Homeಮುಖಪುಟತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

ತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

2016ರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಒಂದೂ ಸ್ಥಾನ ಗೆಲ್ಲಲ್ಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಖಾತೆ ತೆರೆಯುವ ಉತ್ಸಾಹದಲ್ಲಿದೆ.

- Advertisement -
- Advertisement -

ಮುಂದಿನ ವರ್ಷ‌ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮಿಳುನಾಡಿಗೆ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಹಲವು ಅಭಿವೃದಿ ಕಾರ್ಯಗಳಿಗೆ ಚಾಲನೆ ನೀಡುವುದರ ಜೊತೆಗೆ ಪಕ್ಷ ಸಂಘಟನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಅಮಿತ್ ಶಾ ಭೇಟಿ ರಾಜ್ಯ ರಾಜಕಾರಣದಲ್ಲಿ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಲಿದೆ ಎಂದು ಅಂದಾಜಿಸಲಾಗಿದೆ. ತಮಿಳುನಾಡು ಡಿಎಂಕೆ ಪಕ್ಷದಿಂದ ಉಚ್ಚಾಟನೆಯಾಗಿದ್ದ ಮಾಜಿ ಸಂಸದ ಕೆ.ಪಿ. ರಾಮಲಿಂಗಂ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಇನ್ನೂ ಹೊಸ ಪಕ್ಷ ಸ್ಥಾಪನೆ ಮಾಡಿ 2021ರಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಯಿರುವ ಕರುಣಾನಿಧಿ ಅವರ ಹಿರಿಯ ಪುತ್ರ ಎಂ.ಕೆ.ಅಳಗಿರಿ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಹೊಸ ಪಕ್ಷ ಸ್ಥಾಪನೆ ಮಾಡುವರೋ ಅಥವಾ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸಾಥ್ ನೀಡುವರೊ ಎಂಬುದು ಭೇಟಿಯ ನಂತರ ಬಳಕಿಗೆ ಬರಲಿದೆ.

ಇದನ್ನೂ ಓದಿ: ಅಮಿತ್ ಶಾ ತಮಿಳುನಾಡು ಭೇಟಿ: ಟ್ವಿಟ್ಟರ್‌‌ನಲ್ಲಿ #GoBackAmitShah ಟ್ರೆಂಡ್!

 

ಸ್ಟಾಲಿನ್ ಸಹೋದರ ಅಳಗಿರಿ ಹೊಸ ಪಕ್ಷ ಸ್ಥಾಪಿಸಿದರೆ ಡಿಎಂಕೆ ಮತಗಳನ್ನು ಅಳಗಿರಿ ಛಿದ್ರಗೊಳಿಸಲಿದ್ದಾರೆ. ಇದರಿಂದ ಮತಗಳು ಒಡೆದು ಬಿಜೆಪಿಗೆ ಲಾಭವಾಗುತ್ತದೆ. ಅವರು ಬಿಜೆಪಿ ಜೊತೆ ಕೈ ಜೊಡಿಸಿದರೂ ಬಿಜೆಪಿಗೆ ಲಾಭ. ಈ ಹಿನ್ನೆಲೆ  ಅಳಗಿರಿ-ಅಮಿತ್ ಶಾ ಭೇಟಿ ಕುತೂಹಲ ಮೂಡಿಸಿದೆ.

ಇತ್ತ ಬಿಜೆಪಿಗೆ ಸೇರ್ಪಡೆಯಾಗಿರುವ ಡಿಎಂಕೆ ಪಕ್ಷದಿಂದ ಉಚ್ಚಾಟನೆಯಾಗಿದ್ದ ಮಾಜಿ ಸಂಸದ ಕೆ.ಪಿ. ರಾಮಲಿಂಗಂ, ಡಿಎಂಕೆ ನಾಯಕ ಎಂ.ಕೆ. ಅಳಗಿರಿ ಅವರನ್ನೂ ಬಿಜೆಪಿಗೆ ಕರೆತರುವುದಾಗಿ ಹೇಳಿಕೊಂಡಿದ್ದಾರೆ. ’ನಾನು ಅವರಿಗೆ ಬಿಜೆಪಿ ಸೇರಲು ಮನವೊಲಿಸಲು ಪ್ರಯತ್ನಿಸುತ್ತೇನೆ. ಆದರೆ ನಿರ್ಧಾರ ಮಾತ್ರ ಅವರಿಗೆ ಬಿಟ್ಟಿದೆ’ ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆ ಹಿನ್ನೆಲೆ ಈ ಬಾರಿ ಕಳೆದ ಹಲವು ತಿಂಗಳುಗಳಿಂದಲೇ ಬಿಜೆಪಿ ಕಾರ್ಯಪ್ರವೃತ್ತವಾಗಿದೆ. 2016ರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಒಂದೂ ಸ್ಥಾನ ಗೆಲ್ಲಲ್ಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಟಿ, ರಾಜಕಾರಣಿ ಖುಷ್ಬೂ ತಮಿಳುನಾಡು ರಾಜಕಿಯದಲ್ಲಿ ಬಿಜೆಪಿಯ ಹೊಸ ಶಕೆ ಆರಂಭಕ್ಕೆ ಕಾರಣವಾಗಲಿದ್ದಾರೆ ಎಂಬ ವಿಶ್ವಾಸದಲ್ಲಿದೆ.

ಇತ್ತ ಧರ್ಮದ ಹೆಸರಲ್ಲಿ ಜನರನ್ನು ಸೆಳೆಯಲು ಬಿಜೆಪಿ ವೆಟ್ರಿವೇಲ್ ಯಾತ್ರೆಯನ್ನು ಸಹ ಆರಂಭಿಸಿದೆ. ಕೊರೊನಾ ಕಾರಣ ನೀಡಿ ಸರ್ಕಾರ ಅನುಮತಿ ನೀಡದೇ ಇದ್ದರೂ ಸಹ ಯಾತ್ರೆ ಆರಂಭಿಸಿ ಸರ್ಕಾರದ ವಿರುದ್ಧ ಟೊಂಕ ಕಟ್ಟಿ ನಿಂತಿದೆ.

ಒಟ್ಟಾರೆ ತಮಿಳುನಾಡಿನಲ್ಲಿ ಈ ಬಾರಿ ಹೇಗಾದರೂ ಅಧಿಕಾರದ ಸಮೀಪಕ್ಕಾದರೂ ಹೋಗಲೇ ಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ತನ್ನ ಕಡೆಯಿಂದಾಗುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಡಿಎಂಕೆ ಒಳಗಿನ ಒಳ ಮುನಿಸನ್ನು ಲಾಭ ಮಾಡಿಕೊಳ್ಳುವ ಯೋಜನೆಯಲ್ಲಿದೆ.

ಪಶ್ಚಿಮ ಬಂಗಾಳದಲ್ಲೂ ತೃಣಮೂಲ ಕಾಂಗ್ರೆಸ್ ಅನ್ನು ಕೆಳಗಿಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಅಲ್ಲಿ ಸತತ ರ್‍ಯಾಲಿಗಳನ್ನು ಆಯೋಜಿಸುತ್ತಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ತಿಂಗಳಲ್ಲಿ 2 ಬಾರಿ ಬಂಗಾಳ ಭೇಟಿಗೆ ಯೋಜನೆ ರೂಪಿಸಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...