Homeಮುಖಪುಟಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ.

- Advertisement -
- Advertisement -

PARI ವರದಿಗಾರ್ತಿ ಜ್ಯೋತಿ ಶಿನೋಲಿ ಲಿಂಗ ಸಂವೇದನೆಗಾಗಿ ಲಾಡ್ಲಿ ಮೀಡಿಯಾ ಮತ್ತು ಜಾಹೀರಾತು ಪ್ರಶಸ್ತಿ 2020 ಅನ್ನು ಗೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ ಪರಿಶಿಷ್ಠ ಪಂಗಡಕ್ಕೆ ಸೇರಿದ ಪಾರ್ಧಿ ಎಂಬ ಬುಡಕಟ್ಟು ಸಮುದಾಯ ತಮ್ಮದಲ್ಲದ ತಪ್ಪಿಗೆ ಹೇಗೆ ನಿರಂತರ ಕಿರುಕುಳಕ್ಕೆ ಒಳಗಾಗುತ್ತಿದೆ ಎಂಬುದರ ಬಗ್ಗೆ No crime, unending punishment ‘ಅಪರಾಧವಿಲ್ಲದಿದ್ದರೂ, ಕೊನೆಯಿಲ್ಲದ ಶಿಕ್ಷೆ’ (ಆಗಸ್ಟ್ 10, 2018) ಎಂಬ ಅವರ ವರದಿಗೆ ಪ್ರಶಸ್ತಿ ಲಭಿಸಿದೆ.

1871 ರಲ್ಲಿ ಬ್ರಿಟಿಷರು ತಮ್ಮ ಆಳ್ವಿಕೆಯನ್ನು ಒಪ್ಪಿಕೊಳ್ಳದ ಪಾರ್ಧಿ ಬುಡಕಟ್ಟು ಜನಾಂಗದವರು ಸೇರಿ ಸುಮಾರು 200 ಇತರ ಡಿ-ನೋಟಿಫೈಡ್ ಸಮುದಾಯಗಳಿಗೆ ‘ಕ್ರಿಮಿನಲ್ ಬುಡಕಟ್ಟು’ ಎಂದು ಬ್ರಾಂಡ್ ಮಾಡಿದ್ದರು. ಸ್ವಾತಂತ್ರ್ಯಾನಂತರ 1952 ರಲ್ಲಿ ಆ ಅಪರಾಧ ಬುಡಕಟ್ಟು ಕಾಯ್ದೆಯನ್ನು ಭಾರತ ಸರ್ಕಾರ ರದ್ದುಗೊಳಿಸಿದರೂ, ಇಂದಿಗೂ ಆ ಸಮುದಾಯಗಳಿಗೆ ಕಳಂಕ, ತಾರತಮ್ಯ ಮತ್ತು ಕಿರುಕುಳ ಮುಂದುವರೆದಿದೆ. ಆ ಪಾರ್ಧಿ ಸಮುದಾಯದ ನೋವಿಗೆ ಸ್ಪಂದಿಸುತ್ತಿರುವ ಅದೇ ಸಮುದಾಯದ ಸುನೀತಾ ಬೋಸಲೆ ಎಂಬ ಮಹಿಳೆಯ ಹೋರಾಟದ ಬಗ್ಗೆ ಜ್ಯೋತಿ ಶಿನೋಲಿ ವಿಸ್ತೃತ ವರದಿ ಮಾಡಿದ್ದರು.

ಜ್ಯೋತಿ ಶಿನೋಲಿ. Photo Courtesy: Pari

ಜ್ಯೋತಿ ಶಿನೋಲಿ ಅವರು ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ಪತ್ರಿಕೆಗೆ ತಂದಿರುವ ಮೂರನೇ ಪತ್ರಿಕೋದ್ಯಮ ಪ್ರಶಸ್ತಿ ಇದಾಗಿದೆ. ಅಲ್ಲದೆ ಈ ವರ್ಷದ ಆಗಸ್ಟ್‌ನಲ್ಲಿ ಪರಿ ತಂಡಕ್ಕೆ 2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ ಲಭಿಸಿತ್ತು. PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿತ್ತು.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ” ಎಂಬ ಹೆಸರು ಗಳಿಸಿದೆ.


ಇದನ್ನೂ ಓದಿ: ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...