Homeಮುಖಪುಟನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಟಕೋತ್ಸವದ ವಿಶೇಷ ಎಂದರೆ "ನಾಗರಕಟ್ಟೆ". ಈ ಕಾರ್ಯಕ್ರಮದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

- Advertisement -
- Advertisement -

2018ರಿಂದ ಖ್ಯಾತನಟ, ನಿರ್ದೇಶಕ ಶಂಕರ್‌ ನಾಗ್ ನೆನಪಲ್ಲಿ ಪ್ರತಿವರ್ಷದ ಪರಮ ಗುರಿ ಎಂದು ಶಂಕರ್‌ ನಾಗ್ ನಾಟಕೋತ್ಸವ ನಡೆಸುತ್ತಿರುವ ಸಾತ್ವಿಕ ಮತ್ತು ರಂಗಪಯಣ ತಂಡ ಮತ್ತೊಂದು ನಾಟಕೋತ್ಸವಕ್ಕೆ ಸಜ್ಜಾಗಿ, ಕಲಾ ಪ್ರೇಮಿಗಳನ್ನು ಸ್ವಾಗತಿಸುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ ಅವರ ಈ ತಂಡಗಳು 2018ರಿಂದ ವಿಶಿಷ್ಟವಾಗಿ ಶಂಕರ್‌ ನಾಗ್ ಅವರ ನೆನಪನ್ನು ಮತ್ತಷ್ಟು ಹಚ್ಚಹಸಿರುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ನವೆಂಬರ್‌ 23 ರಿಂದ 26 ರವರೆಗೆ ನಾಲ್ಕು ದಿನಗಳು ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ.

ಪ್ರತಿ ವರ್ಷದ ಏಪ್ರಿಲ್, ಮೇ ತಿಂಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಈ ಬಾರಿ ಕೊರೊನಾ ಕಾರಣದಿಂದ ನವೆಂಬರ್‌ನಲ್ಲಿ ನಡೆಯುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ

ಈ ನಾಟಕೋತ್ಸವದಲ್ಲಿ ಬರೀ ನಾಟಕಗಳಷ್ಟೇ ಅಲ್ಲದೆ, ಸಾಹಿತ್ಯ, ಸಂಗೀತ, ಮಹಿಳೆ ಮತ್ತು ರಂಗಭೂಮಿ, ವಿಚಾರ ಸಂಕೀರ್ಣ, ನಿರ್ದೇಶಕರೊಂದಿಗೆ ಸಂವಾದಗಳು ಸೇರಿದಂತೆ ಹತ್ತಾರ ವಿಭಿನ್ನ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ’ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ಹೆಚ್ಚು ಪ್ರಯೋಗಾತ್ಮಕ ಮತ್ತು ಮಹಿಳಾ ಪ್ರಧಾನ ನಾಟಕಗಳನ್ನು ಈ ತಂಡಗಳು ಪ್ರಸ್ತುತ ಪಡಿಸಿವೆ. ಈ ಬಾರಿಯ ಶಂಕರ್ ನಾಗ್ ನಾಟಕೋತ್ಸವದ ಉದ್ಘಾಟನೆಯನ್ನು ಮಹಿಳಾ ನಿರ್ದೇಶಕಿಯರು ಮಾಡಲಿದ್ದಾರೆ. ಪ್ರತಿ ದಿನ ಸಂಜೆ 5.30 ರಿಂದ ಕಾರ್ಯಕ್ರಮಗಳು ಆರಂಭವಾಗಲಿವೆ.

ನವೆಂಬರ್ 23 ರಂದು ಸಂಜೆ ಜಾನ್ ದೇವರಾಜು ಅವರಿಂದ ’ಬ್ಲ್ಯಾಕ್ &ವೈಟ್’, ಬಾಲು ಜಂಬೆ ತಂಡದಿಂದ ’ರಿದಂ’ ಸಾತ್ವಿಕ ರಂಗತಂಡದಿಂದ ’ಸೂಫಿ ನಡಿಗೆ ತತ್ವಪದದೆಡೆಗೆ’ ಎಂಬ ಕಾರ್ಯಕ್ರಮಗಳು ನಡೆಯಲಿವೆ.

ನವೆಂಬರ್‌ 24 ರಂದು ಸಂಜೆ 5.30ಕ್ಕೆ ಲಂಕೇಶ್ ಅವರ ವಿಚಾರಗಳು ಮತ್ತು ನಾವು ಎಂಬ ವಿಚಾರಗೋಷ್ಠಿ ನಡೆಯಲಿದೆ. ನಾಗರಕಟ್ಟೆ ಮತ್ತು ಸಂಜೆ 7.45ಕ್ಕೆ ಶ್ರದ್ಧಾ ನಾಟಕ ಆರಂಭವಾಗಲಿದೆ.

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!
PC:Nayana sooda

ನವೆಂಬರ್‌ 25 ರಂದು ’ಬದುಕು ಕಲಿಸಿದ ಬೇಂದ್ರೆ’ ವಿಚಾರಗೋಷ್ಠಿ, ನಾಗರಕಟ್ಟೆ ಮತ್ತು ’ಸೋಮಾಲಿಯಾ ಕಡಲ್ಗಳ್ಳರು’ ಎಂಬ ನಾಟಕ ನಡೆಯಲಿದೆ.

ನವೆಂಬರ್‌ 26 ರಂದು ಶಂಕರ್‌ ನಾಗ್ ಅಭಿನಯಿಸಿದ್ದ ನಾಟಕಗಳ ರಂಗಗೀತೆಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜೊತೆಗೆ ಶಂಕರ್‌ ನಾಗ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇವುಗಳ ನಂತರ 8 ಗಂಟೆಗೆ ಬಿದ್ದರೂರಿನ ಬಿಗ್‌ಬೆನ್ ನಾಟಕ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾಟಕೋತ್ಸವದ ವಿಶೇಷ ಎಂದರೆ “ನಾಗರಕಟ್ಟೆ”. ಈ ಕಾರ್ಯಕ್ರಮದಲ್ಲಿ ಶಂಕರ್‌ ನಾಗ್ ಅವರ ನೆನಪುಗಳು ನಿಮ್ಮನ್ನು ಕಾಡುತ್ತವೆ. ಕಾರ್ಯಕ್ರದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು, ಒಡನಾಡಿಗಳು, ಅವರ ಪರಿಚಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” –  ರಾಜ್‌ಗುರು, ರಂಗಕರ್ಮಿ

ನಾಟಕೋತ್ಸವದ ಸಿದ್ಧತೆಯಲ್ಲಿ ರಂಗತಂಡದ ಸದಸ್ಯರು

“ನಾಟಕೋತ್ಸವದಲ್ಲಿ ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಕಾರ್ಯಕ್ರಮ ನಡೆಸಲಾಗುತ್ತಿದೆ. ಈಗಾಗಲೇ ನಾಟಕೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಟಕೋತ್ಸವಕ್ಕೆ ಪ್ರವೇಶ ಉಚಿತವಾಗಿದ್ದು, ಮೊದಲು ಬಂದವರಿಗೆ ಆದ್ಯತೆ, ಹಾಗಾಗಿಯೇ ಪಾಸ್‌ಗಳನ್ನು ವಿತರಿಸಲಾಗಿದೆ. ಮಾಸ್ಕ್, ದೈಹಿಕ ಅಂತರ ಕಡ್ಡಾಯ” ಎಂದು ನಾಟಕೋತ್ಸವದ ನಿರ್ವಹಣೆ ನೋಡಿಕೊಳ್ಳುತ್ತಿರುವ ರಂಗಕರ್ಮಿ ನಯನ ಸೂಡ ತಿಳಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...