Homeಮುಖಪುಟಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ಹಿಂದೂ-ಮುಸ್ಲಿಂ ಸಮುದಾಯದಲ್ಲಿ ದ್ವೇಷ ಸೃಷ್ಟಿಸಲು ಮತ್ತು ಪ್ರಕರಣದ ವಿಚಾರಣೆಯ ಗಮನವನ್ನು ಬೇರೆಡೆ ಸೆಳೆಯಲು (ಪಿಎಫ್‌ಐ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಕುಟುಂಬ ಸದಸ್ಯರು ಗೃಹಬಂಧನಕ್ಕೆ ಸಮಾನವಾದ ಪರಿಸ್ಥಿತಿಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ನೀಡಿದ್ದ ಸಿಆರ್‌ಪಿಎಫ್‌ ಭದ್ರತೆ ಹಿಂತೆಗೆದುಕೊಂಡ ನಂತರ, ಕುಟುಂಬ ಸದಸ್ಯರು ಜೀವಭಯಕ್ಕೆ ಒಳಗಾಗಿದ್ದಾರೆ ಎಂದು ನಾಗರಿಕ ಹಕ್ಕುಗಳ ಸಂಘಟನೆಗಳು ತಿಳಿಸಿವೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL) ಈ ಪ್ರಕರಣದ ಬಗ್ಗೆ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ನಿಧಿಯ ಮೂಲಕ ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಭದ್ರತೆ ಮತ್ತು ಪುನರ್ವಸತಿ ಕಲ್ಪಿಸಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.

ಲಕ್ನೋದಲ್ಲಿ ಸುದ್ದಿಗೋಷ್ಠಿ ನಡೆಸಿದ ಪಿಯುಸಿಎಲ್ ಸದಸ್ಯರಾದ ಕಮಲ್ ಸಿಂಗ್, ಫರ್ಮನ್ ನಖ್ವಿ, ಅಲೋಕ್, ಶಶಿಕಾಂತ್ ಮತ್ತು ಕೆ.ಬಿ.ಮೌರ್ಯ, ಇಡೀ ಕುಟುಂಬವು ಗೃಹಬಂಧನದ ಪರಿಸ್ಥಿತಿಯಲ್ಲಿದೆ ಮತ್ತು ಅವರ ಸಾಮಾಜಿಕ ಬದುಕು ಸಮಾಜದಿಂದ ಪ್ರತ್ಯೇಕಗೊಂಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು

’CRPF ರಕ್ಷಣೆಯನ್ನು ಹಿಂತೆಗೆದುಕೊಂಡ ನಂತರ ಸಂತ್ರಸ್ತೆ ಕುಟುಂಬ ಸದಸ್ಯರು ಭಯದಲ್ಲಿ ಬದುಕುತ್ತಿದ್ದಾರೆ. ಕುಟುಂಬದ ಒಪ್ಪಿಗೆಯಿಲ್ಲದೆ ಮೃತ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಬೇಕು ಎಂದು ಪಿಯುಸಿಎಲ್ ಸದಸ್ಯರು ಒತ್ತಾಯಿಸಿದ್ದಾರೆ.

ಹಿಂದೂ-ಮುಸ್ಲಿಂ ಸಮುದಾಯದಲ್ಲಿ ದ್ವೇಷ ಸೃಷ್ಟಿಸಲು ಮತ್ತು ಪ್ರಕರಣದ ವಿಚಾರಣೆಯ ಗಮನವನ್ನು ಬೇರೆಡೆ ಸೆಳೆಯಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ ಎಂದು ಅಲೋಕ್ ಮತ್ತು ಫರ್ಮನ್ ನಖ್ವಿ ಆರೋಪಿಸಿದರು.

ಪಿಎಫ್‌ಐ ನಿಷೇಧಿತ ಸಂಸ್ಥೆಗಳ ಪಟ್ಟಿಯಲ್ಲಿಲ್ಲ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದನ್ನು ಉಗ್ರಗಾಮಿ ಸಂಸ್ಥೆ ಎಂದಿದ್ದಾರೆ ಎಂದು ಕಮಲ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಸೇರಿ ಮೂವರನ್ನು ಪಿಎಫ್‌ಐ ಸಂಘಟನೆಯವರು ಎಂದು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ಹೈಕೋರ್ಟ್ ಮೇಲ್ವಿಚಾರಣೆ ಮಾಡಲಿ: ಹತ್ರಾಸ್ CBI ತನಿಖೆ ಮೇಲ್ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...