Homeಕರ್ನಾಟಕಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ, ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ ಎಂದು ಹೇಳಿದ್ದಾರೆ

- Advertisement -
- Advertisement -

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವ ನಿಲುವಾಗಿದ್ದು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, “ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ ಎಂದು ಹೇಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾ ರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ.

ಆರ್‌ಎಸ್‌ಎಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್‌ಎಸ್‌ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡುತ್ತೇನೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು.

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು.

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964 ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ.

 

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿಯು ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ.

ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ.

ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...