Homeಸಾಹಿತ್ಯ-ಸಂಸ್ಕೃತಿಕಥೆಸ್ವರ್ಗಕ್ಕೆ ಸ್ವಾಗತ.

ಸ್ವರ್ಗಕ್ಕೆ ಸ್ವಾಗತ.

- Advertisement -
- Advertisement -

ಭಾರತದ ರಾಜಕಾರಣಿಯೊಬ್ಬ ವಾಯುವಿಹಾರಕ್ಕಾಗಿ ರಸ್ತೆಯಲ್ಲಿ ನಡೆಯುತ್ತಿರುವಾಗ ಕಾರೊಂದು ಗುದ್ದಿ ಸಾವನ್ನಪ್ಪಿದರು. ಅವರ ಆತ್ಮವು ಸ್ವರ್ಗದೊಳಗೆ ಆಗಮಿಸುತ್ತದೆ. ಪ್ರವೇಶ ದ್ವಾರದ ಬಳಿ ಚಿತ್ರಗುಪ್ತ ಅವರನ್ನು ಬರಮಾಡಿಕೊಂಡರು.  “ಸ್ವರ್ಗಕ್ಕೆ ಸ್ವಾಗತ” ಎಂದು ಹೇಳಿ, “ಇಲ್ಲಿ ನೀವು ನೆಲೆಗೊಳ್ಳುವುದಕ್ಕಿಂತ ಮುಂಚೆ ಇಲ್ಲಿನ ಎಲ್ಲವೂ ಅಧಿಕೃತವಾಗಿ ಹೆಚ್ಚು ವ್ಯವಸ್ಥಿತವಾಗಿ ನಡೆಯುತ್ತಿವೆಯೇ ಎಂದು ನೀವೊಮ್ಮೆ ಪರೀಕ್ಷಿಸಿಕೊಳ್ಳಬೇಕಿದೆ, ಅದಕ್ಕಾಗಿ ಒಂದು ದಿನ ಸ್ವರ್ಗದಲ್ಲಿಯೂ, ಇನ್ನೊಂದು ನರಕದಲ್ಲಿಯೂ ಇದ್ದು ನಿಮಗೆ ಸೂಕ್ತವಾದುದ್ದನ್ನು ಆರಿಸಿಕೊಳ್ಳಬಹುದೆಂದು ಚಿತ್ರಗುಪ್ತ ಹೇಳಿದರು. ಆಗ ರಾಜಕಾರಣಿ “ಸಮಸ್ಯೆ ಇಲ್ಲ, ಇಲ್ಲಿ ಎಲ್ಲ ಚೆನ್ನಾಗಿದೆ, ನನಗೆ ಇಷ್ಟ ಆಯಿತು. ನರಕ ನೋಡುವ ಅಗತ್ಯವಿಲ್ಲ, ಸ್ವರ್ಗದಲ್ಲೇ ಇರುತ್ತೇನೆ ಒಳಗೆ ಹೋಗೋಣ” ಎಂದು ಹೇಳಿದರು.

ಆಗ ಚಿತ್ರಗುಪ್ತ “ಕ್ಷಮಿಸಿ, ನಮಗೆ ನಮ್ಮದೇ ಆದ ನಿಯಮಗಳಿವೆ, ನಾನು ಮೇಲಿನವರಿಂದ ಆದೇಶಗಳನ್ನು ಹೊಂದಿದ್ದೇನೆ, ಹಾಗಾಗಿ ನೀವು ಇದನ್ನು ಪಾಲಿಸಲೇಬೇಕೆಂದು ಮನವಿ ಮಾಡಿದನು. ಆಗ ರಾಜಕಾರಣಿ ಇರಲಿ ಒಂದು ದಿನ ತಾನೇ ನರಕ ಹೇಗಿರುತ್ತೆ ಅಂತ ನೋಡೇ ಬಿಡೋಣ ಎಂದು ಒಪ್ಪಿಕೊಂಡರು. ಆಗ ಚಿತ್ರಗುಪ್ತ ಮತ್ತೆ ಕೇಳಿದನು ಮೊದಲು ನರಕಕ್ಕೆ ಹೋಗೋಣವೋ ಅಥವಾ ಸ್ವರ್ಗಕ್ಕೆ ಹೋಗೋಣವೋ ಅಂದಾಗ, ರಾಜಕಾರಣಿ ಮೊದಲು ನರಕವೇ ಇರಲಿ ಎಂದನು.

ನಂತರ ಚಿತ್ರಗುಪ್ತ ಅವರನ್ನು ಲಿಫ್ಟಿಗೆ ಹತ್ತಿಸಿಕೊಂಡನು. ಲಿಪ್ಟು ಅವರನ್ನು ಹೊತ್ತು ಕೆಳಕ್ಕೆ ಹೋಯಿತು. ಅದು ಎಷ್ಟು ಆಳಕ್ಕೆ ಹೋಗುತ್ತಿದೆ ಎಂದು ಗಾಬರಿಗೊಳ್ಳುವಷ್ಟರಲ್ಲೇ ಅವರು ನರಕದಲ್ಲಿದ್ದರು. ಬಾಗಿಲು ತೆರೆದಾಗ ರಾಜಕಾರಣಿ ಸುತ್ತಲೂ ವಿಶಾಲವಾದ ಗಾಲ್ಫ್ ಮೈದಾನವಿತ್ತು. ದೂರದಲ್ಲಿ ಕಾಣುತ್ತಿದ್ದ ಅಂಗಳದಲ್ಲಿ ಅವನ ಸ್ನೇಹಿತರು ಮತ್ತು ಜತೆಗೆ ಕೂಡಿ ಕೆಲಸ ಮಾಡಿದ್ದ ರಾಜಕಾರಣಿಗಳು ಸಾಲಾಗಿ ನಿಂತಿದ್ದರು. ಎಲ್ಲರ ಮೊಗದಲ್ಲೂ ಮಂದಹಾಸ, ಶುಭ್ರ ಬಟ್ಟೆಗಳು ಮನ ತಣಿಸುತ್ತಿದ್ದವು. ಅವರೆಲ್ಲರೂ ಓಡಿಬಂದು ತಮ್ಮ ಗೆಳೆಯನಿಗೆ ಶುಭ ಕೋರಿ, ಕೈಕುಲುಕಿದರು. ಬದುಕಿದ್ದಾಗ ಜನರನ್ನು ತುಳಿದು ತಾವು ಹೇಗೆ ಸಿರಿವಂತರಾದೆವು ಎಂಬ ನೆನಪುಗಳನ್ನು ಮೆಲುಕು ಹಾಕಿದರು.

ಎಲ್ಲರೂ ಸೇರಿ ಒಂದು ಸುತ್ತು ಗಾಲ್ಫ್ ಆಡಿ, ಅಲ್ಲಿದ್ದ ಬಗೆಬಗೆಯ ಕಡಲ ತಿನಿಸುಗಳನ್ನು ಸವಿದರು. ಬಳಿಕ, ದ್ರಾಕ್ಷಾರಸ ಅವರೆಲ್ಲರನ್ನು ಉಲ್ಲಸಿತರನ್ನಾಗಿ ಮಾಡಿತು. ಔತಣಕೂಟದಲ್ಲಿ ವಿದೂಷಕನೊಬ್ಬನು ಥರೇವಹಾರಿ ಜೋಕ್ಸ್ ಮಾಡುತ್ತಾ ನಗುತ್ತಾ, ನಗಿಸುತ್ತಾ ಅವರೊಡನೆ ಸಂತಸದ ಕ್ಷಣಗಳಿಗೆ ಸಾಕ್ಷಿಯಾದನು. ಇವರೆಲ್ಲರೂ ಸಂತೋಷ ಕೂಟದಲ್ಲಿ ಮೈಮರೆತಿದ್ದಾಗ, ರಾಜಕಾರಣಿಗೆ ಅರಿವಾಯಿತು. “ಒಂದು ದಿನ ಮುಗೀತು ಇದು ಹೊರಡುವ ಸಮಯ”. ಪ್ರತಿಯೊಬ್ಬರು ಅವರಿಗೆ ಆತ್ಮೀಯವಾಗಿ ಬೀಳ್ಕೊಟ್ಟರು, ಲಿಫ್ಟ್ ಮೇಲಕ್ಕೆ ಹೋಯಿತು.

ಲಿಫ್ಟ್ ಮೇಲಕ್ಕೆ, ಮತ್ತಷ್ಟು ಮೇಲಕ್ಕೆ ಹೋಗಿ ಸ್ವರ್ಗದಲ್ಲಿ ಬಾಗಿಲು ತೆರೆದುಕೊಳ್ಳುತ್ತದೆ. ಅಲ್ಲಿ ಪ್ರಶಾಂತತೆ ಇರುತ್ತದೆ. ಅವರು ಮೋಡಗಳಿಂದ ಮೋಡಕ್ಕೆ ನೆಗೆಯುತ್ತಾರೆ, ತಂತಿವಾದ್ಯಗಳನ್ನು ನುಡಿಸುತ್ತಾರೆ, ಗಿಟಾರ್‍ರನ್ನು ಬಾರಿಸುತ್ತಾರೆ, ಹಾಡು ಹೇಳುತ್ತಾರೆ. ಅವರು ಬಹಳ ಸಂತೋಷದಿಂದ ಸಮಯವನ್ನು ಕಳೆಯುತ್ತಾರೆ ಮತ್ತು ಆಗಷ್ಟೇ ಅವರಿಗೆ ಹೊಳೆಯುತ್ತದೆ 24 ಗಂಟೆಗಳು ಮುಗಿದು ಹೋಗಿದೆ ಎಂದು. ಮತ್ತೆ ಚಿತ್ರಗುಪ್ತ ರಾಜಕಾರಣಿಯ ಬಳಿ ಬರುತ್ತಾರೆ, “ನೀವು ಒಂದು ದಿನ ನರಕದಲ್ಲೂ ಮತ್ತೊಂದು ದಿನ ಸ್ವರ್ಗದಲ್ಲೂ ಕಳೆದಿದ್ದೀರಾ. ಈಗ ನಿಮ್ಮ ಶಾಶ್ವತ ನೆಲೆಯನ್ನು ಆಯ್ಕೆ ಮಾಡಿ”.

ರಾಜಕಾರಣಿ ಒಂದು ನಿಮಿಷ ಯೋಚಿಸಿ ಉತ್ತರ ನೀಡುತ್ತಾರೆ: “ನಾನು ಮುಂಚೆ ಸ್ವರ್ಗ ಸುಖಕರವಾಗಿಯೂ ನರಕ ಭಯಾನಕವಾಗಿಯೂ ಇರುತ್ತದೆ ಎಂದು ತಪ್ಪು ತಿಳಿದಿದ್ದೆ. ಆದರೆ ಇಲ್ಲಿ ಬಂದು ನೋಡಿದ ನಂತರ ಸ್ವರ್ಗಕ್ಕಿಂತ ನರಕವೇ ಅದ್ಭುತವಾಗಿದೆ ಅನ್ನಿಸುತ್ತಿದೆ. ಹಾಗಾಗಿ ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದನು. ಇಂದು ಅಂತಿಮ ನಿರ್ಧಾರವೇ ಎಂದು ಚಿತ್ರಗುಪ್ತ ಕೇಳಿದರೆ ರಾಜಕಾರಣಿ ಯೆಸ್ 100% ಎಂದನು. ಸರಿ ಎಂದು ಚಿತ್ರಗುಪ್ತ ರಾಜಕಾರಣಿಯನ್ನು ನರಕಕ್ಕೆ ತಂದು ಬಿಡುತ್ತಾನೆ.

ಆಗ ರಾಜಕಾರಣಿ ಅವನ ಕಣ್ಣನ್ನು ಅವನೇ ನಂಬಲು ಸಿದ್ದವಿಲ್ಲ. ಏಕೆಂದರೆ ಅವನು ಬಂಜರು ಭೂಮಿಯ ಮಧ್ಯ ಭಾಗದಲ್ಲಿ ನಿಂತಿರುತ್ತಾನೆ. ಸುತ್ತಲೂ ತ್ಯಾಜ್ಯ, ಕಸ ತುಂಬಿ ಹೋಗಿರುತ್ತದೆ. ತನ್ನ ಎಲ್ಲಾ ಸ್ನೇಹಿತರು ಚಿಂದಿಬಟ್ಟೆ ತೊಟ್ಟು ಕಸ ಆಯ್ದು ಕಪ್ಪು ಚೀಲದಲ್ಲಿ ತುಂಬುತ್ತಿರುತ್ತಾರೆ. ಮೇಲಿನಿಂದ ಇನ್ನಷ್ಟು ಕಸ ಬೀಳುತ್ತಿರುತ್ತದೆ. ರೋಧನೆ, ನೋವಿನ ವಾತವರಣವಿರುತ್ತದೆ.

ಆತನ ಸ್ನೇಹಿತರು ಅವನನ್ನು ಕೂಗಿ, ಏನು ನೋಡುತ್ತಿದ್ದೀಯ ಬಾ ಕೆಲಸ ಮಾಡು ಅನ್ನುತ್ತಾರೆ. ಆಗ ರಾಜಕಾರಣಿ ಕಣ್ಣುಜ್ಜಿಕೊಂಡು “ನನಗೆ ಏನೊಂದು ಅರ್ಥವಾಗುತ್ತಿಲ್ಲ” ಎಂದು ತೊದಲುತ್ತಾ ಹೇಳುತ್ತಾನೆ.“ಮೊನ್ನೆ ದಿನ ನಾನು ಇಲ್ಲಿಗೆ ಬಂದಿದ್ದೆ. ಇಲ್ಲಿ ಗಾಲ್ಫ್ ಕೋರ್ಟ್, ಕ್ಲಬ್ ಹೌಸ್ ಇತ್ತು. ನಾವು ಕಡಲನಳ್ಳಿ, ಮೀನಿನ ಚಟ್ನಿ, ದ್ರಾಕ್ಷಿಯ ಮದ್ಯವನ್ನು ಸೇವಿಸಿದ್ದೆವು. ನಾವೆಲ್ಲಾರೂ ಒಟ್ಟಿಗೆ ಕುಣಿದು, ತುಂಬಾ ಸಂತೋಷದಿಂದ ಸಮಯವನ್ನು ಕಳೆದಿದ್ದೆವು. ಆದರೆ ಈಗ ಕೇವಲ ಪಾಳು ಭೂಮಿ ಮಾತ್ರ ಇದೆ. ಕಸದಿಂದ ತುಂಬಿ ಹೋಗಿದೆ, ನನ್ನ ಸ್ನೇಹಿತರು ಶೋಚನೀಯವಾಗಿ ಕಾಣುತ್ತಿದ್ದಾರೆ. ಏನು ಆಯಿತು?” ಎಂದು ವಿದೂಷಕನನ್ನು ಕೇಳುತ್ತಾನೆ.

ಆಗ ವಿದೂಷಕ ಅವನ ಕಡೆಗೆ ನಗೆ ಬೀರುತ್ತಾ  “ಮೊನ್ನೆ ದಿನ ನೀನು ಬಂದಾಗ ನಾವು ಚುನಾವಣಾ ಪ್ರಚಾರ ಮಾಡುತ್ತಿದ್ದೆವು. ಇವತ್ತು ನೀನು ನಮಗೆ ಓಟ್ ಮಾಡಿದೆ ಅಷ್ಟೇ” ಎಂದರು.

ನೀವೂ ಮೋಸಹೋಗಬೇಡಿ 2019ರ ಚುನಾವಣೆಯಲ್ಲಿ ಬುದ್ಧಿವಂತಿಕೆಯಿಂದ ಓಟ್ ಮಾಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...