Homeಕರ್ನಾಟಕಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ, ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ ಎಂದು ಹೇಳಿದ್ದಾರೆ

- Advertisement -
- Advertisement -

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವ ನಿಲುವಾಗಿದ್ದು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, “ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ ಎಂದು ಹೇಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾ ರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ.

ಆರ್‌ಎಸ್‌ಎಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್‌ಎಸ್‌ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡುತ್ತೇನೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು.

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು.

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964 ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ.

 

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿಯು ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ.

ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ.

ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...