Homeಕರ್ನಾಟಕಗ್ರಾಮೀಣ ಮೀಸಲಾತಿಯ ಮೋಸಗಳು!!

ಗ್ರಾಮೀಣ ಮೀಸಲಾತಿಯ ಮೋಸಗಳು!!

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ.

- Advertisement -
- Advertisement -

ಕನ್ನಡದಲ್ಲಿ ಕಲಿತರೆ ಭವಿಷ್ಯವಿದೆ ಎಂಬ ಭರವಸೆಯೇ ಮೂಡದ ಈ ಬರಡು ಸಂದರ್ಭದಲ್ಲಿ ಸರ್ಕಾರ ಒದಗಿಸುತ್ತಿರುವ ಗ್ರಾಮೀಣ ಮೀಸಲಾತಿಯ ಹಿಂದೆ ದೊಡ್ಡ ಸಾಮಾಜಿಕ ಅನ್ಯಾಯ ಅಡಗಿದೆ. ಗ್ರಾಮೀಣ ಮೀಸಲಾತಿಯ ಪಿತಾಮಹರ ದೋಷದಿಂದಾಗಿ ಅರ್ಹ-ಅಬಲ ಗ್ರಾಮೀಣ ವಿದ್ಯಾರ್ಥಿಗಳ ಅವಕಾಶವನ್ನು ಬಲಾಢ್ಯ ನಗರವಾಸಿಗಳು ರಾಜಾರೋಷವಾಗಿ ಲಪಟಾಯಿಸುತ್ತಿದ್ದಾರೆ. ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಖಾಸಗಿ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿಗಳೊಂದಿಗಿನ ಸಂಘರ್ಷದಲ್ಲಿ ಸೋಲುತ್ತಿದ್ದಾರೆ.

ರಾಜ್ಯ ಸರ್ಕಾರ ಶೇಕಡ 5ರಷ್ಟು ಕನ್ನಡ ಮಾಧ್ಯಮ ಹಾಗೂ ಶೇಕಡ 15ರಷ್ಟು ಗ್ರಾಮೀಣ ಸಮಾನಾಂತರ ಮೀಸಲಾತಿಯ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಯಲ್ಲಿ ನಿಯಮ ಮಾಡಿ ಅದ್ಯಾವುದೋ ಕಾಲವಾಗಿದೆ. ಸದರಿ ಮೀಸಲಾತಿ ಮಾನದಂಡಗಳು ಮೀಸಲಾತಿ ಪರಿಕಲ್ಪನೆ ಹಾಗೂ ನೈಜ ಉದ್ದೇಶಕ್ಕೆ ವ್ಯತಿರಿಕ್ತವಾಗಿದೆ. ವಿರೋಧಾಭಾಸಗಳ ಈ ಮೀಸಲು ನಿಯಮ ಅರ್ಹರಿಗೆ-ದುರ್ಬಲರಿಗೆ ಅವಕಾಶದಿಂದ ವಂಚಿಸುತ್ತಿದೆ. ದುರಂತವೆಂದರೆ, ಬಲಾಢ್ಯ ಅನರ್ಹರು ಈ ಹುಚ್ಚು ನೀತಿಯ ದೌರ್ಬಲ್ಯ ಬಲಸಿಕೊಂಡು ಲಾಭ ಹೊಡೆಯುತ್ತಿದ್ದಾರೆ. ಸಮಾನತೆಯ ಆಶಯಕ್ಕೆ ಕನ್ನಡ ಮಾಧ್ಯಮ-ಗ್ರಾಮೀಣ ಮೀಸಲಾತಿ ಪದ್ಧತಿ ಆಘಾತಕಾರಿಯಾಗಿದೆ!!

ಈ ಮೀಸಲು ನಿಯಮಾವಳಿಯಲ್ಲಿ ಅಖಂಡ ಹತ್ತು ವರ್ಷ ಶಾಲೆಯಲ್ಲಿ ಕಲಿತವರಿಗಷ್ಟೇ ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಮೀಸಲಾತಿಯೆಂಬ ಷರತ್ತು ಹಾಕಲಾಗಿದೆ. ಇದು ಅವಾಸ್ತವಿಕವಷ್ಟೇ ಅಲ್ಲ ಅನ್ಯಾಯ ಕೂಡ. ಸರ್ಕಾರದ ನೀತಿ-ನಿಯಮ ಒಂದಕ್ಕೊಂದು ಪೂರಕವಾಗಿಲ್ಲ. ನಾನಾ ಕಾರಣಕ್ಕೆ ಶಾಲೆ ಸೇರಲಾಗದವರನ್ನು ಮತ್ತು ಶಾಲೆ ಬಿಟ್ಟವರನ್ನು ವಿದ್ಯಾಭ್ಯಾಸದೆಡೆ ಆಕರ್ಷಿಸಲಾಗುತ್ತಿದೆ. ಸರ್ಕಾರ ಅನೇಕ ರಿಯಾಯಿತಿ ಕೊಟ್ಟು ಶಿಕ್ಷಣದ ಅವಕಾಶ ಕಲ್ಪಿಸುತ್ತಿದೆ. ಶಿಕ್ಷಾಣಾರ್ಥಿಗಳ ಸಾಮರ್ಥ್ಯಕ್ಕೆ ತಕ್ಕಂತೆ ಅವರ ವಯಸ್ಸು ಪರಿಗಣಿಸಿ ಮೇಲ್ತರಗತಿಗಳಿಗೆ ಪ್ರವೇಶವೂ ಕೊಡುತ್ತಿದೆ. ದುರಂತವೆಂದರೆ, ಇಂಥ ಅಭ್ಯರ್ಥಿಗಳಿಗೆ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ದಕ್ಕುತ್ತಿಲ್ಲ! ಬಾಹ್ಯವಾಗಿ ಎಸ್‌ಎಸ್‌ಎಲ್‌ಸಿ ಮುಗಿಸಿದವರಿಗೂ ಈ ಮೀಸಲಾತಿಯಿಂದ ಲಾಭವೇನಿಲ್ಲ.

ಇಲ್ಲಿ ಘನಘೋರ ಎಡವಟ್ಟೊಂದಿದೆ ಹತ್ತು ವರ್ಷದ ಕಲಿಕಾ ಸರಣಿಯಲ್ಲಿ ಒಂದೇ ಒಂದು ವರ್ಷವೇನಾದರೂ ಪಟ್ಟಣ ಪ್ರದೇಶದಲ್ಲಿ ಕಲಿತರೆ ಗಂಡಾಂತರ ಖಂಡಿತ. ಈ ಗ್ರಾಮೀಣ ಅಭ್ಯರ್ಥಿಗಳೆಲ್ಲ ಸಾಮಾಜಿಕ ನ್ಯಾಯ ತತ್ವದಂತೆ ಮೀಸಲಾತಿ ಪರಿಕಲ್ಪನೆಯ ಸೌಲಭ್ಯಕ್ಕೆ ಅರ್ಹರು.

ಈ ಗ್ರಾಮೀಣ ಮೀಸಲಾತಿಗೆ ಹಳ್ಳಿಗಾಡಿನ ಹಿನ್ನಲೆ, ಸಂಸ್ಕೃತಿ, ಸಾಮಾಜಿಕ-ಅರ್ಥಿಕ ಸ್ಥಿತಿ-ಗತಿ ಮಾನದಂಡವಾಗಬೇಕಿತ್ತು. ಆದರೆ ಅಂದಿನಿಂದ ಆಳುವವರು ಮತ್ತವರ ಸಲಹೆಗಾರ ಪಂಡಿತ್ತೋತ್ತಮರು ಮೀಸಲು ನೀತಿ ನಿರೂಪಿಸುವಾಗ ಸರಳ, ಸಮಾಜಿಕ ನ್ಯಾಯ ತತ್ವವನ್ನೇ ಪಾಲಿಸಿಲ್ಲ. ವಿಚಿತ್ರವೆಂದರೆ, ಅಭ್ಯರ್ಥಿ ಕಲಿತ ಶಾಲಾ ಕಟ್ಟಡದ “ಭೌಗೋಳಿಕ ಅಸ್ತಿತ್ವ” ಮೀಸಲಾತಿ ಹಣೆಬರಹ ನಿರ್ಧರಿಸುತ್ತಿದೆ. ಮೀಸಲಾತಿ ಬಯಸುವವರ ಶಾಲೆ ಭೌಗೋಳಿಕವಾಗಿ ಹಳ್ಳಿಯಲ್ಲಿದೆಯೋ ಅಥವಾ ಪಟ್ಟಣದಲ್ಲಿದೆಯೆಂಬ ಆಧಾರದಲ್ಲಿ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಅಭ್ಯರ್ಥಿ ಬಾಳಿ-ಬದುಕಿದ ಪ್ರದೇಶಕ್ಕಿಂತಲೂ ಶಾಲೆಯ ಸ್ಥಾವರ ಸ್ಥಿತಿಗೆ ಪ್ರಾಧಾನ್ಯತೆ ಕೊಡಲಾಗಿದೆ.

ಇಂತಹ ಮೀಸಲಾತಿ ನಿರ್ಧರಿಸುವಿಕೆ ಗ್ರಾಮೀಣ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ. ಶಾಲೆ-ಹೈಸ್ಕೂಲು ಇಲ್ಲದ ಕುಗ್ರಾಮಗಳ ಮಕ್ಕಳು ಪಟ್ಟಣದ ಹಾಸ್ಟೆಲುಗಳಲ್ಲಿ ಉಳಿದು ಪಟ್ಟಣದ ಶಾಲೆಯಲ್ಲಿ ಕಲಿತರೂ ಸಾಕು ಅವರಿಗೆಲ್ಲ ಮೀಸಲಾತಿ ಸವಲತ್ತು ಸಿಗಲಾರದು. ಆಧುನಿಕ ಸೌಕರ್ಯ, ಸಕಲ ಸೌಲಭ್ಯವಿರುವ ಖಾಸಗಿ ಶಾಲೆ ಸರ್ಕಾರಿ ದಾಖಲೆ ಪ್ರಕಾರ ಗ್ರಾಮ ಪಂಚಾಯತ್ ಪರಿಧಿಯಲ್ಲಿ ಬಂದರೆ ಅಲ್ಲಿ ಪಟ್ಟಣ ಪ್ರದೇಶದ ನಗರವಾಸಿಯೂ ತೀರಾ ಮುಂದುವರಿದ ಕುಟುಂಬದ ಅಭ್ಯರ್ಥಿ ಸಲೀಸಾಗಿ ಗ್ರಾಮೀಣ ಮೀಸಲಾತಿ ಸಿಂಧುತ್ವ ಪಡೆದುಕೊಳ್ಳುತ್ತಾನೆ. ರಾಜ್ಯದ ಹಲವು ಕಡೆಯಲ್ಲಿ ಇಂಥ ದೋಖಾ ಗ್ರಾಮೀಣ ಶಾಲೆಗಳ ಹಾವಳಿ ಜೋರಾಗಿದೆ.

ಸರ್ಕಾರದ ಯಾವ್ಯಾವುದೋ ನೀತಿ ಧೋರಣೆಯಿಂದಾಗಿ ನಗರ ಪಟ್ಟಣಗಳ ವ್ಯಾಪ್ತಿ ರಾತ್ರಿಬೆಳಗಾಗುವುದರಲ್ಲಿ ವಿಶಾಲವಾಗುವ ಕಾಲಮಾನವಿದು ಈ ನಗರ ಪಟ್ಟಣಗಳ ಉದರದಲ್ಲಿ ಹೊರಹೊಲಯದ ಹಳ್ಳಿಗಳು ಜೀರ್ಣವಾಗಿ ಗ್ರಾಮೀಣ ಮೀಸಲಾತಿ ವ್ಯಾಖ್ಯಾನದಿಂದ ಹೊರದಬ್ಬಲ್ಪಡುತ್ತಿವೆ. ಗ್ರಾಮ ಪಂಚಾಯ್ತಿಯೊಂದು ಪಟ್ಟಣ ಪಂಚಾಯ್ತಿಯಾಗಿ ಪೌರಾಡಳಿತದ ವ್ಯಾಪ್ತಿಗೆ ಬಂತೆಂದು ಇಟ್ಟುಕೊಳ್ಳಿ; ಆಗ ಅಪ್ಪಟ ಹಳ್ಳಿಗರಿಗೆ ಶಿಕ್ಷಣ, ಉದ್ಯೋಗದ ಸೌಲಭ್ಯ ದಕ್ಕದಂತೆ ಮಾಡಿ ಗ್ರಾಮೀಣ ಮೀಸಲಾತಿ ಷರತ್ತು ಸತಾಯಿಸಲು ಶುರುಮಾಡುತ್ತದೆ. ಹೊಸ ಪಟ್ಟಣ ಪಂಚಾಯ್ತಿ ಪರಿಸರದ ಶಾಲೆಯಲ್ಲಿ ಕಲಿತವರು, ಕಲಿಯುತ್ತಿರುವವರು ಗ್ರಾಮೀಣ ಮೀಸಲಾತಿಯಿಂದ ವಂಚಿತರಾಗುತ್ತಾರೆ. ಇಲ್ಲಾಗುವುದು ಜನ ಸಂಖ್ಯೆ ಹೆಚ್ಚಳದ ಬದಲಾವಣೆಯೊಂದೇ! ಸಾಮಾಜಿ, ಸಾಂಸ್ಕೃತಿಕ, ಆಧುನಿಕತೆ, ಅಭಿವೃದ್ಧಿ…- ಹೀಗೆ ಯಾವ ಕ್ಷೇತ್ರದಲ್ಲೂ ಉನ್ನತಿಯಾಗಿರುವುದಿಲ್ಲ. ಗ್ರಾಮೀಣ ಚಹರೆಯ ಊರು ಪಟ್ಟಣ ಪ್ರದೇಶವೆಂಬ ವ್ಯಾಖ್ಯಾನದಲ್ಲಿ ಸಿಕ್ಕಿಬಿದ್ದು ಅರ್ಹರಿಗೆ ಮೀಸಲಾತಿ ಸಿಗದಂತೆ ಮಾಡಿಬಿಡುತ್ತದೆ!

ಶಿಕ್ಷಣ ದಂಧೆಕೋರರಿಗೆ ಗ್ರಾಮೀಣ ಮೀಸಲಾತಿ ಆಧ್ವಾನಗಳು ವ್ಯಾವಹಾರಿಕ ತಂತ್ರಗಾರಿಕೆಯಾಗಿ ಅನುಕೂಲಕವಾಗಿದೆ. ಪಟ್ಟಣಗಳ ಸರಹದ್ದಿನಲ್ಲಿರುವ ಹಳ್ಳಿಗಳಲ್ಲಿ ಅತ್ಯಾಧುನಿಕ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆದು ಗ್ರಾಮೀಣ ಮೀಸಲಾತಿಗೆ ಪಂಗನಾಮ ಹಾಕಲಾಗುತ್ತಿದೆ. ತಮ್ಮಲ್ಲಿ ಕಲಿತರೆ ಗ್ರಾಮೀಣ ಮೀಸಲಾತಿ ಭಾಗ್ಯ ಪಡೆಯಬಹುದೆಂಬ ಪ್ರಚಾರ ಮಾಡಿ ಖಾಸಗಿ ಲಾಬಿ ಮಾಡುತ್ತಿದೆ. ಹಳ್ಳಿಗಳಲ್ಲೀಗ ಅಂತಾರಾಷ್ಟ್ರೀಯ ಸೌಲಭ್ಯ-ಸೌಕರ್ಯ ಸವಲತ್ತಿನ ರೆಸಿಡೆನ್ಸಿಯಲ್ ಶಾಲೆಗಳೆಂದು ಹೇಳಿಕೊಳ್ಳುವ ಶೈಕ್ಷಣಿಕ ಸಂಸ್ಥೆಗಳು ಸ್ಥಾಪಿತವಾಗುತ್ತಿವೆ. ಇಲ್ಲಿ ಕಲಿಯುವ ಹೈಟೆಕ್ ನಗರಗಳ ಉಳ್ಳವರು ಮತ್ತು ಸಾಮಾಜಿಕವಾಗಿ ಮುಂದುವರೆದವರ ಮಕ್ಕಳಿಗೆ ಗ್ರಾಮೀಣ ಮೀಸಲಾತಿ ಪ್ರಯೋಜನ ಸಿಗುತ್ತದೆ. ಆದರೆ ಅದೇ ನಗರದ ಕೊಳಚೆ ಏರಿಯಾದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುವ ದುರ್ಬಲರಿಗೆ ಮೀಸಲಾತಿ ಬರೀ ಕನಸಷ್ಟೇ.

ಹೈಟೆಕ್ ರೆಸಿಡೆನ್ಸಿಯಲ್ ಶಾಲೆಗಳಲ್ಲಿ ಅಭ್ಯಾಸ ಮಾಡಿದ ಬಲಾಢ್ಯರೊಂದಿಗೆ ಸರ್ಕಾರಿ ಶಾಲೆಯಲ್ಲಿ ಕಲಿತ ‘ನತದೃಷ್ಟ’ರನ್ನು ಒಂದೇ ಮಾನದಂಡದಿಂದ ಅಳೆಯುವುದಿದೆಯಲ್ಲ, ಅದು ಬರ್ಬರ-ಘೋರ ಅನ್ಯಾಯ! ಖಾಸಗಿ ಶಾಲೆಯಲ್ಲಿ ಕಲಿತವರು ಶೈಕ್ಷಣಿಕ-ಔದ್ಯೋಗಿಕ ಪೈಪೋಟಿಯಲ್ಲಿ ಗೆಲ್ಲುತ್ತಿದ್ದಾರೆ; ಸರ್ಕಾರಿ ಶಾಲೆಯಲ್ಲಿ ಕಲಿತ ನಗರ-ಹಳ್ಳಿಗಳ ಮಕ್ಕಳೂ ಸ್ವಂತ ಪರಿಶ್ರಮ, ಪ್ರತಿಭೆಯಿಂದ ಸಾಧನೆ ಮಾಡಿರಲೂಬಹುದು. ಆದರಿಂದ ಪ್ರಮಾಣ ತೀರ ಕಮ್ಮಿ; ಈ ಹಳ್ಳಿಗರು ಜಾಗತಿಕ ಸ್ಫರ್ಧೆಯಲ್ಲಿ ಎಡವುತ್ತಿದ್ದಾರೆ. ಪ್ರತಿಭೆ ಹೊರಹೊಮ್ಮಲು ಪ್ರೋತ್ಸಾಹವಿಲ್ಲದಾಗಿದೆ. ಸರಿಯಾದ ಸೂರು, ಶಿಕ್ಷಕರಿಲ್ಲದ, ಶಿಕ್ಷಕರಿದ್ದರೂ ಕರ್ತವ್ಯ ಪ್ರಜ್ಞೆ ಇಲ್ಲದವರೇ ಹೆಚ್ಚಿರುವ ಸರ್ಕಾರಿ ಶಾಲೆಗಳ ಗೋಳು ಹೇಳತೀರದು.

ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಕನ್ನಡ ಕಲಿತರೆ ಬದುಕು ರೂಪಿಸಿಕೊಳ್ಳಲಾಗದೆಂಬ ಹತಾಶೆ ಮಡುಗಟ್ಟಿದೆ. ‘ಕನ್ನಡ ಶಾಲೆ’ಗಳೆಂದೇ ಜನಜನಿತವಾಗಿದ್ದ ನೆಚ್ಚಿನ ಸರ್ಕಾರಿ ಶಾಲೆಗಳೀಗ ಕಣ್ಮರೆಯಾಗುತ್ತಿವೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸುವುದಿರಲಿ, ಅಸ್ತಿತ್ವ ಉಳಿಸಿಕೊಳ್ಳಲಿಕ್ಕೆ ಒದ್ದಾಡಬೇಕಾಗಿದೆ. ಖಾಸಗಿ ಶಾಲೆಗಳು ಉತ್ತಮ ಫಲಿತಾಂಶ ಕೊಡುತ್ತಿವೆ. ಉತ್ಕೃಷ್ಟತೆ ಕಾಪಾಡಿಕೊಳ್ಳದಿದ್ದರೆ ನೆಲೆ-ಬೆಲೆ ಕುಸಿಯುವ ಭಯ ಖಾಸಗಿಯವರನ್ನು ನಿರಂತರ ಎಚ್ಚರ ಸ್ಥಿತಿಯಲ್ಲಿ ಇಟ್ಟಿರುತ್ತದೆ.

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ. ಸರ್ಕಾರಿ ಶಾಲೆಗಳಲ್ಲಿ ವಿಶ್ವಾಸಾರ್ಹತೆ, ಲವಲವಿಕೆ, ಪ್ರೋತ್ಸಾಹ ಇಲ್ಲದಿದ್ದರೆ ಎಷ್ಟೆ ಆರ್ಥಿಕ ಸಂಕಷ್ಟವಿದ್ದರೂ ಸಾಲ-ಸೂಲ ಮಾಡಿಯಾದರೂ ಖಾಸಗಿ ಶಿಕ್ಷಣಕ್ಕೆ ಹಾತೊರೆಯುತ್ತಾರೆಂಬ ವಾಸ್ತವ ಸರ್ಕಾರಿ ಪಂಡಿತರಿಗೆ ಅರ್ಥವಾಗಬೇಕಿದೆ.

ನಿರಂತರ ಹತ್ತು ಶೈಕ್ಷಣಿಕ ವರ್ಷಗಳ ಅಧ್ಯಯನ ಬದಲಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಪಾಸು ಮಾಡಿದವರಿಗೆ ಕನಿಷ್ಠ ಶೇಕಡಾ 20ರಷ್ಟು ಸಮನಾಂತರ ಮೀಸಲಾತಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒದಗಿಸಲು ಚಿಂತಿಸಬೇಕಿದೆ. ಇದರಿಂದ ಗ್ರಾಮೀಣ ಮತ್ತು ನಗರ ಎರಡೂ ಕಡೆಯ ಬಡ ಅಸಾಯಕರಿಗೆ ಅನುಕೂಲವಾಗುತ್ತದೆ. ಭೌಗೋಳಿಕ ನೆಪವೊಡ್ಡಿ ಗ್ರಾಮೀಣ ಮೀಸಲಾತಿಗೆ ಕನ್ನ ಕೊರೆಯುವವರಿಗೆ ಕಡಿವಾಣ ಬೀಳುತ್ತದೆ. ಭಾಷೆ ಮೇಲಿನ ಪ್ರೀತಿಯಿಂದ ಕನ್ನಡ ಮಾಧ್ಯಮದಲ್ಲಿ ಕಲಿಯುವ ಹೊರನಾಡ ಕನ್ನಡಿಗರಿಗೂ ಈ ಮೀಸಲು ಸೌಲಭ್ಯ ಸಿಗುವಂತಾಗಬೇಕು. ರಾಜ್ಯ ಕೋಟಾದಲ್ಲಿ ಸಾಮಾನ್ಯ ಪ್ರವೇಶಪರೀಕ್ಷೆ (ಸಿಇಟಿ) ಬರೆಯಲು ಕನಿಷ್ಠ ಏಳು ವರ್ಷ ಕರ್ನಾಟಕದಲ್ಲಿ ಕಲಿತಿರಬೇಕೆಂಬ ಹುಚ್ಚು ನಿಯಮದಿಂದಲೂ ವಿನಾಯಿತಿ ಹೊರನಾಡ ಕನ್ನಡಿಗರಿಗೆ ಕೊಡಬೇಕು. ಇದೆಲ್ಲ ಈಗಿನ ಅವಾಂತರಕಾರಿ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ಬದಲಾವಣೆಯಿಂದ ಮಾತ್ರ ಸಾಧ್ಯ!

  • ಶುದ್ದೋಧನ

ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...