Homeಮುಖಪುಟಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿವೆ.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ಹಿಂದಿ ಮಾತಾಡದ ದಕ್ಷಿಣ ಭಾರತದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಸೆ.14 ರ ಹಿಂದಿ ದಿವಸ್‌ ಆಚರಣೆ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸಿನಿಮಾ ನಿರ್ದೇಶಕ ಪವನ್ ಕುಮಾರ್‌ ಹಿಂದಿ ಹೇರಿಕೆ ಕುರಿತು ಹೊಸ ರೀತಿಯ ಪ್ರತಿರೋಧಕ್ಕೆ ಮುಂದಾಗಿದ್ದರು. ಅದರ ಫಲವೇ ಇಂದು ಬಿಡುಗಡೆಯಾಗಿರುವ “ಏನ್ ಮಾಡೋದು..?” ಎನ್ನುವ ಕನ್ನಡ ಕಿರುಚಿತ್ರ.

ಹೌದು, ಕಳೆದ ಸೆಪ್ಟಂಬರ್‌ನಲ್ಲಿ ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದರು.

“ಹಿಂದಿ ಹೇರಿಕೆಯನ್ನು ವಿರೋಧಿಸುವ ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡಿ, ಅವುಗಳಿಗೆ ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಕನ್ನಡದಲ್ಲಿ ಕೇಳುವುದು. ಆದರೆ ಅವರು ಕೊಡಲಿಲ್ಲ ಎಂದರೆ ಸರ್ಟಿಫಿಕೆಟ್ ಇಲ್ಲದೆಯೇ ಚಿತ್ರ ಬಿಡುಗಡೆ ಮಾಡುವ ಚಾಲೆಂಜ್ ನೀಡಿದ್ದರು.”

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. 50 ಜನ ಸೇರಿ ಚಿತ್ರ ಮಾಡಿದರೆ ಅದು ಪ್ರತಿಭಟನೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪವನ್ ಕುಮಾರ್‌ ಚಾಲೆಂಜ್‌ಗೆ ಹಲವಾರು ನಿರ್ದೇಶಕರು ಸಾಥ್ ನೀಡಿದ್ದರು. ತಾವು ನಿಮ್ಮ ಜೊತೆಗೆ ನಿಲ್ಲುವುದಾಗಿ ಭರವಸೆ ನೀಡಿದ್ದರು. ಸದ್ಯ ಪವನ್ ಕುಮಾರ್‌ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ “ಏನ್ ಮಾಡೋದು..?” ಎಂಬ ಕಿರುಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

 

“ಸೆನ್ಸಾರ್‌ ಮಂಡಳಿಗೆ ತಮ್ಮ ಚಿತ್ರವನ್ನು ಕಳುಹಿಸಿ, ಚಿತ್ರಕ್ಕೆ ಕನ್ನಡದಲ್ಲೇ ಸಟೀಫಿಕೆಟ್ ಕೇಳುವ ಒಂದು ಚಿತ್ರ ತಂಡ, ಅವರಿಗೆ ಕನ್ನಡದಲ್ಲಿ ಪ್ರಮಾಣಪತ್ರ ನೀಡಲು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಅಡ್ಡ ಬರುವ ಕುರಿತು, ಮಂಡಳಿಯ ಸದಸ್ಯರು ಯಾವ ಯಾವ ರೀತಿ ಮಾತಾಡಬಹುದು” ಎಂಬಂತಹ ವಿಚಾರವನ್ನೇ ತಮ್ಮ ಕಿರುಚಿತ್ರದ ಕಥೆಯಾಗಿಟ್ಟುಕೊಂಡು “ಏನ್ ಮಾಡೋದು..?” ಎಂಬ ಚಿತ್ರ ಬಿಡುಗಡೆ ಮಾಡಿದ್ದಾರೆ.

ಇದೊಂದು ಚಳವಳಿ ಎಂಬ ರೀತಿಯಲ್ಲಿ ಈ ಕಿರುಚಿತ್ರವನ್ನು ಬಣ್ಣಿಸಲಾಗಿದೆ. ಹಿಂದೆ ಕೂಡ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ನಿರ್ದೇಶಕ ಪವನ್ ಕುಮಾರ್‌, ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಹಿಂದಿ ಹೇರಿಕೆಗೆ ಪ್ರತಿರೋಧ ನೀಡಲು ಸಾಧ್ಯ ಎಂದಿದ್ದರು.

ತಮ್ಮ ಕಿರುಚಿತ್ರದಲ್ಲೂ ಏನ್ ಮಾಡೋದು..? ಎಂಬ ಪ್ರಶ್ನೆಯನ್ನು ಹಾಗೆ ಇಟ್ಟಿದ್ದಾರೆ. ಆದರೆ ಕೊನೆಯಲ್ಲಿ ಕನ್ನಡದಲ್ಲಿ ಪ್ರಮಾಣಪತ್ರ ಕೊಟ್ಟರೆ ಹೇಗಿರುತ್ತದೆ ಎಂಬುದನ್ನು ಪಾತ್ರಗಳಿಂದಲೇ ಪ್ರಮಾಣಪತ್ರ ಓದಿಸಿದ್ದಾರೆ. ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿದ್ದು, ಜನರು ನಿರ್ದೇಶಕರ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿ, ತಾವೂ ಜೊತೆ ನಿಲ್ಲುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...