Homeಕರೋನಾ ತಲ್ಲಣಉತ್ತರಖಂಡ: ಕೊರೊನಾ ನಡುವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಸಲು ಸರ್ಕಾರದ ಸಿದ್ದತೆ!

ಉತ್ತರಖಂಡ: ಕೊರೊನಾ ನಡುವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಸಲು ಸರ್ಕಾರದ ಸಿದ್ದತೆ!

2021ರ ಜನವರಿಯ ಕುಂಭಮೇಳದಲ್ಲಿ ಪ್ರತಿದಿನ 35 ರಿಂದ 50 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ನಗರಾಭಿವೃದ್ಧಿ ಸಚಿವ ಮದನ್ ಕೌಶಿಕ್ ಹೇಳಿದ್ದಾರೆ.

- Advertisement -
- Advertisement -

ಗಣೇಶ ಚತುರ್ಥಿ, ದೀಪಾವಳಿ, ಛತ್ ಹಬ್ಬಗಳಲ್ಲಿ ಜನ ಸಂದಣಿ ಹೆಚ್ಚಾಗಿ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಉಂಟಾಗಿರುವುದಾಗಿ ಹಲವು ರಾಜ್ಯಗಳು ಹೇಳಿಕೊಂಡಿವೆ. ನಿನ್ನೆ ಕೂಡ ಮಹಾರಾಷ್ಟ್ರ ಸರ್ಕಾರ ಈ ಬಗ್ಗೆ ತಿಳಿಸಿ ಲಾಕ್‌ಡೌನ್ ಹೇರುವ ಬಗ್ಗೆ ನಿರ್ಧರಿಸುವುದಾಗಿ ತಿಳಿದೆ. ಆದರೆ ಕೊರೊನಾ ಸಾಂಕ್ರಾಮಿಕದಿಂದ ಉಂಟಾಗುತ್ತಿರುವ ಸಮಸ್ಯೆಗಳ ನಡುವೆಯೂ 2021 ರಲ್ಲಿ ಹರಿದ್ವಾರದಲ್ಲಿ ಕುಂಭಮೇಳವನ್ನು ತನ್ನ “ದೈವಿಕ ರೂಪದಲ್ಲಿ” ನಡೆಸಲಾಗುವುದು ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.

2021 ರ ಜನವರಿ 14 ರಂದು ಪ್ರಾರಂಭವಾಗಲಿರುವ ಕುಂಭಮೇಳದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಭಾನುವಾರ ಅಖಿಲ್ ಭಾರತೀಯ ಅಖಾಡಾ ಪರಿಷತ್ (ABAP) ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇದನ್ನೂ ಓದಿ: ಕೊರೊನಾ ಉಲ್ಬಣ: ಮತ್ತೆ ಲಾಕ್‌ಡೌನ್ ಘೋಷಿಸುತ್ತಾ ಮಹಾರಾಷ್ಟ್ರ ಸರ್ಕಾರ?

“ಕುಂಭಮೇಳದ ವಿಸ್ತಾರವು ಆ ಸಮಯದ ಕೊರೊನಾ ಸ್ಥಿತಿಯನ್ನು ಅವಲಂಬಿಸಿರುತ್ತದೆ. ಎಬಿಎಪಿ ಹಾಗೂ ಧಾರ್ಮಿಕ ಸಂಘಟನೆಗಳ ಸಲಹೆಗಳನ್ನು ಪರಿಗಣಿಸಲಾಗುತ್ತದೆ. ಕೊರೊನಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು, ಭಕ್ತರಿಗೆ ಯಾವುದೇ ಅನಾನುಕೂಲತೆಯನ್ನು ಉಂಟಾಗದಂತೆ ನೋಡಿಕೊಳ್ಳುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ” ಎಂದು ಮುಖ್ಯಮಂತ್ರಿ ರಾವತ್ ತಿಳಿಸಿದ್ದಾರೆ.

’ಕುಂಭಮೇಳದ ಕಾಮಗಾರಿಗಳನ್ನು ಸತತವಾಗಿ ಮೇಲ್ವಿಚಾರಣೆ ಮಾಡಲು ಇಲಾಖೆಗಳ ಕಾರ್ಯದರ್ಶಿಗಳಿಗೆ ನಿರ್ದೇಶಿಸಲಾಗಿದೆ. 15 ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕೆಕ ತಿಳಿಸುವಂತೆ ಮುಖ್ಯ ಕಾರ್ಯದರ್ಶಿಗೆ ತಿಳಿಸಲಾಗಿದೆ” ಎಂದು ಹೇಳಿದ್ದಾರೆ.

ಕುಂಭಮೇಳದ ಅಧಿಕಾರಿ ದೀಪಕ್‌ ರಾವತ್‌, ’ಕುಂಭಮೇಳಕ್ಕಾಗಿ ನಿರ್ಮಿಸಲಾಗುತ್ತಿರುವ ಒಂಬತ್ತು ಹೊಸ ನದಿ ತೀರಗಳು, ಎಂಟು ಸೇತುವೆಗಳು ಹಾಗೂ ರಸ್ತೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಸ್ವಚ್ಛತೆಯ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. ಬಹುತೇಕ ಕಾಮಗಾರಿಗಳು ಡಿಸೆಂಬರ್‌ 15ಕ್ಕೆ ಪೂರ್ಣಗೊಳ್ಳಲಿವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ: ಎಂಜಿ ಮತ್ತು ಬ್ರಿಗೇಡ್ ರೋಡ್‌‌ನಲ್ಲಿ ಹೊಸ ವರ್ಷಾಚರಣೆಗೆ ನಿಷೇಧ!

ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆಯ ಪ್ರಕಾರ, ನಗರ ಅಭಿವೃದ್ಧಿ ಸಚಿವ ಮದನ್ ಕೌಶಿಕ್ ಅವರು ಕುಂಭಮೇಳದಲ್ಲಿ ಭಕ್ತರಿಗೆ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಲು ಯೋಜಿತ ವ್ಯವಸ್ಥೆ ಮಾಡಲಾಗುವುದು. ಯಾವುದೇ ಆತಂಕದ ಸನ್ನಿವೇಶ ಸೃಷ್ಟಿಯಾಗುವುದಿಲ್ಲ ಎಂದು ಹೇಳಿದರು.

’ಕುಂಭಮೇಳದ ಯಶಸ್ವಿಗಾಗಿ ಅಖಿಲ್ ಭಾರತೀಯ ಅಖಾಡಾ ಪರಿಷತ್ ರಾಜ್ಯ ಸರ್ಕಾರದೊಂದಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಎಬಿಎಪಿ ಮುಖ್ಯಸ್ಥ ಮಹಂತ್ ನರೇಂದ್ರ ಗಿರಿ ಭರವಸೆ ನೀಡಿದ್ದಾರೆ’ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕುಂಭಮೇಳ 2021 ರ ಸಂದರ್ಭದಲ್ಲಿ ಪ್ರತಿದಿನ 35 ರಿಂದ 50 ಲಕ್ಷ ಜನರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ ಎಂದು ನಗರಾಭಿವೃದ್ಧಿ ಸಚಿವ ಮದನ್ ಕೌಶಿಕ್ ಹೇಳಿದ್ದಾರೆ.

ಹಬ್ಬಗಳಲ್ಲಿ ಹೆಚ್ಚು ಜನ ಸೇರುವುದರಿಂದ ಕೊರೊನಾ ಹೆಚ್ಚಾಗುವ ಆತಂಕದ ಹಿನ್ನೆಲೆ ದೆಹಲಿ ಸರ್ಕಾರ ಛತ್ ಪೂಜೆಯನ್ನು ಸಾರ್ವಜನಿಕ ಸ್ಥಳಗಳು, ನದಿ ತೀರಗಳು, ಕೊಳಗಳ ಬಳಿ ಆಚರಿಸುವುದನ್ನು ನಿರ್ಬಂಧಿಸಿದ್ದ ಆದೇಶವನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಬಹುದು.


ಇದನ್ನೂ ಓದಿ: ಕೊರೊನಾ: 500 ರಿಂದ 2 ಸಾವಿರಕ್ಕೆ ಮಾಸ್ಕ್ ದಂಡ ಹೆಚ್ಚಿಸಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುಂಬಮೇಳ ನಿಷೇಧ ಮಾಡಬೇಕು ಏಕೆಂದರೆ ಅಲ್ಲಿ ಗಾಂಜಾ ಮಾಧ್ಯ ಸೇವೆನೆ ಈ ಸಂದರ್ಭದಲ್ಲಿ ಜಾಸ್ಥಿಯಾಗುತ್ತದೆ ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕು .

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...