Homeಮುಖಪುಟನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಟಕೋತ್ಸವದ ವಿಶೇಷ ಎಂದರೆ "ನಾಗರಕಟ್ಟೆ". ಈ ಕಾರ್ಯಕ್ರಮದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

- Advertisement -
- Advertisement -

2018ರಿಂದ ಖ್ಯಾತನಟ, ನಿರ್ದೇಶಕ ಶಂಕರ್‌ ನಾಗ್ ನೆನಪಲ್ಲಿ ಪ್ರತಿವರ್ಷದ ಪರಮ ಗುರಿ ಎಂದು ಶಂಕರ್‌ ನಾಗ್ ನಾಟಕೋತ್ಸವ ನಡೆಸುತ್ತಿರುವ ಸಾತ್ವಿಕ ಮತ್ತು ರಂಗಪಯಣ ತಂಡ ಮತ್ತೊಂದು ನಾಟಕೋತ್ಸವಕ್ಕೆ ಸಜ್ಜಾಗಿ, ಕಲಾ ಪ್ರೇಮಿಗಳನ್ನು ಸ್ವಾಗತಿಸುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ ಅವರ ಈ ತಂಡಗಳು 2018ರಿಂದ ವಿಶಿಷ್ಟವಾಗಿ ಶಂಕರ್‌ ನಾಗ್ ಅವರ ನೆನಪನ್ನು ಮತ್ತಷ್ಟು ಹಚ್ಚಹಸಿರುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ನವೆಂಬರ್‌ 23 ರಿಂದ 26 ರವರೆಗೆ ನಾಲ್ಕು ದಿನಗಳು ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ.

ಪ್ರತಿ ವರ್ಷದ ಏಪ್ರಿಲ್, ಮೇ ತಿಂಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಈ ಬಾರಿ ಕೊರೊನಾ ಕಾರಣದಿಂದ ನವೆಂಬರ್‌ನಲ್ಲಿ ನಡೆಯುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ

ಈ ನಾಟಕೋತ್ಸವದಲ್ಲಿ ಬರೀ ನಾಟಕಗಳಷ್ಟೇ ಅಲ್ಲದೆ, ಸಾಹಿತ್ಯ, ಸಂಗೀತ, ಮಹಿಳೆ ಮತ್ತು ರಂಗಭೂಮಿ, ವಿಚಾರ ಸಂಕೀರ್ಣ, ನಿರ್ದೇಶಕರೊಂದಿಗೆ ಸಂವಾದಗಳು ಸೇರಿದಂತೆ ಹತ್ತಾರ ವಿಭಿನ್ನ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ’ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ಹೆಚ್ಚು ಪ್ರಯೋಗಾತ್ಮಕ ಮತ್ತು ಮಹಿಳಾ ಪ್ರಧಾನ ನಾಟಕಗಳನ್ನು ಈ ತಂಡಗಳು ಪ್ರಸ್ತುತ ಪಡಿಸಿವೆ. ಈ ಬಾರಿಯ ಶಂಕರ್ ನಾಗ್ ನಾಟಕೋತ್ಸವದ ಉದ್ಘಾಟನೆಯನ್ನು ಮಹಿಳಾ ನಿರ್ದೇಶಕಿಯರು ಮಾಡಲಿದ್ದಾರೆ. ಪ್ರತಿ ದಿನ ಸಂಜೆ 5.30 ರಿಂದ ಕಾರ್ಯಕ್ರಮಗಳು ಆರಂಭವಾಗಲಿವೆ.

ನವೆಂಬರ್ 23 ರಂದು ಸಂಜೆ ಜಾನ್ ದೇವರಾಜು ಅವರಿಂದ ’ಬ್ಲ್ಯಾಕ್ &ವೈಟ್’, ಬಾಲು ಜಂಬೆ ತಂಡದಿಂದ ’ರಿದಂ’ ಸಾತ್ವಿಕ ರಂಗತಂಡದಿಂದ ’ಸೂಫಿ ನಡಿಗೆ ತತ್ವಪದದೆಡೆಗೆ’ ಎಂಬ ಕಾರ್ಯಕ್ರಮಗಳು ನಡೆಯಲಿವೆ.

ನವೆಂಬರ್‌ 24 ರಂದು ಸಂಜೆ 5.30ಕ್ಕೆ ಲಂಕೇಶ್ ಅವರ ವಿಚಾರಗಳು ಮತ್ತು ನಾವು ಎಂಬ ವಿಚಾರಗೋಷ್ಠಿ ನಡೆಯಲಿದೆ. ನಾಗರಕಟ್ಟೆ ಮತ್ತು ಸಂಜೆ 7.45ಕ್ಕೆ ಶ್ರದ್ಧಾ ನಾಟಕ ಆರಂಭವಾಗಲಿದೆ.

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!
PC:Nayana sooda

ನವೆಂಬರ್‌ 25 ರಂದು ’ಬದುಕು ಕಲಿಸಿದ ಬೇಂದ್ರೆ’ ವಿಚಾರಗೋಷ್ಠಿ, ನಾಗರಕಟ್ಟೆ ಮತ್ತು ’ಸೋಮಾಲಿಯಾ ಕಡಲ್ಗಳ್ಳರು’ ಎಂಬ ನಾಟಕ ನಡೆಯಲಿದೆ.

ನವೆಂಬರ್‌ 26 ರಂದು ಶಂಕರ್‌ ನಾಗ್ ಅಭಿನಯಿಸಿದ್ದ ನಾಟಕಗಳ ರಂಗಗೀತೆಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜೊತೆಗೆ ಶಂಕರ್‌ ನಾಗ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇವುಗಳ ನಂತರ 8 ಗಂಟೆಗೆ ಬಿದ್ದರೂರಿನ ಬಿಗ್‌ಬೆನ್ ನಾಟಕ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾಟಕೋತ್ಸವದ ವಿಶೇಷ ಎಂದರೆ “ನಾಗರಕಟ್ಟೆ”. ಈ ಕಾರ್ಯಕ್ರಮದಲ್ಲಿ ಶಂಕರ್‌ ನಾಗ್ ಅವರ ನೆನಪುಗಳು ನಿಮ್ಮನ್ನು ಕಾಡುತ್ತವೆ. ಕಾರ್ಯಕ್ರದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು, ಒಡನಾಡಿಗಳು, ಅವರ ಪರಿಚಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” –  ರಾಜ್‌ಗುರು, ರಂಗಕರ್ಮಿ

ನಾಟಕೋತ್ಸವದ ಸಿದ್ಧತೆಯಲ್ಲಿ ರಂಗತಂಡದ ಸದಸ್ಯರು

“ನಾಟಕೋತ್ಸವದಲ್ಲಿ ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಕಾರ್ಯಕ್ರಮ ನಡೆಸಲಾಗುತ್ತಿದೆ. ಈಗಾಗಲೇ ನಾಟಕೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಟಕೋತ್ಸವಕ್ಕೆ ಪ್ರವೇಶ ಉಚಿತವಾಗಿದ್ದು, ಮೊದಲು ಬಂದವರಿಗೆ ಆದ್ಯತೆ, ಹಾಗಾಗಿಯೇ ಪಾಸ್‌ಗಳನ್ನು ವಿತರಿಸಲಾಗಿದೆ. ಮಾಸ್ಕ್, ದೈಹಿಕ ಅಂತರ ಕಡ್ಡಾಯ” ಎಂದು ನಾಟಕೋತ್ಸವದ ನಿರ್ವಹಣೆ ನೋಡಿಕೊಳ್ಳುತ್ತಿರುವ ರಂಗಕರ್ಮಿ ನಯನ ಸೂಡ ತಿಳಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...