಸ್ಟ್ರೀಟ್ ಲೈಟ್ ಕಂಟ್ರೋಲ್ ಸಿಸ್ಟಂ ಮಾಡಿದೆ. ಇದು ತುಮಕೂರು ನಗರದಲ್ಲಿ ಅಳವಡಿಸಿದೆ. ಇದಕ್ಕೆ ಇಷ್ಟೊಂದು ವೆಚ್ಚ ಮಾಡಿ ಹಣ ಲೂಟಿ ಮಾಡಲಾಗಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿ: ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...