Homeಕರ್ನಾಟಕಗ್ರಾಮೀಣ ಮೀಸಲಾತಿಯ ಮೋಸಗಳು!!

ಗ್ರಾಮೀಣ ಮೀಸಲಾತಿಯ ಮೋಸಗಳು!!

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ.

- Advertisement -
- Advertisement -

ಕನ್ನಡದಲ್ಲಿ ಕಲಿತರೆ ಭವಿಷ್ಯವಿದೆ ಎಂಬ ಭರವಸೆಯೇ ಮೂಡದ ಈ ಬರಡು ಸಂದರ್ಭದಲ್ಲಿ ಸರ್ಕಾರ ಒದಗಿಸುತ್ತಿರುವ ಗ್ರಾಮೀಣ ಮೀಸಲಾತಿಯ ಹಿಂದೆ ದೊಡ್ಡ ಸಾಮಾಜಿಕ ಅನ್ಯಾಯ ಅಡಗಿದೆ. ಗ್ರಾಮೀಣ ಮೀಸಲಾತಿಯ ಪಿತಾಮಹರ ದೋಷದಿಂದಾಗಿ ಅರ್ಹ-ಅಬಲ ಗ್ರಾಮೀಣ ವಿದ್ಯಾರ್ಥಿಗಳ ಅವಕಾಶವನ್ನು ಬಲಾಢ್ಯ ನಗರವಾಸಿಗಳು ರಾಜಾರೋಷವಾಗಿ ಲಪಟಾಯಿಸುತ್ತಿದ್ದಾರೆ. ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಖಾಸಗಿ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿಗಳೊಂದಿಗಿನ ಸಂಘರ್ಷದಲ್ಲಿ ಸೋಲುತ್ತಿದ್ದಾರೆ.

ರಾಜ್ಯ ಸರ್ಕಾರ ಶೇಕಡ 5ರಷ್ಟು ಕನ್ನಡ ಮಾಧ್ಯಮ ಹಾಗೂ ಶೇಕಡ 15ರಷ್ಟು ಗ್ರಾಮೀಣ ಸಮಾನಾಂತರ ಮೀಸಲಾತಿಯ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಯಲ್ಲಿ ನಿಯಮ ಮಾಡಿ ಅದ್ಯಾವುದೋ ಕಾಲವಾಗಿದೆ. ಸದರಿ ಮೀಸಲಾತಿ ಮಾನದಂಡಗಳು ಮೀಸಲಾತಿ ಪರಿಕಲ್ಪನೆ ಹಾಗೂ ನೈಜ ಉದ್ದೇಶಕ್ಕೆ ವ್ಯತಿರಿಕ್ತವಾಗಿದೆ. ವಿರೋಧಾಭಾಸಗಳ ಈ ಮೀಸಲು ನಿಯಮ ಅರ್ಹರಿಗೆ-ದುರ್ಬಲರಿಗೆ ಅವಕಾಶದಿಂದ ವಂಚಿಸುತ್ತಿದೆ. ದುರಂತವೆಂದರೆ, ಬಲಾಢ್ಯ ಅನರ್ಹರು ಈ ಹುಚ್ಚು ನೀತಿಯ ದೌರ್ಬಲ್ಯ ಬಲಸಿಕೊಂಡು ಲಾಭ ಹೊಡೆಯುತ್ತಿದ್ದಾರೆ. ಸಮಾನತೆಯ ಆಶಯಕ್ಕೆ ಕನ್ನಡ ಮಾಧ್ಯಮ-ಗ್ರಾಮೀಣ ಮೀಸಲಾತಿ ಪದ್ಧತಿ ಆಘಾತಕಾರಿಯಾಗಿದೆ!!

ಈ ಮೀಸಲು ನಿಯಮಾವಳಿಯಲ್ಲಿ ಅಖಂಡ ಹತ್ತು ವರ್ಷ ಶಾಲೆಯಲ್ಲಿ ಕಲಿತವರಿಗಷ್ಟೇ ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಮೀಸಲಾತಿಯೆಂಬ ಷರತ್ತು ಹಾಕಲಾಗಿದೆ. ಇದು ಅವಾಸ್ತವಿಕವಷ್ಟೇ ಅಲ್ಲ ಅನ್ಯಾಯ ಕೂಡ. ಸರ್ಕಾರದ ನೀತಿ-ನಿಯಮ ಒಂದಕ್ಕೊಂದು ಪೂರಕವಾಗಿಲ್ಲ. ನಾನಾ ಕಾರಣಕ್ಕೆ ಶಾಲೆ ಸೇರಲಾಗದವರನ್ನು ಮತ್ತು ಶಾಲೆ ಬಿಟ್ಟವರನ್ನು ವಿದ್ಯಾಭ್ಯಾಸದೆಡೆ ಆಕರ್ಷಿಸಲಾಗುತ್ತಿದೆ. ಸರ್ಕಾರ ಅನೇಕ ರಿಯಾಯಿತಿ ಕೊಟ್ಟು ಶಿಕ್ಷಣದ ಅವಕಾಶ ಕಲ್ಪಿಸುತ್ತಿದೆ. ಶಿಕ್ಷಾಣಾರ್ಥಿಗಳ ಸಾಮರ್ಥ್ಯಕ್ಕೆ ತಕ್ಕಂತೆ ಅವರ ವಯಸ್ಸು ಪರಿಗಣಿಸಿ ಮೇಲ್ತರಗತಿಗಳಿಗೆ ಪ್ರವೇಶವೂ ಕೊಡುತ್ತಿದೆ. ದುರಂತವೆಂದರೆ, ಇಂಥ ಅಭ್ಯರ್ಥಿಗಳಿಗೆ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ದಕ್ಕುತ್ತಿಲ್ಲ! ಬಾಹ್ಯವಾಗಿ ಎಸ್‌ಎಸ್‌ಎಲ್‌ಸಿ ಮುಗಿಸಿದವರಿಗೂ ಈ ಮೀಸಲಾತಿಯಿಂದ ಲಾಭವೇನಿಲ್ಲ.

ಇಲ್ಲಿ ಘನಘೋರ ಎಡವಟ್ಟೊಂದಿದೆ ಹತ್ತು ವರ್ಷದ ಕಲಿಕಾ ಸರಣಿಯಲ್ಲಿ ಒಂದೇ ಒಂದು ವರ್ಷವೇನಾದರೂ ಪಟ್ಟಣ ಪ್ರದೇಶದಲ್ಲಿ ಕಲಿತರೆ ಗಂಡಾಂತರ ಖಂಡಿತ. ಈ ಗ್ರಾಮೀಣ ಅಭ್ಯರ್ಥಿಗಳೆಲ್ಲ ಸಾಮಾಜಿಕ ನ್ಯಾಯ ತತ್ವದಂತೆ ಮೀಸಲಾತಿ ಪರಿಕಲ್ಪನೆಯ ಸೌಲಭ್ಯಕ್ಕೆ ಅರ್ಹರು.

ಈ ಗ್ರಾಮೀಣ ಮೀಸಲಾತಿಗೆ ಹಳ್ಳಿಗಾಡಿನ ಹಿನ್ನಲೆ, ಸಂಸ್ಕೃತಿ, ಸಾಮಾಜಿಕ-ಅರ್ಥಿಕ ಸ್ಥಿತಿ-ಗತಿ ಮಾನದಂಡವಾಗಬೇಕಿತ್ತು. ಆದರೆ ಅಂದಿನಿಂದ ಆಳುವವರು ಮತ್ತವರ ಸಲಹೆಗಾರ ಪಂಡಿತ್ತೋತ್ತಮರು ಮೀಸಲು ನೀತಿ ನಿರೂಪಿಸುವಾಗ ಸರಳ, ಸಮಾಜಿಕ ನ್ಯಾಯ ತತ್ವವನ್ನೇ ಪಾಲಿಸಿಲ್ಲ. ವಿಚಿತ್ರವೆಂದರೆ, ಅಭ್ಯರ್ಥಿ ಕಲಿತ ಶಾಲಾ ಕಟ್ಟಡದ “ಭೌಗೋಳಿಕ ಅಸ್ತಿತ್ವ” ಮೀಸಲಾತಿ ಹಣೆಬರಹ ನಿರ್ಧರಿಸುತ್ತಿದೆ. ಮೀಸಲಾತಿ ಬಯಸುವವರ ಶಾಲೆ ಭೌಗೋಳಿಕವಾಗಿ ಹಳ್ಳಿಯಲ್ಲಿದೆಯೋ ಅಥವಾ ಪಟ್ಟಣದಲ್ಲಿದೆಯೆಂಬ ಆಧಾರದಲ್ಲಿ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಅಭ್ಯರ್ಥಿ ಬಾಳಿ-ಬದುಕಿದ ಪ್ರದೇಶಕ್ಕಿಂತಲೂ ಶಾಲೆಯ ಸ್ಥಾವರ ಸ್ಥಿತಿಗೆ ಪ್ರಾಧಾನ್ಯತೆ ಕೊಡಲಾಗಿದೆ.

ಇಂತಹ ಮೀಸಲಾತಿ ನಿರ್ಧರಿಸುವಿಕೆ ಗ್ರಾಮೀಣ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ. ಶಾಲೆ-ಹೈಸ್ಕೂಲು ಇಲ್ಲದ ಕುಗ್ರಾಮಗಳ ಮಕ್ಕಳು ಪಟ್ಟಣದ ಹಾಸ್ಟೆಲುಗಳಲ್ಲಿ ಉಳಿದು ಪಟ್ಟಣದ ಶಾಲೆಯಲ್ಲಿ ಕಲಿತರೂ ಸಾಕು ಅವರಿಗೆಲ್ಲ ಮೀಸಲಾತಿ ಸವಲತ್ತು ಸಿಗಲಾರದು. ಆಧುನಿಕ ಸೌಕರ್ಯ, ಸಕಲ ಸೌಲಭ್ಯವಿರುವ ಖಾಸಗಿ ಶಾಲೆ ಸರ್ಕಾರಿ ದಾಖಲೆ ಪ್ರಕಾರ ಗ್ರಾಮ ಪಂಚಾಯತ್ ಪರಿಧಿಯಲ್ಲಿ ಬಂದರೆ ಅಲ್ಲಿ ಪಟ್ಟಣ ಪ್ರದೇಶದ ನಗರವಾಸಿಯೂ ತೀರಾ ಮುಂದುವರಿದ ಕುಟುಂಬದ ಅಭ್ಯರ್ಥಿ ಸಲೀಸಾಗಿ ಗ್ರಾಮೀಣ ಮೀಸಲಾತಿ ಸಿಂಧುತ್ವ ಪಡೆದುಕೊಳ್ಳುತ್ತಾನೆ. ರಾಜ್ಯದ ಹಲವು ಕಡೆಯಲ್ಲಿ ಇಂಥ ದೋಖಾ ಗ್ರಾಮೀಣ ಶಾಲೆಗಳ ಹಾವಳಿ ಜೋರಾಗಿದೆ.

ಸರ್ಕಾರದ ಯಾವ್ಯಾವುದೋ ನೀತಿ ಧೋರಣೆಯಿಂದಾಗಿ ನಗರ ಪಟ್ಟಣಗಳ ವ್ಯಾಪ್ತಿ ರಾತ್ರಿಬೆಳಗಾಗುವುದರಲ್ಲಿ ವಿಶಾಲವಾಗುವ ಕಾಲಮಾನವಿದು ಈ ನಗರ ಪಟ್ಟಣಗಳ ಉದರದಲ್ಲಿ ಹೊರಹೊಲಯದ ಹಳ್ಳಿಗಳು ಜೀರ್ಣವಾಗಿ ಗ್ರಾಮೀಣ ಮೀಸಲಾತಿ ವ್ಯಾಖ್ಯಾನದಿಂದ ಹೊರದಬ್ಬಲ್ಪಡುತ್ತಿವೆ. ಗ್ರಾಮ ಪಂಚಾಯ್ತಿಯೊಂದು ಪಟ್ಟಣ ಪಂಚಾಯ್ತಿಯಾಗಿ ಪೌರಾಡಳಿತದ ವ್ಯಾಪ್ತಿಗೆ ಬಂತೆಂದು ಇಟ್ಟುಕೊಳ್ಳಿ; ಆಗ ಅಪ್ಪಟ ಹಳ್ಳಿಗರಿಗೆ ಶಿಕ್ಷಣ, ಉದ್ಯೋಗದ ಸೌಲಭ್ಯ ದಕ್ಕದಂತೆ ಮಾಡಿ ಗ್ರಾಮೀಣ ಮೀಸಲಾತಿ ಷರತ್ತು ಸತಾಯಿಸಲು ಶುರುಮಾಡುತ್ತದೆ. ಹೊಸ ಪಟ್ಟಣ ಪಂಚಾಯ್ತಿ ಪರಿಸರದ ಶಾಲೆಯಲ್ಲಿ ಕಲಿತವರು, ಕಲಿಯುತ್ತಿರುವವರು ಗ್ರಾಮೀಣ ಮೀಸಲಾತಿಯಿಂದ ವಂಚಿತರಾಗುತ್ತಾರೆ. ಇಲ್ಲಾಗುವುದು ಜನ ಸಂಖ್ಯೆ ಹೆಚ್ಚಳದ ಬದಲಾವಣೆಯೊಂದೇ! ಸಾಮಾಜಿ, ಸಾಂಸ್ಕೃತಿಕ, ಆಧುನಿಕತೆ, ಅಭಿವೃದ್ಧಿ…- ಹೀಗೆ ಯಾವ ಕ್ಷೇತ್ರದಲ್ಲೂ ಉನ್ನತಿಯಾಗಿರುವುದಿಲ್ಲ. ಗ್ರಾಮೀಣ ಚಹರೆಯ ಊರು ಪಟ್ಟಣ ಪ್ರದೇಶವೆಂಬ ವ್ಯಾಖ್ಯಾನದಲ್ಲಿ ಸಿಕ್ಕಿಬಿದ್ದು ಅರ್ಹರಿಗೆ ಮೀಸಲಾತಿ ಸಿಗದಂತೆ ಮಾಡಿಬಿಡುತ್ತದೆ!

ಶಿಕ್ಷಣ ದಂಧೆಕೋರರಿಗೆ ಗ್ರಾಮೀಣ ಮೀಸಲಾತಿ ಆಧ್ವಾನಗಳು ವ್ಯಾವಹಾರಿಕ ತಂತ್ರಗಾರಿಕೆಯಾಗಿ ಅನುಕೂಲಕವಾಗಿದೆ. ಪಟ್ಟಣಗಳ ಸರಹದ್ದಿನಲ್ಲಿರುವ ಹಳ್ಳಿಗಳಲ್ಲಿ ಅತ್ಯಾಧುನಿಕ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆದು ಗ್ರಾಮೀಣ ಮೀಸಲಾತಿಗೆ ಪಂಗನಾಮ ಹಾಕಲಾಗುತ್ತಿದೆ. ತಮ್ಮಲ್ಲಿ ಕಲಿತರೆ ಗ್ರಾಮೀಣ ಮೀಸಲಾತಿ ಭಾಗ್ಯ ಪಡೆಯಬಹುದೆಂಬ ಪ್ರಚಾರ ಮಾಡಿ ಖಾಸಗಿ ಲಾಬಿ ಮಾಡುತ್ತಿದೆ. ಹಳ್ಳಿಗಳಲ್ಲೀಗ ಅಂತಾರಾಷ್ಟ್ರೀಯ ಸೌಲಭ್ಯ-ಸೌಕರ್ಯ ಸವಲತ್ತಿನ ರೆಸಿಡೆನ್ಸಿಯಲ್ ಶಾಲೆಗಳೆಂದು ಹೇಳಿಕೊಳ್ಳುವ ಶೈಕ್ಷಣಿಕ ಸಂಸ್ಥೆಗಳು ಸ್ಥಾಪಿತವಾಗುತ್ತಿವೆ. ಇಲ್ಲಿ ಕಲಿಯುವ ಹೈಟೆಕ್ ನಗರಗಳ ಉಳ್ಳವರು ಮತ್ತು ಸಾಮಾಜಿಕವಾಗಿ ಮುಂದುವರೆದವರ ಮಕ್ಕಳಿಗೆ ಗ್ರಾಮೀಣ ಮೀಸಲಾತಿ ಪ್ರಯೋಜನ ಸಿಗುತ್ತದೆ. ಆದರೆ ಅದೇ ನಗರದ ಕೊಳಚೆ ಏರಿಯಾದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುವ ದುರ್ಬಲರಿಗೆ ಮೀಸಲಾತಿ ಬರೀ ಕನಸಷ್ಟೇ.

ಹೈಟೆಕ್ ರೆಸಿಡೆನ್ಸಿಯಲ್ ಶಾಲೆಗಳಲ್ಲಿ ಅಭ್ಯಾಸ ಮಾಡಿದ ಬಲಾಢ್ಯರೊಂದಿಗೆ ಸರ್ಕಾರಿ ಶಾಲೆಯಲ್ಲಿ ಕಲಿತ ‘ನತದೃಷ್ಟ’ರನ್ನು ಒಂದೇ ಮಾನದಂಡದಿಂದ ಅಳೆಯುವುದಿದೆಯಲ್ಲ, ಅದು ಬರ್ಬರ-ಘೋರ ಅನ್ಯಾಯ! ಖಾಸಗಿ ಶಾಲೆಯಲ್ಲಿ ಕಲಿತವರು ಶೈಕ್ಷಣಿಕ-ಔದ್ಯೋಗಿಕ ಪೈಪೋಟಿಯಲ್ಲಿ ಗೆಲ್ಲುತ್ತಿದ್ದಾರೆ; ಸರ್ಕಾರಿ ಶಾಲೆಯಲ್ಲಿ ಕಲಿತ ನಗರ-ಹಳ್ಳಿಗಳ ಮಕ್ಕಳೂ ಸ್ವಂತ ಪರಿಶ್ರಮ, ಪ್ರತಿಭೆಯಿಂದ ಸಾಧನೆ ಮಾಡಿರಲೂಬಹುದು. ಆದರಿಂದ ಪ್ರಮಾಣ ತೀರ ಕಮ್ಮಿ; ಈ ಹಳ್ಳಿಗರು ಜಾಗತಿಕ ಸ್ಫರ್ಧೆಯಲ್ಲಿ ಎಡವುತ್ತಿದ್ದಾರೆ. ಪ್ರತಿಭೆ ಹೊರಹೊಮ್ಮಲು ಪ್ರೋತ್ಸಾಹವಿಲ್ಲದಾಗಿದೆ. ಸರಿಯಾದ ಸೂರು, ಶಿಕ್ಷಕರಿಲ್ಲದ, ಶಿಕ್ಷಕರಿದ್ದರೂ ಕರ್ತವ್ಯ ಪ್ರಜ್ಞೆ ಇಲ್ಲದವರೇ ಹೆಚ್ಚಿರುವ ಸರ್ಕಾರಿ ಶಾಲೆಗಳ ಗೋಳು ಹೇಳತೀರದು.

ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಕನ್ನಡ ಕಲಿತರೆ ಬದುಕು ರೂಪಿಸಿಕೊಳ್ಳಲಾಗದೆಂಬ ಹತಾಶೆ ಮಡುಗಟ್ಟಿದೆ. ‘ಕನ್ನಡ ಶಾಲೆ’ಗಳೆಂದೇ ಜನಜನಿತವಾಗಿದ್ದ ನೆಚ್ಚಿನ ಸರ್ಕಾರಿ ಶಾಲೆಗಳೀಗ ಕಣ್ಮರೆಯಾಗುತ್ತಿವೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸುವುದಿರಲಿ, ಅಸ್ತಿತ್ವ ಉಳಿಸಿಕೊಳ್ಳಲಿಕ್ಕೆ ಒದ್ದಾಡಬೇಕಾಗಿದೆ. ಖಾಸಗಿ ಶಾಲೆಗಳು ಉತ್ತಮ ಫಲಿತಾಂಶ ಕೊಡುತ್ತಿವೆ. ಉತ್ಕೃಷ್ಟತೆ ಕಾಪಾಡಿಕೊಳ್ಳದಿದ್ದರೆ ನೆಲೆ-ಬೆಲೆ ಕುಸಿಯುವ ಭಯ ಖಾಸಗಿಯವರನ್ನು ನಿರಂತರ ಎಚ್ಚರ ಸ್ಥಿತಿಯಲ್ಲಿ ಇಟ್ಟಿರುತ್ತದೆ.

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ. ಸರ್ಕಾರಿ ಶಾಲೆಗಳಲ್ಲಿ ವಿಶ್ವಾಸಾರ್ಹತೆ, ಲವಲವಿಕೆ, ಪ್ರೋತ್ಸಾಹ ಇಲ್ಲದಿದ್ದರೆ ಎಷ್ಟೆ ಆರ್ಥಿಕ ಸಂಕಷ್ಟವಿದ್ದರೂ ಸಾಲ-ಸೂಲ ಮಾಡಿಯಾದರೂ ಖಾಸಗಿ ಶಿಕ್ಷಣಕ್ಕೆ ಹಾತೊರೆಯುತ್ತಾರೆಂಬ ವಾಸ್ತವ ಸರ್ಕಾರಿ ಪಂಡಿತರಿಗೆ ಅರ್ಥವಾಗಬೇಕಿದೆ.

ನಿರಂತರ ಹತ್ತು ಶೈಕ್ಷಣಿಕ ವರ್ಷಗಳ ಅಧ್ಯಯನ ಬದಲಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಪಾಸು ಮಾಡಿದವರಿಗೆ ಕನಿಷ್ಠ ಶೇಕಡಾ 20ರಷ್ಟು ಸಮನಾಂತರ ಮೀಸಲಾತಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒದಗಿಸಲು ಚಿಂತಿಸಬೇಕಿದೆ. ಇದರಿಂದ ಗ್ರಾಮೀಣ ಮತ್ತು ನಗರ ಎರಡೂ ಕಡೆಯ ಬಡ ಅಸಾಯಕರಿಗೆ ಅನುಕೂಲವಾಗುತ್ತದೆ. ಭೌಗೋಳಿಕ ನೆಪವೊಡ್ಡಿ ಗ್ರಾಮೀಣ ಮೀಸಲಾತಿಗೆ ಕನ್ನ ಕೊರೆಯುವವರಿಗೆ ಕಡಿವಾಣ ಬೀಳುತ್ತದೆ. ಭಾಷೆ ಮೇಲಿನ ಪ್ರೀತಿಯಿಂದ ಕನ್ನಡ ಮಾಧ್ಯಮದಲ್ಲಿ ಕಲಿಯುವ ಹೊರನಾಡ ಕನ್ನಡಿಗರಿಗೂ ಈ ಮೀಸಲು ಸೌಲಭ್ಯ ಸಿಗುವಂತಾಗಬೇಕು. ರಾಜ್ಯ ಕೋಟಾದಲ್ಲಿ ಸಾಮಾನ್ಯ ಪ್ರವೇಶಪರೀಕ್ಷೆ (ಸಿಇಟಿ) ಬರೆಯಲು ಕನಿಷ್ಠ ಏಳು ವರ್ಷ ಕರ್ನಾಟಕದಲ್ಲಿ ಕಲಿತಿರಬೇಕೆಂಬ ಹುಚ್ಚು ನಿಯಮದಿಂದಲೂ ವಿನಾಯಿತಿ ಹೊರನಾಡ ಕನ್ನಡಿಗರಿಗೆ ಕೊಡಬೇಕು. ಇದೆಲ್ಲ ಈಗಿನ ಅವಾಂತರಕಾರಿ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ಬದಲಾವಣೆಯಿಂದ ಮಾತ್ರ ಸಾಧ್ಯ!

  • ಶುದ್ದೋಧನ

ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...