Homeಕರ್ನಾಟಕನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿ-2020 ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಮುಷ್ಕರವನ್ನು ಬೆಂಬಲಿಸಿದ್ದು, ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಅದು ಹೇಳಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಅಸಂವಿಧಾನಿಕವಾಗಿ ಜಾರಿಗೊಳಿಸುತ್ತಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿರೋಧಿಸಿ ನವೆಂಬರ್-26 ರಂದು ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಒಕ್ಕೂಟ ಕರೆ ನೀಡಿದೆ. ಇಂದು ಬೆಂಗಳೂರಿನ ಸೂರಿ ಭವನದಲ್ಲಿ ಸಭೆ ಸೇರಿದ ಎಡ ವಿದ್ಯಾರ್ಥಿ ಸಂಘಟನೆಗಳಾದ AISF, SFI, AIDSO, AISA ಮತ್ತು KVS, “ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಹೇಳಿದೆ.

“ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ. ಸಾರ್ವಜನಿಕವಾಗಿ ಹಾಗೂ ಕೇಂದ್ರ ಮತ್ತು ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೂಲೆಯಾಗುತ್ತದೆ” ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

“ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರಿಕರಣ, ಇತಿಹಾಸ ತಿರುಚುಏಕೆ ಈ ರೀತಿ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲೂ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿರುವುದು ಖಂಡನೀಯ” ಎಂದು ಅದು ಹೇಳಿದೆ.

ರಾಜ್ಯ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯನ್ನು ಚರ್ಚೆಗೆ ಬಿಡಬೇಕು ಎಂದು ಹೇಳಿರುವ ಸಂಘಟನೆಗಳು, ಅದರಲ್ಲಿನ ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದೀಕರಣ ಹೇರುವ ಅಂಶಗಳನ್ನು ಕೈಬಿಡಬೇಕು ಹಾಗೂ ಅದರ ಸಾಧಕ-ಬಾಧಕಗಳನ್ನು ಅರಿತು ನಂತರ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೇಗವಾಗಿ ವ್ಯಾಪಾರ ಮಾಡಲು ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ತರುತ್ತಿದೆ; ರಮೇಶ್ ಪಟ್ನಾಯಕ್

ಇಷ್ಟೇ ಅಲ್ಲದೆ ವಿದ್ಯಾರ್ಥಿ ಸಂಘಟನೆಗಳು ತಮ್ಮ ಬೇಡಿಕೆಯನ್ನು ಕೂಡಾ ಸರ್ಕಾರಗಳ ಮುಂದೆ ಇಟ್ಟಿದೆ.

  •  ಶಿಕ್ಷಣ ಕ್ಷೇತ್ರ ಸಂವಿಧಾನದ ಶೆಡ್ಯೂಲ್ -07 ರಂತೆ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯ ಸರ್ಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ರಾಜ್ಯ ಸರ್ಕಾರ ವಿರೋಧಿಸಬೇಕು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಸರ್ಕಾರಕ್ಕಿರುವ ಅಧಿಕಾರ ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಉಳಿಸಲು ಮುಂದಾಗಬೇಕು.
  • ಸರ್ಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ, ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲವಕಾಶ ನೀಡಬೇಕು.
  • ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಈ ಸದನದಲ್ಲಿ ಈ ಕುರಿತು ಜನಪ್ರತಿನಿಧಿಗಳು ಮಾತನಾಡಬೇಕು.
  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ರಾಜ್ಯ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ವಿರೋಧಿಸಬೇಕು.
  • ಕೊರೊನಾ-ಕಾಲಾವಧಿಯಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯ ಕುರಿತು ರಾಜ್ಯ ಸರ್ಕಾರದ ಮಂತ್ರಿಗಳು ನಡೆಸುತ್ತಿರುವ ಏಕಮುಖವಾದ, ಅಪ್ರಜಾಸತ್ತಾತ್ಮಕವಾದ ಅನುಷ್ಠಾನದ ತಯಾರಿಗಳನ್ನು ಕೈ ಬಿಡಲು ಒತ್ತಾಯಿಸಬೇಕು.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...