Homeಕರೋನಾ ತಲ್ಲಣಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಉತ್ಪಾದಿಸುತ್ತಿರುವ ಇಂಗ್ಲೆಂಡ್​​ನ ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಔಷಧ ತಯಾರಿಕಾ ಕಂಪನಿ ತಮ್ಮ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಶೇಕಡಾ 70.4 ರಷ್ಟು ಪರಿಣಾಮಕಾರಿ ಎಂದು ಸೋಮವಾರ ಹೇಳಿವೆ.

ಬ್ರಿಟನ್ ಮತ್ತು ಬ್ರೆಜಿಲ್‌ನಲ್ಲಿ ನಡೆದ ಕೊನೆಯ ಹಂತದ ಲಸಿಕೆ ಪ್ರಯೋಗಗಳ ಮಾಹಿತಿಯ ಪ್ರಕಾರ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಒಂದು ತಿಂಗಳ ಅಂತರದಲ್ಲಿ ಎರಡು ಪೂರ್ಣ ಡೋಸ್ ನೀಡಿದಾಗ ಅದು ಶೇಕಡಾ 90 ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಲಸಿಕೆಯ ಸಾಮರ್ಥ್ಯ ಮತ್ತು ಸುರಕ್ಷತೆಯು COVID-19 ವಿರುದ್ಧದ ಹೋರಾಟದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ. ಜೊತೆಗೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಲ್ಲಿ ತಕ್ಷಣದ ಪರಿಣಾಮ ಬೀರುತ್ತದೆ” ಎಂದು ಅಸ್ಟ್ರಾಜೆನೆಕಾದ ಮುಖ್ಯ ಕಾರ್ಯನಿರ್ವಾಹಕ ಪ್ಯಾಸ್ಕಲ್ ಸೊರಿಯೊಟ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

 

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ಅಸ್ಟ್ರಾಜೆನೆಕಾ, ಗೇಟ್ಸ್ ಫೌಂಡೇಶನ್ ಮತ್ತು ಗೇವಿ ವಾಕೆನ್ಸಿ ಅಲಯನ್ಸ್  ಕಂಪನಿಗಳು ಪತ್ಯೇಕವಾಗಿ ವಿಶ್ವದಾದ್ಯಂತ ಲಸಿಕೆ ಪೂರೈಕೆಗಾಗಿ ಒಂದು ಬಿಲಿಯನ್ ಕೊರೊನಾ ಲಸಿಕೆಯನ್ನು ಉತ್ಪಾದಿಸುತ್ತಿವೆ.

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ “ಆಕ್ಸ್‌ಫರ್ಡ್ ಲಸಿಕೆ ಪ್ರಯೋಗಗಳಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ ’ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ. ಆಕ್ಸ್‌ಫರ್ಡ್ ವ್ಯಾಕ್ಸಿನ್ ಅನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಬಹುದು’ ಎಂದು ತಿಳಿಸಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಪ್ರಗತಿ; ಮನುಷ್ಯರ ಮೇಲೆ ಪ್ರಯೋಗ

ಕೊರೊನಾ ಲಸಿಕೆ ತಯಾರಕ ಮತ್ತೊಂದು ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದರು.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ ತಿಳಿಸಿದ್ದರು.

ಇನ್ನು ಅಮೆರಿಕಾ ಮೂಲದ ಮಾಡರ್ನಾ ಇಂಕ್ ತನ್ನ ಪ್ರಾಯೋಗಿಕ ಲಸಿಕೆಯ  ಪ್ರಾಥಮಿಕ ದತ್ತಾಂಶ ವಿಶ್ಲೇಷಣೆಯ ಆಧಾರದ ಮೇಲೆ 94.5% ಪರಿಣಾಮಕಾರಿ ಎಂದು ಸಾಬೀತಾಗಿದೆ ಎಂದು ನವೆಂಬರ್ 16 ರಂದು ಹೇಳಿದೆ.


ಇದನ್ನೂ ಓದಿ: ಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...