Homeಕರೋನಾ ತಲ್ಲಣಉತ್ತರಖಂಡ: ಕೊರೊನಾ ನಡುವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಸಲು ಸರ್ಕಾರದ ಸಿದ್ದತೆ!

ಉತ್ತರಖಂಡ: ಕೊರೊನಾ ನಡುವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಸಲು ಸರ್ಕಾರದ ಸಿದ್ದತೆ!

2021ರ ಜನವರಿಯ ಕುಂಭಮೇಳದಲ್ಲಿ ಪ್ರತಿದಿನ 35 ರಿಂದ 50 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ನಗರಾಭಿವೃದ್ಧಿ ಸಚಿವ ಮದನ್ ಕೌಶಿಕ್ ಹೇಳಿದ್ದಾರೆ.

- Advertisement -
- Advertisement -

ಗಣೇಶ ಚತುರ್ಥಿ, ದೀಪಾವಳಿ, ಛತ್ ಹಬ್ಬಗಳಲ್ಲಿ ಜನ ಸಂದಣಿ ಹೆಚ್ಚಾಗಿ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಉಂಟಾಗಿರುವುದಾಗಿ ಹಲವು ರಾಜ್ಯಗಳು ಹೇಳಿಕೊಂಡಿವೆ. ನಿನ್ನೆ ಕೂಡ ಮಹಾರಾಷ್ಟ್ರ ಸರ್ಕಾರ ಈ ಬಗ್ಗೆ ತಿಳಿಸಿ ಲಾಕ್‌ಡೌನ್ ಹೇರುವ ಬಗ್ಗೆ ನಿರ್ಧರಿಸುವುದಾಗಿ ತಿಳಿದೆ. ಆದರೆ ಕೊರೊನಾ ಸಾಂಕ್ರಾಮಿಕದಿಂದ ಉಂಟಾಗುತ್ತಿರುವ ಸಮಸ್ಯೆಗಳ ನಡುವೆಯೂ 2021 ರಲ್ಲಿ ಹರಿದ್ವಾರದಲ್ಲಿ ಕುಂಭಮೇಳವನ್ನು ತನ್ನ “ದೈವಿಕ ರೂಪದಲ್ಲಿ” ನಡೆಸಲಾಗುವುದು ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.

2021 ರ ಜನವರಿ 14 ರಂದು ಪ್ರಾರಂಭವಾಗಲಿರುವ ಕುಂಭಮೇಳದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಭಾನುವಾರ ಅಖಿಲ್ ಭಾರತೀಯ ಅಖಾಡಾ ಪರಿಷತ್ (ABAP) ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇದನ್ನೂ ಓದಿ: ಕೊರೊನಾ ಉಲ್ಬಣ: ಮತ್ತೆ ಲಾಕ್‌ಡೌನ್ ಘೋಷಿಸುತ್ತಾ ಮಹಾರಾಷ್ಟ್ರ ಸರ್ಕಾರ?

“ಕುಂಭಮೇಳದ ವಿಸ್ತಾರವು ಆ ಸಮಯದ ಕೊರೊನಾ ಸ್ಥಿತಿಯನ್ನು ಅವಲಂಬಿಸಿರುತ್ತದೆ. ಎಬಿಎಪಿ ಹಾಗೂ ಧಾರ್ಮಿಕ ಸಂಘಟನೆಗಳ ಸಲಹೆಗಳನ್ನು ಪರಿಗಣಿಸಲಾಗುತ್ತದೆ. ಕೊರೊನಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು, ಭಕ್ತರಿಗೆ ಯಾವುದೇ ಅನಾನುಕೂಲತೆಯನ್ನು ಉಂಟಾಗದಂತೆ ನೋಡಿಕೊಳ್ಳುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ” ಎಂದು ಮುಖ್ಯಮಂತ್ರಿ ರಾವತ್ ತಿಳಿಸಿದ್ದಾರೆ.

’ಕುಂಭಮೇಳದ ಕಾಮಗಾರಿಗಳನ್ನು ಸತತವಾಗಿ ಮೇಲ್ವಿಚಾರಣೆ ಮಾಡಲು ಇಲಾಖೆಗಳ ಕಾರ್ಯದರ್ಶಿಗಳಿಗೆ ನಿರ್ದೇಶಿಸಲಾಗಿದೆ. 15 ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕೆಕ ತಿಳಿಸುವಂತೆ ಮುಖ್ಯ ಕಾರ್ಯದರ್ಶಿಗೆ ತಿಳಿಸಲಾಗಿದೆ” ಎಂದು ಹೇಳಿದ್ದಾರೆ.

ಕುಂಭಮೇಳದ ಅಧಿಕಾರಿ ದೀಪಕ್‌ ರಾವತ್‌, ’ಕುಂಭಮೇಳಕ್ಕಾಗಿ ನಿರ್ಮಿಸಲಾಗುತ್ತಿರುವ ಒಂಬತ್ತು ಹೊಸ ನದಿ ತೀರಗಳು, ಎಂಟು ಸೇತುವೆಗಳು ಹಾಗೂ ರಸ್ತೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಸ್ವಚ್ಛತೆಯ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. ಬಹುತೇಕ ಕಾಮಗಾರಿಗಳು ಡಿಸೆಂಬರ್‌ 15ಕ್ಕೆ ಪೂರ್ಣಗೊಳ್ಳಲಿವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ: ಎಂಜಿ ಮತ್ತು ಬ್ರಿಗೇಡ್ ರೋಡ್‌‌ನಲ್ಲಿ ಹೊಸ ವರ್ಷಾಚರಣೆಗೆ ನಿಷೇಧ!

ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆಯ ಪ್ರಕಾರ, ನಗರ ಅಭಿವೃದ್ಧಿ ಸಚಿವ ಮದನ್ ಕೌಶಿಕ್ ಅವರು ಕುಂಭಮೇಳದಲ್ಲಿ ಭಕ್ತರಿಗೆ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಲು ಯೋಜಿತ ವ್ಯವಸ್ಥೆ ಮಾಡಲಾಗುವುದು. ಯಾವುದೇ ಆತಂಕದ ಸನ್ನಿವೇಶ ಸೃಷ್ಟಿಯಾಗುವುದಿಲ್ಲ ಎಂದು ಹೇಳಿದರು.

’ಕುಂಭಮೇಳದ ಯಶಸ್ವಿಗಾಗಿ ಅಖಿಲ್ ಭಾರತೀಯ ಅಖಾಡಾ ಪರಿಷತ್ ರಾಜ್ಯ ಸರ್ಕಾರದೊಂದಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಎಬಿಎಪಿ ಮುಖ್ಯಸ್ಥ ಮಹಂತ್ ನರೇಂದ್ರ ಗಿರಿ ಭರವಸೆ ನೀಡಿದ್ದಾರೆ’ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕುಂಭಮೇಳ 2021 ರ ಸಂದರ್ಭದಲ್ಲಿ ಪ್ರತಿದಿನ 35 ರಿಂದ 50 ಲಕ್ಷ ಜನರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ ಎಂದು ನಗರಾಭಿವೃದ್ಧಿ ಸಚಿವ ಮದನ್ ಕೌಶಿಕ್ ಹೇಳಿದ್ದಾರೆ.

ಹಬ್ಬಗಳಲ್ಲಿ ಹೆಚ್ಚು ಜನ ಸೇರುವುದರಿಂದ ಕೊರೊನಾ ಹೆಚ್ಚಾಗುವ ಆತಂಕದ ಹಿನ್ನೆಲೆ ದೆಹಲಿ ಸರ್ಕಾರ ಛತ್ ಪೂಜೆಯನ್ನು ಸಾರ್ವಜನಿಕ ಸ್ಥಳಗಳು, ನದಿ ತೀರಗಳು, ಕೊಳಗಳ ಬಳಿ ಆಚರಿಸುವುದನ್ನು ನಿರ್ಬಂಧಿಸಿದ್ದ ಆದೇಶವನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಬಹುದು.


ಇದನ್ನೂ ಓದಿ: ಕೊರೊನಾ: 500 ರಿಂದ 2 ಸಾವಿರಕ್ಕೆ ಮಾಸ್ಕ್ ದಂಡ ಹೆಚ್ಚಿಸಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುಂಬಮೇಳ ನಿಷೇಧ ಮಾಡಬೇಕು ಏಕೆಂದರೆ ಅಲ್ಲಿ ಗಾಂಜಾ ಮಾಧ್ಯ ಸೇವೆನೆ ಈ ಸಂದರ್ಭದಲ್ಲಿ ಜಾಸ್ಥಿಯಾಗುತ್ತದೆ ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕು .

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...