Homeಚಳವಳಿಸರ್ಕಾರಕ್ಕೆ 15 ದಿನ ಗಡುವು ಕೊಟ್ಟು ’ರೈಲ್ ರೋಕೋ’ ವಾಪಾಸ್ ಪಡೆದ ಪಂಜಾಬ್ ರೈತ ಸಂಘಟನೆಗಳು!

ಸರ್ಕಾರಕ್ಕೆ 15 ದಿನ ಗಡುವು ಕೊಟ್ಟು ’ರೈಲ್ ರೋಕೋ’ ವಾಪಾಸ್ ಪಡೆದ ಪಂಜಾಬ್ ರೈತ ಸಂಘಟನೆಗಳು!

ಮುಂದಿನ 15 ದಿನಗಳಲ್ಲಿ ರೈತರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ವಿಫಲವಾದರೆ ಮತ್ತೆ ಪ್ರತಿಭಟನೆ ಪುನರಾರಂಭಿಸುವ ಬಗ್ಗೆ ಕಿಸಾನ್ ಯೂನಿಯನ್ಸ್ ಎಚ್ಚರಿಸಿದೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ ಪಂಜಾಬ್‌ನಲ್ಲಿ ತೀವ್ರತರಹದ ಪ್ರತಿಭಟನೆ ನಡೆಯುತ್ತಿದ್ದು, ರೈತ ಸಂಘಗಳ ನಿರಂತರ ’ರೈಲ್ ರೋಕೋ’ ಚಳುವಳಿ ಪಂಜಾಬ್ ಆರ್ಥಿಕತೆಗೆ ಪೆಟ್ಟು ನೀಡಿತ್ತು. ಇಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರೈತ ಸಂಘಟನೆಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ನವೆಂಬರ್‌ 23 ರಿಂದ ರೈಲು ಸಂಚಾರ ಆರಂಭವಾಗಲಿದೆ.

ಕಿಸಾನ್ ಯೂನಿಯನ್ಸ್ ಜೊತೆ ನಡೆದ ಸಭೆಯಲ್ಲಿ ಸರ್ಕಾರದ ಮನವಿಗೆ ಒಪ್ಪಿಗೆ ನೀಡಿದ ಸಂಘಟನೆ, ನವೆಂಬರ್ 23 ಸೋಮವಾರದಿಂದ ರೈಲ್ವೆ ದಿಗ್ಬಂಧನವನ್ನು ಸಂಪೂರ್ಣವಾಗಿ ತೆಗೆದುಹಾಕುವ ಘೋಷಣೆ ಮಾಡಿದೆ. ರಾಜ್ಯದಲ್ಲಿ ಎರಡು ತಿಂಗಳ ನಂತರ ಸರಕು ಮತ್ತು ಪ್ರಯಾಣಿಕ ರೈಲು ಸೇವೆಗಳೆರಡೂ ಆರಂಭವಾಗಲಿವೆ.

ಆದರೆ, ಕೃಷಿ ಸಂಘಟನೆ ರಾಜ್ಯ ಸರ್ಕಾರಕ್ಕೆ ನೀಡಿರುವುದು ಕೇವಲ 15 ದಿನಗಳು ಮಾತ್ರ. ಮುಂದಿನ 15 ದಿನಗಳಲ್ಲಿ ರೈತರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ವಿಫಲವಾದರೆ ಮತ್ತೆ ಪ್ರತಿಭಟನೆ ಪುನರಾರಂಭಿಸುವ ಬಗ್ಗೆ ಕಿಸಾನ್ ಯೂನಿಯನ್ಸ್ ಅಧ್ಯಕ್ಷ ರಾಜೇವಾಲ್ ಎಚ್ಚರಿಸಿದ್ದಾರೆ.

ಈ ವಿಷಯವನ್ನು ರಾಜಕೀಯಗೊಳಿಸುವ ಬದಲು ಕೇಂದ್ರ ಕೃಷಿ ಮಸೂದೆಗಳ ವಿರುದ್ಧದ ಹೋರಾಟದಲ್ಲಿ ರೈತ ಸಂಘಟನೆಗಳನ್ನು ಬೆಂಬಲಿಸಲು ಪಂಜಾಬ್‌ನ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡಿರಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ರೈಲು ಸಂಚಾರಕ್ಕೆ ಅನುಮತಿ ನೀಡಿ, ರೈಲ್ ರೋಕೋ ಪ್ರತಿಭಟನೆ ವಾಪಸ್ ಪಡೆದ ರೈತರ ನಿರ್ಧಾರವನ್ನು ಸಿಎಂ ಅಮರಿಂದರ್ ಸಿಂಗ್ ಅವರು ಟ್ವೀಟ್‌ನಲ್ಲಿ ಸ್ವಾಗತಿಸಿದ್ದಾರೆ.

ಮನವಿಯನ್ನು ಅಂಗೀಕರಿಸಿದ್ದಕ್ಕಾಗಿ ಕಿಸಾನ್ ಒಕ್ಕೂಟಗಳಿಗೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ, ರೈತ ಮುಖಂಡರಿಗೆ ಶೀಘ್ರದಲ್ಲೇ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವುದಾಗಿ ಭರವಸೆ ನೀಡಿದರು.

“ನಮ್ಮ ದೃಷ್ಟಿಕೋನ ಮತ್ತು ಕೇಂದ್ರದ ಕೃಷಿ ಕಾನೂನುಗಳು ಪಂಜಾಬ್ ಅನ್ನು ಹೇಗೆ ಹಾಳುಮಾಡುತ್ತವೆ ಎಂಬುದನ್ನು ಅರ್ಥಮಾಡಿಸಲು ನಾವು ಒಟ್ಟಾಗಿ ಕೇಂದ್ರದ ಮೇಲೆ ಒತ್ತಡ ಹೇರೋಣ” ಎಂದು ಕ್ಯಾಪ್ಟನ್ ಅಮರಿಮದರ್ ಸಿಂಗ್ ಹೇಳಿದ್ದಾರೆ. “ರೈತ ಹೋರಾಟದಲ್ಲಿ ರೈತರೊಂದಿಗೆ ನಾವಿದ್ದೇವೆ, ನಮ್ಮ ದೇಹದ ರಕ್ತನಾಳಗಳಲ್ಲಿ ಹರಿಯುತ್ತಿರುವುದು ರೈತರ ರಕ್ತ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕಬ್ಬಿನ ಬೆಲೆ ಏರಿಕೆ ಮತ್ತು ಬಾಕಿ ತೆರವು, ಕೃಷಿ ತ್ಯಾಜ್ಯ ಸುಡುವ ಪ್ರಕರಣಗಳಲ್ಲಿ ರೈತರ ಮೇಲೆ ದಾಖಲಾದ ಎಫ್‌ಐಆರ್‌ಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಇತರ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಕ್ಯಾಪ್ಟನ್ ಅಮರಿಂದರ್ ರೈತ ಪ್ರತಿನಿಧಿಗಳಿಗೆ ಭರವಸೆ ನೀಡಿದರು. ಮುಂದಿನ ಒಂದು ವಾರದೊಳಗೆ ಈ ವಿಷಯಗಳ ಕುರಿತು ಅವರೊಂದಿಗೆ ಮಾತುಕತೆ ನಡೆಸಲಿದ್ದು, ಈ ಬಗ್ಗೆ ಚರ್ಚಿಸಲು ಅಧಿಕಾರಿಗಳ ಸಮಿತಿಯನ್ನೂ ರಚಿಸುವುದಾಗಿ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ನಿರಾಕರಣೆ: ರಾಷ್ಟ್ರಪತಿಗಳ ವಿರುದ್ಧ ಪ್ರತಿಭಟನೆಗೆ ಮುಂದಾದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...