Homeಮುಖಪುಟನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಟಕೋತ್ಸವದ ವಿಶೇಷ ಎಂದರೆ "ನಾಗರಕಟ್ಟೆ". ಈ ಕಾರ್ಯಕ್ರಮದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

- Advertisement -
- Advertisement -

2018ರಿಂದ ಖ್ಯಾತನಟ, ನಿರ್ದೇಶಕ ಶಂಕರ್‌ ನಾಗ್ ನೆನಪಲ್ಲಿ ಪ್ರತಿವರ್ಷದ ಪರಮ ಗುರಿ ಎಂದು ಶಂಕರ್‌ ನಾಗ್ ನಾಟಕೋತ್ಸವ ನಡೆಸುತ್ತಿರುವ ಸಾತ್ವಿಕ ಮತ್ತು ರಂಗಪಯಣ ತಂಡ ಮತ್ತೊಂದು ನಾಟಕೋತ್ಸವಕ್ಕೆ ಸಜ್ಜಾಗಿ, ಕಲಾ ಪ್ರೇಮಿಗಳನ್ನು ಸ್ವಾಗತಿಸುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ ಅವರ ಈ ತಂಡಗಳು 2018ರಿಂದ ವಿಶಿಷ್ಟವಾಗಿ ಶಂಕರ್‌ ನಾಗ್ ಅವರ ನೆನಪನ್ನು ಮತ್ತಷ್ಟು ಹಚ್ಚಹಸಿರುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ನವೆಂಬರ್‌ 23 ರಿಂದ 26 ರವರೆಗೆ ನಾಲ್ಕು ದಿನಗಳು ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ.

ಪ್ರತಿ ವರ್ಷದ ಏಪ್ರಿಲ್, ಮೇ ತಿಂಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಈ ಬಾರಿ ಕೊರೊನಾ ಕಾರಣದಿಂದ ನವೆಂಬರ್‌ನಲ್ಲಿ ನಡೆಯುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ

ಈ ನಾಟಕೋತ್ಸವದಲ್ಲಿ ಬರೀ ನಾಟಕಗಳಷ್ಟೇ ಅಲ್ಲದೆ, ಸಾಹಿತ್ಯ, ಸಂಗೀತ, ಮಹಿಳೆ ಮತ್ತು ರಂಗಭೂಮಿ, ವಿಚಾರ ಸಂಕೀರ್ಣ, ನಿರ್ದೇಶಕರೊಂದಿಗೆ ಸಂವಾದಗಳು ಸೇರಿದಂತೆ ಹತ್ತಾರ ವಿಭಿನ್ನ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ’ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ಹೆಚ್ಚು ಪ್ರಯೋಗಾತ್ಮಕ ಮತ್ತು ಮಹಿಳಾ ಪ್ರಧಾನ ನಾಟಕಗಳನ್ನು ಈ ತಂಡಗಳು ಪ್ರಸ್ತುತ ಪಡಿಸಿವೆ. ಈ ಬಾರಿಯ ಶಂಕರ್ ನಾಗ್ ನಾಟಕೋತ್ಸವದ ಉದ್ಘಾಟನೆಯನ್ನು ಮಹಿಳಾ ನಿರ್ದೇಶಕಿಯರು ಮಾಡಲಿದ್ದಾರೆ. ಪ್ರತಿ ದಿನ ಸಂಜೆ 5.30 ರಿಂದ ಕಾರ್ಯಕ್ರಮಗಳು ಆರಂಭವಾಗಲಿವೆ.

ನವೆಂಬರ್ 23 ರಂದು ಸಂಜೆ ಜಾನ್ ದೇವರಾಜು ಅವರಿಂದ ’ಬ್ಲ್ಯಾಕ್ &ವೈಟ್’, ಬಾಲು ಜಂಬೆ ತಂಡದಿಂದ ’ರಿದಂ’ ಸಾತ್ವಿಕ ರಂಗತಂಡದಿಂದ ’ಸೂಫಿ ನಡಿಗೆ ತತ್ವಪದದೆಡೆಗೆ’ ಎಂಬ ಕಾರ್ಯಕ್ರಮಗಳು ನಡೆಯಲಿವೆ.

ನವೆಂಬರ್‌ 24 ರಂದು ಸಂಜೆ 5.30ಕ್ಕೆ ಲಂಕೇಶ್ ಅವರ ವಿಚಾರಗಳು ಮತ್ತು ನಾವು ಎಂಬ ವಿಚಾರಗೋಷ್ಠಿ ನಡೆಯಲಿದೆ. ನಾಗರಕಟ್ಟೆ ಮತ್ತು ಸಂಜೆ 7.45ಕ್ಕೆ ಶ್ರದ್ಧಾ ನಾಟಕ ಆರಂಭವಾಗಲಿದೆ.

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!
PC:Nayana sooda

ನವೆಂಬರ್‌ 25 ರಂದು ’ಬದುಕು ಕಲಿಸಿದ ಬೇಂದ್ರೆ’ ವಿಚಾರಗೋಷ್ಠಿ, ನಾಗರಕಟ್ಟೆ ಮತ್ತು ’ಸೋಮಾಲಿಯಾ ಕಡಲ್ಗಳ್ಳರು’ ಎಂಬ ನಾಟಕ ನಡೆಯಲಿದೆ.

ನವೆಂಬರ್‌ 26 ರಂದು ಶಂಕರ್‌ ನಾಗ್ ಅಭಿನಯಿಸಿದ್ದ ನಾಟಕಗಳ ರಂಗಗೀತೆಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜೊತೆಗೆ ಶಂಕರ್‌ ನಾಗ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇವುಗಳ ನಂತರ 8 ಗಂಟೆಗೆ ಬಿದ್ದರೂರಿನ ಬಿಗ್‌ಬೆನ್ ನಾಟಕ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾಟಕೋತ್ಸವದ ವಿಶೇಷ ಎಂದರೆ “ನಾಗರಕಟ್ಟೆ”. ಈ ಕಾರ್ಯಕ್ರಮದಲ್ಲಿ ಶಂಕರ್‌ ನಾಗ್ ಅವರ ನೆನಪುಗಳು ನಿಮ್ಮನ್ನು ಕಾಡುತ್ತವೆ. ಕಾರ್ಯಕ್ರದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು, ಒಡನಾಡಿಗಳು, ಅವರ ಪರಿಚಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” –  ರಾಜ್‌ಗುರು, ರಂಗಕರ್ಮಿ

ನಾಟಕೋತ್ಸವದ ಸಿದ್ಧತೆಯಲ್ಲಿ ರಂಗತಂಡದ ಸದಸ್ಯರು

“ನಾಟಕೋತ್ಸವದಲ್ಲಿ ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಕಾರ್ಯಕ್ರಮ ನಡೆಸಲಾಗುತ್ತಿದೆ. ಈಗಾಗಲೇ ನಾಟಕೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಟಕೋತ್ಸವಕ್ಕೆ ಪ್ರವೇಶ ಉಚಿತವಾಗಿದ್ದು, ಮೊದಲು ಬಂದವರಿಗೆ ಆದ್ಯತೆ, ಹಾಗಾಗಿಯೇ ಪಾಸ್‌ಗಳನ್ನು ವಿತರಿಸಲಾಗಿದೆ. ಮಾಸ್ಕ್, ದೈಹಿಕ ಅಂತರ ಕಡ್ಡಾಯ” ಎಂದು ನಾಟಕೋತ್ಸವದ ನಿರ್ವಹಣೆ ನೋಡಿಕೊಳ್ಳುತ್ತಿರುವ ರಂಗಕರ್ಮಿ ನಯನ ಸೂಡ ತಿಳಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...