Homeಮುಖಪುಟಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಲಿಂಗ ಸಂವೇದನೆ ವರದಿಗಾಗಿ ಲಾಡ್ಲಿ ಮೀಡಿಯಾ ಪ್ರಶಸ್ತಿ ಗೆದ್ದ PARI ಪತ್ರಕರ್ತೆ

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ.

- Advertisement -
- Advertisement -

PARI ವರದಿಗಾರ್ತಿ ಜ್ಯೋತಿ ಶಿನೋಲಿ ಲಿಂಗ ಸಂವೇದನೆಗಾಗಿ ಲಾಡ್ಲಿ ಮೀಡಿಯಾ ಮತ್ತು ಜಾಹೀರಾತು ಪ್ರಶಸ್ತಿ 2020 ಅನ್ನು ಗೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ ಪರಿಶಿಷ್ಠ ಪಂಗಡಕ್ಕೆ ಸೇರಿದ ಪಾರ್ಧಿ ಎಂಬ ಬುಡಕಟ್ಟು ಸಮುದಾಯ ತಮ್ಮದಲ್ಲದ ತಪ್ಪಿಗೆ ಹೇಗೆ ನಿರಂತರ ಕಿರುಕುಳಕ್ಕೆ ಒಳಗಾಗುತ್ತಿದೆ ಎಂಬುದರ ಬಗ್ಗೆ No crime, unending punishment ‘ಅಪರಾಧವಿಲ್ಲದಿದ್ದರೂ, ಕೊನೆಯಿಲ್ಲದ ಶಿಕ್ಷೆ’ (ಆಗಸ್ಟ್ 10, 2018) ಎಂಬ ಅವರ ವರದಿಗೆ ಪ್ರಶಸ್ತಿ ಲಭಿಸಿದೆ.

1871 ರಲ್ಲಿ ಬ್ರಿಟಿಷರು ತಮ್ಮ ಆಳ್ವಿಕೆಯನ್ನು ಒಪ್ಪಿಕೊಳ್ಳದ ಪಾರ್ಧಿ ಬುಡಕಟ್ಟು ಜನಾಂಗದವರು ಸೇರಿ ಸುಮಾರು 200 ಇತರ ಡಿ-ನೋಟಿಫೈಡ್ ಸಮುದಾಯಗಳಿಗೆ ‘ಕ್ರಿಮಿನಲ್ ಬುಡಕಟ್ಟು’ ಎಂದು ಬ್ರಾಂಡ್ ಮಾಡಿದ್ದರು. ಸ್ವಾತಂತ್ರ್ಯಾನಂತರ 1952 ರಲ್ಲಿ ಆ ಅಪರಾಧ ಬುಡಕಟ್ಟು ಕಾಯ್ದೆಯನ್ನು ಭಾರತ ಸರ್ಕಾರ ರದ್ದುಗೊಳಿಸಿದರೂ, ಇಂದಿಗೂ ಆ ಸಮುದಾಯಗಳಿಗೆ ಕಳಂಕ, ತಾರತಮ್ಯ ಮತ್ತು ಕಿರುಕುಳ ಮುಂದುವರೆದಿದೆ. ಆ ಪಾರ್ಧಿ ಸಮುದಾಯದ ನೋವಿಗೆ ಸ್ಪಂದಿಸುತ್ತಿರುವ ಅದೇ ಸಮುದಾಯದ ಸುನೀತಾ ಬೋಸಲೆ ಎಂಬ ಮಹಿಳೆಯ ಹೋರಾಟದ ಬಗ್ಗೆ ಜ್ಯೋತಿ ಶಿನೋಲಿ ವಿಸ್ತೃತ ವರದಿ ಮಾಡಿದ್ದರು.

ಜ್ಯೋತಿ ಶಿನೋಲಿ. Photo Courtesy: Pari

ಜ್ಯೋತಿ ಶಿನೋಲಿ ಅವರು ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ಪತ್ರಿಕೆಗೆ ತಂದಿರುವ ಮೂರನೇ ಪತ್ರಿಕೋದ್ಯಮ ಪ್ರಶಸ್ತಿ ಇದಾಗಿದೆ. ಅಲ್ಲದೆ ಈ ವರ್ಷದ ಆಗಸ್ಟ್‌ನಲ್ಲಿ ಪರಿ ತಂಡಕ್ಕೆ 2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ ಲಭಿಸಿತ್ತು. PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿತ್ತು.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ” ಎಂಬ ಹೆಸರು ಗಳಿಸಿದೆ.


ಇದನ್ನೂ ಓದಿ: ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...