Homeಕರ್ನಾಟಕಗ್ರಾಮೀಣ ಮೀಸಲಾತಿಯ ಮೋಸಗಳು!!

ಗ್ರಾಮೀಣ ಮೀಸಲಾತಿಯ ಮೋಸಗಳು!!

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ.

- Advertisement -
- Advertisement -

ಕನ್ನಡದಲ್ಲಿ ಕಲಿತರೆ ಭವಿಷ್ಯವಿದೆ ಎಂಬ ಭರವಸೆಯೇ ಮೂಡದ ಈ ಬರಡು ಸಂದರ್ಭದಲ್ಲಿ ಸರ್ಕಾರ ಒದಗಿಸುತ್ತಿರುವ ಗ್ರಾಮೀಣ ಮೀಸಲಾತಿಯ ಹಿಂದೆ ದೊಡ್ಡ ಸಾಮಾಜಿಕ ಅನ್ಯಾಯ ಅಡಗಿದೆ. ಗ್ರಾಮೀಣ ಮೀಸಲಾತಿಯ ಪಿತಾಮಹರ ದೋಷದಿಂದಾಗಿ ಅರ್ಹ-ಅಬಲ ಗ್ರಾಮೀಣ ವಿದ್ಯಾರ್ಥಿಗಳ ಅವಕಾಶವನ್ನು ಬಲಾಢ್ಯ ನಗರವಾಸಿಗಳು ರಾಜಾರೋಷವಾಗಿ ಲಪಟಾಯಿಸುತ್ತಿದ್ದಾರೆ. ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಖಾಸಗಿ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿಗಳೊಂದಿಗಿನ ಸಂಘರ್ಷದಲ್ಲಿ ಸೋಲುತ್ತಿದ್ದಾರೆ.

ರಾಜ್ಯ ಸರ್ಕಾರ ಶೇಕಡ 5ರಷ್ಟು ಕನ್ನಡ ಮಾಧ್ಯಮ ಹಾಗೂ ಶೇಕಡ 15ರಷ್ಟು ಗ್ರಾಮೀಣ ಸಮಾನಾಂತರ ಮೀಸಲಾತಿಯ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಯಲ್ಲಿ ನಿಯಮ ಮಾಡಿ ಅದ್ಯಾವುದೋ ಕಾಲವಾಗಿದೆ. ಸದರಿ ಮೀಸಲಾತಿ ಮಾನದಂಡಗಳು ಮೀಸಲಾತಿ ಪರಿಕಲ್ಪನೆ ಹಾಗೂ ನೈಜ ಉದ್ದೇಶಕ್ಕೆ ವ್ಯತಿರಿಕ್ತವಾಗಿದೆ. ವಿರೋಧಾಭಾಸಗಳ ಈ ಮೀಸಲು ನಿಯಮ ಅರ್ಹರಿಗೆ-ದುರ್ಬಲರಿಗೆ ಅವಕಾಶದಿಂದ ವಂಚಿಸುತ್ತಿದೆ. ದುರಂತವೆಂದರೆ, ಬಲಾಢ್ಯ ಅನರ್ಹರು ಈ ಹುಚ್ಚು ನೀತಿಯ ದೌರ್ಬಲ್ಯ ಬಲಸಿಕೊಂಡು ಲಾಭ ಹೊಡೆಯುತ್ತಿದ್ದಾರೆ. ಸಮಾನತೆಯ ಆಶಯಕ್ಕೆ ಕನ್ನಡ ಮಾಧ್ಯಮ-ಗ್ರಾಮೀಣ ಮೀಸಲಾತಿ ಪದ್ಧತಿ ಆಘಾತಕಾರಿಯಾಗಿದೆ!!

ಈ ಮೀಸಲು ನಿಯಮಾವಳಿಯಲ್ಲಿ ಅಖಂಡ ಹತ್ತು ವರ್ಷ ಶಾಲೆಯಲ್ಲಿ ಕಲಿತವರಿಗಷ್ಟೇ ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಮೀಸಲಾತಿಯೆಂಬ ಷರತ್ತು ಹಾಕಲಾಗಿದೆ. ಇದು ಅವಾಸ್ತವಿಕವಷ್ಟೇ ಅಲ್ಲ ಅನ್ಯಾಯ ಕೂಡ. ಸರ್ಕಾರದ ನೀತಿ-ನಿಯಮ ಒಂದಕ್ಕೊಂದು ಪೂರಕವಾಗಿಲ್ಲ. ನಾನಾ ಕಾರಣಕ್ಕೆ ಶಾಲೆ ಸೇರಲಾಗದವರನ್ನು ಮತ್ತು ಶಾಲೆ ಬಿಟ್ಟವರನ್ನು ವಿದ್ಯಾಭ್ಯಾಸದೆಡೆ ಆಕರ್ಷಿಸಲಾಗುತ್ತಿದೆ. ಸರ್ಕಾರ ಅನೇಕ ರಿಯಾಯಿತಿ ಕೊಟ್ಟು ಶಿಕ್ಷಣದ ಅವಕಾಶ ಕಲ್ಪಿಸುತ್ತಿದೆ. ಶಿಕ್ಷಾಣಾರ್ಥಿಗಳ ಸಾಮರ್ಥ್ಯಕ್ಕೆ ತಕ್ಕಂತೆ ಅವರ ವಯಸ್ಸು ಪರಿಗಣಿಸಿ ಮೇಲ್ತರಗತಿಗಳಿಗೆ ಪ್ರವೇಶವೂ ಕೊಡುತ್ತಿದೆ. ದುರಂತವೆಂದರೆ, ಇಂಥ ಅಭ್ಯರ್ಥಿಗಳಿಗೆ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ದಕ್ಕುತ್ತಿಲ್ಲ! ಬಾಹ್ಯವಾಗಿ ಎಸ್‌ಎಸ್‌ಎಲ್‌ಸಿ ಮುಗಿಸಿದವರಿಗೂ ಈ ಮೀಸಲಾತಿಯಿಂದ ಲಾಭವೇನಿಲ್ಲ.

ಇಲ್ಲಿ ಘನಘೋರ ಎಡವಟ್ಟೊಂದಿದೆ ಹತ್ತು ವರ್ಷದ ಕಲಿಕಾ ಸರಣಿಯಲ್ಲಿ ಒಂದೇ ಒಂದು ವರ್ಷವೇನಾದರೂ ಪಟ್ಟಣ ಪ್ರದೇಶದಲ್ಲಿ ಕಲಿತರೆ ಗಂಡಾಂತರ ಖಂಡಿತ. ಈ ಗ್ರಾಮೀಣ ಅಭ್ಯರ್ಥಿಗಳೆಲ್ಲ ಸಾಮಾಜಿಕ ನ್ಯಾಯ ತತ್ವದಂತೆ ಮೀಸಲಾತಿ ಪರಿಕಲ್ಪನೆಯ ಸೌಲಭ್ಯಕ್ಕೆ ಅರ್ಹರು.

ಈ ಗ್ರಾಮೀಣ ಮೀಸಲಾತಿಗೆ ಹಳ್ಳಿಗಾಡಿನ ಹಿನ್ನಲೆ, ಸಂಸ್ಕೃತಿ, ಸಾಮಾಜಿಕ-ಅರ್ಥಿಕ ಸ್ಥಿತಿ-ಗತಿ ಮಾನದಂಡವಾಗಬೇಕಿತ್ತು. ಆದರೆ ಅಂದಿನಿಂದ ಆಳುವವರು ಮತ್ತವರ ಸಲಹೆಗಾರ ಪಂಡಿತ್ತೋತ್ತಮರು ಮೀಸಲು ನೀತಿ ನಿರೂಪಿಸುವಾಗ ಸರಳ, ಸಮಾಜಿಕ ನ್ಯಾಯ ತತ್ವವನ್ನೇ ಪಾಲಿಸಿಲ್ಲ. ವಿಚಿತ್ರವೆಂದರೆ, ಅಭ್ಯರ್ಥಿ ಕಲಿತ ಶಾಲಾ ಕಟ್ಟಡದ “ಭೌಗೋಳಿಕ ಅಸ್ತಿತ್ವ” ಮೀಸಲಾತಿ ಹಣೆಬರಹ ನಿರ್ಧರಿಸುತ್ತಿದೆ. ಮೀಸಲಾತಿ ಬಯಸುವವರ ಶಾಲೆ ಭೌಗೋಳಿಕವಾಗಿ ಹಳ್ಳಿಯಲ್ಲಿದೆಯೋ ಅಥವಾ ಪಟ್ಟಣದಲ್ಲಿದೆಯೆಂಬ ಆಧಾರದಲ್ಲಿ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಅಭ್ಯರ್ಥಿ ಬಾಳಿ-ಬದುಕಿದ ಪ್ರದೇಶಕ್ಕಿಂತಲೂ ಶಾಲೆಯ ಸ್ಥಾವರ ಸ್ಥಿತಿಗೆ ಪ್ರಾಧಾನ್ಯತೆ ಕೊಡಲಾಗಿದೆ.

ಇಂತಹ ಮೀಸಲಾತಿ ನಿರ್ಧರಿಸುವಿಕೆ ಗ್ರಾಮೀಣ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ. ಶಾಲೆ-ಹೈಸ್ಕೂಲು ಇಲ್ಲದ ಕುಗ್ರಾಮಗಳ ಮಕ್ಕಳು ಪಟ್ಟಣದ ಹಾಸ್ಟೆಲುಗಳಲ್ಲಿ ಉಳಿದು ಪಟ್ಟಣದ ಶಾಲೆಯಲ್ಲಿ ಕಲಿತರೂ ಸಾಕು ಅವರಿಗೆಲ್ಲ ಮೀಸಲಾತಿ ಸವಲತ್ತು ಸಿಗಲಾರದು. ಆಧುನಿಕ ಸೌಕರ್ಯ, ಸಕಲ ಸೌಲಭ್ಯವಿರುವ ಖಾಸಗಿ ಶಾಲೆ ಸರ್ಕಾರಿ ದಾಖಲೆ ಪ್ರಕಾರ ಗ್ರಾಮ ಪಂಚಾಯತ್ ಪರಿಧಿಯಲ್ಲಿ ಬಂದರೆ ಅಲ್ಲಿ ಪಟ್ಟಣ ಪ್ರದೇಶದ ನಗರವಾಸಿಯೂ ತೀರಾ ಮುಂದುವರಿದ ಕುಟುಂಬದ ಅಭ್ಯರ್ಥಿ ಸಲೀಸಾಗಿ ಗ್ರಾಮೀಣ ಮೀಸಲಾತಿ ಸಿಂಧುತ್ವ ಪಡೆದುಕೊಳ್ಳುತ್ತಾನೆ. ರಾಜ್ಯದ ಹಲವು ಕಡೆಯಲ್ಲಿ ಇಂಥ ದೋಖಾ ಗ್ರಾಮೀಣ ಶಾಲೆಗಳ ಹಾವಳಿ ಜೋರಾಗಿದೆ.

ಸರ್ಕಾರದ ಯಾವ್ಯಾವುದೋ ನೀತಿ ಧೋರಣೆಯಿಂದಾಗಿ ನಗರ ಪಟ್ಟಣಗಳ ವ್ಯಾಪ್ತಿ ರಾತ್ರಿಬೆಳಗಾಗುವುದರಲ್ಲಿ ವಿಶಾಲವಾಗುವ ಕಾಲಮಾನವಿದು ಈ ನಗರ ಪಟ್ಟಣಗಳ ಉದರದಲ್ಲಿ ಹೊರಹೊಲಯದ ಹಳ್ಳಿಗಳು ಜೀರ್ಣವಾಗಿ ಗ್ರಾಮೀಣ ಮೀಸಲಾತಿ ವ್ಯಾಖ್ಯಾನದಿಂದ ಹೊರದಬ್ಬಲ್ಪಡುತ್ತಿವೆ. ಗ್ರಾಮ ಪಂಚಾಯ್ತಿಯೊಂದು ಪಟ್ಟಣ ಪಂಚಾಯ್ತಿಯಾಗಿ ಪೌರಾಡಳಿತದ ವ್ಯಾಪ್ತಿಗೆ ಬಂತೆಂದು ಇಟ್ಟುಕೊಳ್ಳಿ; ಆಗ ಅಪ್ಪಟ ಹಳ್ಳಿಗರಿಗೆ ಶಿಕ್ಷಣ, ಉದ್ಯೋಗದ ಸೌಲಭ್ಯ ದಕ್ಕದಂತೆ ಮಾಡಿ ಗ್ರಾಮೀಣ ಮೀಸಲಾತಿ ಷರತ್ತು ಸತಾಯಿಸಲು ಶುರುಮಾಡುತ್ತದೆ. ಹೊಸ ಪಟ್ಟಣ ಪಂಚಾಯ್ತಿ ಪರಿಸರದ ಶಾಲೆಯಲ್ಲಿ ಕಲಿತವರು, ಕಲಿಯುತ್ತಿರುವವರು ಗ್ರಾಮೀಣ ಮೀಸಲಾತಿಯಿಂದ ವಂಚಿತರಾಗುತ್ತಾರೆ. ಇಲ್ಲಾಗುವುದು ಜನ ಸಂಖ್ಯೆ ಹೆಚ್ಚಳದ ಬದಲಾವಣೆಯೊಂದೇ! ಸಾಮಾಜಿ, ಸಾಂಸ್ಕೃತಿಕ, ಆಧುನಿಕತೆ, ಅಭಿವೃದ್ಧಿ…- ಹೀಗೆ ಯಾವ ಕ್ಷೇತ್ರದಲ್ಲೂ ಉನ್ನತಿಯಾಗಿರುವುದಿಲ್ಲ. ಗ್ರಾಮೀಣ ಚಹರೆಯ ಊರು ಪಟ್ಟಣ ಪ್ರದೇಶವೆಂಬ ವ್ಯಾಖ್ಯಾನದಲ್ಲಿ ಸಿಕ್ಕಿಬಿದ್ದು ಅರ್ಹರಿಗೆ ಮೀಸಲಾತಿ ಸಿಗದಂತೆ ಮಾಡಿಬಿಡುತ್ತದೆ!

ಶಿಕ್ಷಣ ದಂಧೆಕೋರರಿಗೆ ಗ್ರಾಮೀಣ ಮೀಸಲಾತಿ ಆಧ್ವಾನಗಳು ವ್ಯಾವಹಾರಿಕ ತಂತ್ರಗಾರಿಕೆಯಾಗಿ ಅನುಕೂಲಕವಾಗಿದೆ. ಪಟ್ಟಣಗಳ ಸರಹದ್ದಿನಲ್ಲಿರುವ ಹಳ್ಳಿಗಳಲ್ಲಿ ಅತ್ಯಾಧುನಿಕ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆದು ಗ್ರಾಮೀಣ ಮೀಸಲಾತಿಗೆ ಪಂಗನಾಮ ಹಾಕಲಾಗುತ್ತಿದೆ. ತಮ್ಮಲ್ಲಿ ಕಲಿತರೆ ಗ್ರಾಮೀಣ ಮೀಸಲಾತಿ ಭಾಗ್ಯ ಪಡೆಯಬಹುದೆಂಬ ಪ್ರಚಾರ ಮಾಡಿ ಖಾಸಗಿ ಲಾಬಿ ಮಾಡುತ್ತಿದೆ. ಹಳ್ಳಿಗಳಲ್ಲೀಗ ಅಂತಾರಾಷ್ಟ್ರೀಯ ಸೌಲಭ್ಯ-ಸೌಕರ್ಯ ಸವಲತ್ತಿನ ರೆಸಿಡೆನ್ಸಿಯಲ್ ಶಾಲೆಗಳೆಂದು ಹೇಳಿಕೊಳ್ಳುವ ಶೈಕ್ಷಣಿಕ ಸಂಸ್ಥೆಗಳು ಸ್ಥಾಪಿತವಾಗುತ್ತಿವೆ. ಇಲ್ಲಿ ಕಲಿಯುವ ಹೈಟೆಕ್ ನಗರಗಳ ಉಳ್ಳವರು ಮತ್ತು ಸಾಮಾಜಿಕವಾಗಿ ಮುಂದುವರೆದವರ ಮಕ್ಕಳಿಗೆ ಗ್ರಾಮೀಣ ಮೀಸಲಾತಿ ಪ್ರಯೋಜನ ಸಿಗುತ್ತದೆ. ಆದರೆ ಅದೇ ನಗರದ ಕೊಳಚೆ ಏರಿಯಾದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುವ ದುರ್ಬಲರಿಗೆ ಮೀಸಲಾತಿ ಬರೀ ಕನಸಷ್ಟೇ.

ಹೈಟೆಕ್ ರೆಸಿಡೆನ್ಸಿಯಲ್ ಶಾಲೆಗಳಲ್ಲಿ ಅಭ್ಯಾಸ ಮಾಡಿದ ಬಲಾಢ್ಯರೊಂದಿಗೆ ಸರ್ಕಾರಿ ಶಾಲೆಯಲ್ಲಿ ಕಲಿತ ‘ನತದೃಷ್ಟ’ರನ್ನು ಒಂದೇ ಮಾನದಂಡದಿಂದ ಅಳೆಯುವುದಿದೆಯಲ್ಲ, ಅದು ಬರ್ಬರ-ಘೋರ ಅನ್ಯಾಯ! ಖಾಸಗಿ ಶಾಲೆಯಲ್ಲಿ ಕಲಿತವರು ಶೈಕ್ಷಣಿಕ-ಔದ್ಯೋಗಿಕ ಪೈಪೋಟಿಯಲ್ಲಿ ಗೆಲ್ಲುತ್ತಿದ್ದಾರೆ; ಸರ್ಕಾರಿ ಶಾಲೆಯಲ್ಲಿ ಕಲಿತ ನಗರ-ಹಳ್ಳಿಗಳ ಮಕ್ಕಳೂ ಸ್ವಂತ ಪರಿಶ್ರಮ, ಪ್ರತಿಭೆಯಿಂದ ಸಾಧನೆ ಮಾಡಿರಲೂಬಹುದು. ಆದರಿಂದ ಪ್ರಮಾಣ ತೀರ ಕಮ್ಮಿ; ಈ ಹಳ್ಳಿಗರು ಜಾಗತಿಕ ಸ್ಫರ್ಧೆಯಲ್ಲಿ ಎಡವುತ್ತಿದ್ದಾರೆ. ಪ್ರತಿಭೆ ಹೊರಹೊಮ್ಮಲು ಪ್ರೋತ್ಸಾಹವಿಲ್ಲದಾಗಿದೆ. ಸರಿಯಾದ ಸೂರು, ಶಿಕ್ಷಕರಿಲ್ಲದ, ಶಿಕ್ಷಕರಿದ್ದರೂ ಕರ್ತವ್ಯ ಪ್ರಜ್ಞೆ ಇಲ್ಲದವರೇ ಹೆಚ್ಚಿರುವ ಸರ್ಕಾರಿ ಶಾಲೆಗಳ ಗೋಳು ಹೇಳತೀರದು.

ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಕನ್ನಡ ಕಲಿತರೆ ಬದುಕು ರೂಪಿಸಿಕೊಳ್ಳಲಾಗದೆಂಬ ಹತಾಶೆ ಮಡುಗಟ್ಟಿದೆ. ‘ಕನ್ನಡ ಶಾಲೆ’ಗಳೆಂದೇ ಜನಜನಿತವಾಗಿದ್ದ ನೆಚ್ಚಿನ ಸರ್ಕಾರಿ ಶಾಲೆಗಳೀಗ ಕಣ್ಮರೆಯಾಗುತ್ತಿವೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸುವುದಿರಲಿ, ಅಸ್ತಿತ್ವ ಉಳಿಸಿಕೊಳ್ಳಲಿಕ್ಕೆ ಒದ್ದಾಡಬೇಕಾಗಿದೆ. ಖಾಸಗಿ ಶಾಲೆಗಳು ಉತ್ತಮ ಫಲಿತಾಂಶ ಕೊಡುತ್ತಿವೆ. ಉತ್ಕೃಷ್ಟತೆ ಕಾಪಾಡಿಕೊಳ್ಳದಿದ್ದರೆ ನೆಲೆ-ಬೆಲೆ ಕುಸಿಯುವ ಭಯ ಖಾಸಗಿಯವರನ್ನು ನಿರಂತರ ಎಚ್ಚರ ಸ್ಥಿತಿಯಲ್ಲಿ ಇಟ್ಟಿರುತ್ತದೆ.

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ. ಸರ್ಕಾರಿ ಶಾಲೆಗಳಲ್ಲಿ ವಿಶ್ವಾಸಾರ್ಹತೆ, ಲವಲವಿಕೆ, ಪ್ರೋತ್ಸಾಹ ಇಲ್ಲದಿದ್ದರೆ ಎಷ್ಟೆ ಆರ್ಥಿಕ ಸಂಕಷ್ಟವಿದ್ದರೂ ಸಾಲ-ಸೂಲ ಮಾಡಿಯಾದರೂ ಖಾಸಗಿ ಶಿಕ್ಷಣಕ್ಕೆ ಹಾತೊರೆಯುತ್ತಾರೆಂಬ ವಾಸ್ತವ ಸರ್ಕಾರಿ ಪಂಡಿತರಿಗೆ ಅರ್ಥವಾಗಬೇಕಿದೆ.

ನಿರಂತರ ಹತ್ತು ಶೈಕ್ಷಣಿಕ ವರ್ಷಗಳ ಅಧ್ಯಯನ ಬದಲಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಪಾಸು ಮಾಡಿದವರಿಗೆ ಕನಿಷ್ಠ ಶೇಕಡಾ 20ರಷ್ಟು ಸಮನಾಂತರ ಮೀಸಲಾತಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒದಗಿಸಲು ಚಿಂತಿಸಬೇಕಿದೆ. ಇದರಿಂದ ಗ್ರಾಮೀಣ ಮತ್ತು ನಗರ ಎರಡೂ ಕಡೆಯ ಬಡ ಅಸಾಯಕರಿಗೆ ಅನುಕೂಲವಾಗುತ್ತದೆ. ಭೌಗೋಳಿಕ ನೆಪವೊಡ್ಡಿ ಗ್ರಾಮೀಣ ಮೀಸಲಾತಿಗೆ ಕನ್ನ ಕೊರೆಯುವವರಿಗೆ ಕಡಿವಾಣ ಬೀಳುತ್ತದೆ. ಭಾಷೆ ಮೇಲಿನ ಪ್ರೀತಿಯಿಂದ ಕನ್ನಡ ಮಾಧ್ಯಮದಲ್ಲಿ ಕಲಿಯುವ ಹೊರನಾಡ ಕನ್ನಡಿಗರಿಗೂ ಈ ಮೀಸಲು ಸೌಲಭ್ಯ ಸಿಗುವಂತಾಗಬೇಕು. ರಾಜ್ಯ ಕೋಟಾದಲ್ಲಿ ಸಾಮಾನ್ಯ ಪ್ರವೇಶಪರೀಕ್ಷೆ (ಸಿಇಟಿ) ಬರೆಯಲು ಕನಿಷ್ಠ ಏಳು ವರ್ಷ ಕರ್ನಾಟಕದಲ್ಲಿ ಕಲಿತಿರಬೇಕೆಂಬ ಹುಚ್ಚು ನಿಯಮದಿಂದಲೂ ವಿನಾಯಿತಿ ಹೊರನಾಡ ಕನ್ನಡಿಗರಿಗೆ ಕೊಡಬೇಕು. ಇದೆಲ್ಲ ಈಗಿನ ಅವಾಂತರಕಾರಿ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ಬದಲಾವಣೆಯಿಂದ ಮಾತ್ರ ಸಾಧ್ಯ!

  • ಶುದ್ದೋಧನ

ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...