Homeಮುಖಪುಟಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

ಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

'ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ'ಯ ಹೆಸರನ್ನು 'ಶ್ರೀ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ' ಎಂದು ಮರುನಾಮಕರಣ ಮಾಡಲಾಗಿದೆ.

- Advertisement -
- Advertisement -

ಸರ್ಕಾರ ಕೋವಿಡ್ ನಿಭಾಯಿಸಲು ಯಶಸ್ವಿಯಾಗಿದೆಯೋ, ಇಲ್ಲವೋ ಅದು ಬೇರೆ ಮಾತು ಆದರೆ ಅದು ತನ್ನ ಅಜೆಂಡಾಗಳನ್ನು ಮಾತ್ರ ಸ್ಪಷ್ಟವಾಗಿ ಜಾರಿ ಮಾಡುತ್ತಿದೆ. ಕರ್ನಾಟಕ ಸರ್ಕಾರ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವನ್ನು ಅನುಕರಣೆ ಮಾಡುತ್ತಿದ್ದು, ಕರ್ನಾಟಕದಲ್ಲಿಯೂ ಮರುನಾಮಕರಣ ಮಾಡುವುದರಲ್ಲಿ ನಿರತವಾಗಿದೆ.

ಯಲಹಂಕದ ಮೇಲ್ಸೆತುವೆಗೆ ಕನ್ನಡಿಗರ ವಿರೋಧದ ನಡುವೆಯೂ ಸರ್ಕಾರ ಸಾವರ್ಕರ್ ಹೆಸರು ಇಡಲಾಯಿತು. ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಅಡ್ಡಗಾಲು ಹಾಕಿ, ಕನ್ನಡಿಗರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು. ಆನಂತರ ಜನರಿಗೆ ಪ್ರವಾಹ ಪರಿಹಾರ ನೀಡಲಾಗದಿದ್ದರೂ ಮರಾಠ ಅಭಿವೃದ್ದಿ ಪ್ರಾಧಿಕಾರ ಮಾಡಲು ಮುಂದಾಯಿತು. ಇಂತಹ ಕನ್ನಡಿಗರ ವಿರೋಧದ ಮತ್ತೊಂದು ಕೆಲಸಕ್ಕೆ ಸರ್ಕಾರ ಕೈ ಹಾಕಿದೆ. ಅದೇ ಬೆಂಗಳೂರಿನ ಶಿವಾಜಿನಗರದಲ್ಲಿರುವ ‘ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ’ಯ ಹೆಸರನ್ನು ‘ಶ್ರೀ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ.

ಈ ಹೆಸರುಗಳ ಬದಲಾವಣೆಯಿಂದ ಏನಾದರೂ ಪರಿವರ್ತನೆ ಸಾಧ್ಯವೇ? ಜನರಿಗೆ ಏನು ಉಪಯೋಗ ಎಂಬುದನ್ನು ಯೋಚಿಸದ ಸರ್ಕಾರ ತನ್ನ ಅಜೆಂಡಾಗಳನ್ನು ಹೇರುತ್ತಿದೆ ಎಂದು ಹಲವರು ದೂರಿದ್ದಾರೆ. ಇನ್ನು ನೀವು ಹೆಸರು ಬದಲಾವಣೆ ಮಾಡಲೇಬೇಕೆಂದರೆ ಕನ್ನಡ ನಾಡಿನಲ್ಲಿ ಸಾಧನೆಗೈದ ಕನ್ನಡಿಗರು ಹೆಸರು ಇಡಬಹುದಲ್ಲವೇ? ಎಲ್ಲಕ್ಕೂ ಉತ್ತರ ಭಾರತೀಯರ ಹೆಸರು ಏಕೆ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.

“ಯಾಕೆ ನಿಮಗೆ ಯಾವ ಕನ್ನಡಿಗ ಸಾಧಕರ ಹೆಸರು ಸಿಗಲಿಲ್ಲವೇ? ಕೊರೊನಾಗೆ ಜೀವತೆತ್ತ ಕೊರನಾ ಸೈನಿಕರ ಹೆಸರು ಇಡಬಹುದಿತ್ತು ಕಡೆಪಕ್ಷ ನಿಮ್ಮ ಪಕ್ಷದ ಕರ್ನಾಟಕದ ನಾಯಕರ ಹೆಸರು ಆದ್ರೂ ಇಡಬಹುದಿತ್ತು ಅಲ್ವಾ! ಎಂತ ಶೋಚನೀಯ ಗುಲಾಮಗಿರಿ! ಕಾಂಗ್ರೆಸ್‌ನವರಿಗೆ ನೆಹರು, ಇಂದಿರಾ, ರಾಜೀವ್. ನಿಮಗೆ ಮಾಳವೀಯ, ಮುಖರ್ಜಿ, ವಾಜಪೇಯಿ ಇಷ್ಟೇನಾ ನಿಮ್ಮ ರಾಜಕೀಯ ಜೀವನ!” ಎಂದು ಕೃಷಿಕ ಎವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾರನ್ನ ಕೇಳಿ ಹೆಸರಿಟ್ರಿ. ಸರ್ಕಾರ ನಿಮ್ಮದೆ ಆಗಿರಬಹುದು, ಆದ್ರೆ ರಾಜ್ಯದ ಆಸ್ತಿ ಅಡವು ನಿಮ್ಮಪ್ಪಗಳು ಎಂಬಂತೆ ಬೇಕಾಬಿಟ್ಟಿ ನಿಮಗಿಶ್ಟ ಬಂದವರ ಹೆಸರಿಡುತ್ತಿದ್ದೀರಿ. ನಿಮ್ಮ ಒಡೆತನದ ಆಸ್ತಿಗಳಿಗೆ ಇಟ್ಕಳ್ರಯ್ಯ ವಾಜಪೇಯೊ, ಮುಕರ್ಜಿಯೊ ಮತ್ತಿನ್ನಾರದೊ. ಯಾರು ಕೇಳಿಯಾರು ಎಂದು ಸೋಮಶೇಖರ್ ಬಜ್ಜಣ್ಣ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರ ಕಟ್ಟಿದ ಸಂಸ್ಥೆಗಳನ್ನ ಮರುನಾಮಕರಣ ಮಾಡುವುದೇ ತಮ್ಮ ಅಭಿವೃದ್ಧಿ ಅನ್ಸುತ್ತೆ. ಇದು ಕೈಲಾಗದೆ ಇರೋರು ಮಾಡೋ ಕೆಲಸ. ನೀವು ಸಾರ್ವಜನಿಕ ಸಂಸ್ಥೆಗಳನ್ನು ಕಟ್ಟಿ ಆಮೇಲೆ ಅವಕ್ಕೆ ಹೆಸರಿಡಿ ಎಂದು ಅಜಯ್ ರಾಜ್ ಸವಾಲು ಹಾಕಿದ್ದಾರೆ.


ಇದನ್ನೂ ಓದಿ; ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...