Homeಮುಖಪುಟಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿವೆ.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ಹಿಂದಿ ಮಾತಾಡದ ದಕ್ಷಿಣ ಭಾರತದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಸೆ.14 ರ ಹಿಂದಿ ದಿವಸ್‌ ಆಚರಣೆ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸಿನಿಮಾ ನಿರ್ದೇಶಕ ಪವನ್ ಕುಮಾರ್‌ ಹಿಂದಿ ಹೇರಿಕೆ ಕುರಿತು ಹೊಸ ರೀತಿಯ ಪ್ರತಿರೋಧಕ್ಕೆ ಮುಂದಾಗಿದ್ದರು. ಅದರ ಫಲವೇ ಇಂದು ಬಿಡುಗಡೆಯಾಗಿರುವ “ಏನ್ ಮಾಡೋದು..?” ಎನ್ನುವ ಕನ್ನಡ ಕಿರುಚಿತ್ರ.

ಹೌದು, ಕಳೆದ ಸೆಪ್ಟಂಬರ್‌ನಲ್ಲಿ ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದರು.

“ಹಿಂದಿ ಹೇರಿಕೆಯನ್ನು ವಿರೋಧಿಸುವ ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡಿ, ಅವುಗಳಿಗೆ ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಕನ್ನಡದಲ್ಲಿ ಕೇಳುವುದು. ಆದರೆ ಅವರು ಕೊಡಲಿಲ್ಲ ಎಂದರೆ ಸರ್ಟಿಫಿಕೆಟ್ ಇಲ್ಲದೆಯೇ ಚಿತ್ರ ಬಿಡುಗಡೆ ಮಾಡುವ ಚಾಲೆಂಜ್ ನೀಡಿದ್ದರು.”

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. 50 ಜನ ಸೇರಿ ಚಿತ್ರ ಮಾಡಿದರೆ ಅದು ಪ್ರತಿಭಟನೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪವನ್ ಕುಮಾರ್‌ ಚಾಲೆಂಜ್‌ಗೆ ಹಲವಾರು ನಿರ್ದೇಶಕರು ಸಾಥ್ ನೀಡಿದ್ದರು. ತಾವು ನಿಮ್ಮ ಜೊತೆಗೆ ನಿಲ್ಲುವುದಾಗಿ ಭರವಸೆ ನೀಡಿದ್ದರು. ಸದ್ಯ ಪವನ್ ಕುಮಾರ್‌ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ “ಏನ್ ಮಾಡೋದು..?” ಎಂಬ ಕಿರುಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

 

“ಸೆನ್ಸಾರ್‌ ಮಂಡಳಿಗೆ ತಮ್ಮ ಚಿತ್ರವನ್ನು ಕಳುಹಿಸಿ, ಚಿತ್ರಕ್ಕೆ ಕನ್ನಡದಲ್ಲೇ ಸಟೀಫಿಕೆಟ್ ಕೇಳುವ ಒಂದು ಚಿತ್ರ ತಂಡ, ಅವರಿಗೆ ಕನ್ನಡದಲ್ಲಿ ಪ್ರಮಾಣಪತ್ರ ನೀಡಲು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಅಡ್ಡ ಬರುವ ಕುರಿತು, ಮಂಡಳಿಯ ಸದಸ್ಯರು ಯಾವ ಯಾವ ರೀತಿ ಮಾತಾಡಬಹುದು” ಎಂಬಂತಹ ವಿಚಾರವನ್ನೇ ತಮ್ಮ ಕಿರುಚಿತ್ರದ ಕಥೆಯಾಗಿಟ್ಟುಕೊಂಡು “ಏನ್ ಮಾಡೋದು..?” ಎಂಬ ಚಿತ್ರ ಬಿಡುಗಡೆ ಮಾಡಿದ್ದಾರೆ.

ಇದೊಂದು ಚಳವಳಿ ಎಂಬ ರೀತಿಯಲ್ಲಿ ಈ ಕಿರುಚಿತ್ರವನ್ನು ಬಣ್ಣಿಸಲಾಗಿದೆ. ಹಿಂದೆ ಕೂಡ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ನಿರ್ದೇಶಕ ಪವನ್ ಕುಮಾರ್‌, ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಹಿಂದಿ ಹೇರಿಕೆಗೆ ಪ್ರತಿರೋಧ ನೀಡಲು ಸಾಧ್ಯ ಎಂದಿದ್ದರು.

ತಮ್ಮ ಕಿರುಚಿತ್ರದಲ್ಲೂ ಏನ್ ಮಾಡೋದು..? ಎಂಬ ಪ್ರಶ್ನೆಯನ್ನು ಹಾಗೆ ಇಟ್ಟಿದ್ದಾರೆ. ಆದರೆ ಕೊನೆಯಲ್ಲಿ ಕನ್ನಡದಲ್ಲಿ ಪ್ರಮಾಣಪತ್ರ ಕೊಟ್ಟರೆ ಹೇಗಿರುತ್ತದೆ ಎಂಬುದನ್ನು ಪಾತ್ರಗಳಿಂದಲೇ ಪ್ರಮಾಣಪತ್ರ ಓದಿಸಿದ್ದಾರೆ. ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿದ್ದು, ಜನರು ನಿರ್ದೇಶಕರ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿ, ತಾವೂ ಜೊತೆ ನಿಲ್ಲುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...