Homeಮುಖಪುಟದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ - #BoycottNetflix ಎಂದ ಭಕ್ತರು!

ದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ – #BoycottNetflix ಎಂದ ಭಕ್ತರು!

ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ

- Advertisement -
- Advertisement -

ಟ್ವಿಟ್ಟರ್‌ನಲ್ಲಿ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಟ್ರೆಂಡಿಂಗ್ ಆಗುತ್ತಿದ್ದು, ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನ ದೃಶ್ಯವೊಂದರಲ್ಲಿ ದೇವಸ್ಥಾನದ ಆವರಣದಲ್ಲಿ ಯುವಕ-ಯುವತಿ ಚುಂಬಿಸುತ್ತಿರುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಈ ಚುಂಬನ ದೃಶ್ಯ ದೇವಸ್ಥಾನದಲ್ಲಿ ನಡೆಯುವಂತೆ ತೋರಿಸಿರುವುದಕ್ಕೆ ಸಿಡಿದೆದ್ದ ‘ಭಕ್ತರು’ ಈಗ ನೆಟ್‌ಫ್ಲಿಕ್ಸ್‌ ಅನ್ನೇ ನಿಷೇಧಿಸಬೇಕು ಎಂದು ಆಗ್ರಹಿಸಿದ್ದು, ಈ ವೆಬ್‌ ಸೀರೀಸ್‌ನಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಗೆ ಚುಂಬಿಸುತ್ತಿರುವುದರಿಂದ ಇದು ‘ಲವ್ ಜಿಹಾದ್’ ಎನ್ನುವ ಆರೋಪವನ್ನೂ ಮಾಡುತ್ತಿದ್ದಾರೆ.

ಇಂದು ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿರುವ #BoycottNetflix ಎನ್ನುವ ಹ್ಯಾಶ್‌ಟ್ಯಾಗ್ ಅನ್ನು ಬಳಸಿ ಸುಮಾರು 84 ಸಾವಿರಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ. ಈ ವಿಷಯವನ್ನಿಟ್ಟುಕೊಂಡು ಪರ-ವಿರೋಧದ ಚರ್ಚೆಯನ್ನೂ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ದೇವಸ್ಥಾನದಲ್ಲಿ ಚುಂಬಿಸುವಂತಹ ಅಶ್ಲೀಲ ದೃಶ್ಯವನ್ನು ಈ ವೆಬ್‌ ಸೀರೀಸ್‌ನಲ್ಲಿಟ್ಟಿರುವುದು ಭಾರತದ ಸಂಸ್ಕೃತಿಗೆ ಧಕ್ಕೆಯುಂಟುಮಾಡಿದೆ. ಅದೂ ಅಲ್ಲದೇ ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಜೊತೆಯಲ್ಲಿಯೇ ಇನ್ನೂ ಅನೇಕರು ಈ ವೆಬ್ ಸೀರೀಸ್‌ ಅನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದು, ‘ದೇವಾಲಯಗಳಲ್ಲಿನ ಶಿಲ್ಪಗಳಲ್ಲಿಯೇ ಸಂಭೋಗದ ದೃಶ್ಯಗಳನ್ನು ಕೆತ್ತಿರುತ್ತಾರೆ. ಹಾಗಾಗದರೆ ಆ ದೇವಸ್ಥಾನಗಳನ್ನೂ ನಿಷೇಧಿಸಬೇಕು’ ಎಂದು ತಿರುಗೇಟು ನೀಡುತ್ತಿದ್ದಾರೆ.

ಹರಿಯಾಣ ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಅರುಣ್ ಯಾದವ್ ಟ್ವೀಟ್ ಮಾಡಿ, “#BoycottNetflix ಅನ್ನು ಟ್ರೆಂಡಿಂಗ್ ಮಾಡಿದ್ದಕ್ಕೆ ಧನ್ಯವಾದಗಳು. ಇದನ್ನು ಜಾಗತಿಕಗೊಳಿಸೋಣ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: “ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ತಾರಾನಾಥ್ ಪೂಜಾರಿ ಎಂಬುವವರು ಕೆಲವು ವೆಬ್‌ಸೀರೀಸ್‌ಗಳ ಪೋಸ್ಟರ್‌ಗಳನ್ನು ಟ್ವೀಟ್ ಮಾಡಿ, “ಇವುಗಳ ಮುಖ್ಯ ಅಜೆಂಡಾ ಹಿಂದೂಗಳು ಮತ್ತು ಹಿಂದೂ ದೇವತೆಗಳನ್ನು ಅವಮಾನಿಸುವುದೇ ಆಗಿದೆ. ಅಪರಾದಿಗಳನ್ನು ಶಿಕ್ಷಿಸಬೇಕು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಶಿವಾನಿ ಪಾಂಡೆ ಎನ್ನುವವರು ಟ್ವೀಟ್ ಮಾಡಿ, “ಇಂತಹ ನಾಚಿಕೆಯ ದೃಶ್ಯವನ್ನು ತೋರಿಸಲು ನೆಟ್‌ಫ್ಲಿಕ್ಸ್‌ಗೆ ಎಷ್ಟು ಧೈರ್ಯ? ದೇವಸ್ಥಾನಗಳು ಇದಕ್ಕಾಗಿಯೇ ಇದೆಯೇನು? ನಾಚಿಕೆಗೇಡು! ಈ ದೃಶ್ಯವನ್ನು ಈ ಕೂಡಲೇ ಡಿಲೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

ಇನ್ನು ಈ ಅಭಿಯಾನವನ್ನು ವಿರೋಧಿಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಟ್ರೋಲ್ ಮಾಫಿಯಾ ಎನ್ನುವ ಖಾತೆಯಿಂದ, “ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್‌ನಿಂದ ದೂಡಿದ ದುರ್ಷ್ಕಮಿಗಳು

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಭಕ್ತರು ದೇವಸ್ಥಾನದೊಳಗಿನ ಮುತ್ತಿನ ದೃಶ್ಯಕ್ಕಾಗಿ #BoycottNetflix ಎಂದು ಟ್ರೆಂಡಿಂಗ್ ಮಾಡುತ್ತಿದ್ದಾರೆ. ಆದರೆ ದೇವಸ್ಥಾನದೊಳಗೆ ಇಂತಹವುಗಳಿದ್ದರೆ ಅವರಿಗೆ ತೊಂದರೆಯಿಲ್ಲ” ಎಂದು ಭಾರತೀಯ ದೇವಸ್ಥಾನದಲ್ಲಿರುವ ಸಂಭೊಗ ಶಿಲ್ಪವೊಂದನ್ನು ಹಂಚಿಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಬಾಯ್ಕಾಟ್ ಎನ್ನುವುದು ಮನೆಮಾತಾಗಿಬಿಟ್ಟಿದೆ. ತಮಗೆ ಮತ್ತು ತಮ್ಮ ಸಿದ್ದಾಂತಕ್ಕೆ ಹೊಂದದ ಯಾವುದನ್ನೇ ಆದರೂ ಅದನ್ನು ಬಾಯ್ಕಾಟ್ ಎಂದು ಟ್ರೆಂಡಿಂಗ್ ಮಾಡಿಬಿಡುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಇಂತಹ ಕ್ರಮಗಳಿಂದ ಅವು ಬ್ಯಾನ್ ಆಗುವ ಬದಲು ಸಾಕಷ್ಟು ಪ್ರಚಾರ ಪೆಡೆಯುವುದರೊಟ್ಟಿಗೆ, ಸೂಪರ್-ಡೂಪರ್ ಹಿಟ್ ಆಗಿಬಿಡುತ್ತವೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...